ರಾಷ್ಟ್ರೀಯ ನ್ಯೂಸ್

‘ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ- ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ’ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com. ನವದೆಹಲಿ, ಜು 24. ಈ ಬಾರಿಯ ಬಜೆಟ್ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ರಾಜ್ಯಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಪ್ರತಿ ಬಜೆಟ್‌ನಲ್ಲಿ ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ. ಈ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ ಎಂದರು. […]

‘ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ- ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ’ ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್

ಬಜೆಟ್ ವಿರೋಧಿಸಿ ಸಂಸತ್ ನಲ್ಲಿ ಇಂದು INDIA ಮೈತ್ರಿಕೂಟ ಪ್ರತಿಭಟನೆ      

(ನ್ಯೂಸ್ ಕಡಬ)newskadaba.com ನವದೆಹಲಿ, ಜು.24.   ಕೇಂದ್ರ ಬಜೆಟ್ ವಿರೋಧಿಸಿ ಇಂದು ವಿಪಕ್ಷ INDIA ಮೈತ್ರಿಕೂಟ ಸಂಸತ್ ನಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ವರದಯಾಗಿದೆ. ಕೇಂದ್ರ ಬಜೆಟ್ ನ್ನು ವಿಪಕ್ಷಗಳು ತಾರತಮ್ಯದ ಬಜೆಟ್ ಎಂದು ಹೇಳಿವೆ. ಲೋಕಸಭೆಯಲ್ಲಿ INDIA ಮೈತ್ರಿಕೂಟವನ್ನು ಪ್ರತಿನಿಧಿಸುವ ನಾಯಕರು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆಸಿದ್ದು, ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಈ ಬಾರಿಯ ಕೇಂದ್ರ ಬಜೆಟ್‌ನಿಂದ ಈಗಾಗಲೇ ಬಜೆಟ್‌ನ ಪರಿಕಲ್ಪನೆ ನಾಶವಾಗಿದೆ. ಬಹುತೇಕ ರಾಜ್ಯಗಳಿಗೆ

ಬಜೆಟ್ ವಿರೋಧಿಸಿ ಸಂಸತ್ ನಲ್ಲಿ ಇಂದು INDIA ಮೈತ್ರಿಕೂಟ ಪ್ರತಿಭಟನೆ       Read More »

ರಾಷ್ಟ್ರೀಯ ನ್ಯೂಸ್

ನೀಟ್ ಯುಜಿ ಮರುಪರೀಕ್ಷೆಯ ಮನವಿ ತಿರಸ್ಕರಿಸಿದ ಸುಪ್ರಿಂ ಕೋರ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಜು.24. ನೀಟ್ಯು್ಜಿ 2024 ಮರುಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಗೆ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎನ್ನಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿತು.ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ತೋರಿಸಲು ತನ್ನ ಮುಂದೆ

ನೀಟ್ ಯುಜಿ ಮರುಪರೀಕ್ಷೆಯ ಮನವಿ ತಿರಸ್ಕರಿಸಿದ ಸುಪ್ರಿಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳುವುದು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಎಂದು ಹೇಳಿದರು. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ Read More »

ರಾಷ್ಟ್ರೀಯ ನ್ಯೂಸ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್‌ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ ಎನ್ನಲಾಗಿದೆ. ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದ್ದು, ಎಲ್ಲಾ ವಿಭಾಗಗಳಲ್ಲಿ ತೆರಿಗೆದಾರರಿಗೆ ಲಾಭದಾಯಕವಾಗುವಂತೆ ಆದಾಯ ತೆರಿಗೆ ರಚನೆಯಲ್ಲಿನ ಬದಲಾವಣೆಗಳ ಮೇಲೆ ಮತ್ತು ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡುವುದನ್ನು ಸುಧಾರಿಸುವ ಕುರಿತು

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ,ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಮೊಬೈಲ್ ಫೋನ್ ಮತ್ತು ಉಪಕರಣಗಳ ದೇಶೀಯ ಉತ್ಪಾದನೆ ಹೆಚ್ಚಾಗಿದೆ. ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗುವುದು. ಹಣಕಾಸು ಸಚಿವರು, ‘ಮೊಬೈಲ್ ಫೋನ್‌ಗಳು, ಮೊಬೈಲ್ ಪಿಸಿಬಿಎಸ್ ಮತ್ತು ಮೊಬೈಲ್ ಚಾರ್ಜರ್‌ಗಳಲ್ಲಿನ ಬಿಸಿಡಿಯನ್ನು 15% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ’ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ

(ನ್ಯೂಸ್ ಕಡಬ)newskadaba.com ಜಮ್ಮು-ಕಾಶ್ಮೀರ, ಜು.23. ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದ್ದು, ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಿದ್ದ ಉಗ್ರರು ದಾಳಿ ನಡೆಸಿದ್ದಾರೆ. ಇನ್ನು ಭಾರತೀಯ ಸೇನೆಯು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಸೇನೆ, ಬಟ್ಟಲ್ ಸೆಕ್ಟರ್‌ನಲ್ಲಿ ಉಗ್ರರು ನುಸುಳಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿರೂರು, ಜು.23. ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದ್ದು ಹೀಗಾಗಿ ಒಟ್ಟು ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾದಂತಾಗಿದೆ ಎಂದು ವರದಿ ತಿಳಿಸಿದೆ. ಶಿರೂರು ಪ್ರಕರಣದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ 5 ಮಂದಿ, ಒಬ್ಬ ಮಹಿಳೆ ಹಾಗೂ ಮೂವರು ಟ್ಯಾಂಕರ್ ಚಾಲಕರು ಹಾಗೂ ಟಿಂಬರ್ ಲಾರಿ ಚಾಲಕ ನಾಪತ್ತೆ ಆಗಿರುವ ಬಗ್ಗೆ ದೂರುಗಳು ಬಂದಿತ್ತು ಎನ್ನಲಾಗಿದೆ. ಗಂಗಾವಳಿ ನದಿ

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ

(ನ್ಯೂಸ್ ಕಡಬ)newskadaba.com  ಮುಂಬೈ, ಜು.23. ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ ಯಾರ್ಡ್‌ ನಲ್ಲಿ ನಡೆದಿದೆ. ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಐಎನ್‌ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top