ಕರಾವಳಿ

ಎಡಮಂಗಲ: ಹೃದಯ ಸಂಬಂಧಿ ಕಾಯಿಲೆಗೆ ಬಲಿಯಾದ 15 ವರ್ಷದ ಶಾಲಾ ಬಾಲಕ

(ನ್ಯೂಸ್‌ ಕಡಬ) newskadaba.com,ಜು.06 ಎಡಮಂಗಲ: ಹೃದಯ ಸಂಬಂಧಿ ಕಾಯಿಲೆಯಿಂದ 9ನೇ ತರಗತಿ ವಿದ್ಯಾರ್ಥಿ ಶಿಶಿಲ್ (15) ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಶಿಶಿಲ್ ಅವರು ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ ಗೌಡ ಹಾಗೂ ಕವಿತಾ ದಂಪತಿಯ ಪುತ್ರ ಹಾಗೂ ನಿಂತಿಕಲ್ಲು ಶಾಲೆಯ ವಿದ್ಯಾರ್ಥಿಯಾಗಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ ಕಾಣಿಯೂರು, ಪುತ್ತೂರು, ಮಂಗಳೂರು ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲು ನಿರ್ಧರಿಸಿದ್ದ ವೇಳೆ, ಜುಲೈ 5ರ ರಾತ್ರಿ ಆರೋಗ್ಯ ಗಂಭೀರಗೊಂಡಿದ್ದು, […]

ಎಡಮಂಗಲ: ಹೃದಯ ಸಂಬಂಧಿ ಕಾಯಿಲೆಗೆ ಬಲಿಯಾದ 15 ವರ್ಷದ ಶಾಲಾ ಬಾಲಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಮ ಉಲ್ಲಂಘಿಸಿದ ಇನ್‌ಸ್ಟಾಗ್ರಾಂ ಜಾಹೀರಾತುಗಳು; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜು.06: ಇನ್‌ಸ್ಟಾಗ್ರಾಂನಲ್ಲಿ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ಕಾನೂನುಬಾಹಿರ ವಿಷಯಗಳನ್ನು ಪ್ರಚಾರ ಮಾಡುವ ಪಾವತಿಸಿದ ಜಾಹೀರಾತುಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೆಟಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ. ಇಂತಹ ವಿವಾದಾತ್ಮಕ ಜಾಹೀರಾತುಗಳನ್ನು ತಕ್ಷಣವೇ ತೆಗೆದುಹಾಕುವಂತೆ ಸೂಚಿಸಿರುವ ಸರ್ಕಾರ, ಈ ಲೋಪ ಹೇಗೆ ಸಂಭವಿಸಿತು ಮತ್ತು ಇದನ್ನು ತಡೆಯಲು ಕೈಗೊಂಡ ಕ್ರಮಗಳ ಕುರಿತು 7 ದಿನಗಳೊಳಗೆ ಸಮಗ್ರ ವರದಿ ನೀಡುವಂತೆ ಮೆಟಾಗೆ ನಿರ್ದೇಶಿಸಿದೆ. ಬಳಕೆದಾರರನ್ನು ಅಕ್ರಮ ವೆಬ್‌ಸೈಟ್‌ಗಳಿಗೆ ಕರೆದೊಯ್ಯುವಲ್ಲಿ

ನಿಯಮ ಉಲ್ಲಂಘಿಸಿದ ಇನ್‌ಸ್ಟಾಗ್ರಾಂ ಜಾಹೀರಾತುಗಳು; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಭಿಮನ್ಯು ಆನೆಗೆ ಆಕಸ್ಮಿಕವಾಗಿ ದಂತ ಮುರಿತ: 2026ರ ದಸರಾ ಸವಾರಿಗೆ ಗಜಪಡೆ ನಾಯಕ ಫಿಟ್!

(ನ್ಯೂಸ್‌ ಕಡಬ) newskadaba.com,ಜು.06: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮತ್ತಿಗೋಡು ಆನೆ ಶಿಬಿರದಲ್ಲಿ ನಿಯಮಿತ ಕಾರ್ಯಾಚರಣೆಯ ಅಂಗವಾಗಿ ಮರದ ದಿಮ್ಮಿಗಳನ್ನು ಸ್ಥಳಾಂತರಿಸುವಾಗ, ಆಕಸ್ಮಿಕವಾಗಿ ಮರದ ದಿಮ್ಮಿ ಬಡಿದು ದಸರಾ ಗಜಪಡೆಯ ನಾಯಕ ‘ಅಭಿಮನ್ಯು’ ಆನೆಯ ಎಡಭಾಗದ ದಂತದ ಮುಂದಿನ ತುದಿ ಮುರಿದಿದೆ. ಘಟನೆಯ ಬೆನ್ನಲ್ಲೇ ಹಿರಿಯ ಅಧಿಕಾರಿಗಳು ಹಾಗೂ ಪಶುವೈದ್ಯರ ತಂಡ ಆನೆಯನ್ನು ಪರೀಕ್ಷಿಸಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ದೃಢಪಡಿಸಿದೆ. ಸದ್ಯ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಮುರಿದ ದಂತವು ಕಾಲಕ್ರಮೇಣ ನೈಸರ್ಗಿಕವಾಗಿ ಬೆಳೆಯುವ ಸಾಧ್ಯತೆಯಿದೆ ಎಂದು

ಅಭಿಮನ್ಯು ಆನೆಗೆ ಆಕಸ್ಮಿಕವಾಗಿ ದಂತ ಮುರಿತ: 2026ರ ದಸರಾ ಸವಾರಿಗೆ ಗಜಪಡೆ ನಾಯಕ ಫಿಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 05. ತೂಕ ಹೆಚ್ಚಿಸಿ ಚಿನ್ನಾಭರಣಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಜುಲೈ 3ರ ಶುಕ್ರವಾರದಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಜಿಮ್ ಟ್ರೈನರ್ ಓರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಮೂಲತಃ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿರುವ ಸಚಿನ್ ರೈ ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು. ಇಂದು ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ನಗರದ ಹಳೆಯ ಬಸ್ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳ ಬಳಿ ಮುಂಜಾನೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಮೇರೆಗೆ, ಉಡುಪಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಕಾಂತ್ಯಪ್ಪ ಮೇಟಿ (32) ಎಂದು ಗುರುತಿಸಲಾಗಿದೆ.   ಆರೋಪಿಯು ಸ್ಕೂಟರ್‌ನಲ್ಲಿ ಬಂದು ನಗರ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದುದನ್ನು

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಜು. 05. ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ವಾಹನ ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.   ವರದಿಯ ಪ್ರಕಾರ, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಪೊಲೀಸ್ ವಾಹನವನ್ನು ನೋಡಿದ ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ.   ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸದಸ್ಯರಾದ ಕುಸುಮ, ದಯಾನಂದ, ಶಾಲಿನಿ, ಮೋಹನ್ ದಾಸ್, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಸಿಬ್ಬಂದಿಗಳು, ಟೂರಿಸ್ಟ್ ವಾಹನ ಚಾಲಕ-ಮಾಲಕರ ಸಂಘ- ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕಡಬ ಪೇಟೆಯುದ್ಧಕ್ಕೂ ಕಸ ಹೆಕ್ಕುವ ಮೂಲಕ ಮತ್ತು ಅಂಗಡಿ ಮುಂಭಾಗ ಕಸ ಎಸೆಯದೆ ಕಸದ ಬುಟ್ಟಿಗೆ ಕಸ ಹಾಕುವಂತೆ

ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ Read More »

ಕರಾವಳಿ

ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ, ತಾಲೂಕು ಪಂಚಾಯತ್ ಕಡಬ ಹಾಗೂ ವಿವಿಧ ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್‍ಗಳ ಹಾಗೂ ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವನ್ನು ಸಂಪರ್ಕಿಸುವ ಮತ್ತು ಕಡಬ ತಾಲೂಕು ಕೇಂದ್ರದ ಮೂಲಕ ಹಾದು ಹೋಗುವ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯ ಶನಿವಾರ ನಡೆಯಿತು. ಹೆದ್ದಾರಿ ಬದಿ

ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ Read More »

ಕರಾವಳಿ

ಸ್ವಚ್ಚತಾ ಶನಿವಾರ: ತಾಲೂಕು, ರಸ್ತೆ ಬದಿಯ ತ್ಯಾಜ್ಯ ತೆರವು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಯಶಸ್ವಿಯಾಗಿ ಸ್ವಚ್ಚತಾ ಶನಿವಾರ ನಡೆಯಿತು. ತಾಲೂಕು, ಗ್ರಾಮ ಪಂಚಾಯತ್‍ ಗಳಲ್ಲಿ ರಸ್ತೆ ಬದಿಯ ತ್ಯಾಜ್ಯ ತೆರವು ಚುರುಕು ಪಡೆದಿದ್ದು ಖುದ್ದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳೇ ರಸ್ತೆ ಬದಿಯ ತ್ಯಾಜ್ಯ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡರು. ರಸ್ತೆ ಇಕ್ಕೆಲಗಳ ಕಸ ತೆರವು, ಹುಲ್ಲುಕಟಾವು, ಜಲಮೂಲಗಳಿಂದ ಪ್ಲಾಸ್ಟಿಕ್ ಬಾಟಲ್‍ಗಳ ತೆರವು, ಸ್ವಚ್ಛತಾ ಪ್ರತಿಜ್ಞೆ, ಸ್ವಚ್ಛತಾ ಶ್ರಮದಾನ ನಡೆಯಿತು. ಕೆಲವು ಪಂಚಾಯತ್‍’ಗಳಲ್ಲಿ ತ್ಯಾಜ್ಯ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಿದ

ಸ್ವಚ್ಚತಾ ಶನಿವಾರ: ತಾಲೂಕು, ರಸ್ತೆ ಬದಿಯ ತ್ಯಾಜ್ಯ ತೆರವು Read More »

ಕರಾವಳಿ
Scroll to Top