ಅಂತರ್ರಾಷ್ಟ್ರೀಯ ನ್ಯೂಸ್

ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ವಲಸಿಗರು ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಎ.06: ಉತ್ತಮ ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದ ವಲಸಿಗರಿಗೆ ಭೀಕರ ದುರಂತ ಎದುರಾಗಿದೆ. ಇಟಲಿ ಕರಾವಳಿಯ ಸಮೀಪ ಸಂಭವಿಸಿದ ಬೋಟ್ ಅಪಘಾತದಲ್ಲಿ 71 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ಲಿಬಿಯಾದಿಂದ ಯುರೋಪ್ ಕಡೆಗೆ ಪ್ರಯಾಣಿಸುತ್ತಿದ್ದ ಈ ಬೋಟ್‌ನಲ್ಲಿ ಒಟ್ಟು 105 ಮಂದಿ ಇದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಆರಂಭವಾದ ಈ ಪ್ರಯಾಣ, ಕ್ಷಣಾರ್ಧದಲ್ಲೇ ದುಃಖಕರ ಘಟನೆಯಾಗಿ […]

ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ವಲಸಿಗರು ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.28 ಕಾಠ್ಮಂಡು: ನೇಪಾಳದ ರಾಜಕೀಯ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಹಿಂಸಾಚಾರ ಹಾಗೂ ಆಡಳಿತ ವೈಫಲ್ಯದ ಗಂಭೀರ ಆರೋಪದಡಿ ಬಂಧಿಸಲಾಗಿದೆ. ನೂತನ ಪ್ರಧಾನಿಯಾಗಿ ಬಾಲೆನ್ ಶಾ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದ್ದು, ಇಡೀ ನೆರೆರಾಷ್ಟ್ರದಲ್ಲಿ ತಲ್ಲಣ ಸೃಷ್ಟಿಸಿದೆ. 2025ರ ಸೆಪ್ಟೆಂಬರ್‌ನಲ್ಲಿ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಯುವ ಸಮುದಾಯ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 77

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು

(ನ್ಯೂಸ್‌ ಕಡಬ) newskadaba.com, ಮಾ.21 ಎಲ್‌ಪಿಜಿ ಟ್ಯಾಂಕರ್‌ಗಳನ್ನು ಹೊತ್ತುಕೊಂಡು ಶಿವಾಲಿಕ್ ಮತ್ತು ನಂದಾದೇವಿ ಹಡಗುಗಳು ಭಾರತಕ್ಕೆ ಬಂದು ತಲುಪಿದ ಬಳಿಕ ಇದೀಗ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು ಹೊರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲು ಸಿದ್ಧವಾಗಿದೆ. ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ಇರಾನ್ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇದರಿಂದ ಮಧ್ಯ ಪ್ರಾಚ್ಯ ರಾಷ್ಟ್ರಗಳ ಸರಕು ಅದರಲ್ಲೂ ಮುಖ್ಯವಾಗಿ ತೈಲ ಸಾಗಣೆಗೆ ಅಡ್ಡಿಯಾಗಿತ್ತು. ಇದು ಜಾಗತಿಕ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com, ಮಾ.21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮ ಭಾರತದಲ್ಲೂ ಆರ್ಥಿಕ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಆತಂಕದ ಹಿನ್ನೆಲೆ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದೆ. ಸಂಘರ್ಷವು 21ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ಯಾಸ್ ಅನ್ನು ಅಗತ್ಯ ಸರಕುಗಳ ಪಟ್ಟಿಗೆ ಸೇರಿಸಿದ್ದ

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು

(ನ್ಯೂಸ್‌ ಕಡಬ) newskadaba.com,ಮಾ.19: ಇಸ್ಲಾಮಾಬಾದ್: ತೀವ್ರ ಆರ್ಥಿಕ ಮುಗ್ಗಟ್ಟು ಮತ್ತು ಇಂಧನ ಕೊರತೆಯಿಂದ ತತ್ತರಿಸುತ್ತಿರುವ ಪಾಕಿಸ್ತಾನ ಸರ್ಕಾರವು ಈ ಬಾರಿ ಮಾರ್ಚ್ 23 ರಂದು ನಡೆಯಬೇಕಿದ್ದ ತನ್ನ ‘ಗಣರಾಜ್ಯೋತ್ಸವ’ ಆಚರಣೆಯನ್ನು ರದ್ದುಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಮತ್ತು ಅನಿಲ ಬಿಕ್ಕಟ್ಟು ದೇಶದ ಮೇಲೆ ಭೀಕರ ಪರಿಣಾಮ ಬೀರಿದ್ದು, ಈ ಅನಿವಾರ್ಯ ನಿರ್ಧಾರ ಕೈಗೊಳ್ಳಲಾಗಿದೆ. ಅದ್ಧೂರಿತನಕ್ಕೆ ಬ್ರೇಕ್, ಸರಳತೆಗೆ ಆದ್ಯತೆ ಪ್ರತಿ ವರ್ಷ ಮಾರ್ಚ್ 23 ರಂದು ಅದ್ಧೂರಿ ಮಿಲಿಟರಿ ಪರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ

ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

(ನ್ಯೂಸ್‌ ಕಡಬ) newskadaba.com,ಮಾ.19: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್‌ನ ಪ್ರಮುಖ ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಇಸ್ರೇಲ್ ಇನ್ನಷ್ಟು ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡಿದರು. ಆದರೆ ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಅಮೆರಿಕಾ ಪ್ರತೀಕಾರವಾಗಿ ತೈಲ ನಿಕ್ಷೇಪವನ್ನು ಸಂಪೂರ್ಣವಾಗಿ ಭಾರೀ ಪ್ರಮಾಣದಲ್ಲಿ ಸ್ಫೋಟಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದರು. ಜಾಗತಿಕ ಇಂಧನ ಮಾರುಕಟ್ಟೆಗಳು ಅಸ್ಥಿರವಾಗಿರುವ ಸಂದರ್ಭದಲ್ಲಿ ಮತ್ತು ಇರಾನ್ ಕ್ಷಿಪಣಿಗಳು ಕತಾರ್ ಗೆ ತಾಕಿದ ಹಿನ್ನೆಲೆಯಲ್ಲಿ, ನಿನ್ನೆ ಬುಧವಾರ ರಾತ್ರಿ

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್‌ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್‌ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು

(ನ್ಯೂಸ್‌ ಕಡಬ) newskadaba.com,  ಮಾ.05: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ ಒಂದು ಕೆಜಿ

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಅಧಿಕ ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.03 : ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ. ಅಮೆರಿಕ ಹಾಗೂ ಇಸ್ರೇಲ್ ದಾಳಿಗೆ ಇರಾನ್ ಕೂಡಾ ಪ್ರತಿಕಾರದ ದಾಳಿ ನಡೆಸುತ್ತಿದೆ. ಇರಾನ್‌ನ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರೀ ಪ್ರಮಾಣದಲ್ಲಿ

ಇರಾನ್ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಅಧಿಕ ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top