ಅಂತರ್ರಾಷ್ಟ್ರೀಯ ನ್ಯೂಸ್

ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ನ.15: ನೇಪಾಳದ ಬಳಿಕ ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಗಳು ಪ್ರತಿಭಟನೆಗೆ ಇಳಿದಿದ್ದಾರೆ. ಹೆಚ್ಚುತ್ತಿರುವ ಅಪರಾಧ, ಭ್ರಷ್ಟಾಚಾರ ಮತ್ತು ಭಾರೀ ಹಿಂಸಾಚಾರವನ್ನು ಖಂಡಿಸಿ ಮೆಕ್ಸಿಕೋ ಸಿಟಿಯಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರವು ಡ್ರಗ್ ಕಾರ್ಟೆಲ್ ಚಟುವಟಿಕೆಗಳನ್ನು ನಿಗ್ರಹಿಸಲು ವಿಫಲವಾಗಿದೆ ಎಂದು ಪ್ರತಿಭಟನೆಕಾರರು ದೂರಿದ್ದಾರೆ. ಮೈಕೋಕಾನ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆದಾರರ ವಿರುದ್ಧ ಸಕ್ರಿಯ ಅಭಿಯಾನವನ್ನು ಮುನ್ನಡೆಸುತ್ತಿದ್ದ ಮೇಯರ್ ಕಾರ್ಲೋಸ್ ಮಾಂಜೊ ಅವರ ಹತ್ಯೆಯ ನಂತರ ಪ್ರತಿಭಟನೆ ಈಗ ದೇಶಾದ್ಯಂತ ಹರಡಿದೆ. […]

ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಪ್ರತಿಭಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಡೋನೇಷ್ಯಾದಲ್ಲಿ ಭೂ ಕುಸಿತ, ಇಬ್ಬರ ದುರ್ಮರಣ, 21 ಮಂದಿ ನಾಪತ್ತೆ

(ನ್ಯೂಸ್‌ ಕಡಬ) newskadaba.com,  ನ.14:   ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 21 ಜನರು ಕಾಣೆಯಾಗಿದ್ದಾರೆ. ಕಾಣೆಯಾದ 21 ಜನರಿಗಾಗಿ ರಕ್ಷಣಾ ಕಾರ್ಯಕರ್ತರು ಇನ್ನೂ ಹುಡುಕಾಟ ನಡೆಸುತ್ತಿದ್ದಾರೆ.ಈ ಪ್ರದೇಶದಲ್ಲಿ ಹಲವಾರು ದಿನಗಳ ಭಾರೀ ಮಳೆಯಿಂದಾಗಿ ಇಂಡೋನೇಷ್ಯಾದ ಮಧ್ಯ ಜಾವಾ ಪ್ರಾಂತ್ಯದ ಮೂರು ಹಳ್ಳಿಗಳಲ್ಲಿ ಡಜನ್‌ಗಟ್ಟಲೆ ಮನೆಗಳಿಗೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಂತಹ ಸಮಯದಲ್ಲಿ ಬಲಿಪಶುಗಳನ್ನು ಹುಡುಕುವಲ್ಲಿ ಅಸ್ಥಿರ ನೆಲದ ಪರಿಸ್ಥಿತಿಗಳು ಶೋಧ ಮತ್ತು ರಕ್ಷಣಾ ತಂಡಕ್ಕೆ ಸವಾಲನ್ನು

ಇಂಡೋನೇಷ್ಯಾದಲ್ಲಿ ಭೂ ಕುಸಿತ, ಇಬ್ಬರ ದುರ್ಮರಣ, 21 ಮಂದಿ ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ NITಯಿಂದ ಉಚಿತ ಗೇಟ್ ತರಬೇತಿ

(ನ್ಯೂಸ್‌ ಕಡಬ) newskadaba.com,  ನ.13 ವಾರಂಗಲ್ : ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಒಂದು ಪ್ರಮುಖ ಉಪಕ್ರಮವನ್ನು ಪ್ರಾರಂಭಿಸಿದೆ. ಈ ಸಂಸ್ಥೆಯು ಈಗ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ ಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದೆ .ಗೇಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶನ ನೀಡುವುದು ಈ ತರಬೇತಿಯ ಉದ್ದೇಶವಾಗಿದೆ. ಈ ಎಂಟು ವಾರಗಳ ತರಬೇತಿ ಕಾರ್ಯಕ್ರಮವು ನವೆಂಬರ್ 17 ರಂದು ಪ್ರಾರಂಭವಾಗುತ್ತದೆ ಮತ್ತು ಜನವರಿ 9 ರವರೆಗೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಅಧಿಕೃತ NIT ವಾರಂಗಲ್ ವೆಬ್‌ಸೈಟ್‌ಗೆ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ NITಯಿಂದ ಉಚಿತ ಗೇಟ್ ತರಬೇತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೀನಾ: ಸುಮಾರು 1,500 ವರ್ಷಗಳಷ್ಟು ಹಳೆಯ ದೇವಾಲಯದಲ್ಲಿ ಭಾರಿ ಬೆಂಕಿ

(ನ್ಯೂಸ್‌ ಕಡಬ) newskadaba.com,  ನ.13:  ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ. ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು

ಚೀನಾ: ಸುಮಾರು 1,500 ವರ್ಷಗಳಷ್ಟು ಹಳೆಯ ದೇವಾಲಯದಲ್ಲಿ ಭಾರಿ ಬೆಂಕಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಿಸಿದ್ದು ಉಮರ್- ಡಿಎನ್ಎ ಪರೀಕ್ಷೆಯಲ್ಲಿ ದೃಢ

(ನ್ಯೂಸ್‌ ಕಡಬ) newskadaba.com,  ನ.13: ದೆಹಲಿಯ ಕೆಂಪು ಕೋಟೆ ಬಳಿ ನ.10ರಂದು ಕಾರ್ ಬಾಂಬ್ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್ಶೀಟ್ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಹೀಗಾಗಿ ಪುಲ್ವಾಮಾದಲ್ಲಿರುವ ಉಮರ್ ತಾಯಿಯ ಡಿಎನ್‌ಎ ಮಾದರಿಯನ್ನೂ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು. ಸ್ಫೋಟದ ಬಳಿಕ ಉಮರ್ ಕಾಲು ಸ್ಟೀರಿಂಗ್ ವೀಲ್ ಮತ್ತು

ದೆಹಲಿ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಿಸಿದ್ದು ಉಮರ್- ಡಿಎನ್ಎ ಪರೀಕ್ಷೆಯಲ್ಲಿ ದೃಢ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಸ್ಲಾಮಾಬಾದ್: ಆತ್ಮಾಹುತಿ ಬಾಂಬ್ ದಾಳಿಯನ್ನು ಒಪ್ಪಿಕೊಂಡ ಪಾಕ್ ತಾಲಿಬಾನ್- ಮತ್ತಷ್ಟು ದಾಳಿಗಳ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.13: ಇಸ್ಲಾಮಾಬಾದ್​​ನಲ್ಲಿ ಕನಿಷ್ಠ 12 ಜನರ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್ ಹೊತ್ತಿದೆ. ಮತ್ತಷ್ಟು ದಾಳಿಗಳನ್ನು ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ಇದು ದೇಶದ ರಾಜಧಾನಿಯ ಮೇಲೆ ಉಗ್ರಗಾಮಿ ಗುಂಪು ನಡೆಸಿದ ದಾಳಿಯಾಗಿದೆ. ಪಾಕಿಸ್ತಾನದ ಇಸ್ಲಾಮಿಕ್ ಅಲ್ಲದ ಕಾನೂನುಗಳ ಅಡಿಯಲ್ಲಿ ತೀರ್ಪುಗಳನ್ನು ಜಾರಿಗೊಳಿಸಿದ ನ್ಯಾಯಮೂರ್ತಿಗಳು, ವಕೀಲರು ಮತ್ತು ಅಧಿಕಾರಿಗಳನ್ನು ಗುರಿಯಾಗಿಸಲಾಗಿತ್ತು. ಇಸ್ಲಾಮಾಬಾದ್‌ನಲ್ಲಿ ನ್ಯಾಯಾಲಯದ ಮೇಲೆ ದಾಳಿ ಮಾಡಲಾಗಿತ್ತು. ಎಲ್ಲರೂ ಗಾಬರಿಯಿಂದ ಒಳಗೆ ಓಡಲು ಪ್ರಾರಂಭಿಸಿದರು. ಮುಂಭಾಗದ ಗೇಟ್‌ನಲ್ಲಿ ಕನಿಷ್ಠ ಐದು

ಇಸ್ಲಾಮಾಬಾದ್: ಆತ್ಮಾಹುತಿ ಬಾಂಬ್ ದಾಳಿಯನ್ನು ಒಪ್ಪಿಕೊಂಡ ಪಾಕ್ ತಾಲಿಬಾನ್- ಮತ್ತಷ್ಟು ದಾಳಿಗಳ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ರೊನಾಲ್ಡ್ ಮಾರ್ಟಿಸ್

(ನ್ಯೂಸ್‌ ಕಡಬ) newskadaba.com,  ನ.11, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಯುಎಇ ಮೂಲದ ಉದ್ಯಮಿ ಮತ್ತು ಸಮಾಜ ಸೇವಕ ರೊನಾಲ್ಡ್ ಮಾರ್ಟಿಸ್ ಅವರು ಪ್ರತಿಷ್ಠಿತ 2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಶಾರ್ಜಾ ಕರ್ನಾಟಕ ಸಂಘದಿಂದ ಆಯ್ಕೆಯಾಗಿದ್ದಾರೆ. ಶಾರ್ಜಾದ ವುಮೆನ್ಸ್ ಯೂನಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ನವೆಂಬರ್ 16 ರಂದು ಸಂಜೆ 3:30ಕ್ಕೆ ನಡೆಯಲಿರುವ ಶಾರ್ಜಾ ಕರ್ನಾಟಕ ಸಂಘದ 23ನೇ ವಾರ್ಷಿಕ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ರೊನಾಲ್ಡ್

2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ರೊನಾಲ್ಡ್ ಮಾರ್ಟಿಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೆಹಲಿ ಸ್ಫೋಟ: ‘ದುರಂತಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡಲ್ಲ’- ರಾಜನಾಥ್ ಸಿಂಗ್

(ನ್ಯೂಸ್‌ ಕಡಬ) newskadaba.com,  ನ.11, ದೆಹಲಿ ಸ್ಫೋಟದ ಬಗ್ಗೆ ಭಾರತದ ಪ್ರಮುಖ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ. “ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ನನ್ನ ಸಹ ನಾಗರಿಕರಿಗೆ ಭರವಸೆ ನೀಡಲು ನಾನು ಬಯಸುತ್ತೇನೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಹೇಳಿದರು. “ಈ ದುರಂತಕ್ಕೆ ಕಾರಣರಾದವರನ್ನು

ದೆಹಲಿ ಸ್ಫೋಟ: ‘ದುರಂತಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡಲ್ಲ’- ರಾಜನಾಥ್ ಸಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಾಕ್ ತಂಡದ ಯುವ ಬೌಲರ್ ನಸೀಮ್ ಶಾ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ನ.11, ಪಾಕಿಸ್ತಾನ್ ತಂಡದ ಯುವ ವೇಗದ ಬೌಲರ್ ನಸೀಮ್ ಶಾ ಅವರ ಖೈಬರ್ ಪಖ್ತೂನ್‌ಖ್ವಾದ ಲೋವರ್ ದಿರ್‌ನಲ್ಲಿರುವ ಮನೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ನಸೀಮ್ ಶಾ ಅವರ ಮನೆಯ ಮೇಲೆ ಬಹಿರಂಗವಾಗಿ ಗುಂಡು ಹಾರಿಸಲಾಗಿದ್ದು, ದಾಳಿಯಲ್ಲಿ ಹಲವಾರು ವಸ್ತುಗಳು ಹಾನಿಗೊಳಗಾಗಿವೆ. ದಾಳಿಯಲ್ಲಿ ಅವರ ಮನೆಯ ಕಿಟಕಿಗಳು, ಮುಖ್ಯ ದ್ವಾರ ಮತ್ತು ಪಾರ್ಕಿಂಗ್ ಪ್ರದೇಶವು ತೀವ್ರವಾಗಿ ಹಾನಿಗೊಂಡಿವೆ. ಈ ದಾಳಿ ವೇಳೆ

ಪಾಕ್ ತಂಡದ ಯುವ ಬೌಲರ್ ನಸೀಮ್ ಶಾ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೆಹಲಿ ನಿಗೂಢ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ

(ನ್ಯೂಸ್‌ ಕಡಬ) newskadaba.com,  ನ.08: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

ದೆಹಲಿ ನಿಗೂಢ ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top