ರಾಷ್ಟ್ರೀಯ ನ್ಯೂಸ್

ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ

(ನ್ಯೂಸ್ ಕಡಬ) newskadaba.com  ಚೆನ್ನೈ, ಸೆ. 15. ದ್ರಾವಿಡ ಮಾದರಿಯ ಆಡಳಿತದ ನೀತಿಯಂತೆ, ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮಹಿಳೆಯರು ದೇವಾಲಯದಲ್ಲಿ ಆರ್ಚಕರಾಗಿ ಕಾರ್ಯನಿರ್ವಹಿಸಲಿದ್ದಾರೆಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ. ಮಹಿಳೆಯರು ಪೈಲಟ್ ಗಳು ಹಾಗೂ ಬಾಹ್ಯಾಕಾಶಯಾತ್ರಿಗಳಾಗಿ ಸಾಧನೆ ಮಾಡಿರುವ ಹೊರತಾಗಿಯೂ ಅವರನ್ನು ಅಪವಿತ್ರವೆಂದು ಪರಿಗಣಿಸಿ ದೇವಾಲಯಲ್ಲಿ ಪೌರೋಹಿತ್ಯದಂತಹ ಪವಿತ್ರವಾದ ಪಾತ್ರಗಳನ್ನು ನಿರ್ವಹಿಸುವುದರಿಂದ ದೂರವಿಡಲಾಗಿದೆ. ಸ್ತ್ರೀದೇವತೆಗಳ ದೇವಾಲಯದಲ್ಲೂ ಅವರನ್ನು ದೂರವಿಡಲಾಗಿದೆ. ಆದರೆ ಕೊನೆಗೂ ಇಲ್ಲಿ ಬದಲಾವಣೆಯಾಗಿದೆ ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ‘x’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 16. ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಓಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‍ ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ- 20 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮುಜಾಫರ್‌ಪುರ, ಸೆ. 14. 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರದಂದು ಸಂಭವಿಸಿದೆ. ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯ ನಡೆಯುತ್ತಿದ್ದು, ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎನ್ನಲಾಗಿದೆ.

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ- 20 ಮಂದಿಯ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರುಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯವಲ್ಲ – ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಇನ್ನುಮುಂದೆ ಕಾರುಗಳಲ್ಲಿ ಕಡ್ಡಾಯವಾಗಿ 6 ಏರ್‌ ಬ್ಯಾಗ್‌ ಇರಲೇಬೇಕೆಂದು ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಳೆದ ವರ್ಷ ಕೇಂದ್ರ ಸರಕಾರ ಹಾಲಿ ವರ್ಷದ ಅಕ್ಟೋಬರ್‌ ಒಳಗಾಗಿ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳು ಇರಬೇಕು ಎಂದು ಸೂಚಿಸಿತ್ತು. ಆದರೆ ಇನ್ನುಮುಂದೆ ಕಾರುಗಳಲ್ಲಿ ಕಡ್ಡಾಯವಾಗಿ 6 ಏರ್‌ ಬ್ಯಾಗ್‌ ಇರಲೇಬೇಕು ಎಂಬ ಬಗ್ಗೆ ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದರು.

ಕಾರುಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯವಲ್ಲ – ಸಚಿವ ನಿತಿನ್ ಗಡ್ಕರಿ Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಡೀಸೆಲ್ ವಾಹನಗಳಿಗೆ ವಿದಾಯ ಹೇಳಿ – ಕಾರು ತಯಾರಕರಿಗೆ ನಿತಿನ್ ಗಡ್ಕರಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 13. ಭಾರತೀಯ ಕಾರು ಉತ್ಪಾದಕರಿಗೆ ಎಚ್ಚರಿಕೆ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, “ಡೀಸೆಲ್ ಗೆ ವಿದಾಯ ಹೇಳಿ… ದಯವಿಟ್ಟು ಅವುಗಳನ್ನು ತಯಾರಿಸುವುದನ್ನು ನಿಲ್ಲಿಸಿ, ಇಲ್ಲದಿದ್ದರೆ ಡೀಸೆಲ್ ಕಾರುಗಳನ್ನು ಮಾರಾಟ ಮಾಡಲು ಕಷ್ಟವಾಗುವಷ್ಟು ತೆರಿಗೆಯನ್ನು ಹೆಚ್ಚಿಸುತ್ತೇವೆ” ಎಂದು ಹೊಸದಿಲ್ಲಿಯಲ್ಲಿ ನಡೆದ 63 ನೇ ವಾರ್ಷಿಕ SIAM ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದರು. 2070 ರ ವೇಳೆಗೆ ಕಾರ್ಬನ್ ನೆಟ್ ಝೀರೊ ಸಾಧಿಸುವುದು ಹಾಗೂ ಡೀಸೆಲ್ ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ

ಶೀಘ್ರದಲ್ಲೇ ಡೀಸೆಲ್ ವಾಹನಗಳಿಗೆ ವಿದಾಯ ಹೇಳಿ – ಕಾರು ತಯಾರಕರಿಗೆ ನಿತಿನ್ ಗಡ್ಕರಿ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ನುಮುಂದೆ ಚುನಾವಣಾ ಕರ್ತವ್ಯ ಸಿಬ್ಬಂದಿಗಳಿಗೆ ಬೂತಲ್ಲೇ ಅಂಚೆ ಮತದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಆದೇಶಿಸಿದೆ. ಅಂಚೆ ಮತದಾನದ ದುರ್ಬಳಕೆಯನ್ನು ತಡೆಯಲು ಕೇಂದ್ರ ಚುನಾವಣಾ ಆಯೋಗವು ಪ್ರಸ್ತಾಪ ಸಲ್ಲಿಸಿದ್ದ ಹಿನ್ನಲೆ ಶಿಫಾರಸ್ಸನ್ನು ಅಂಗೀಕರಿಸಿದ ಕೇಂದ್ರ ಕಾನೂನು ಸಚಿವಾಲಯ ಈ ಅಧಿಸೂಚನೆಯನ್ನು ಹೊರಡಿಸಿದೆ. ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೆ ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ಇನ್ನುಮುಂದೆ ಚುನಾವಣಾ ಕರ್ತವ್ಯ ಸಿಬ್ಬಂದಿಗಳಿಗೆ ಬೂತಲ್ಲೇ ಅಂಚೆ ಮತದಾನ Read More »

ರಾಷ್ಟ್ರೀಯ ನ್ಯೂಸ್

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 13. ‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ(84) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ ಸತೀಂದರ್ ಕುಮಾರ್ ಖೋಸ್ಲಾ ಅವರು, 1967ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆಗೈದು ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ಹಾಸ್ಯನಟನ ಸಾವಿಗೆ ಚಿತ್ರರಂಗ ಸೇರಿದಂತೆ ವಿವಿಧ ಗಣ್ಯರು ಸಂತಾಪ

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ನಿಂತಿದ್ದ ಬಸ್ ಗೆ ಟ್ರಕ್ ಢಿಕ್ಕಿ – 11 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಜೈಪುರ, ಸೆ. 13. ಡೀಸೆಲ್ ಖಾಲಿಯಾಗಿ ನಿಂತಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಮೃತಪಟ್ಟ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ ಮಧ್ಯದಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಬಸ್‍ಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ 11 ಮಂದಿ ಮೃತಪಟ್ಟಿದ್ದು, 12 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು

ನಿಂತಿದ್ದ ಬಸ್ ಗೆ ಟ್ರಕ್ ಢಿಕ್ಕಿ – 11 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಯೋಧನನ್ನು ರಕ್ಷಣೆ ಮಾಡಿದ 6 ವರ್ಷದ ಸೇನಾ ಶ್ವಾನ ಕೆಂಟ್, ಉಗ್ರರ ಗುಂಡೇಟಿಗೆ ಸಾವನ್ನಪ್ಪಿದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಬುಧವಾರದಂದು ನಡೆದಿದೆ. ರಜೌರಿಯ ನರ್ಲಾ ಗ್ರಾಮದಲ್ಲಿ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ವೇಳೆ ಸೇನಾ ತುಕ್ಕಡಿಯೊಂದನ್ನು ಮುನ್ನಡೆಸುತ್ತಿದ್ದ ಕೆಂಟ್​, ಉಗ್ರರ ಗುಂಡೇಟಿಗೆ ಬಲಿಯಾಗಿದೆ ಎನ್ನಲಾಗಿದೆ. ಕೆಂಟ್​ ಎಂಬ ಲ್ಯಾಬ್ರಡಾರ್ ತಳಿಯ ಹೆಣ್ಣು ನಾಯಿಯೊಂದು 21ನೇ ಸೇನಾ ಶ್ವಾನ ಘಟಕದಲ್ಲಿ ಸೇವೆ

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವೇಷಭಾಷಣ ಪ್ರಕರಣ – ತನಿಖೆಗೆ ಹಾಜರಾಗಲು ಬಾಬಾ ರಾಮ್ ದೇವ್ ಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಜೈಪುರ, ಸೆ. 13. ದ್ವೇಷಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಅಕ್ಟೋಬರ್ 5 ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಯೋಗಗುರು ರಾಮ್ ದೇವ್ ಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ. ಇದರ ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ ಎನ್ನಲಾಗಿದೆ. ತನಿಖಾಧಿಕಾರಿಗಳು ರಾಮ್ ದೇವ್ ಅವರನ್ನು ವಿಚಾರಣೆಗಾಗಿ ಕರೆದಾಗಲೆಲ್ಲ ಅವರು ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರಿದ್ದ ನ್ಯಾಯಪೀಠವು ಸೂಚನೆ ನೀಡಿದೆ. ಮುಂದಿನ ವಿಚಾರಣೆ

ದ್ವೇಷಭಾಷಣ ಪ್ರಕರಣ – ತನಿಖೆಗೆ ಹಾಜರಾಗಲು ಬಾಬಾ ರಾಮ್ ದೇವ್ ಗೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್
Scroll to Top