ಅಂತರ್ರಾಷ್ಟ್ರೀಯ ನ್ಯೂಸ್

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ) newskadaba.com ಸೆ. 27. ಲಕ್ನೋ: ಹೂಡಿಕೆ ನೆಪದಲ್ಲಿ ವೈದ್ಯರೊಬ್ಬರಿಗೆ 64 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಆಕೆಯ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ. ಐಎಫ್ಎಸ್ ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಪಿ ಅಜಿತ್ ಗುಪ್ತಾ ಹಾಗೂ ಅವರ ಸಹ ಕಂಪನಿಗಳು […]

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೆಬನಾನ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

(ನ್ಯೂಸ್ ಕಡಬ) newskadaba.com  ಬರ್ಲಿನ್, ಸೆ. 26. ಇಸ್ರೇಲ್‌ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್‌ಗಳ ಸ್ಫೋಟದ ನಂತರ ಲೆಬನಾನ್‍ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಸೂಚನೆ ಬರುವವರೆಗೂ ಲೆಬನಾನ್‍ಗೆ ಪ್ರಯಾಣಿಸದಂತೆ ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ ನೀಡಿದೆ. ಲೆಬನಾನ್‍ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಲಾಗಿದೆ. ಕಾರಣಾಂತರಗಳಿಂದ ಲೆಬನಾನ್‍ನಲ್ಲೇ ಉಳಿದ ಜನ ತೀವ್ರ ಎಚ್ಚರಿಕೆಯಿಂದ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.  

ಲೆಬನಾನ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com  ಕ್ಯಾಲಿಫೋರ್ನಿಯಾ, ಸೆ. 26. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಸೆಪ್ಟೆಂಬರ್ 25 ರ ರಾತ್ರಿ ಹಿಂದೂ ವಿರೋಧಿ ಸಂದೇಶಗಳೊಂದಿಗೆ ಧ್ವಂಸಗೊಳಿಸಲಾಯಿತು. ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ ಬ್ಯಾಪ್ಸ್ ಮಂದಿರದಲ್ಲಿ ಇದೇ ರೀತಿಯ ಘಟನೆ ನಡೆದ ಹತ್ತು ದಿನಗಳ ನಂತರ ಈ ಅಪವಿತ್ರ ಕೃತ್ಯವು ಸಂಭವಿಸಿದೆ. ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ರಿಯಾದ್, ಸೆ. 25. ಧಾರ್ಮಿಕ ಯಾತ್ರೆಯ ನೆಪದಲ್ಲಿ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಸೌದಿ ಹಜ್ ಸಚಿವಾಲಯವು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ, “ಪಾಕಿಸ್ತಾನಿ ಭಿಕ್ಷುಕರು ಉಮ್ರಾ ವೀಸಾಗಳ ಅಡಿಯಲ್ಲಿ ರಾಜ್ಯವನ್ನು ಪ್ರವೇಶಿಸುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಹೇಳಿದೆ.  

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಸೆ. 25. ಕಮಲಾ ಹ್ಯಾರಿಸ್ ಕಚೇರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಅರಿಝೋನಾದಲ್ಲಿರುವ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿಗೆ ಗುಂಡು ಹಾರಿಸಲಾಗಿದೆ. ಮಧ್ಯರಾತ್ರಿಯ ನಂತರ ಯಾರೋ ಗುಂಡುಗಳನ್ನು ಹಾರಿಸಿದ್ದಾರೆ. ಟೆಂಪೆಯಲ್ಲಿನ ಸದರ್ನ್ ಅವೆನ್ಯೂ ಮತ್ತು ಪ್ರೀಸ್ಟ್ ಡ್ರೈವ್ ಬಳಿಯ ಡೆಮಾಕ್ರಟಿಕ್ ನ್ಯಾಷನಲ್ ಕಮಿಟಿ ಪ್ರಚಾರ ಕಚೇರಿಯಲ್ಲಿ ಗುಂಡುಗಳಿಂದ ಹಾನಿ ಕಂಡುಬಂದಿದೆ ಎಂದು ಟೆಂಪೆ ಪೊಲೀಸ್ ಇಲಾಖೆ ನ್ಯೂಯಾರ್ಕ್ ಪೋಸ್ಟ್‌ಗೆ ತಿಳಿಸಿದೆ.

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯಕ್ಕೆ ಜಮ್ಮು-ಕಾಶ್ಮೀರದಿಂದ ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಸಂಚು ರೂಪಿಸಿ ಹಳಿಗಳುದ್ದಕ್ಕೂ ಸ್ಫೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸಿಬ್ಬಂದಿಯೋರ್ವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಶಬೀರ್‌ ಎಂದು ಗುರುತಿಸಲಾಗಿದ್ದು, ಈತ ಮಧ್ಯಪ್ರದೇಶದಲ್ಲಿ ರೈಲ್ವೇ ಹಳಿಗಳ ಮೇಲೆ 10 ಸ್ಫೋಟಕ ವಸ್ತುಗಳನ್ನು ಇಟ್ಟು, ರೈಲು ಸ್ಫೋಟಕ್ಕೆ ಸಂಚು ರೂಪಿಸಿದ್ದ. ಆದರೆ ಅದೃಷ್ಟವಶಾತ್‌ ರೈಲ್ವೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ ಎನ್ನಲಾಗಿದೆ. ರೈಲ್ವೇ ಸಂರಕ್ಷಣಾ ಪಡೆ ಆರೋಪಿ

ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 24. ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದ್ದು, ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್ ಸೆ.23. ಪ್ರಧಾನಿ ಮೋದಿ 3 ದಿನಗಳ ಅಮೆರಿಕಾ ಪ್ರವಾಸದ ವೇಳೆ ಇಲ್ಲಿ 15 ಟೆಕ್ ಸಿಇಒಗಳ ಜೊತೆ ದುಂಡು ಮೇಜಿನ ಸಭೆ ನಡೆಸಿದ್ದು, ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಮೊದಲಾದವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ಪಿಚೈ, ಭಾರತದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಎಐ ಬೆಳವಣಿಗೆ ಆಗಬೇಕೆಂದು ಮೋದಿ ಬಯಸುತ್ತಾರೆ ಎಂದಿದ್ದಾರೆ. ಸೆಮಿಕಂಡಕ್ಟರ್ ಚಿಪ್ ಕಂಪನಿ ನಿವಿಡಿಯಾದ ಸಿಇಒ ಜೆನ್ಸೆನ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 23. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಭೇಟಿ ನೀಡಿರುವುದರಿಂದ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ ಜಯ ಸಾಧಿಸಿದೆ. ಕಳ್ಳಸಾಗಣೆ ಮಾಡಲಾಗಿದ್ದ 297 ಪುರಾತನ ವಸ್ತುಗಳನ್ನು ಅಮೆರಿಕ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ. ‘ಸಾಂಸ್ಕೃತಿಕ ಸಂಪರ್ಕವನ್ನು ಆಳಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧದ ಹೋರಾಟವನ್ನು ಬಲಪಡಿಸುವುದಕ್ಕಾಗಿ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ್ದಕ್ಕಾಗಿ ನಾನು ಅಧ್ಯಕ್ಷ ಜೋ ಬೈಡನ್ ಮತ್ತು ಯುಎಸ್ ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ’ ಎಂದು

297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ

(ನ್ಯೂಸ್ ಕಡಬ) newskadaba.com ಕೊಲಂಬೊ 23: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆಯ ನಡುವೆ 56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ನಂತರ ರಾಷ್ಟ್ರವನ್ನುದ್ದೇಶಿಸಿ  ಡಿಸಾನಾಯಕೆ ಮಾತನಾಡಿದರು. ಅಧಿಕಾರ ಹಸ್ತಾಂತರದ ಪ್ರಕ್ರಿಯೆಯ ಭಾಗವಾಗಿ ಪ್ರಧಾನಿ ದಿನೇಶ್ ಗುಣವರ್ಧನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top