ಕರಾವಳಿ

ಕರ್ನಾಟಕ-ಆಂಧ್ರ ಗಡಿಯಲ್ಲಿ ಘೋರ ದುರಂತ ಎರಡು ಲಾರಿಗಳಲ್ಲಿ ಭೀಕರ ಬೆಂಕಿ, ಸ್ಥಳದಲ್ಲೇ ಲಾರಿ ಚಾಲಕ ಮೃತ್ಯು!

(ನ್ಯೂಸ್‌ ಕಡಬ) newskadaba.com,  ಜೂ.10  : ರಸ್ತೆ ಬದಿ ನಿಂತಿದ್ದ ಸಿಮೆಂಟ್ ಟ್ಯಾಂಕರ್‌ಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ.ಲಾರಿಯ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಕರ್ನಾಟಕ-ಆಂಧ್ರ ಗಡಿಯ ಬಳ್ಳಾರಿ ಜಿಲ್ಲೆಯ ಸಮೀಪದ ಡಿ. ಹಿರೇಹಾಳ ಬಳಿ ಈ ಅವಘಡ ನಡೆದಿದೆ.ಸ್ಥಳಕ್ಕೆ ಧಾವಿಸಿದ ಆಂಧ್ರ ಹಾಗೂ ಕರ್ನಾಟಕದ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ಬೆಂಕಿ ನಂದಿಸಿದ್ದಾರೆ.

ಕರ್ನಾಟಕ-ಆಂಧ್ರ ಗಡಿಯಲ್ಲಿ ಘೋರ ದುರಂತ ಎರಡು ಲಾರಿಗಳಲ್ಲಿ ಭೀಕರ ಬೆಂಕಿ, ಸ್ಥಳದಲ್ಲೇ ಲಾರಿ ಚಾಲಕ ಮೃತ್ಯು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಸ್‌ಗಳ ವಿರುದ್ಧ ಬಂಟ್ವಾಳ ಪೊಲೀಸರ ಖಡಕ್ ಆ್ಯಕ್ಷನ್: ಒಂದೇ ದಿನ 20 ಪ್ರಕರಣ ದಾಖಲು!

(ನ್ಯೂಸ್‌ ಕಡಬ) newskadaba.com,  ಜೂ.10  ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿಯಮ ಉಲ್ಲಂಘಿಸುವ ಸ್ಕೂಲ್ ಬಸ್‌ಗಳ ವಿರುದ್ಧ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನದಲ್ಲಿ 20 ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಟ್ವಾಳ ಟ್ರಾಫಿಕ್ ಎಸ್‌ಐ ಆದರ್ಶ್ ನೇತೃತ್ವದ ಪೊಲೀಸ್ ತಂಡವು ಬೆಳ್ಳಂಬೆಳಗ್ಗೆ 6 ಗಂಟೆಯಿಂದಲೇ ಬಿಸಿರೋಡ್ ಸರ್ಕಲ್ ಬಳಿ ಹೆದ್ದಾರಿಯಲ್ಲಿ ಖಾಸಗಿ ಸಂಸ್ಥೆಗಳ ಶಾಲಾ ಬಸ್‌ಗಳನ್ನು ತಡೆದು ತಪಾಸಣೆ ನಡೆಸಿತು. ಈ ವೇಳೆ ಸಮವಸ್ತ್ರ ಧರಿಸದ 6 ಚಾಲಕರು, ಆರ್‌ಟಿಒ ಮಿತಿಗಿಂತ ಹೆಚ್ಚು ಮಕ್ಕಳನ್ನು ತುಂಬಿಸಿಕೊಂಡು

ಶಾಲಾ ಬಸ್‌ಗಳ ವಿರುದ್ಧ ಬಂಟ್ವಾಳ ಪೊಲೀಸರ ಖಡಕ್ ಆ್ಯಕ್ಷನ್: ಒಂದೇ ದಿನ 20 ಪ್ರಕರಣ ದಾಖಲು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 10. ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ- 2026ರ ಅಂಗವಾಗಿ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‍ಎಸ್‍ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ Read More »

ಕರಾವಳಿ

ಹೊನ್ನಾವರ: ಮಸೀದಿಯಲ್ಲಿ ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಜೂ.10  ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಂ.ಜೆ.ಎಂ ಮಸೀದಿಯಲ್ಲಿ ಮಂಗಳವಾರ ಸಂಜೆ ಅಸರ್ ನಮಾಜ್‌ಗಾಗಿ ಅಝಾನ್ ಮೊಳಗಿಸುತ್ತಿದ್ದ ವೇಳೆ ಮೌಲ್ವಿಯೊಬ್ಬರು ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ ಎಂದು ಗುರುತಿಸಲಾಗಿದೆ. ಇವರು ಕಳೆದ ಆರು ತಿಂಗಳಿನಿಂದ ಈ ಮಸೀದಿಯಲ್ಲಿ ಧಾರ್ಮಿಕ ಸೇವೆ ಸಲ್ಲಿಸುತ್ತಿದ್ದರು. ಅಝಾನ್ ಹೇಳುತ್ತಿದ್ದಾಗಲೇ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಹೊನ್ನಾವರದ ಸೆಂಟ್

ಹೊನ್ನಾವರ: ಮಸೀದಿಯಲ್ಲಿ ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನ್ ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಇಂಟರ್ನ್‍ ಗಳು ಕನ್ನಡದಲ್ಲಿ ವ್ಯವಹರಿಸದೇ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದಾಗಿ ಹಾಗೂ ಕೆಲವೊಂದು ವೈದ್ಯರುಗಳು ಹಾಗೂ ವಿದ್ಯಾರ್ಥಿಗಳು ರೋಗಿಗಳಿಗೆ/ ರೋಗಿಗಳ ಸಂಬಂಧಿಕರಿಗೆ ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಪ್ರಗತಿಯ ಮಾಹಿತಿಯನ್ನು ತಿಳಿಸದೇ ಇರುವುದರಿಂದಲೂ ಜನಪ್ರತಿನಿಧಿಗಳಿಗೆ ಹಾಗೂ ನೇರವಾಗಿ

ವೆನ್ ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಸೂಚನೆ Read More »

ಕರಾವಳಿ

ಮತ್ಸ್ಯಸಂಪದ ಯೋಜನೆ: ಮೀನುಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ – ಶೈತ್ಯಾಗಾರ / ಮಂಜುಗಡ್ಡೆ ಸ್ಥಾವರಗಳ ಆಧುನೀಕರಣ (MODERNIZATION OF COLD STORAGE / ICE PLANT) ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಂದ ಸಾಮಾನ್ಯ ವರ್ಗದಡಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಜೂನ್ 13 ರೊಳಗೆ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರದ ಉರ್ವಾಸ್ಟೋರ್ ದ.ಕ. ಜಿಲ್ಲಾ ಪಂಚಾಯತ್ ಆವರಣದ ರೆಕಾರ್ಡ್ ಬಿಲ್ಡಿಂಗ್ ಮೊದಲನೇ ಮಹಡಿಯಲ್ಲಿರುವ ಮೀನುಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ

ಮತ್ಸ್ಯಸಂಪದ ಯೋಜನೆ: ಮೀನುಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ವಿಟ್ಟ: ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ

(ನ್ಯೂಸ್ ಕಡಬ) newskadaba.com ಜೂ. 10. ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಸಾರಡ್ಕ, ವಿಟ್ಲ ಕಡೆಯಿಂದ ಮಂಗಳಪದವು ಕಲ್ಲಡ್ಕ ಕಡೆಗೆ ಸಂಚರಿಸುವ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು (ಬಸ್ಸುಗಳು ಸೇರಿ) ಮಾತ್ರವೇ ವಿಟ್ಲ ನಾಲ್ಕು ಮಾರ್ಗದ ಬಳಿ ಇರುವ ಬದ್ರಿಯಾ ಟೆಕ್ಸ್‍ ಟೈಲ್

ವಿಟ್ಟ: ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ Read More »

ಕರಾವಳಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಚಟುವಟಿಕೆಗಳ ಹೆಸರು ಈ ಕೆಳಗಿನಂತಿದೆ. 1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2) ಸಮಗ್ರ ನೀರು ನಿರ್ವಹಣೆ,  3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ,

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

(ನ್ಯೂಸ್‌ ಕಡಬ) newskadaba.com,  ಜೂ.10  ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಸಣ್ಣ ಫ್ಲೈಓವರ್ ಬಳಿಯ ರಸ್ತೆಬದಿಯ ಚರಂಡಿಯಲ್ಲಿ ಬುಧವಾರ ಅಪರಿಚಿತ ಯುವಕನೊಬ್ಬನ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನೆಂದು ಶಂಕಿಸಲಾಗಿದ್ದು, ಸದ್ಯಕ್ಕೆ ಗುರುತು ಪತ್ತೆಯಾಗಿಲ್ಲ. ಶವ ಪತ್ತೆಯಾದ ಸ್ಥಳದಿಂದ ಕೇವಲ ಒಂದೂವರೆ ಮೀಟರ್ ದೂರದಲ್ಲಿರುವ ಮನೆಯೊಂದರ ಗೇಟ್ ಬಳಿ ರಕ್ತದ ಕಲೆಗಳು ಪತ್ತೆಯಾಗಿವೆ. ಇದರಿಂದಾಗಿ ಯುವಕನನ್ನು ಬೇರೆಡೆ ಕೊಲೆ ಮಾಡಿ ತಂದು ಎಸೆದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ವಿಷಯ

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿಗೆ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಹುದ್ದೆಗಳಿಗೆ (ವಿಕಲಚೇತನ ಮಕ್ಕಳಿಗೆ ಬೋಧಿಸುವ [Special D.Ed(Primary) & Special B.Ed (Secondary)] ವಿದ್ಯಾರ್ಹತೆಯುಳ್ಳ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ  2027 ರ ಮೇ  31 ರವರೆಗೆ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಯೊಂದಿಗೆ ನಗರದ ಕೊಟ್ಟಾರದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಕಛೇರಿಗೆ ಜೂನ್ 16 ರೊಳಗೆ ಅರ್ಜಿ

ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top