ಅಂತರ್ರಾಷ್ಟ್ರೀಯ ನ್ಯೂಸ್

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಮುಂಬೈ ನ. 11 : ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್‌ನ […]

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.08: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್‌(1.77 ಲಕ್ಷ ರೂ.) ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಟ್ರಂಪ್‌ , 1 ಸಾವಿರದಿಂದ 2 ಸಾವಿರ ಡಾಲರ್‌ ವರೆಗೆ ಡಿವಿಡೆಂಡ್‌ ನೀಡುತ್ತೇನೆ ಎಂದು ಹೇಳಿದ್ದಾರೆ. ಬಹಳಷ್ಟು ಜನ ನಾನು ತೆರಿಗೆ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಆದರೆ ಈಗ ನಮ್ಮ ತೆರಿಗೆ ಸಂಗ್ರಹದಲ್ಲಿ ಬಂದ ಲಾಭಾಂಶವನ್ನು ಡಿವಿಡೆಂಡ್‌ ಜನರಿಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರಿಗೆ ಮತ್ತು

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.10 ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ವಿಧಿವಶರಾಗಿದ್ದಾರೆ…..1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್ ರಚನೆಯನ್ನು ಇವರು ಗುರುತಿಸಿದ್ದರು. ಇದರಿಂದ ಆಣ್ವಿಕ ಜೀವಶಾಸ್ತ್ರದ ಸಂಶೋಧನೆಗೆ ಹೊಸ ಮೈಲಿಗಲ್ಲು ಸಿಕ್ಕಿತ್ತು. ಜೇಮ್ಸ್ ವಾಟ್ಸನ್ ಅವರ ನಿಧನವಾಗಿರುವ ಬಗ್ಗೆ ಕೋಲ್ಡ್ ಸ್ಪ್ರಿಂಗ್ ಹಾರ್ಬರ್ ಲ್ಯಾಬೊರೇಟರಿ ಮಾಹಿತಿ ನೀಡಿದೆ.ತಮ್ಮ ವೈಜ್ಞಾನಿಕ ಸಾಧನೆಯ ನಂತರ, ವಾಟ್ಸನ್ ಮತ್ತು ಅವರ ಪತ್ನಿ

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ ಎನ್ನಲಾಗಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್ ಯೋಜನೆಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಐವರು ಕಿಡ್ನ್ಯಾಪ್‌ ಆಗಿರುವ ಬಗ್ಗೆ ಕಂಪನಿ ಮತ್ತು ಭದ್ರತಾ ಮೂಲಗಳು ದೃಢಪಡಿಸಿವೆ. ಇಲ್ಲಿಯವರೆಗೆ ಯಾವುದೇ ಗುಂಪು ಅಪಹರಣದ ಹೊಣೆ ಹೊತ್ತುಕೊಂಡಿಲ್ಲ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.06:   ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಮೃತ ವಿದ್ಯಾರ್ಥಿ. ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ್ದರು. ಇದೇ ಅಕ್ಟೋಬರ್ 19 ರಂದು ಅವರು ಉಫಾದಲ್ಲಿ ನಾಪತ್ತೆಯಾಗಿದ್ದರು. ವಿದ್ಯಾರ್ಥಿ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಲು ಖರೀದಿಸಲು ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ಹೊರಟುಹೋಗಿದ್ದರು, ಆದರೆ

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್

(ನ್ಯೂಸ್‌ ಕಡಬ) newskadaba.com,  ನ.06:   ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ನ. 22 ಮತ್ತು 23 ರಂದು ಜೋಹಾನ್‌್ಸಬರ್ಗ್‌ನಲ್ಲಿ ಶೃಂಗಸಭೆಯನ್ನು ಆಯೋಜಿಸಿದ್ದು,ಇದೇ ಮೊದಲ ಬಾರಿಗೆ ಜಿ.20 ನಾಯಕರ ಸಭೆ ಆಫ್ರಿಕನ್‌ ನೆಲದಲ್ಲಿ ನಡೆಯಲಿದೆ.ಫ್ಲೋರಿಡಾದಲ್ಲಿ ನಡೆದ ಅಮೇರಿಕಾ ಬಿಸಿನೆಸ್‌‍ ಫೋರಂ ಸಮೇಳನದಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. ನಾನು ಹೋಗುತ್ತಿಲ್ಲ.ಏಕೆಂದರೆ ಅಲ್ಲಿ ಎಲ್ಲವೂ ಸೆರಿಯಿಲ್ಲ

ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್!

(ನ್ಯೂಸ್‌ ಕಡಬ) newskadaba.com,  ನ.06:   ಇಲ್ಲಿನ ಕ್ಯಾರೆರಾ ಓವಲ್‌ ಕ್ರೀಡಾಂಗಣದಲ್ಲಿನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ(IND vs AUS) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್‌ ಮಾರ್ಷ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡವನ್ನು (India) ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಲಾಗಿದೆ. ಆ ಮೂಲಕ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್‌ ಮಾಡಲು ಆತಿಥೇಯ ತಂಡದ ನಾಯಕ ಯೋಜನೆ ರೂಪಿಸಿದ್ದಾರೆ. ಭಾರತ

ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವ ಪರಂಪರೆಯ ಸ್ಮಾರಕವಾದ ತಾಜ್ ಮಹಲ್‌ನಲ್ಲಿ ಬೆಂಕಿ ಅನಾಹುತ

(ನ್ಯೂಸ್‌ ಕಡಬ) newskadaba.com,  ನ.06 ಲಖನೌ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವ ಪರಂಪರೆಯ ಸ್ಮಾರಕವಾದ ತಾಜ್ ಮಹಲ್‌ನ ಖ್ಯಾತಿಗೆ ಕಳಂಕ ತರುವ ಮತ್ತೊಂದು ಪ್ರಯತ್ನ ನಡೆದಿದೆ. ತಾಜ್‌ನ ಮುಖ್ಯ ಗುಮ್ಮಟದಿಂದ ಕಪ್ಪು ಹೊಗೆ ಮತ್ತು ಜ್ವಾಲೆಗಳು ಮೇಲೇರುತ್ತಿರುವುದನ್ನು ತೋರಿಸುವ 33 ಸೆಕೆಂಡುಗಳ ವೀಡಿಯೊ ವೈರಲ್ ಆಗುತ್ತಿದೆ. ಈ Al- ರಚಿತ ವೀಡಿಯೊವನ್ನು ಆಸ್ಟ್ರೇಲಿಯಾದ ನಟ ಆಡ್ರಿಯನ್ ಜೀ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಆದರೆ ಈಗ ಅದನ್ನು ವಿರೂಪಗೊಳಿಸಿ ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ಸೆಪ್ಟೆಂಬರ್ 29 ರಂದು

ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವ ಪರಂಪರೆಯ ಸ್ಮಾರಕವಾದ ತಾಜ್ ಮಹಲ್‌ನಲ್ಲಿ ಬೆಂಕಿ ಅನಾಹುತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ

(ನ್ಯೂಸ್‌ ಕಡಬ) newskadaba.com,  ನ.05:  ಫಿಲಿಪೈನ್ಸ್‌ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪೈನ್‌್ಸನ ಅಧ್ಯಕ್ಷ ಫರ್ಡಿನಾಂಡ್‌ ಮಾರ್ಕೋಸ್‌‍ ಜೂನಿಯರ್‌ ಇಂದು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಉಷ್ಣವಲಯದ ಚಂಡಮಾರುತವು ದಕ್ಷಿಣ ಚೀನಾ ಸಮುದ್ರಕ್ಕೆ ಬೀಸುವ ಮೊದಲು ಕಲೇಗಿ ಕನಿಷ್ಠ 114 ಜನರನ್ನು ಬಲಿ ತೆಗೆದುಕೊಂಡಿತು, ಅವರಲ್ಲಿ ಹೆಚ್ಚಿನವರು ಹಠಾತ್‌ ಪ್ರವಾಹದಲ್ಲಿ ಮುಳುಗಿ ಸಾವನ್ನಪ್ಪಿದರು ಮತ್ತು 127

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್

(ನ್ಯೂಸ್‌ ಕಡಬ) newskadaba.com,  ನ.05:  ಅಮೆರಿಕದ ನ್ಯೂಯಾರ್ಕ್ ನಗರವು ಐತಿಹಾಸಿಕ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಿದೆ. ಭಾರತೀಯ ಮೂಲದ ಡೆಮಾಕ್ರಟಿಕ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆಲುವು ಪಡೆದಿದ್ದಾರೆ. ಅವರು ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್. ಮಮ್ದಾನಿಯವರ ಗೆಲುವು ಮಮ್ದಾನಿಯನ್ನು ನಿರಂತರವಾಗಿ ವಿರೋಧಿಸುತ್ತಿದ್ದ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಹೊಡೆತವಾಗಿದೆ. ಮಮ್ದಾನಿ ಗೆದ್ದರೆ ನ್ಯೂಯಾರ್ಕ್‌ಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸುವುದಾಗಿ ಅವರು ಬೆದರಿಕೆ ಹಾಕಿದ್ದರು. ಇಂದು ಪ್ರಕಟವಾದ ಫಲಿತಾಂಶಗಳಲ್ಲಿ, ಮಮ್ದಾನಿ ತಮ್ಮ ಎರಡೂ ಪ್ರತಿಸ್ಪರ್ಧಿಗಳನ್ನು ಮೀರಿಸಿ ದೊಡ್ಡ

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top