ಕರಾವಳಿ

ಕಡಬ: ಬೀಡಿ ಅದ್ರಾಮ ಎಂದು ಚಿರಪರಿಚಿತರಾಗಿದ್ದ ಹಾಜಿ ಅಬ್ದುಲ್ ರಹಿಮಾನ್ ‌ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.22. ಇಲ್ಲಿನ ಮರ್ದಾಳ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ, ಬೀಡಿ ಉದ್ಯೋಗದಾತರಾಗಿದ್ದ ಹಾಜಿ ಅಬ್ದುಲ್‌ ರಹಮಾನ್(75) ಇವರು ಸೋಮವಾರದಂದು ಸ್ವಗೃಹದಲ್ಲಿ ನಿಧನರಾದರು. ಕಡಬ ಪರಿಸರದಲ್ಲಿ ಸುಮಾರು 50 ವರ್ಷಗಳಿಂದ ಬೀಡಿ ಕಾಂಟ್ರಾಕ್ಟ್ ಉದ್ಯಮ ನಡೆಸುತ್ತಿದ್ದ ಇವರು ಅನೇಕ ಬೀಡಿ ಕಾರ್ಮಿಕರಿಗೆ ಉದ್ಯೋಗದಾತರಾಗಿದ್ದು, ಬೀಡಿ ಅದ್ರಾಮ ಎಂದೇ ಪ್ರಸಿದ್ಧಿಯನ್ನು ಪಡೆದಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಕಡಬ: ಬೀಡಿ ಅದ್ರಾಮ ಎಂದು ಚಿರಪರಿಚಿತರಾಗಿದ್ದ ಹಾಜಿ ಅಬ್ದುಲ್ ರಹಿಮಾನ್ ‌ನಿಧನ Read More »

ಕರಾವಳಿ

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ನಾಳೆಯವರೆಗೆ (ಜ.19) ಸೀಸನಲ್ ಸ್ಪೆಷಲ್ ಆಫರ್ – ಬ್ರೋಸ್ಟೆಡ್, ಮಿಲ್ಕ್ ಶೇಕ್ ಗಳಿಗೆ ಭರ್ಜರಿ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜ.18. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಜ.19) ಶುಕ್ರವಾರದ ವರೆಗೆ ಸೀಸನಲ್ ಸ್ಪೆಷಲ್ ಆಫರ್ ನಡೆಯಲಿದೆ. ಬ್ರೋಸ್ಟೆಡ್ ಚಿಕನ್ ಫುಲ್‌ 8 ಪೀಸ್, ಮಯನೀಸ್, ಫ್ರೆಂಚ್ ಫ್ರೈಸ್ ಜೊತೆಗೆ 600ml ಹನಾ ಡ್ರಿಂಕ್ಸ್ ಕೇವಲ 449 ರೂ., ಬ್ರೋಸ್ಟೆಡ್ ಚಿಕನ್ ಹಾಫ್ 4 ಪೀಸ್, ಮಯನೀಸ್, ಫ್ರೆಂಚ್ ಫ್ರೈಸ್ ಜೊತೆಗೆ 600ml ಹನಾ ಡ್ರಿಂಕ್ಸ್ ಕೇವಲ 249 ರೂ.,

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ನಾಳೆಯವರೆಗೆ (ಜ.19) ಸೀಸನಲ್ ಸ್ಪೆಷಲ್ ಆಫರ್ – ಬ್ರೋಸ್ಟೆಡ್, ಮಿಲ್ಕ್ ಶೇಕ್ ಗಳಿಗೆ ಭರ್ಜರಿ ಆಫರ್ Read More »

ಅಡುಗೆ, ಕರಾವಳಿ, ಲೈಫ್‍ಸ್ಟೈಲ್

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸ್ವಾಮಿ ವಿವೇಕಾನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸ್ವಾಮಿ ವಿವೇಕಾನಂದರು ಇಡೀ ಪ್ರಪಂಚದಲ್ಲಿ ಬದುಕಲು ಕಲಿಸಲು ಕಲಿಸಿಕೊಟ್ಟ ಮಹಾನ್ ವ್ಯಕ್ತಿ. ನಾವು

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣವು ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಪತ್ನಿ ನೀಡಿರುವ ದೂರಿನಂತೆ  ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪುದು ಗ್ರಾಮ ನಿವಾಸಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌,

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 17ರ ಬುಧವಾರದಂದು ಬೆಳಗ್ಗೆ 11 ಗಂಟೆಯಿಂದ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್

ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ಜನವರಿ 16ರಿಂದ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಜ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಜ. 17 ರಂದು, ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಜ. 20ಕ್ಕೆ ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಫಲಾನುಭವಿ ಆಧಾರಿತ ಯೋಜನೆಗಳನ್ನು 2023-24ನೇ ಸಾಲಿನಲ್ಲಿ ಸೇವಾ ಸಿಂಧು ಯೋಜನೆಯಿಂದ ಡಿ.ಬಿಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಯೋಜನೆಗಳು- ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ.

ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಮಿತಿಯೊಳಗೆ ಇರಬೇಕು, ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. ದಾಖಲೆಗಳು- ವಿದ್ಯಾರ್ಥಿ, ಪೋಷಕರ ಆಧಾರ್ ಸಂಖ್ಯೆ,

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top