ಕರಾವಳಿ

ಮಂಗಳೂರು : ಕೇರಳದ ಲಾಟರಿ ಖರೀದಿಸಿದ ವ್ಯಕ್ತಿಗೆ ವಂಚನೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.06 ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದ ಕೇರಳ ಲಾಟರಿಯ ನಕಲಿ ಜಾಹೀರಾತು ನಂಬಿ ಸುರತ್ಕಲ್ ನಿವಾಸಿಯೊಬ್ಬರು ₹1.85 ಲಕ್ಷ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 29ರಂದು ಫೇಸ್‌ಬುಕ್‌ನಲ್ಲಿ ₹50 ರ ಲಾಟರಿ ಜಾಹೀರಾತು ನೋಡಿ ಸಂತ್ರಸ್ತರು ₹100 ಪಾವತಿಸಿ ಆನ್‌ಲೈನ್‌ನಲ್ಲಿ 2 ಟಿಕೆಟ್ ಖರೀದಿಸಿದ್ದರು. ಅಂದೇ ಸಂಜೆ ಕರೆ ಮಾಡಿದ ಅಪರಿಚಿತರು, “ನಿಮಗೆ ₹12 ಲಕ್ಷ ಬಹುಮಾನ ಬಂದಿದೆ” ಎಂದು ನಂಬಿಸಿದ್ದರು. ಬಳಿಕ ಬಹುಮಾನದ ಹಣ […]

ಮಂಗಳೂರು : ಕೇರಳದ ಲಾಟರಿ ಖರೀದಿಸಿದ ವ್ಯಕ್ತಿಗೆ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ ಜನಾರ್ದನ ಮರವಂತೆ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಜೂ.06 ಕುಂದಾಪುರ: ರಾಷ್ಟ್ರೀಯ ಮಟ್ಟದ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಹಾಗೂ ನಿವೃತ್ತ ಪ್ರಾಂಶುಪಾಲರಾದ ಜನಾರ್ದನ ಮರವಂತೆ (88) ಅವರು ಶನಿವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇಂಗ್ಲೀಷ್ ಉಪನ್ಯಾಸಕರಾಗಿದ್ದ ಅವರು, ‘ಪ್ರಜಾವಾಣಿ’ ಹಾಗೂ ‘ಉದಯವಾಣಿ’ ಪತ್ರಿಕೆಗಳ ವರದಿಗಾರರಾಗಿ, ಬೈಂದೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಮತ್ತು ಮರವಂತೆ ಗ್ರಾ.ಪಂ. ಅಧ್ಯಕ್ಷರಾಗಿ ರಾಷ್ಟ್ರ ಮಟ್ಟದ ಮನ್ನಣೆ ತಂದುಕೊಟ್ಟಿದ್ದರು. ಜೂನ್ 7ರ ಭಾನುವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮರವಂತೆಯ ‘ಸಾಧನಾ

ಹಿರಿಯ ಪತ್ರಕರ್ತ ಜನಾರ್ದನ ಮರವಂತೆ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಟೇಕಾಫ್ ಆದ ಬೆನ್ನಲ್ಲೇ ತುರ್ತು ಭೂಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಜೂ.06 ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿದ್ದ ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ (6E-6283) ಹಕ್ಕಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದಾಗ ಹಕ್ಕಿ ಡಿಕ್ಕಿ ಹೊಡೆದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್ ವಿಮಾನವನ್ನು ಮತ್ತೆ ನಿಲ್ದಾಣಕ್ಕೆ ಮರಳಿಸಿದರು. ಬಳಿಕ ತಾಂತ್ರಿಕ ಸಿಬ್ಬಂದಿ ಏರ್‌ಬಸ್ ಎ321 ನಿಯೋ ವಿಮಾನದ ಎರಡೂ ಎಂಜಿನ್‌ಗಳು ಸೇರಿದಂತೆ ಅಗತ್ಯ ತಪಾಸಣೆ ನಡೆಸಿ, ಸುರಕ್ಷಿತವೆಂದು ಘೋಷಿಸಿದರು. ಸಂಜೆ 7:04ಕ್ಕೆ ಹೊರಡಬೇಕಿದ್ದ ವಿಮಾನವು ಈ ತಪಾಸಣೆಯಿಂದಾಗಿ ಒಂದು

ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಟೇಕಾಫ್ ಆದ ಬೆನ್ನಲ್ಲೇ ತುರ್ತು ಭೂಸ್ಪರ್ಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಬ್ರೇಕ್: ದೇಶದಲ್ಲೇ ಮೊದಲ ಬಾರಿಗೆ ‘ಎಥನಾಲ್ ಅಡುಗೆ ಸ್ಟವ್’ ಬಿಡುಗಡೆ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ: ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಪರ್ಯಾಯ ಮತ್ತು ಪರಿಸರಸ್ನೇಹಿ ಉಪಾಯವೊಂದನ್ನು ಪರಿಚಯಿಸಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಎಲ್‌ಪಿಜಿಗಿಂತ ಕಡಿಮೆ ವೆಚ್ಚದ ‘ಎಥನಾಲ್ ಆಧಾರಿತ ಅಡುಗೆ ಸ್ಟವ್’ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಕಬ್ಬು, ಮೆಕ್ಕೆಜೋಳ ಮತ್ತು ಕೃಷಿ ಜೈವಿಕ ರಾಶಿಯಿಂದ ದೇಶೀಯವಾಗಿಯೇ ಎಥನಾಲ್ ಉತ್ಪಾದಿಸುವುದರಿಂದ, ವಿದೇಶಿ ಕಚ್ಚಾ ತೈಲ ಹಾಗೂ ಗ್ಯಾಸ್ ಆಮದಿನ ಮೇಲಿನ ಅವಲಂಬನೆ ತಪ್ಪಲಿದೆ. ಇದು

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಬ್ರೇಕ್: ದೇಶದಲ್ಲೇ ಮೊದಲ ಬಾರಿಗೆ ‘ಎಥನಾಲ್ ಅಡುಗೆ ಸ್ಟವ್’ ಬಿಡುಗಡೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:  ಚಿನ್ನದ ಬೆಲೆಯಲ್ಲಿ ಇಂದು ಒಂದೇ ದಿನ ಭಾರಿ ಕುಸಿತ ಕಂಡುಬಂದಿದೆ. ಇಂದು 10 ಗ್ರಾಮ್ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹3,000 ಇಳಿಕೆಯಾಗಿದೆ. ಇದರೊಂದಿಗೆ ಪ್ರತಿ ಗ್ರಾಮ್ ಬೆಲೆ ₹15,273ಕ್ಕೆ ತಲುಪಿದೆ. ಕಳೆದ ಮೇ 30ರಂದು ಇದರ ಬೆಲೆ ₹15,784 ಇತ್ತು. ಸಾಮಾನ್ಯವಾಗಿ ಗ್ರಾಹಕರು ಖರೀದಿಸುವ 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲೂ ಭಾರಿ ಇಳಿಕೆಯಾಗಿದೆ. 10 ಗ್ರಾಮ್ 22 ಕ್ಯಾರಟ್ ಚಿನ್ನದ ದರದಲ್ಲಿ ಇಂದು ₹2,750

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! Read More »

ಕರಾವಳಿ

ಭಾರತದ ಇಂಧನ ಭದ್ರತೆಗೆ ದಾರಿದೀಪ: ‘ಆಯಿಲ್ ಇಂಡಿಯಾ’ ಸಾಧನೆ

  (ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ: ಭಾರತದ ಇಂಧನ ಸ್ವಾವಲಂಬನೆ ಮತ್ತು ಭದ್ರತೆಯ ಕನಸಿಗೆ ದಾರಿದೀಪವೆಂಬಂತೆ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದೆ. ಈ ಐತಿಹಾಸಿಕ ಮೈಲಿಗಲ್ಲು ಭವಿಷ್ಯದಲ್ಲಿ ವಿದೇಶಿ ಇಂಧನ ಆಮದಿನ ಮೇಲಿನ ಭಾರತದ ಅವಲಂಬನೆಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆ ಮೂಡಿಸಿದೆ. ಸರ್ಕಾರಿ ಸ್ವಾಮ್ಯದ ಪ್ರಮುಖ ಇಂಧನ ಸಂಸ್ಥೆಯಾದ ಆಯಿಲ್ ಇಂಡಿಯಾ ಲಿಮಿಟೆಡ್ ಈ ಮಹತ್ತರ ಪರಿಶೋಧನೆಯನ್ನು ಕೈಗೊಂಡಿದೆ. ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15

ಭಾರತದ ಇಂಧನ ಭದ್ರತೆಗೆ ದಾರಿದೀಪ: ‘ಆಯಿಲ್ ಇಂಡಿಯಾ’ ಸಾಧನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:ಭಾರತದ 20 ವರ್ಷದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಪ್ರತಿಷ್ಠಿತ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಟೂರ್ನಿಯ ಮಧ್ಯಭಾಗದಲ್ಲಿ ಸತತ ಸೋಲು ಕಂಡು ಕೊನೆಯ ಸ್ಥಾನಕ್ಕೆ ಕುಸಿದಿದ್ದ ಪ್ರಜ್ಞಾನಂದ, ನಂತರ ಅದ್ಭುತವಾಗಿ ಪುಟಿದೆದ್ದು ಸತತ 4 ಪಂದ್ಯಗಳನ್ನು ಗೆದ್ದರು.ಕೊನೆಯ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಕಡ್ಡಾಯವಾಗಿ ಗೆಲ್ಲಬೇಕಾದ ಒತ್ತಡದಲ್ಲೂ ಭರ್ಜರಿ ಜಯ ಸಾಧಿಸಿ, ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಕಾರ್ಲ್‌ಸನ್‌ಗೆ ‘ಡಬಲ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.      1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ Read More »

ಕರಾವಳಿ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ Read More »

ಕರಾವಳಿ

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.      ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿ ಕಾಲಾನುಸಾರವಾಗಿ ಮಾನ್ಸೂನ್‍ ಗಳು ಸಂಭವಿಸುತ್ತಿಲ್ಲ. ಹವಾಮಾನಕ್ಕೆ ಸಂಬಂಧಿಸಿದ ಅಸಾಮಾನ್ಯ ಬದಲಾವಣೆಗಳು, ಪ್ರಕೃತಿ ನಾಶ ಹಾಗೂ ವಿಪರೀತ ಪ್ಲಾಸ್ಟಿಕ್ ಬಳಕೆಯಿಂದಾಗಿ ವಿಜ್ಞಾನಿಗಳಿಗೆ ಮಾನ್ಸೂನ್‍ ಗಳ ನಿಯತಾಂಕಗಳನ್ನು (ಪ್ಯಾರಾಮೀಟರ್‍ಗಳನ್ನು) ಆಧರಿಸಿ ಮಳೆಯ ಮುನ್ಸೂಚನೆಗಳನ್ನು ನಿಖರವಾಗಿ ನಿರ್ಧರಿಸುವುದು ಕಷ್ಟವಾಗುತ್ತಿದೆ ಎಂದು

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ
Scroll to Top