‘ಬಜೆಟ್ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ- ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ’ ನಿರ್ಮಲಾ ಸೀತಾರಾಮನ್
(ನ್ಯೂಸ್ ಕಡಬ)newskadaba.com. ನವದೆಹಲಿ, ಜು 24. ಈ ಬಾರಿಯ ಬಜೆಟ್ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ರಾಜ್ಯಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಪ್ರತಿ ಬಜೆಟ್ನಲ್ಲಿ ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ. ಈ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ ಎಂದರು. […]





