ರಾಷ್ಟ್ರೀಯ ನ್ಯೂಸ್

ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ!

(ನ್ಯೂಸ್‌ ಕಡಬ) newskadaba.com,  ಆ.22: ತಮಿಳುನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 1ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಲಾಗಿದೆ. ದೇವಾಲಯದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಗರ್ಭಗುಡಿ ಸೇರಿದಂತೆ ದೇವಾಲಯದೊಳಗೆ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣವನ್ನು ತಡೆಯುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ದರ್ಶನದ ಸಂದರ್ಭದಲ್ಲಿ ಭಕ್ತರು ಮೊಬೈಲ್ ಅಥವಾ ಕ್ಯಾಮೆರಾ ಬಳಸುವುದರಿಂದ ಸಮಯ ವ್ಯರ್ಥವಾಗುವುದರ […]

ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು

(ನ್ಯೂಸ್‌ ಕಡಬ) newskadaba.com ,ಆ.06: ದುಬೈನ ಕಾರು ಶೋ ರೂಮ್‌ನಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಕೇರಳದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ನಿವಾಸಿ ಶಿಜಿನ್ ಪೌಲ್ (27) ಎಂದು ಗುರುತಿಸಲಾಗಿದೆ.. ಅವರು ದುಬೈಯ ಶೇಕ್ ಜಾಯೇದ್ ರಸ್ತೆಯಲ್ಲಿರುವ ಕಾರು ಶೋರೂಮ್‌ನಲ್ಲಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಸ್ಫೋಟ ಸಂಭವಿಸಿದೆ. ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಪೌಲ್ ಅವರು ಮೃತಪಟ್ಟಿರುವುದನ್ನು ದುಬೈಯ ಭಾರತೀಯ ದೂತವಾಸ ಕಚೇರಿ ದೃಢಪಡಿಸಿದೆ.

ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್‌ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ಆ .05: ಯುಎಸ್-ಇರಾನ್ ಉದ್ವಿಗ್ನತೆ ಹಾಗೂ ಜಾಗತಿಕ ಸವಾಲುಗಳ ನಡುವೆಯೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (MPC) ಸಭೆಯ ಬಳಿಕ ರೆಪೊ ದರವನ್ನು ಶೇ. 5.25 ರಲ್ಲಿಯೇ ಕಾಯ್ದುಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಿದೆ.ಆರ್‌ಬಿಐ ತನ್ನ ‘ತಟಸ್ಥ ನಿಲುವು’ ಅನ್ನು ಮುಂದುವರಿಸಿದೆ. SDF ದರ: ಶೇ. 5.00, MSF ಮತ್ತು ಬ್ಯಾಂಕ್ ದರ: ಶೇ. 5.50ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ FY27 ರ ಚಿಲ್ಲರೆ ಹಣದುಬ್ಬರ

ಆರ್‌ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ವಿದೇಶದಿಂದ ಅಗಮಿಸಿದ ಆರೋಪಿಯು  ವಿಮಾನ ನಿಲ್ದಾಣದಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com,  ಆ .05:  ೨೦೧೯ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರಿನ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (೬೩) ಎಂದು ಗುರುತಿಸಲಾಗಿದೆ. ೨೦೧೯ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಶೋಕ್ ನಾರಾಯಣ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದಲೂ ಈತ ಬಂಧನದಿಂದ ತಪ್ಪಿಸಿಕೊಳ್ಳಲು ವಿಳಾಸ ಬದಲಾಯಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ

ಮಂಗಳೂರು: ವಿದೇಶದಿಂದ ಅಗಮಿಸಿದ ಆರೋಪಿಯು  ವಿಮಾನ ನಿಲ್ದಾಣದಲ್ಲಿ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫುಕೆಟ್ – ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ಟರ್ಬುಲೆನ್ಸ್: ಪ್ರಯಾಣಿಕರು, ಸಿಬ್ಬಂದಿ ಸೇರಿ 12 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಆ.04:  ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ (ಪ್ರಕ್ಷುಬ್ಧತೆ) ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ. AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಹಾರಾಟದ ವೇಳೆ ವಿಮಾನವು ಏಕಾಏಕಿ ಸುಮಾರು 300 ಅಡಿ

ಫುಕೆಟ್ – ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ಟರ್ಬುಲೆನ್ಸ್: ಪ್ರಯಾಣಿಕರು, ಸಿಬ್ಬಂದಿ ಸೇರಿ 12 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್’ ಪುರಸ್ಕೃತರಿಗೆ ಸಂಸದ ಚೌಟ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಸ್ಥಳೀಯ ಸಂಶೋಧನೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕೀರ್ತಿ ತಂದ ಯುವಶಕ್ತಿಗಳೇ ನಮ್ಮ ದಕ್ಷಿಣ ಕನ್ನಡದ ‘ಬೊಲ್ಪು’ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನೀತಿ ಆಯೋಗದ ’ಅಟಲ್ ಇನ್ನೋವೇಶನ್ ಮಿಷನ್ ’ (AIM) ಅಡಿಯಲ್ಲಿ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ 2026’ ಗೌರವಕ್ಕೆ ಭಾಜನರಾದ ಅಕ್ಷಯ್ ಮಾಶೇಲ್ಕರ್ (ಎಕ್ಸ್‌ಪರಿಮೈಂಡ್ ಲ್ಯಾಬ್ಸ್ ಪ್ರೈ. ಲಿ.), ಅನುಷಾ ಪ್ರಜ್ವಲ್ (ಮಾವೇದಾಸ್ ಫುಡ್ಸ್ ಆಂಡ್ ಸಿರಿಯಲ್ಸ್ ಪ್ರೈ. ಲಿ.) ಹಾಗೂ

ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್’ ಪುರಸ್ಕೃತರಿಗೆ ಸಂಸದ ಚೌಟ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆ-ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಕನಿಷ್ಠ ಓರ್ವ ಮೃತ್ಯು , ಮುಂದುವರಿದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಆ. 01. ಭಾರೀ ಮಳೆಗೆ ಕೇರಳದ ಇಡುಕ್ಕಿ ಜಿಲ್ಲೆಯ ವಾಗಮೋನ್ ಎಂಬಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮತ್ತೋರ್ವ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಇಡುಕ್ಕಿಯ ವೈಕೋಮ್ ಮೂಲದ ಪ್ರಭಾಕರನ್ ನಾಯರ್ ಎಂದು ಗುರುತಿಸಲಾಗಿದೆ. ಅವಶೇಷಗಳಡಿಯಿಂದ ಅವರ ಮೃತದೇಹವನ್ನು ಹೊರೆತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಅಡೂರ್ಮಲಾ ಎಂಬಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಮಣ್ಣು ಮತ್ತು ಅವಶೇಷಗಳಡಿಯಲ್ಲಿ ವ್ಯಕ್ತಿಯೋರ್ವರು ಸಿಲುಕಿರುವ ಶಂಕೆ

ಭಾರೀ ಮಳೆ-ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಕನಿಷ್ಠ ಓರ್ವ ಮೃತ್ಯು , ಮುಂದುವರಿದ ರಕ್ಷಣಾ ಕಾರ್ಯಾಚರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ!

(ನ್ಯೂಸ್‌ ಕಡಬ) newskadaba.com,  ಜು.30  : ಜುಲೈ 23ರಂದು ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ, ಪ್ರಧಾನಿ ನರೇಂದ್ರ ಮೋದಿ ಅವರು ‘ಜೆನ್ ಝಿ’ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ಕಂಟೆಂಟ್ ಮಾಡರೇಶನ್ ವ್ಯವಸ್ಥೆಯಲ್ಲಾದ ದೋಷದಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ ಮೆಟಾ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕ್ಷಮೆಯಾಚಿಸಿದೆ.ಮೆಟಾ ಸಂಸ್ಥೆಯ ಕ್ಷಮೆಯಾಚನೆಯನ್ನು ಸ್ವೀಕರಿಸಿದರೂ, “ತಾಂತ್ರಿಕ ದೋಷ” ಎಂಬ ಕಾರಣಕ್ಕೆ ಸರ್ಕಾರ ತೃಪ್ತಿ

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತಿಭಟನೆ ಎಂಬ ಕಾರಣಕ್ಕೇ ಲಾಠಿಚಾರ್ಜ್ ಸರಿಯಲ್ಲ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜು.27:   ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ಆಂದೋಲನ ನಡೆಸುವುದು ಪ್ರಜೆಗಳ ಮೂಲಭೂತ ಹಕ್ಕು. ಕೇವಲ ಪ್ರತಿಭಟನೆ ಎಂಬ ಕಾರಣಕ್ಕಾಗಿಯೇ ಲಾಠಿಚಾರ್ಜ್ ಮಾಡಲು ಬರುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ

ಪ್ರತಿಭಟನೆ ಎಂಬ ಕಾರಣಕ್ಕೇ ಲಾಠಿಚಾರ್ಜ್ ಸರಿಯಲ್ಲ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪರೀಕ್ಷಾ ಅಕ್ರಮಗಳ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ​ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ವಿಪಕ್ಷಗಳ ತೀವ್ರ ಆಕ್ರೋಶ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಅಭಿಯಾನದ ಪ್ರಮುಖ ಆಗ್ರಹವಾಗಿತ್ತು. ​ ದೇಶದ ಏಕತೆ ಕಾಪಾಡಲು, ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ತಡೆಯಲು ಮತ್ತು ವಿದ್ಯಾರ್ಥಿಗಳು

ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top