ಅಂತರ್ರಾಷ್ಟ್ರೀಯ ನ್ಯೂಸ್

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ➤ ಜುಲೈ 15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.27, ಕೋವಿಡ್ 19 ಹರಡುವಿಕೆಯ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.   ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ  ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಕಾರ್ಗೋ ವಿಮಾನ ಸೇವೆಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ […]

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ➤ ಜುಲೈ 15ರ ವರೆಗೆ ವಿಸ್ತರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ ➤ ಸಚಿವ ಅಬ್ಬಾಸ್ ನಖ್ವಿ

(ನ್ಯೂಸ್ ಕಡಬ)newskadaba.comನವದೆಹಲಿ, ಜೂ.23, ಕೋವಿಡ್-19 ಪರಿಣಾಮದಿಂದಾಗಿ ಈ ವರ್ಷ ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ. 2.3 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಅರ್ಜಿ ಹಣವನ್ನು ಯಾವುದೇ ಕಡಿತವಿಲ್ಲದೆ ನೇರ ವರ್ಗಾವಣೆ ಮೂಲಕ ಹಿಂತಿರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಸೌದಿ ಅರೇಬಿಯಾ ಹಜ್ ಮತ್ತು ಉಮ್ರಾ ಮಂತ್ರಿ ಮೊಹಮ್ಮದ್ ಸಲೇಹ್ ಬಿನ್ ತಾಹರ್ ಬೆಂಟನ್ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಾಂಕ್ರಾಮಿಕ

ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ ➤ ಸಚಿವ ಅಬ್ಬಾಸ್ ನಖ್ವಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಚೀನಾ ಉಪಕರಣಗಳನ್ನು ಬಳಸದಂತೆ ಬಿಎಸ್ಎನ್ಎಲ್ ಗೆ ಕೇಂದ್ರ ಸೂಚನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.18, ಭಾರತ-ಚೀನಾ ಗಡಿಯಲ್ಲಿ ಚೀನಾ ನಡೆಸುತ್ತಿರುವ ಕೃತ್ಯದಿಂದ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ 4ಜಿ ಸೇವೆಯ ನವೀಕರಣದಲ್ಲಿ ಚೀನಾದ ಉಪಕರಣಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‍ಎನ್‍ಎಲ್)ಗೆ ಸೂಚನೆ ನೀಡಿದೆ. ಟೆಲಿಕಾಂ ಕಂಪೆನಿಗಳಾದ ಏರ್‍ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ಪ್ರಸ್ತುತ ಚೀನಾ ಮೂಲದ ಹುವಾಯಿ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದು, ಇತ್ತ ಬಿಎಸ್‍ಎನ್‍ಎಲ್‍ನೊಂದಿಗೆ ಝಡ್‍ಟಿಇ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಚೀನಾದ ಸಂಸ್ಥೆಗಳು ತಯಾರಿಸುವ ಸಲಕರಣೆಗಳ ಮೇಲಿನ ಅವಲಂಬನೆಯನ್ನು

ಚೀನಾ ಉಪಕರಣಗಳನ್ನು ಬಳಸದಂತೆ ಬಿಎಸ್ಎನ್ಎಲ್ ಗೆ ಕೇಂದ್ರ ಸೂಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆ.26ರಿಂದ ನ.8ರ ತನಕ ಐಪಿಎಲ್!?

(ನ್ಯೂಸ್ ಕಡಬ)newskadaba.com ಜೂ.18, ನವದೆಹಲಿ, ಐಪಿಎಲ್‌ ಟಿ20 ಕ್ರಿಕೆಟ್‌ ಪ್ರೇಮಿಗಳಿಗೆ ಸಿಹಿ ಸುದ್ದಿಯ ಮುನ್ಸೂಚನೆ ದೊರೆತಿದೆ. ಬಿಸಿಸಿಐ 13ನೇ ಆವೃತ್ತಿಯ ಐಪಿಎಲ್‌ ಕೂಟದ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದೇ ಸೆಪ್ಟೆಂಬರ್ 26 ರಿಂದ ನವೆಂಬರ್ 8ರ ತನಕ ಕೂಟವನ್ನು ಸೀಮಿತ ಕ್ರೀಡಾಂಗಣಗಳಲ್ಲಿ ಆಯೋಜಿಸಲಿದೆ ಎಂದು ವರದಿ ತಿಳಿಸಿಿದೆ. ಒಟ್ಟಾರೆ 60 ದಿನಗಳ ಈ ಕೂಟವನ್ನು ಈ ಸಲ 44 ದಿನಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇದಕ್ಕಾಗಿ ಇದನ್ನು ಕೊರೋನಾ ತೀವ್ರತೆ ಕಡಿಮೆ ಇರುವ ನಗರಗಳ ಕ್ರೀಡಾಂಗಣವನ್ನು ಬಿಸಿಸಿಐ ಆಯ್ಕೆ ಮಾಡುವ

ಸೆ.26ರಿಂದ ನ.8ರ ತನಕ ಐಪಿಎಲ್!? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20: ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ)newskadaba.com ಕರಾಚಿ. ಜೂ. 18, ಕೊರೋನಾ ಹಾವಳಿಯಿಂದ ಸ್ಥಗಿತಗೊಂಡಿದ್ದ ಕ್ರೀಢಾಕೂಟಗಳನ್ನು ನಿರ್ಬಂಧಗಳ ಅನ್ವಯ ನಡೆಸಲು ತಯಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್‌ ತಂಡದ ಇಂಗ್ಲೆಂಡ್‌ ಪ್ರವಾಸಕ್ಕೆ ಪಾಕ್‌ ಪ್ರಧಾನಿ ಅನುಮತಿ ನೀಡಿದ್ದು, ಈ ತಿಂಗಳ ಅಂತ್ಯದಲ್ಲಿ ಪ್ರಯಾಣ ಪ್ರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ. ಪಿಸಿಬಿ ಅಧ್ಯಕ್ಷ ಎಹ್ಸಾನ್‌ ಮಣಿ ಇಸ್ಲಾಮಾಬಾದ್‌ನಲ್ಲಿ ಇಮ್ರಾನ್‌ ಖಾನ್‌ ಭೇಟಿಯಾಗಿ ಕ್ರಿಕೆಟ್‌ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಆ ಈ ವಿಷಯದ ಕುರಿತಾಗಿ ಅನುಮೋದನೆ ಹೊರಡಿಸಲಾಗಿದೆ. ಕೊರೋನಾ ಹಾವಳಿ ನಡುವೆಯೂ

ಟಿ20: ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಗ್ರೀನ್ ಸಿಗ್ನಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಅಂತರ್ ರಾಷ್ಟ್ರೀಯ ವಿಮಾನಯಾನ ಪುನರಾರಂಭದ ಕುರಿತು ಜುಲೈನಲ್ಲಿ ನಿರ್ಧಾರ ➤ ಕೇಂದ್ರ ಸಚಿವ ಹರ್ ದೀಪ್ ಸಿಂಗ್

(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.17, ಅಂತರ್ರಾಷ್ಟ್ರೀಯ ವಿಮಾನಯಾನ ಪುನರಾರಂಭದ ಕುರಿತು ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್ ಪುರಿ ತಿಳಿಸಿದ್ದಾರೆ. ವಿಮಾನಯಾನ ಕಂಪನಿಗಳನ್ನು ಹಾಗೂ ಪ್ರಯಾಣಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ವಿದೇಶೀ ವಿಮಾನಯಾನ ಪುನರಾರಂಭದ ದಿನಾಂಕವನ್ನು ನಿಗದಿಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ‘ನಾವು ದೇಶದೊಳಗೆ ಸುಗಮವಾಗಿ ಮತ್ತು ಸ್ಥಿರವಾಗಿ ವಿಮಾನ ಹಾರಾಟ ನಡೆಸುತ್ತಿದ್ದೇವೆ. ಜೂನ್ 15ರವರೆಗೆ 67,718 ಪ್ರಯಾಣಿಕರೊಂದಿಗೆ 730 ವಿಮಾನಗಳು ನಿರ್ಗಮಿಸಿವೆ ಹಾಗೂ 68,236 ಪ್ರಯಾಣಿಕರೊಂದಿಗೆ 734

ಅಂತರ್ ರಾಷ್ಟ್ರೀಯ ವಿಮಾನಯಾನ ಪುನರಾರಂಭದ ಕುರಿತು ಜುಲೈನಲ್ಲಿ ನಿರ್ಧಾರ ➤ ಕೇಂದ್ರ ಸಚಿವ ಹರ್ ದೀಪ್ ಸಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

(ನ್ಯೂಸ್ ಕಡಬ) newskadaba.com ಜೂ.16:  ಭಾರತ – ಚೀನಾ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಜತೆಗೆ , ಭಾರತೀಯ ಸೈನಿಕರು ಚೀನಾದ ಸೈನಿಕರಿಗೆ ಪ್ರತ್ಯುತ್ತರ ನೀಡಿದ್ದು, ಚೀನಾದ 43 ಸೈನಿಕರು ಹತರಾಗಿದ್ದಾರೆ.   ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು

ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ)newskadaba.com ಜಮ್ಮು- ಕಾಶ‍್ಮೀರ. ಶೋಪಿಯಾನ್ ಪ್ರದೇಶದ ಗ್ರಾಮವೊಂದರಲ್ಲಿ ಇಂದು ಸೇನಾ ಪಡೆ, ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆಯ ಮೂಲಕ ಮೂವರು ಉಗ್ರರನ್ನು ಎನ್ ಕೌಂಟರ್ ಮೂಲಕ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಟುರ್ಕು ವಂಗಮ್ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಸ್ಥಳದಿಂದ ಏಕೆ-47, ಐಎನ್ ಎಸ್ ಎಎಸ್ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಮೂವರು

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏರಿಕೆಯತ್ತ ಪೆಟ್ರೋಲ್, ಡೀಸೆಲ್ ದರ

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.11:ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಪರಿಣಾಮ ನಮ್ಮ ದೇಶದಲ್ಲೂ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‍ಗೆ 44 ಪೈಸೆ ಹೆಚ್ಚಳವಾದರೆ, ಡೀಸೆಲ್ ದರ 58 ಪೈಸೆ ಏರಿಕೆ ಕಂಡಿದೆ. ಈಗಾಗಳೆ ಕೊರೊನಾ ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ತೈಲ ದರ ಏರಿಕೆಯಿಂದ ಮತ್ತೆ ಹೊರೆಯಾಗಿದೆ.ಕಳೆದ ಮೂರು ತಿಂಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಬದಲಾಗುತ್ತಲೇ ಇದೆ.ಇದರೊಂದಿಗೆ ಮಾ.14ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ 3 ರೂ, ಅಬಕಾರಿ ಸುಂಕವನ್ನು

ಏರಿಕೆಯತ್ತ ಪೆಟ್ರೋಲ್, ಡೀಸೆಲ್ ದರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಾಮಾರಿ ಕೊರೋನಾ ವೈರಸ್ ನಿಂದ ಮುಕ್ತವಾದ ನ್ಯೂಜಿಲೆಂಡ್

(ನ್ಯೂಸ್ ಕಡಬ)newskadaba.com ಜೂ. 9- ವಿಶ್ವದ ಬಹುತೇಕ ದೇಶಗಳಲ್ಲಿ ಕೊರೋನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡು ಬಂದಿದ್ದರೆ, ನ್ಯೂಜಿಲೆಂಡ್ ಈಗ ಈ ಪಿಡುಗಿನಿಂದ ಸಂಪೂರ್ಣ ಮುಕ್ತವಾಗುವತ್ತ ಹೆಜ್ಜೆ ಹಾಕಿದೆ. ದೇಶದಲ್ಲಿ ಸೋಂಕಿಗೆ ಒಳಗಾಗಿದ್ದ ಕೊನೆಯ ವ್ಯಕ್ತಿ ರೋಗದಿಂದ ಚೇತರಿಸಿಕೊಂಡಿದ್ದು, ಯಾವುದೇ ಹೊಸ ಕೇಸ್‍ಗಳು ಪತ್ತೆಯಾಗಿಲ್ಲ. ನಮ್ಮ ದೇಶದಲ್ಲಿ ಸೋಂಕಿನಿಂದ ಬಳಲುತ್ತಿದ್ದ ಕೊನೆಯ ರೋಗಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ನ್ಯೂಜಿಲೆಂಡ್‍ನಲ್ಲಿ ಕೊರೊನಾ ಸೋಂಕು ಹಬ್ಬುವುದನ್ನು ನಾವು ಪರಿಪೂರ್ಣವಾಗಿ ತಡೆಗಟ್ಟಿದ್ದೇವೆ ಹಾಗೂ ಮಹಾಮಾರಿಯನ್ನು ದೇಶದಿಂದ ನಿರ್ಮೂಲನೆ

ಮಹಾಮಾರಿ ಕೊರೋನಾ ವೈರಸ್ ನಿಂದ ಮುಕ್ತವಾದ ನ್ಯೂಜಿಲೆಂಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top