ರಾಷ್ಟ್ರೀಯ ನ್ಯೂಸ್

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.23. ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತರನ್ನು ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಗುರುತಿಸಲಾಗಿದೆ. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.23. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ ಗೆ ಆಗಮಿಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್‌ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದ್ದು, ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22.  ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ. ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದ್ದು, ನೀಟ್,

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.! Read More »

ರಾಷ್ಟ್ರೀಯ ನ್ಯೂಸ್

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ನೇಮಕ – ಅಗಸ್ಟ್ 05 ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.22. ಉಳ್ಳಾಲ ನೂತನ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ನೇಮಕವಾಗಿದ್ದಾರೆ. ಇತ್ತೀಚೆಗಷ್ಟೇ ಉಳ್ಳಾಲ ಖಾಝಿಯಾಗಿದ್ದ ಫಝಲ್‌ ಕೋಯಮ್ಮ ಕೂರತ್ ತಂಙಳ್ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ಖಾಝಿ‌ ಸ್ಥಾನಕ್ಕೆ ಭಾನುವಾರದಂದು ನಡೆದ ಸಭೆಯಲ್ಲಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಆಗಸ್ಟ್ 05ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸ್ಪೀಕರ್‌ ಯು.ಟಿ ಖಾದರ್‌, ನೂತನ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ನೇಮಕ – ಅಗಸ್ಟ್ 05 ರಂದು ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲದಿಂದ ಹೊರಟ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಜನಾಝ – ಕೆಲವೇ ಕ್ಷಣಗಳಲ್ಲಿ ಕಡಬ ತಾಲೂಕಿನ ಕೂರತ್ ಗೆ ಆಗಮನ

ಮಂಗಳೂರು, ಜು.8. ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದು, ಪಾರ್ಥಿವ ಶರೀರವು ಕೆಲವೇ ಕ್ಷಣಗಳಲ್ಲಿ ಕಡಬ ತಾಲೂಕಿನ ಕುದ್ಮಾರು ಕೂರತ್ ಗೆ ತಲುಪಲಿದೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದು, ಪಾರ್ಥಿವ ಶರೀರವು ರಾತ್ರಿ 9 ಗಂಟೆ

ಉಳ್ಳಾಲದಿಂದ ಹೊರಟ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಜನಾಝ – ಕೆಲವೇ ಕ್ಷಣಗಳಲ್ಲಿ ಕಡಬ ತಾಲೂಕಿನ ಕೂರತ್ ಗೆ ಆಗಮನ Read More »

ರಾಷ್ಟ್ರೀಯ ನ್ಯೂಸ್

ಕಡಬ: ಬೈಕಿನಲ್ಲಿ ತೆರಳುವ ವೇಳೆ ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಕಳೆದುಕೊಂಡ ಚೇತನ್ ?ತನಗೆ ಸಿಕ್ಕಿದ ಬ್ಯಾಗನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಇಸ್ಮಾಯಿಲ್ ಕಳಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಬೈಕಿನಲ್ಲಿ ತೆರಳುತ್ತಿದ್ದಾಗ ಕಳೆದು ಹೋಗಿದ್ದ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಕಲ್ಲುಗುಡ್ಡೆ ಮಾಪಳ ನಿವಾಸಿ ಚೇತನ್ ಎಂಬವರು ಬುಧವಾರದಂದು ತನ್ನ ಬೈಕಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಳಾರ ಸಮೀಪ ಬ್ಯಾಗ್ ಕಳೆದು ಹೋಗಿದೆ ಎನ್ನಲಾಗಿದೆ. ಆಲಂಕಾರು ತಲುಪಿದಾಗ ಬ್ಯಾಗ್ ಇಲ್ಲದೇ ಇರುವುದನ್ನು ಗಮನಿಸಿದ ಚೇತನ್ ತಕ್ಷಣವೇ ಬ್ಯಾಗ್ ಕಳೆದುಹೋಗಿರುವ ಬಗ್ಗೆ ವಾಟ್ಸ್ಅಪ್ ಗ್ರೂಪ್‌ಗಳಲ್ಲಿ ಸಂದೇಶ

ಕಡಬ: ಬೈಕಿನಲ್ಲಿ ತೆರಳುವ ವೇಳೆ ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಕಳೆದುಕೊಂಡ ಚೇತನ್ ?ತನಗೆ ಸಿಕ್ಕಿದ ಬ್ಯಾಗನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಇಸ್ಮಾಯಿಲ್ ಕಳಾರ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ನಾಲ್ಕನೇ ಆರೋಪಿ ಮುಸ್ತಫಾ ಪೈಚಾರು ಸೇರಿದಂತೆ ಮೂವರು ಎನ್ಐಎ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.10. ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯ ತಾಲೂಕಿನ ಪೈಚಾರು ನಿವಾಸಿ ಮುಸ್ತಫಾ ಸೇರಿದಂತೆ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸಕಲೇಶಪುರದಲ್ಲಿ ಬಂಧಿಸಿದ ಬಗ್ಗೆ ವರದಿಯಾಗಿದೆ. ಸಕಲೇಶಪುರದ ಆನೆಮಹಲ್‌ ಎಂಬಲ್ಲಿ ಸಿರಾಜ್ ಎಂಬಾತನ ಕಾಫಿ ಎಸ್ಟೇಟ್‌ ನಲ್ಲಿ ಮುಸ್ತಫಾ ಕೆಲಸಕ್ಕೆ ಸೇರಿದ್ದು, ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಮುಸ್ತಫಾನಿಗೆ ಆಶ್ರಯ ನೀಡಿದ್ದ ಸಿರಾಜ್‌ ಮತ್ತು ಇಲ್ಯಾಸ್‌ ನನ್ನು ಎನ್‌ಐಎ

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ನಾಲ್ಕನೇ ಆರೋಪಿ ಮುಸ್ತಫಾ ಪೈಚಾರು ಸೇರಿದಂತೆ ಮೂವರು ಎನ್ಐಎ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನೊಬ್ಬನನ್ನು ಬಂದರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಿಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top