ಅಂತರ್ರಾಷ್ಟ್ರೀಯ ನ್ಯೂಸ್

ಅಬುಧಾಬಿಯಲ್ಲಿ ಖುಲಾಯಿಸಿತು ಕೇರಳದ ಯುವಕನ ಅದೃಷ್ಟ ► ​ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾದ ಭಾರತೀಯ

(ನ್ಯೂಸ್ ಕಡಬ) newskadaba.com ಅಬುದಾಬಿ, ಫೆ.07. ಉದ್ಯೋಗ ನಿಮಿತ್ತ ಅಬುದಾಬಿಯಲ್ಲಿ ನೆಲೆಸಿದ್ದ ಕೇರಳದ ನಿವಾಸಿಯೊಬ್ಬರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿ ಹೊರಹೊಮ್ಮಿದ್ದಾರೆ‌. ಕೋಟ್ಯಾಧಿಪತಿ ಅದೃಷ್ಟವಂತನನ್ನು ಕೇರಳದ ಕೃಷ್ಣನ್ ಕುಟ್ಟಿ ನಾಯರ್ ಎಂದು ಗುರುತಿಸಲಾಗಿದ್ದು, ಇವರು 500 ದಿರ್ಹಮ್ ಬೆಲೆಯ ರ್ಯಾಫಲ್ ಟಿಕೆಟನ್ನು ಗೆಳೆಯರ ಪಾಲುದಾರಿಕೆಯಲ್ಲಿ ಖರೀದಿಸಿದ್ದರು. ಇದೀಗ 10 ಮಿಲಿಯನ್ ದಿರ್ಹಮ್ (ಸುಮಾರು 17.68 ಕೋಟಿ ರೂ.) ಗೆಲ್ಲುವ ಮೂಲಕ ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಇವರು ತಮಗೆ ಸಿಕ್ಕ ಬಹುಮಾನ ಮೊತ್ತವನ್ನು ತಮ್ಮ ಮೂವರು ಗೆಳೆಯರೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದು […]

ಅಬುಧಾಬಿಯಲ್ಲಿ ಖುಲಾಯಿಸಿತು ಕೇರಳದ ಯುವಕನ ಅದೃಷ್ಟ ► ​ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾದ ಭಾರತೀಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಾಕ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಜಾಧವ್ ಭೇಟಿಯಾದ ಕುಟುಂಬ ► ತಾಯಿ, ಪತ್ನಿಯಿಂದ ಸುಮಾರು 45 ನಿಮಿಷಗಳ ಕಾಲ ಮಾತುಕತೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.25. ಬೇಹುಗಾರಿಕೆಯ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಸೋಮವಾರ ಇಸ್ಲಾಮಾಬಾದ್‌ನ ಪಾಕ್ ವಿದೇಶಾಂಗ ಸಚಿವಾಲಯದ ಕಚೇರಿಯಲ್ಲಿ ತನ್ನ ತಾಯಿ ಅವಂತಿ ಜಾಧವ್ ಮತ್ತು ಪತ್ನಿ ಚೇತಂಕುಲ ಜಾಧವ್ ಅವರನ್ನು ಭೇಟಿಯಾಗಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಭೇಟಿಯ ಸಂದರ್ಭ ಅವರ ನಡುವೆ ಗಾಜಿನ ತೆರೆಯಿದ್ದು, ಮಾತನಾಡಲು ಇಂಟರ್‌ಕಾಮ್ ಸೌಲಭ್ಯವನ್ನು ಒದಗಿಸಲಾಗಿತ್ತು. ಐವರು ಅಧಿಕಾರಿಗಳು ಉಪಸ್ಥಿತರಿದ್ದು ದೈಹಿಕ ಸಂಪರ್ಕಕ್ಕೆ ಅವಕಾಶವಿರಲಿಲ್ಲ.

ಪಾಕ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಜಾಧವ್ ಭೇಟಿಯಾದ ಕುಟುಂಬ ► ತಾಯಿ, ಪತ್ನಿಯಿಂದ ಸುಮಾರು 45 ನಿಮಿಷಗಳ ಕಾಲ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿದೇಶದಲ್ಲಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ಮಹಿಳೆ ► ISF ಸಹಾಯಹಸ್ತದಿಂದ ಊರಿಗೆ ಮರಳಿದ ವಿಜಯಾ

(ನ್ಯೂಸ್ ಕಡಬ) newskadaba.com ದಮಾಮ್, ನ.27. ಮನೆ ಕೆಲಸದ ಉದ್ಯೋಗಕ್ಕೆಂದು ಸೌದಿ ಅರೇಬಿಯಕ್ಕೆ ತೆರಳಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರು ವಾಮಂಜೂರಿನ ಮಹಿಳೆ ವಿಜಯಾ (44) ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತವರಿಗೆ ಮರಳಿದ್ದಾರೆ. ಬಡ ಕುಟುಂಬದ ಆಸರೆಯಾಗಿದ್ದ ವಿಜಯಾ ಅವರು 2015ರಲ್ಲಿ ಸೌದಿ ಅರೇಬಿಯದ ದಮಾಮ್ ಗೆ ತೆರಳಿದ್ದರು. ಮೊದಲ ಮೂರು ತಿಂಗಳ ಕಾಲ ಮಾತ್ರ ಮನೆಯವರೊಂದಿಗೆ ಸಂಪರ್ಕದಲ್ಲಿದ್ದು, ಅನಂತರದ ದಿನಗಳಲ್ಲಿ ವಿಜಯಾ ಸರಿಯಾಗಿ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದಾಗಿ ಅನಾರೋಗ್ಯ ಪೀಡಿತ ಪತಿ ಬಾಲಪ್ಪ ಬಾಲಕೃಷ್ಣ

ವಿದೇಶದಲ್ಲಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ಮಹಿಳೆ ► ISF ಸಹಾಯಹಸ್ತದಿಂದ ಊರಿಗೆ ಮರಳಿದ ವಿಜಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ರಿಯಾದ್‌, ನ.15. ಭಾರತೀಯ ಮೂಲದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರವು ವಿಶೇಷ ಮಾನ್ಯತೆ ನೀಡಿದ್ದು ಕ್ರೀಡೆಯನ್ನಾಗಿ ಪರಿಗಣಿಸಿ ದೇಶದಲ್ಲಿ ಯೋಗ ಕಲಿಕೆಗೆ ಅನುಮತಿ ನೀಡಿದೆ. ಇದರೊಂದಿಗೆ ಭಾರತೀಯ ಮೂಲದ ಯೋಗಕ್ಕೆ ಮಾನ್ಯತೆ ನೀಡಿದ ಮೊದಲ ಮುಸ್ಲಿಂ ರಾಷ್ಟ್ರವೆಂಬ ಹೆಗ್ಗಳಿಕೆಗೂ ಸೌದಿ ಅರೇಬಿಯಾ ಪಾತ್ರವಾಗಿದೆ. ಈ ಹಿಂದೆ ಜೂನ್‌ 21 ರಂದು ನಡೆಸಲಾಗುವ ವಿಶ್ವ ಯೋಗ ದಿನದ ಸಹಭಾಗಿತ್ವವನ್ನು ಸೌದಿ ಅರೇಬಿಯಾ ಪಡೆದಿರಲಿಲ್ಲ. ಆದರೆ ಈಗ ಕೈಗೊಂಡಿರುವ ನಿರ್ಧಾರ ಐತಿಹಾಸಿಕವಾಗಿದ್ದು, ಬದಲಾವಣೆಯ ಸೂಚನೆ ಎನ್ನಲಾಗಿದೆ.

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಮನಿಲಾ, ನ.13. ಮೂರು ದಿನಗಳ ಕಾಲ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳ್ಳಂಬೆಳಗ್ಗೆ ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾಗಿದ್ದರು. ಮೂರು ದಿನಗಳ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಮೋದಿ ಅವರು ಲಾಸ್ ಬನೋಸ್‍ನಲ್ಲಿರುವ ಅಂತರಾಷ್ಟ್ರೀಯ ಅಕ್ಕಿ ಸಂಶೋಧನಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಫಿಲಿಪ್ಪಿನ್ಸ್ ಅಧ್ಯಕ್ಷರ ಜೊತೆಗೂಡಿ ಹಾರೆಯಿಂದ ಹೊಲದ ಮಣ್ಣು ತೆಗೆದು ಒಂದು ಗಿಡವನ್ನು ನೆಟ್ಟಿದ್ದಾರೆ. ನಂತರ ಅಕ್ಕಿ ಪ್ರಯೋಗಾಲಯವನ್ನು ಇಬ್ಬರು ಜೊತೆಯಾಗಿ ಉದ್ಘಾಟಿಸಿದರು. ಐಆರ್‍ಆರ್‍ಐ

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!! Read More »

ಅಂತರ್ರಾಷ್ಟ್ರೀಯ ನ್ಯೂಸ್

ದುಬೈನಲ್ಲಿ ರಸ್ತೆ ಅಪಘಾತ ► ದಕ್ಷಿಣ ಕನ್ನಡದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.03. ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ‌ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಮೂಡಬಿದಿರೆಯ ಗಂಟಾಲ್ಕಟ್ಟೆ ನಿವಾಸಿ ರಿಯಾಝ್ ಅಹಮ್ಮದ್(25 ) ಎಂದು ಗುರುತಿಸಲಾಗಿದೆ. ದುಬೈನ ಅಜ್ಮನ್ ನಲ್ಲಿ ಉದ್ಯೋಗದಲ್ಲಿದ್ದ ರಿಯಾಝ್ ಅಹಮದ್ ತನ್ನ ಮನೆ ಕಡೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈತ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ದುಬೈಗೆ ತೆರಳಿದ್ದನೆನ್ನಲಾಗಿದ್ದು, ಮೃತದೇಹವನ್ನು ಊರಿಗೆ

ದುಬೈನಲ್ಲಿ ರಸ್ತೆ ಅಪಘಾತ ► ದಕ್ಷಿಣ ಕನ್ನಡದ ಯುವಕ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ

(ನ್ಯೂಸ್ ಕಡಬ) newskadaba.com ಅಬುಧಾಬಿ,ಸೆ.25, ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ಎಂದೇ ಹೆಸರಾಗಿದ್ದ ಈಜಿಪ್ಟ್​ನ ಇಮಾನ್ ಅಹ್ಮದ್ ಸೋಮವಾರ ನಿಧನರಾಗಿದ್ದಾರೆ.   ಇಮಾನ್ ಅಹ್ಮದ್( 37) ನಿಧನ ಕುರಿತಂತೆ ಅಬುಧಾಬಿಯ ಬುರ್ಜೀಲ್ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದು, ಹೃದ್ರೋಗ ಹಾಗೂ ಕಿಡ್ನಿಗಳ ವೈಫಲ್ಯವೇ ಸಾವಿಗೆ ಕಾರಣ ಎಂದು ಮಾಹಿತಿ ನೀಡಿದ್ದಾರೆ. ಈಜಿಪ್ಟ್ ನ ಅಲೆಕ್ಸಾಂಡ್ರಿಯಾದ ನಿವಾಸಿಯಾಗಿರುವ ಇಮಾನ್ ಬರೋಬ್ಬರಿ 500 ಕೆಜಿ ತೂಗುತ್ತಿದ್ದ ದೇಹದ ತೂಕ ಕಡಿಮೆ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿ ಮುಂಬೈಗೆ ಕರೆತರಲಾಗಿತ್ತು. ಮುಂಬೈ ವೈದ್ಯರು ಆಕೆಯ

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೆಕ್ಸಿಕೋ ಭಾರೀ ಭೂಕಂಪ ► ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆ

 (ನ್ಯೂಸ್ ಕಡಬ) newskadaba.com ಮೆಕ್ಸಿಕೋ, ಸೆ.20, ಮಂಗಳವಾರದಂದು ಸತತ ಎರಡನೇ ಬಾರಿಗೆ ಸಂಭವಿಸಿದ ಭಾರೀ ಭೂಕಂಪದಲ್ಲಿ ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ. 51 ಕಿಲೋ ಮೀಟರ್ ಆಳದ ಭೂಗರ್ಭದಲ್ಲಿ ಘಟಿಸಿರುವ ಕಂಪನಕ್ಕೆ ಸುಮಾರು 49 ಗಗನಚುಂಬಿ ಕಟ್ಟಡಗಳು ಧರೆಗೆ ಉರುಳಿವೆ ಎಂದು ವರದಿಯಾಗಿದೆ. ಕಂಪನ ಆಗ್ತಿದಂತೆ ಜನರು ಕಟ್ಟಡಗಳಿಂದ ಹೊರಗೆ ಓಡಿಹೋಗಿದ್ದಾರೆ. ಆದರೆ ಅವರ ಮೇಲೂ ಕಟ್ಟಡಗಳು ಉರುಳಿಬಿದ್ದಿವೆ. ರಸ್ತೆಗಳಲ್ಲಿ ನಿಲ್ಲಿಸಿದ್ದ ಕಾರುಗಳು ಜಖಂ ಆಗಿವೆ. ವಿಚಿತ್ರ ಅಂದ್ರೆ ಇದೇ

ಮೆಕ್ಸಿಕೋ ಭಾರೀ ಭೂಕಂಪ ► ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ.17. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಕ್ಕೆ ಇದೀಗ ಆಸ್ಟ್ರೇಲಿಯ ವಿರುದ್ಧ ಸವಾಲು ಎದುರಾಗಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನಲ್ಲಿ ರವಿವಾರ ನಡೆಯಲಿದೆ. ಈ ಸರಣಿಯು ಉಭಯ ತಂಡಗಳಿಗೂ ಐಸಿಸಿ ರ್ಯಾಂಕಿಂಗ್ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಕಳೆದ ವರ್ಷ ಜನವರಿಯಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯ 4-1

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ದುಬೈ, ಆ.31. ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಇದರ ಮಹಾ ಸಭೆಯು ರಿಯಾಝ್ ಕಾಣಿಯೂರು ಇವರ ಅಧ್ಯಕ್ಷತೆಯಲ್ಲಿ ದುಬೈ ಅಲ್ ಅಮಾನ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2017 – 2018 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶಾಫಿ ಮೂಸಾ ಬೆಳ್ಳಾರೆ, ಅಧ್ಯಕ್ಷರಾಗಿ ನಝೀರ್ ಬೆದ್ರಾಜೆ, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶರೀಫ್ ಕಲ್ಪಡ, ಜೊತೆ ಕಾರ್ಯದರ್ಶಿ ಯಾಗಿ ಇಸ್ಮಾಯಿಲ್ ಮಾಲೆಂಗ್ರಿ,

ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top