ಕರಾವಳಿ

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು

(ನ್ಯೂಸ್ ಕಡಬ) newskadaba.com ಆ. 27. ಕೇಂದ್ರ ಸರ್ಕಾರದ ಪಿಎಂ ಬಸ್ ಸೇವಾ ಯೋಜನೆಯಡಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳು ಹಂಚಿಕೆಯಾಗಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರದ ಜೊತೆಗೆ ಉಡುಪಿ, ಮೂಡುಬಿದಿರೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಮಾರ್ಗಗಳಲ್ಲೂ ಬಸ್‌ ಗಳನ್ನು ಓಡಿಸಲು ಉದ್ದೇಶಿಸಲಾಗಿದೆ. ಸದ್ಯದ ಯೋಜನೆಯಂತೆ ಮಂಗಳೂರು–ಉಡುಪಿ ಮಾರ್ಗಕ್ಕೆ 10, ಮೂಡುಬಿದಿರೆ ಮಾರ್ಗಕ್ಕೆ 10, ವಿಮಾನ ನಿಲ್ದಾಣಕ್ಕೆ 2 ಹಾಗೂ ಪಡೀಲ್‌ ಗೆ 4 ಬಸ್‌ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಕುಂಟಿಕಾನ ಮತ್ತು ಬಾಳೆಪುಣಿಯಲ್ಲಿ ತಲಾ […]

ಮಂಗಳೂರು ರಸ್ತೆಗೆ ಇಳಿಯಲಿವೆ 100 ಎಲೆಕ್ಟ್ರಿಕ್ ಬಸ್‌ಗಳು Read More »

ಕರಾವಳಿ, ಕರ್ನಾಟಕ

ಕಡಬ: ಅಪಾಯಕಾರಿ ಮರ ತೆರವುಗೊಳಿಸಿದ್ದಕ್ಕೆ ಬೆದರಿಕೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಜೆಇ ಅಳಲು

(ನ್ಯೂಸ್ ಕಡಬ) newskadaba.com ಆ. 27. ಖಾಸಗಿಯವರ ಜಾಗದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ ತಾಗಿರುವ ಮರಗಳನ್ನು ತೆರವು ಮಾಡಿದಾಗ ಮರವನ್ನು ಕಡಿದ ಹಾಗೇ ನಿನ್ನನ್ನೂ ಕಡಿದು ಕೊಚ್ಚುತ್ತೇನೆ ಎಂದು ಮಚ್ಚು ತೋರಿಸಿ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿದ್ದಾರೆ. ಇಂತಹ ಭಯದ ವಾತಾವರಣದಲ್ಲಿ ನಾವು ಹೇಗೆ ಕೆಲಸ ಮಾಡುವುದು ಎಂದು ಮೆಸ್ಕಾಂ ಜೆಇ ಜನ ಸಂಪರ್ಕ ಸಭೆಯಲ್ಲಿ ಅಳಲು ತೋಡಿಕೊಂಡರು. ಮಸ್ಕಾಂ ಮಂಗಳೂರು ವೃತ್ತ ಅಧೀರ್ ಕೃಷ್ಣ ರಾಜ್ ಅಧ್ಯಕ್ಷತೆಯಲ್ಲಿ ಬುಧವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ

ಕಡಬ: ಅಪಾಯಕಾರಿ ಮರ ತೆರವುಗೊಳಿಸಿದ್ದಕ್ಕೆ ಬೆದರಿಕೆ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಜೆಇ ಅಳಲು Read More »

ಕರಾವಳಿ

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಆ. 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ

(ನ್ಯೂಸ್ ಕಡಬ) newskadaba.com ಆ. 27. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ‘ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ ಭಾಗವಾಗಿ ಯುವ ಶಕ್ತಿ, ಕನಸುಗಳು ಮತ್ತು ಕರ್ನಾಟಕ ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ರಾಜ್ಯದ ಎಲ್ಲ ವರ್ಗ, ಧರ್ಮ, ಜಾತಿ, ಮತ, ಪಂಗಡಕ್ಕೆ ಸೇರಿದ 16 ರಿಂದ 35 ವರ್ಷ ವಯೋಮಿತಿಯೊಳಗಿನ

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ Read More »

ಕರಾವಳಿ

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಇಂದಿನ ಲೇಟೆಸ್ಟ್ ಬೆಲೆ ವಿವರ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಆ.26: 22 ಕ್ಯಾರಟ್ ಚಿನ್ನ1 ಗ್ರಾಂಗೆ: ₹15,010…8 ಗ್ರಾಂಗೆ: ₹1,11,720, 10 ಗ್ರಾಂಗೆ: ₹1,39,650…. 100 ಗ್ರಾಂಗೆ: ₹13,96,500… 24ಕ್ಯಾರಟ್ ಚಿನ್ನ:1 ಗ್ರಾಂ ಗೆ: ₹16,375… 8 ಗ್ರಾಂಗೆ : ₹1,21,880 10 ಗ್ರಾಂ: ₹1,52,350..100 ಗ್ರಾಂ: ₹15,23,500   ಬೆಳ್ಳಿ ದರ 1 ಗ್ರಾಂ: ₹260, 10 ಗ್ರಾಂ: ₹2,600 , 1 ಕೆಜಿ: ₹2,60,000

ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಇಂದಿನ ಲೇಟೆಸ್ಟ್ ಬೆಲೆ ವಿವರ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ

(ನ್ಯೂಸ್‌ ಕಡಬ) newskadaba.com,  ಆ.26: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಮಾರಧಾರ ಹಾಗೂ ದರ್ಪಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವೆಡೆ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ದರ್ಪಣ ತೀರ್ಥ ನದಿ ಉಕ್ಕಿ ಹರಿದಿದ್ದರಿಂದ ಆದಿ ಸುಬ್ರಹ್ಮಣ್ಯ ದೇವಾಲಯದ ಅಂಗಳಕ್ಕೆ ನೀರು ನುಗ್ಗಿದ್ದು, ಭಕ್ತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದರು..ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಸ್ನಾನಘಟ್ಟ ಮುಳುಗುವಷ್ಟು ಏರದ ಕಾರಣ ಭಕ್ತರು ಪವಿತ್ರ ಸ್ನಾನ ಮಾಡಲು ಸಾಧ್ಯವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ದರ್ಪಣ ತೀರ್ಥ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯ ಜಲಾವೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ಹೆಚ್ಚಿದ ಹಂದಿ ಜ್ವರ ಪ್ರಕರಣಗಳು: ಆತಂಕ ಬೇಡ ಎಂದ ICMR ಮತ್ತು WHO

(ನ್ಯೂಸ್‌ ಕಡಬ) newskadaba.com,  ಆ.26: ದೇಶದ ರಾಜಧಾನಿ ನವದೆಹಲಿಯಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಒಟ್ಟು ಪ್ರಕರಣಗಳು 2,308 ಕ್ಕೆ ತಲುಪಿವೆ.ದೇಶದಲ್ಲಿ ಯಾವುದೇ ಹೊಸ ಅಥವಾ ಮಾರಕ ವೈರಸ್ ರೂಪಾಂತರ ಪತ್ತೆಯಾಗಿಲ್ಲ. ಇದು ಮಳೆಗಾಲ ಹಾಗೂ ಚಳಿಗಾಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಜ್ವರವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ICMR ಮತ್ತು WHO ತಜ್ಞರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಆರೋಗ್ಯ ಸಚಿವ ಡಾ. ಪಂಕಜ್ ಸಿಂಗ್ ಅವರು NDMC, MCD ಹಾಗೂ ಸೇನಾ ಕಂಟೋನ್ಮೆಂಟ್ ಅಧಿಕಾರಿಗಳೊಂದಿಗೆ ಉನ್ನತ

ದೆಹಲಿಯಲ್ಲಿ ಹೆಚ್ಚಿದ ಹಂದಿ ಜ್ವರ ಪ್ರಕರಣಗಳು: ಆತಂಕ ಬೇಡ ಎಂದ ICMR ಮತ್ತು WHO Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲೆಕ್ಟ್ರಾನಿಕ್ ಸಿಟಿ ನೈಸ್ ಟೋಲ್ ಬಳಿ ಭೀಕರ ಅಪಘಾತ: ಟ್ರಕ್ ಹರಿದು ಕಟ್ಟಡ ಕಾರ್ಮಿಕ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಆ.26: ಎಲೆಕ್ಟ್ರಾನಿಕ್ ಸಿಟಿಯ ನೈಸ್ ಟೋಲ್ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಟ್ಟಡ ಕಾರ್ಮಿಕನೊಬ್ಬ ದುರ್ಮರಣಕ್ಕೀಡಾಗಿದ್ದಾನೆ.ಬಿಹಾರ ಮೂಲದ ಗಾರೆ ಕಾರ್ಮಿಕ ಬಾಬುಜೀ ಮಿಯಾ (45).ಬಾಬುಜೀ ಅವರು ಕೆಲಸಕ್ಕಾಗಿ ಉತ್ತರಹಳ್ಳಿಯಿಂದ ಸರ್ಜಾಪುರದ ಕಡೆಗೆ ಪ್ರಯಾಣಿಸುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ತಲೆಯ ಮೇಲೆ ಹರಿದಿದೆ. ಅಪಘಾತದ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತ ಎಸಗಿದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಎಲೆಕ್ಟ್ರಾನಿಕ್ ಸಿಟಿ ನೈಸ್ ಟೋಲ್ ಬಳಿ ಭೀಕರ ಅಪಘಾತ: ಟ್ರಕ್ ಹರಿದು ಕಟ್ಟಡ ಕಾರ್ಮಿಕ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

AC ಕಂಪ್ರೆಸರ್ ಸ್ಫೋಟ: ಇಸ್ಲಾಮಾಬಾದ್‌ನ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, 15 ನವಜಾತ ಶಿಶುಗಳು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಆ.26: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಾರ್ಡ್‌ನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.ನರ್ಸರಿ ವಿಭಾಗದಲ್ಲಿದ್ದ ಹವಾನಿಯಂತ್ರಣ (AC) ಕಂಪ್ರೆಸರ್ ಸಡನ್ ಆಗಿ ಸ್ಫೋಟಗೊಂಡಿದ್ದೇ ಬೆಂಕಿ ವ್ಯಾಪಿಸಲು ಕಾರಣ ಎಂದು ತಿಳಿಯಲಾಗಿದೆ. ಬೆಂಕಿ ಕಾಣಿಸಿಕೊಂಡಾಗ ನರ್ಸರಿಯಲ್ಲಿ ಒಟ್ಟು 16 ನವಜಾತ ಶಿಶುಗಳಿದ್ದವು. ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರೂ ಸಹ 15 ಶಿಶುಗಳು ಬೆಂಕಿಗಾಹುತಿಯಾಗಿದ್ದು, ಕೇವಲ ಒಂದೇ ಒಂದು ಮಗುವನ್ನು ಬದುಕಿಸಲು ಸಾಧ್ಯವಾಗಿದೆ.ಅಗ್ನಿಶಾಮಕ

AC ಕಂಪ್ರೆಸರ್ ಸ್ಫೋಟ: ಇಸ್ಲಾಮಾಬಾದ್‌ನ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ, 15 ನವಜಾತ ಶಿಶುಗಳು ಸಜೀವ ದಹನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 25.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಇವರ ವತಿಯಿಂದ ಶ್ರೀ ಭಾರತಿ ಶಾಲೆ, ಆಲಂಕಾರಿನಲ್ಲಿ ಸೋಮವಾರದಂದು ನಡೆದ 14ರ ವಯೋಮಾನದ ಬಾಲಕರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಎಂಟನೇ ತರಗತಿಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳಾದ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top