ಅಂತರ್ರಾಷ್ಟ್ರೀಯ ನ್ಯೂಸ್

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba  ಲಕ್ನೋ, ಜೂ .19 . ಉತ್ತರ ಭಾರತ ಬಿಸಿಲಿನ ತಾಪ ಏರುತ್ತಿದ್ದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ 98 ಮಂದಿ ಮೃತಪಟ್ಟ ಘಟನೆ ನಡೆದಿದೆ. ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದ ಕಾರಣ ನಾಲ್ಕು ದಿನಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನಿಷ್ಠ 57 ಜನರು ಮೃತಪಟ್ಟಿದ್ದಾರೆ.ಇನ್ನೂ 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.        

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯ ಹತ್ಯೆ

(ನ್ಯೂಸ್ ಕಡಬ) newskadaba.com ಲಂಡನ್, ಜೂ 14. ಲಂಡನ್ ನಗರದ ವೆಂಬ್ಲೆ ಪ್ರದೇಶದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆಗೈದ ಕುರಿತು ವರದಿಯಾಗಿದೆ. ಮೃತ ಯುವತಿಯನ್ನು ತೇಜಸ್ವಿನಿ ರೆಡ್ಡಿ ಎಂದು ಗುರುತಿಸಲಾಗಿದೆ. ಉನ್ನತ ವಿದ್ಯಾಭ್ಯಾಸಕ್ಕೆಂದು ಲಂಡನ್ ಗೆ ತೆರಳಿದ್ದ ಈಕೆಯನ್ನು ಬ್ರೆಝಿಲ್ ಮೂಲದ ವ್ಯಕ್ತಿಯೋರ್ವ ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೇಜಸ್ವಿನಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೀಜಿಂಗ್ ಏರ್ ರ್ಪೋರ್ಟ್ ನಲ್ಲಿ ಲಿಯೋನೆಲ್ ಮೆಸ್ಸಿಯವರನ್ನು ವಶಕ್ಕೆ ಪಡೆದ ಪೊಲೀಸರು..!

(ನ್ಯೂಸ್ ಕಡಬ) newskadaba.com ಬೀಜಿಂಗ್, ಜೂ. 13. ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಜೂನ್ 15 ರಂದು ಬೀಜಿಂಗ್ ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೌಹಾರ್ದ ಪಂದ್ಯವನ್ನು ಆಡಲಿರುವ ಮೆಸ್ಸಿ ಅವರನ್ನು ಪಾಸ್‌ಪೋರ್ಟ್ ಹಾಗೂ ವೀಸಾ ವಿಚಾರಗಳಿಗಾಗಿ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಲ್ಲಿಸಿದ್ದರಿಂದ ಮುಜುಗರ ಎದುರಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್‌ಪೋರ್ಟ್ ಬದಲಿಗೆ

ಬೀಜಿಂಗ್ ಏರ್ ರ್ಪೋರ್ಟ್ ನಲ್ಲಿ ಲಿಯೋನೆಲ್ ಮೆಸ್ಸಿಯವರನ್ನು ವಶಕ್ಕೆ ಪಡೆದ ಪೊಲೀಸರು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 09. ಸೌದಿ ಅರೇಬಿಯಾದಲ್ಲಿ ವೃತ್ತಿಯಲ್ಲಿದ್ದ ಮಾಣಿ ಸಮೀಪದ ಸೂರಿಕುಮೇರು ನಿವಾಸಿ ದಿವಂಗತ ಅಬೂಬಕರ್ ರವರ ಪುತ್ರ ಅಬ್ದುಲ್ ರಝಾಕ್ ಎಂಬವರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ವೃತ್ತಿಯಲ್ಲಿದ್ದ ಅವರು ರಜೆಯಲ್ಲಿ ಮನೆಗೆ ಬಂದು 3 ತಿಂಗಳ ಹಿಂದೆಯಷ್ಟೇ ಮರಳಿ ವಿದೇಶಕ್ಕೆ ತರಳಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್‍ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್‍ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ

ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ➤ತಾಯಿ – ಮಗಳು ಮೃತ್ಯು

(ನ್ಯೂಸ್ ಕಡಬ)newskadaba@gmail.com ಲಕ್ನೋ, ,( ಜೂ 06) ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು ತಾಯಿ ಮತ್ತು ಮಗಳು ಸಾವಿಗೀಡಾದ ದಾರುಣ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.ಮೃತರನ್ನು ಪ್ರೀತಿ ಜಗ್ಗಿ(38) ಮತ್ತು ಏಂಜಲ್(15)  ಎಂದು ಗುರುತಿಸಲಾಗಿದೆ. ಕಾರಿನ ಡ್ರೈವರ್​ ಸರ್ತಾಜ್ (28) ಭೀಕರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಾಯಿ ಹಾಗೂ ಮಗಳು ಮಾಲ್‌ಗೆ ಹೋಗುತ್ತಿದ್ದಾಗ ಏಕಾನಾ ಸ್ಟೇಡಿಯಂ ಹತ್ತಿರದ ಗೇಟ್ ನಂಬರ್ ಎರಡರ ಮುಂಭಾಗದಲ್ಲಿದ್ದ ಜಾಹೀರಾತು ಫಲಕ ಏಕಾಏಕಿ ಮಹೇಂದ್ರಾ ಎಸ್​​ಯುವಿ ಮೇಲೆ

ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ➤ತಾಯಿ – ಮಗಳು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಿಳಾ ಮತ್ತು ಪುರುಷ ಡ್ರೈವರ್‌ ಕೆಲಸಕ್ಕೆ ಅರ್ಜಿ ಅಹ್ವಾನ ➤ 1.37 ಲಕ್ಷ ಸ್ಯಾಲರಿಯ ಈ ಉದ್ಯೋಗದ ಬಗ್ಗೆ ನಿಮಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.03. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟ್ರೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20 ಹಾಗೂ

ಮಹಿಳಾ ಮತ್ತು ಪುರುಷ ಡ್ರೈವರ್‌ ಕೆಲಸಕ್ಕೆ ಅರ್ಜಿ ಅಹ್ವಾನ ➤ 1.37 ಲಕ್ಷ ಸ್ಯಾಲರಿಯ ಈ ಉದ್ಯೋಗದ ಬಗ್ಗೆ ನಿಮಗೆ ಗೊತ್ತೇ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಲೈಫ್‍ಸ್ಟೈಲ್

ರಷ್ಯಾ – ಉಕ್ರೇನ್ ಸಂಘರ್ಷ!

(ನ್ಯೂಸ್ ಕಡಬ)newskawaba @gmail.com ರಷ್ಯಾ, ಜೂನ್, 1. ಮಾಸ್ಕೋ (ರಷ್ಯಾ): ರಷ್ಯಾ ಯುದ್ಧ ಆರಂಭಿಸಿ 15 ತಿಂಗಳ ಬಳಿಕ ಉಕ್ರೇನ್ ಪ್ರತ್ಯುತ್ತರ ನೀಡುತ್ತಿದೆ. ರಷ್ಯಾ ಆಕ್ರಮಿಸಿದ ಪ್ರದೇಶಗಳನ್ನು ಮರಳಿ ವಶಕ್ಕೆ ಪಡೆಯಲು ದಾಳಿಗೆ ಮುಂದಾಗಿದೆ. ಅಂತೆಯೇ ರಷ್ಯಾದ ಗಡಿಯಲ್ಲಿ ಬುಧವಾರ ಭಾರಿ ಗುಂಡಿನ ದಾಳಿ ನಡೆದಿದೆ. ಡ್ರೋನ್ ಅಪ್ಪಳಿಸಿದ ಪರಿಣಾಮ ತೈಲ ಸಂಸ್ಕರಣಾ ಘಟಕ ಹೊತ್ತಿ ಉರಿದಿದೆ. ರಷ್ಯಾದ ಬೆಲ್ಗೊರೊಡ್‌ ಪ್ರಾಂತ್ಯದ ಗಡಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಎಂಟು ಅಪಾರ್ಟ್‌ಮೆಂಟ್ ಕಟ್ಟಡಗಳು, ನಾಲ್ಕು ಮನೆಗಳು, ಒಂದು ಶಾಲೆ

ರಷ್ಯಾ – ಉಕ್ರೇನ್ ಸಂಘರ್ಷ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.29. ವಿದೇಶದಲ್ಲಿ ಉದ್ಯೋಗದಲ್ಲಿದ್ದ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿ ಎಂಬವರ ಪುತ್ರ ಸಂದೇಶ್ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top