ಕರಾವಳಿ

ಕಾಣೆಯಾದವರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಜು. 02. ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೋನಿ ನಿವಾಸಿ ಭೂಷಣ್ ಸಿಂಗ್ (19 ವರ್ಷ) ಎಂಬವರು ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂನ್ 29 ರಂದು ಮನೆ ಬಿಟ್ಟು ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.4 ಅಡಿ, ಎಣ್ಣೆಕಪ್ಪು ಮೈಬಣ್ಣ, ಕಪ್ಪು ಕೂದಲು, ಸಪೂರ ಶರೀರ ಹೊಂದಿರುತ್ತಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ […]

ಕಾಣೆಯಾದವರ ಪತ್ತೆಗೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಟ್ಕಾ ಉಗುಳುವ ಧಾವಂತ ತಂದಿಟ್ಟ ಆಪತ್ತು: ಚಲಿಸುವ ಬಸ್ಸಿನಲ್ಲೇ ರುಂಡ ಕತ್ತರಿಸಿ ಬಿದ್ದ ಯುವಕ

(ನ್ಯೂಸ್‌ ಕಡಬ) newskadaba.com, ಜು.02: ಚಲಿಸುವ ಬಸ್ಸಿನ ಕಿಟಕಿಯಿಂದ ಹೊರಗೆ ತಲೆಹಾಕಿದ ಪರಿಣಾಮ, ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಹೊರವಲಯದಲ್ಲಿ ಸಂಭವಿಸಿದೆ.ಶಿರೂರು ಗ್ರಾಮದ ಐಟಿಐ ವಿದ್ಯಾರ್ಥಿ ಫಕೀರೇಶ (17). ಹುಬ್ಬಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ಸಿನ ಹಿಂಬದಿ ಸೀಟಿನಲ್ಲಿ ಫಕೀರೇಶ ಕುಳಿತಿದ್ದ. ಬಸ್ ಚಲಿಸುತ್ತಿದ್ದಾಗ ಗುಟ್ಕಾ ಉಗುಳಲು ಆತ ಕಿಟಕಿಯಿಂದ ತಲೆಯನ್ನು ಹೊರಗೆ ಹಾಕಿದ್ದಾನೆ. ಈ

ಗುಟ್ಕಾ ಉಗುಳುವ ಧಾವಂತ ತಂದಿಟ್ಟ ಆಪತ್ತು: ಚಲಿಸುವ ಬಸ್ಸಿನಲ್ಲೇ ರುಂಡ ಕತ್ತರಿಸಿ ಬಿದ್ದ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ತಾಲೂಕಿನಲ್ಲಿ ವರುಣನ ಆರ್ಭಟ: ಮರ ಬಿದ್ದು ಮನೆಗಳು ಜಖಂ, ನಿರಾಶ್ರಿತರಾದ ನಿವಾಸಿಗಳು

(ನ್ಯೂಸ್‌ ಕಡಬ) newskadaba.com, ಜು.02: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂರು ಮನೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಅಜೆಕಲ ನಿವಾಸಿ ಚಂದ್ರಶೇಖರ ಅವರ ಮನೆ ಮೇಲೂ ಮರ ಬಿದ್ದಿದ್ದು, ನಿವಾಸವು ವಾಸಕ್ಕೆ ಸಂಪೂರ್ಣ ಅಯೋಗ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಸದ್ಯ ಬಾಡಿಗೆ ಮನೆಯನ್ನು ಆಶ್ರಯಿಸಿದ್ದಾರೆ. ಅಲಂಗಾರು ನಿವಾಸಿ ವನಜಾ ಅವರ ಮನೆಯೂ ಭಾರಿ ಮಳೆಯ ಪರಿಣಾಮ ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.

ಬಂಟ್ವಾಳ ತಾಲೂಕಿನಲ್ಲಿ ವರುಣನ ಆರ್ಭಟ: ಮರ ಬಿದ್ದು ಮನೆಗಳು ಜಖಂ, ನಿರಾಶ್ರಿತರಾದ ನಿವಾಸಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಐಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ

(ನ್ಯೂಸ್ ಕಡಬ) newskadaba.com ಜು. 02. ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Special Intensive Revision-SIR) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತ ಮತದಾರರು ಹಾಗೂ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತದಾರರ ಹೆಸರನ್ನು ಮತದಾರರ

ಎಸ್ಐಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ Read More »

ಕರಾವಳಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ

(ನ್ಯೂಸ್‌ ಕಡಬ) newskadaba.com, ಜು.02: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬನಾದ ಪುನೀತ್ ,ಕೊಲೆಯ ಬಳಿಕ ಶವ ವಿಲೇವಾರಿ ಮಾಡಲು ಸಂದೀಪ್‌ಗೆ ಸ್ಕಾರ್ಪಿಯೋ ಕಾರು ನೀಡಿದ್ದ ಹಾಗೂ ನಂತರ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪ್ರಮುಖ ಸಾಕ್ಷಿಯಾಗಿದ್ದಾನೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದಿಲ್ಲ ಎಂದು ಸುಳ್ಳು ಹೇಳಿಕೆ ನೀಡುವಂತೆ ಸಂದೀಪ್‌ ಮೇಲೆ ಪುನೀತ್ ಒತ್ತಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 02. 9 ವರ್ಷಗಳಿಂದ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಧರ್ಮಸ್ಥಳ ಠಾಣಾ ಅ.ಕ್ರ:169/2016.  ಕಲಂ, 379, 201  ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ಎಂಬವರು ಆಂಧ್ರಪ್ರದೇಶದ ಚಿತ್ತೂರು  ಎಂಬಲ್ಲಿಂದ ದಸ್ತಗಿರಿ ಮಾಡಿ  ಜುಲೈ 1ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು

9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಸು ವಧೆ ಸಂಪೂರ್ಣ ನಿಷೇಧ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

(ನ್ಯೂಸ್‌ ಕಡಬ) newskadaba.com, ಜು.02:ಬಕ್ರೀದ್ ಸೇರಿದಂತೆ ಯಾವುದೇ ದಿನಗಳಲ್ಲಿ ಹಸು ಮತ್ತು ಕರುಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸರ್ಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಮೂಲಕ ಈ ಅರ್ಜಿ ಸಲ್ಲಿಕೆಯಾಗಿದೆ. ಕೊಯಂಬತ್ತೂರಿನ ಸಾರ್ವಜನಿಕ ಸ್ಥಳಗಳಲ್ಲಿ ಬಕ್ರೀದ್ ವೇಳೆ ಹಸು ವಧೆ ತಡೆಯುವ ಕುರಿತು ಮಾತ್ರ ಮೂಲ ಅರ್ಜಿ ಇತ್ತು. ಆದರೆ ಹೈಕೋರ್ಟ್ ತನ್ನ ವ್ಯಾಪ್ತಿ ಮೀರಿ ರಾಜ್ಯಾದ್ಯಂತ ಸಂಪೂರ್ಣ ನಿಷೇಧ

ಹಸು ವಧೆ ಸಂಪೂರ್ಣ ನಿಷೇಧ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಂತೋಡು: ಬಿಳಿಯಾರಿನಲ್ಲಿ ಕೃಷಿಕನ ತೋಟಕ್ಕೆ ಕಾಡಾನೆ ದಾಳಿ; ಭಾರಿ ಪ್ರಮಾಣದ ಬೆಳೆ ಹಾನಿ

(ನ್ಯೂಸ್‌ ಕಡಬ) newskadaba.com, ಜು.02 ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಕೃಷಿಕರೊಬ್ಬರ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿ, ಭಾರಿ ಪ್ರಮಾಣದ ಕೃಷಿ ಹಾನಿ ಉಂಟುಮಾಡಿವೆ. ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಬಾಳೆ ಸೇರಿದಂತೆ ಹಲವು ವಾಣಿಜ್ಯ ಬೆಳೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಶಬ್ದದಿಂದಾಗಿ ಕಾಡಾನೆಗಳು ತೋಟಕ್ಕೆ ನುಗ್ಗಿರುವ ವಿಷಯ ತಕ್ಷಣಕ್ಕೆ ಮನೆಯವರ ಗಮನಕ್ಕೆ ಬಂದಿಲ್ಲ. ಇದರ ಲಾಭ ಪಡೆದ ಆನೆಗಳು ಸುದೀರ್ಘ ಸಮಯ ತೋಟದಲ್ಲೇ ಮೊಕ್ಕಾಂ ಹೂಡಿ ಮತ್ತಷ್ಟು ಬೆಳೆ ಹಾನಿ

ಅರಂತೋಡು: ಬಿಳಿಯಾರಿನಲ್ಲಿ ಕೃಷಿಕನ ತೋಟಕ್ಕೆ ಕಾಡಾನೆ ದಾಳಿ; ಭಾರಿ ಪ್ರಮಾಣದ ಬೆಳೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋಳಿತ್ತಡಿ: ರಸ್ತೆಯಂಚಿನ ಅಕೇಶಿಯ ಮರ ಧರಾಶಾಯಿ ಸ್ಕೂಟಿ ಸವಾರ ಪ್ರಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜು. 02. ರಸ್ತೆಯಂಚಿನಲ್ಲಿದ್ದ ಅಕೇಶಿಯ ಜಾತಿಯ ಮರವೊಂದು ಬುಡ ಸಮೇತ ಧರಶಾಯಿಯಾಗಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ  ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಎಂಬಲ್ಲಿ ಬುಧವಾರದಂದು ಸಂಜೆ ನಡೆದಿದೆ.   ಗಾಯಗೊಂಡವರನ್ನು ಆತೂರು ಪೇಟೆಯಲ್ಲಿರುವ ಡಿಲೈಟ್ ಹಾರ್ಡ್ ವೇರ್ ಅಂಗಡಿ ಮಾಲಕ ಇಕ್ಬಾಲ್ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಕುಂಡಾಜೆಯಿಂದ ಅಂಗಡಿಯತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಏಕಾಏಕಿ ಮರ ಬಿದ್ದಿದೆ. ಘಟನೆಯಿಂದ ಸ್ಕೂಟಿಗೆ

ಗೋಳಿತ್ತಡಿ: ರಸ್ತೆಯಂಚಿನ ಅಕೇಶಿಯ ಮರ ಧರಾಶಾಯಿ ಸ್ಕೂಟಿ ಸವಾರ ಪ್ರಣಾಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ (ಜು. 02) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಅಂದರೆ ಜುಲೈ 2ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.

ನಾಳೆ (ಜು. 02) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top