ಬಂಟ್ವಾಳ: ಎಸ್ಡಿಪಿಐ ಅಸೆಂಬ್ಲಿ ಪ್ರತಿನಿಧಿ ಸಭೆ; ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಲವರ್ಧನೆಗೆ ಕರೆ
(ನ್ಯೂಸ್ ಕಡಬ) newskadaba.com,ಜೂ.12 ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬಿಸಿ ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಸೆಂಬ್ಲಿ ಪ್ರತಿನಿಧಿ ಸಭೆಯು ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, “ನಿಜವಾದ ನಾಯಕತ್ವವು ಅಧಿಕಾರ ಮತ್ತು ಹುದ್ದೆಗಳಿಗಾಗಿ ಅಲ್ಲ; ಜನರ ಹಕ್ಕುಗಳು, ನ್ಯಾಯ ಹಾಗೂ ಸಮಾನತೆಯ ಪರವಾಗಿ ನಿರಂತರವಾಗಿ ಹೋರಾಡುವ ಮೂಲಕ […]










