ಅಂತರ್ರಾಷ್ಟ್ರೀಯ ನ್ಯೂಸ್

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! ಕೊಲ್ಕತ್ತಾದಲ್ಲಿಯೂ ಕಂಪಿಸಿದ ಭೂಮಿ

(ನ್ಯೂಸ್‌ ಕಡಬ) newskadaba.com,  ನ.21:  ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ (IST) ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು […]

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! ಕೊಲ್ಕತ್ತಾದಲ್ಲಿಯೂ ಕಂಪಿಸಿದ ಭೂಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.20  ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಬಾಲಕ ತನ್ನ ಶಿಕ್ಷಕರನ್ನು ದೂಷಿಸಿ ಆತ್ಮಹತ್ಯೆ ಪತ್ರ ಬರೆದಿದ್ದಾನೆ. ಈ ಸಂಬಂಧ 16 ವರ್ಷದ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದು, ಮೂವರು ಶಿಕ್ಷಕರು ಮತ್ತು ಶಾಲೆಯ ಪ್ರಾಂಶುಪಾಲರು ತನ್ನ ಮಗನಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನೋವಿನಿಂದ ಹೇಳಿದ್ದಾರೆ.ದೆಹಲಿಯ ಪ್ರಮುಖ ಶಾಲೆಯೊಂದರಲ್ಲಿ ವ್ಯಾಸಾಂಗ

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ನ.20: ಜಾವೆಲಿನ್ ಕ್ಷಿಪಣಿ ವ್ಯವಸ್ಥೆ, ಎಕ್ಸಾಲಿಬರ್ ಸ್ಪೋಟಕಗಳು ಮತ್ತು ಸಂಬಂಧಿತ ಉಪಕರಣಗಳ ಒಟ್ಟು ಅಂದಾಜು 92.8 ಮಿಲಿಯನ್ ವೆಚ್ಚದ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ಬುಧವಾರ ಪ್ರಕಟವಾದ ಎರಡು ಹೇಳಿಕೆಗಳಲ್ಲಿ, ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (DSCA) ಅಗತ್ಯವಿರುವ ಪ್ರಮಾಣೀಕರಣಗಳನ್ನು ತಲುಪಿಸಿದೆ ಎಂದು ಹೇಳಿದೆ. ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ ಕಾರ್ಯತಂತ್ರದ ಪಾಲುದಾರಿಕೆ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುವ ಮೂಲಕ ಅಮೆರಿಕದ ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತಾ ಉದ್ದೇಶಗಳನ್ನು ಬೆಂಬಲಿಸುತ್ತದೆ ಎಂದು ಡಿಎಸ್‌ಸಿಎ

ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಡ್ನಿಯಲ್ಲಿ ಭೀಕರ ಅಪಘಾತ; ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವು

(ನ್ಯೂಸ್‌ ಕಡಬ) newskadaba.com,  ನ.19 : ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಸಮನ್ವಿತಾ ಧಾರೇಶ್ವರ್ ತನ್ನ ಪತಿ ಮತ್ತು ಮೂರು ವರ್ಷದ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆಗೆ ಹಾರ್ನ್ಸ್‌ಬೈಯ ಜಾರ್ಜ್ ಸ್ಟ್ರೀಟ್‌ನಲ್ಲಿ

ಸಿಡ್ನಿಯಲ್ಲಿ ಭೀಕರ ಅಪಘಾತ; ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶೇಖ್ ಹಸೀನಾ ಹೇಳಿಕೆಗಳನ್ನ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದ ಬಾಂಗ್ಲಾ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.19 : ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದಾಗಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಹೇಳಿಕೆಗಳನ್ನು ವರದಿ ಮಾಡದಂತೆ ಎಲ್ಲಾ ಮುದ್ರಣ, ವಿದ್ಯುನ್ಮಾನ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶಿಸಿದೆ. ಹಸೀನಾ ಅವರ ಹೇಳಿಕೆಗಳು ಸಮಾಜದಲ್ಲಿ ಹಿಂಸೆ ಮತ್ತು ಅಪರಾಧ ಚಟುವಟಿಕೆಗಳನ್ನು ಪ್ರಚೋದಿಸುತ್ತವೆ. ಸಾಮಾಜಿಕ ಸಾಮರಸ್ಯವನ್ನು ಕದಡುತ್ತದೆ. ಹೀಗಾಗಿ ಅವರ ಹೇಳಿಕೆಗಳನ್ನು ಪ್ರಕಟಿಸದಂತೆ ಸರ್ಕಾರ ಪ್ರಕಟಣೆ ಹೊರಡಿಸಿದೆ. ಕೆಲವು ಮಾಧ್ಯಮ ಸಂಸ್ಥೆಗಳು ಶಿಕ್ಷೆಗೊಳಗಾದ ಮತ್ತು ಪರಾರಿಯಾದ

ಶೇಖ್ ಹಸೀನಾ ಹೇಳಿಕೆಗಳನ್ನ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದ ಬಾಂಗ್ಲಾ ಸರ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. “ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ

ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು!

(ನ್ಯೂಸ್‌ ಕಡಬ) newskadaba.com,  ನ.18 ಚೆನ್ನೈ: ಅತಿಯಾದ ಕೆಲಸದ ಹೊರೆ, ಸಾಕಷ್ಟು ಮಾನವಶಕ್ತಿ, ಗಡುವಿನ ಒತ್ತಡ ಮತ್ತು ಅಸಮರ್ಪಕ ತರಬೇತಿಯನ್ನು ವಿರೋಧಿಸಿ ತಮಿಳುನಾಡು ಕಂದಾಯ ಇಲಾಖೆ ನೌಕರರ ಸಂಘಗಳ ಒಕ್ಕೂಟ(FERA)ದ ಸದಸ್ಯರು ಮಂಗಳವಾರದಿಂದ SIR ಕೆಲಸವನ್ನು ಬಹಿಷ್ಕರಿಸಿದ್ದಾರೆ. ಬಹಿಷ್ಕಾರಕ್ಕೆ ಮುಂಚಿತವಾಗಿ ಸೋಮವಾರ ಸಂಜೆ “ಪೆರುಂದಿರಲ್(ಸಾಮೂಹಿಕ) ಮನವಿ” ಕಾರ್ಯಕ್ರಮದ ಸಂದರ್ಭದಲ್ಲಿ ಸಂಘದ ಸದಸ್ಯರು 32 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ SIR ಕೆಲಸ ವಿರೋಧಿಸಿ ನೌಕರರು ಪ್ರತಿಭಟನೆ ನಡೆಸಿದರು ಎಂದು ಸಂಘ ತಿಳಿಸಿದೆ.

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂಗೋದ ಗಣಿ ಸೇತುವೆ ಕುಸಿದು 32 ಜನ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 : ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ ಪ್ರಾಂತ್ಯದ ಕಲಾಂಡೋ ಗಣಿಗಾರಿಕೆ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ. ಆ ಪ್ರದೇಶವನ್ನು ಕಾವಲು ಕಾಯುತ್ತಿದ್ದ ಮಿಲಿಟರಿ ಸಿಬ್ಬಂದಿ ಗುಂಡು

ಕಾಂಗೋದ ಗಣಿ ಸೇತುವೆ ಕುಸಿದು 32 ಜನ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.17: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್‌ ಹಸೀನಾ ಅವರ ಪ್ರಚೋದನಕಾರಿ ಹೇಳಿಕೆಯೇ ಕಾರಣ ಎಂದು ತೀರ್ಪು ಹೇಳಲಾಗಿದೆ. ನ್ಯಾಯಮಂಡಳಿಯು ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ICT ಕೋರ್ಟ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ತುಜಾ ಮಜುಂದಾರ್ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.17: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. “ಗಾಯಗೊಂಡವರೆಲ್ಲರೂ

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top