ಕರಾವಳಿ

ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com, ಜೂ.11  ಸುಳ್ಯ: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದು ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ನಗರದ ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ. ಜಿಲ್ಲೆಗೆ ಹಾಗೂ ಸುಳ್ಯ ತಾಲ್ಲೂಕಿಗೆ ಹೆಮ್ಮೆ ತಂದಿದ್ದ ಭವಿಷ್ಯದ ಭರವಸೆಯ ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಶಿಕ್ಷಕರು […]

ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಜೂ.11  :ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಡಾಲರ್ ಮೌಲ್ಯ ವೃದ್ಧಿಯಿಂದಾಗಿ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಮುಂದುವರಿದಿದೆ 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 10 ಗ್ರಾಂಗೆ 2,130 ರೂ. ಇಳಿಕೆಯಾಗಿ 1,45,640 ರೂ. ತಲುಪಿದೆ. (1 ಗ್ರಾಂಗೆ 14,564 ರೂ.) 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 10 ಗ್ರಾಂಗೆ 1,950 ರೂ. ಕುಸಿದು 1,33,500 ರೂ. ದಾಖಲಾಗಿದೆ. ಬೆಳ್ಳಿ ದರ: ಇಂದು ಯಾವುದೇ ಬದಲಾವಣೆ ಕಾಣದೆ

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್‌ಗೆ ಬಿಎಂಸಿಎ ಒತ್ತಾಯ

(ನ್ಯೂಸ್‌ ಕಡಬ) newskadaba.com, ಜೂ.11  : ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದ ಬೆನ್ನಲ್ಲೇ, ಬಿಎಂಆರ್‌ಸಿಎಲ್ ಕೂಡ ನಮ್ಮ ಮೆಟ್ರೋದಲ್ಲಿ ಉಚಿತ ಪಾಸ್ ನೀಡಬೇಕೆಂದು ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಘ ಆಗ್ರಹಿಸಿದೆ. ಸಾರಿಗೆ ವೆಚ್ಚ ಶಿಕ್ಷಣಕ್ಕೆ ತಡೆಯಾಗಬಾರದು. ಉಚಿತ ಪ್ರಯಾಣದಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಲಿದ್ದು, ಸುರಕ್ಷಿತವಾಗಿ ಶಾಲೆ-ಕಾಲೇಜು ತಲುಪಬಹುದು. ಇದು ಸುಸ್ಥಿರ ಸಾರ್ವಜನಿಕ ಸಾರಿಗೆ ಸಂಸ್ಕೃತಿಯನ್ನು ಬೆಳೆಸಿ, ಖಾಸಗಿ ವಾಹನಗಳ ಅವಲಂಬನೆ ಕಡಿಮೆ ಮಾಡುತ್ತದೆ. ಅಲ್ಲದೆ, ಸಾರ್ವಜನಿಕ ಸಾರಿಗೆ ಬಳಕೆಯಿಂದ

ವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್‌ಗೆ ಬಿಎಂಸಿಎ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ  ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಬೂಮರಡ್ಡಿ ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಫೈಬರ್ ಬೋಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು ಸಿದ್ಧಪಡಿಸಿ, ಪ್ರವಾಹ ರಕ್ಷಣಾ ತಂಡದ ಸದಸ್ಯರುಗಳಿಗೆ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯವನ್ನು ಮಾಡುವ ಕುರಿತು

ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ Read More »

ಕರಾವಳಿ

ಹಾಸ್ಟೆಲ್ ವಾರ್ಡನ್ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನ ಹಾಸ್ಟೆಲ್‍ ಗೆ ಹೊರಗುತ್ತಿಗೆ ಆಧಾರದಲ್ಲಿ 1 ವಾರ್ಡನ್ ಹುದ್ದೆಗೆ ಪುರುಷ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಸ್ಟೆಲ್ ನಿರ್ವಹಣೆ, ವಿದ್ಯಾರ್ಥಿಗಳ ಮೇಲ್ವಿಚಾರಣೆ ಮತ್ತು ಶಿಸ್ತುಪಾಲನೆ ಕಾರ್ಯಗಳಲ್ಲಿ ಅನುಭವವನ್ನು ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಯು ಹಾಸ್ಟೆಲ್‍ ನಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ ಸಂಸ್ಥೆ (ದೂ.ಸಂ:9008263660, 08242408003) ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಸ್ಟೆಲ್ ವಾರ್ಡನ್ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಜೂ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳು, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ Read More »

ಕರಾವಳಿ

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 10. ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕರೊಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿಯಾಗಿರುವ

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಜೂ. 10. ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತಪಟ್ಟವರನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಹಾಗೂ ಶೋಭಾ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗಡಿಯಾರ ಸಮೀಪ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾಂಕಾಕ್‌ನ ಜಾಗತಿಕ ಶಿಕ್ಷಣ ಶೃಂಗಸಭೆಯಲ್ಲಿ ಮಂಗಳೂರಿನ ಶ್ರೀನಿವಾಸ ಸಂಸ್ಥೆಗೆ 3 ಪ್ರತಿಷ್ಠಿತ ಪ್ರಶಸ್ತಿಗಳ ಗರಿ!

(ನ್ಯೂಸ್‌ ಕಡಬ) newskadaba.com,  ಜೂ.10   ಮಂಗಳೂರು: ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿವೆ. ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಪ್ರತಿಷ್ಠಿತ ‘ಗ್ಲೋಬಲ್ ಎಜುಕೇಶನ್ ಸಮ್ಮಿಟ್’ ನಲ್ಲಿ ಸಂಸ್ಥೆಗೆ ಮೂರು ಜಾಗತಿಕ ಪ್ರಶಸ್ತಿಗಳು ಲಭಿಸಿವೆ. ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಧುರಕಿಜ್ ಪುಂಡಿತ್ ವಿಶ್ವವಿದ್ಯಾಲಯ ಸೇರಿದಂತೆ ಪ್ರಮುಖ ಜಾಗತಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಶೃಂಗಸಭೆಯಲ್ಲಿ, ಶ್ರೀನಿವಾಸ ಸಂಸ್ಥೆಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಈ

ಬ್ಯಾಂಕಾಕ್‌ನ ಜಾಗತಿಕ ಶಿಕ್ಷಣ ಶೃಂಗಸಭೆಯಲ್ಲಿ ಮಂಗಳೂರಿನ ಶ್ರೀನಿವಾಸ ಸಂಸ್ಥೆಗೆ 3 ಪ್ರತಿಷ್ಠಿತ ಪ್ರಶಸ್ತಿಗಳ ಗರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರದಲ್ಲಿ ರೈಲು ಡಿಕ್ಕಿ: ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಜೂ.10   ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪ ಮಂಗಳವಾರ ರಾತ್ರಿ ಎರಡು ಪ್ರತ್ಯೇಕ ರೈಲು ಅಪಘಾತಗಳು ಸಂಭವಿಸಿವೆ. ಉಮೇಶ್ (39): ಮೊಗ್ರಾಲ್ ಪುತ್ತೂರು ಮೂಲದ ಇವರು ಸಂಜೆ 7 ಗಂಟೆಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಗೂಡ್ಸ್ ರೈಲು ಢಿಕ್ಕಿಯಾಗಿ ಮೃತಪಟ್ಟಿದ್ದಾರೆ.ಮನೀಶ್ (19): ಕೀರ್ತೇಶ್ವರದ ಫ್ಯಾಬ್ರಿಕೇಶನ್ ಕಾರ್ಮಿಕ. ರಾತ್ರಿ 9 ಗಂಟೆ ಸುಮಾರಿಗೆ ಹಳಿ ದಾಟುವಾಗ ರೈಲು ಢಿಕ್ಕಿಯಾಗಿ ಸಾನ್ನಿಧ್ಯ ಕಳೆದುಕೊಂಡಿದ್ದಾರೆ. ಮೃತದೇಹಗಳನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಮಂಜೇಶ್ವರದಲ್ಲಿ ರೈಲು ಡಿಕ್ಕಿ: ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ Read More »

ಕರಾವಳಿ, ಕರ್ನಾಟಕ
Scroll to Top