ರಾಷ್ಟ್ರೀಯ ನ್ಯೂಸ್

ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಈರುಳ್ಳಿ ಬೆಲೆ ದಿಢೀರ್ ಹೆಚ್ಚಳ

(ನ್ಯೂಸ್ ಕಡಬ) newskadab.com ನವದೆಹಲಿ, ಫೆ. 20. ಈರುಳ್ಳಿ ಬೆಲೆಯು ಏರಿಕೆಯಾಗಿದ್ದು, ಇದೀಗ ಬೆಲೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆ ಬಿದ್ದಂತಾಗಿದೆ. ಕೇಂದ್ರ ಸರ್ಕಾರವು ಈರುಳ್ಳಿ ರಫ್ತು ನಿಷೇಧವನ್ನು ಹಿಂಪಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದಾಗಿ ವರದಿ ತಿಳಿಸಿದೆ. ದೇಶದ ಅತೀ ದೊಡ್ಡ ಈರುಳ್ಳಿ ಮಾರುಕಟ್ಟೆಯಾದ ಲಾಸಲ್ ಗಾಂವ್ ಕೃಷಿ ಉತ್ಪಾದನಾ ಮಾರುಕಟ್ಟೆಯಲ್ಲಿ ಈರುಳ್ಳಿ ರಖಂ ಮಾರಾಟ ಬೆಲೆ ಶೇ. 40ರಷ್ಟು ಏರಿಕೆ ಕಂಡಿರುವುದಾಗಿ ವರದಿಯಾಗಿದೆ. ಈರುಳ್ಳಿ ಪ್ರತಿ ಕ್ವಿಂಟಾಲ್ ಬೆಲೆ 1,280 ರೂಪಾಯಿಯಿಂದ 1,800 ರೂಪಾಯಿಗೆ ಏರಿಕೆಯಾಗಿದೆ. […]

ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಈರುಳ್ಳಿ ಬೆಲೆ ದಿಢೀರ್ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 20.  ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಬಾಲಿವುಡ್ ಸಿನಿಮಾಗಳಾದ ಬದರಿನಾಥ್ ಕಿ ದುಲ್ಹನಿಯಾ (2017), ವಾಶ್-ಪಾಸೆಸ್ಡ್ ಬೈ ದಿ ಒಬ್ಸೆಸ್ಡ್, ಮತ್ತು ಥುನಿವು (2023) ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಯಾರಿಯನ್ 2 ಅವರ ಕೊನೆಯ ಸಿನೆಮಾವಾಗಿತ್ತು. ರಿತುರಾಜ್ ದಿ ಟೆಸ್ಟ್ ಕೇಸ್, ಹೇ

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಥಾಣೆ, ಫೆ. 20. ಲಂಚ ಪಡೆದ ಆರೋಪದಡಿ 40 ಸಂಚಾರಿ ಪೊಲೀಸರನ್ನು ಒಟ್ಟಿಗೆ ವರ್ಗಾವಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 40 ಸಿಬ್ಬಂದಿಗಳನ್ನು ಒಟ್ಟಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಎಲ್ಲ ಸಿಬ್ಬಂದಿಯೂ ಥಾಣೆಯ ಮುಂಬ್ರಾ ವಿಭಾಗದ ಸಂಚಾರಿ ಪೊಲೀಸರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಥಾಣೆಯ ಡೆಪ್ಯುಟಿ ಕಮಿಷನರ್​ ಆಫ್​ ಪೊಲೀಸ್​ ವಿಜಯ್​ಕುಮಾರ್​ ರಾಥೋಡ್​ ಅವರು ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದು, ಎಲ್ಲ 40 ಸಿಬ್ಬಂದಿಯನ್ನು ಕಂಟ್ರೋಲ್​ ರೂಮ್​ಗೆ

ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಉತ್ತರ ಪ್ರದೇಶ, ಫೆ. 19. ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ತೊಡಗಿದ್ದ ಪೊಲೀಸರ ವಾಹನವನ್ನು ಬಳಸಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.   ಉತ್ತರ ಪ್ರದೇಶದ ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಖಾಲಿ ವಾಃನವನ್ನು ಗಮನಿಸಿ ಮೊಯಿನ್ ಖಾನ್ ಎಂಬಾತ ಪೊಲೀಸ್ ವಾಹನ ಬಳಸಿ ರೀಲ್ಸ್ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಅಧಿಕಾರಿಗಳು ಸೂಕ್ತ ಕ್ರಮ

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 18. ನಿಲ್ದಾಣದಲ್ಲಿ ವಿಮಾನ ಇಳಿದ (ನಿಲುಗಡೆಯಾದ) 30 ನಿಮಿಷದೊಳಗೆ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ತಲುಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌) ನಿರ್ದೇಶನ ನೀಡಿದೆ. ಲಗೇಜುಗಳನ್ನು 30 ನಿಮಿಷದೊಳಗೆ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಫೆಬ್ರವರಿ 26ರೊಳಗೆ ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ. ಏರ್‌ ಇಂಡಿಯಾ, ಇಂಡಿಗೊ ಸೇರಿದಂತೆ ಏಳು ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಲಗೇಜುಗಳನ್ನು ವಿಳಂಬವಾಗಿ ನೀಡುತ್ತಿವೆ

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌ Read More »

ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ

(ನ್ಯೂಸ್‌ ಕಡಬ)newskadaba.com ಉತ್ತರಪ್ರದೇಶ, ಫೆ.18: ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ನ 60,244 ಹುದ್ದೆಗಳ ನೇಮಕಾತಿಗಾಗಿ ಎರಡು ದಿನಗಳಿಂದ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನ ಅಂದರೆ ಫೆಬ್ರವರಿ 17 ರಂದು ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇದೀಗ ಕನ್ನೌಜ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರವೇಶ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೇಶ ಪತ್ರವನ್ನು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನೀಡಲಾಗಿದೆ. ಅದರಲ್ಲಿ ಸನ್ನಿಯ ಎರಡು ಫೋಟೋಗಳನ್ನು ಮುದ್ರಿಸಲಾಗಿದೆ. ಪ್ರವೇಶ ಪತ್ರದ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ Read More »

ರಾಷ್ಟ್ರೀಯ ನ್ಯೂಸ್

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 16. ವಿಮಾನದಿಂದ ಇಳಿದು ಟರ್ಮಿನಲ್ ಗೆ ಬರಲು ವ್ಹೀಲ್ ಚೇರ್ ಲಭ್ಯವಾಗದ ಹಿನ್ನೆಲೆ ನಡೆದುಕೊಂಡು ಟರ್ಮಿನಲ್ ಗೆ ಬರುತ್ತಿದ್ದ 80 ವರ್ಷ ವಯಸ್ಸಿನ ವೃದ್ಧರೊಬ್ಬರು ಇಮಿಗ್ರೇಷನ್ ಕೌಂಟರ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.   ದಂಪತಿಗಳು ನ್ಯೂಯಾರ್ಕ್ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದು, ಮೊದಲೇ ವ್ಹೀಲ್ಚೇರ್ ಕಾಯ್ದಿರಿಸಿದ್ದರು. ಆದರೆ ವ್ಹೀಲ್ ಚೇರ್ ಕೊರತೆಯಿಂದಾಗಿ ಈ ವೃದ್ಧ ದಂಪತಿಗೆ ಒಂದು ವ್ಹೀಲ್ ಚೇರ್ ನೆರವು ಸಿಕ್ಕಿತು.

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್‌, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್‌

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪ್ರತಿಭಟನೆಯು ಗುರುವಾರದಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ.

ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿರತೆ ಕೊಂದು ಮರಕ್ಕೆ ನೇತುಹಾಕಿದ ಗ್ರಾಮಸ್ಥರು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ. 14. ಚಿರತೆಯೊಂದನ್ನು ಕೊಂದು ಹಗ್ಗದಿಂದ ಕಟ್ಟಿ ಮರದಲ್ಲಿ ನೇತುಹಾಕಿರುವ ವಿಲಕ್ಷಣ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಕುರಿತು ಗ್ರಾಮಸ್ಥರಿಂದ ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟ ನೀಡಿ ಚಿರತೆಯ ಶವವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿ, ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ವರದಿ ತಿಳಿಸಿದೆ.

ಚಿರತೆ ಕೊಂದು ಮರಕ್ಕೆ ನೇತುಹಾಕಿದ ಗ್ರಾಮಸ್ಥರು..! Read More »

ರಾಷ್ಟ್ರೀಯ ನ್ಯೂಸ್
Scroll to Top