ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಮೂರು ಬೈಕ್ ಗಳಿಗೆ ಗುದ್ದಿದ ಲಾರಿ – ಸ್ಥಳದಲ್ಲೇ ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ತಮಿಳುನಾಡು, ಆ.11. ಲಾರಿಯೊಂದು ನಿಯಂತ್ರಣ ತಪ್ಪಿ ಮೂರು ದ್ವಿಚಕ್ರ ವಾಹನಗಳ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ವೇಗವಾಗಿ ಬರುತ್ತಿದ್ದ ಟ್ಟಿಪ್ಪರ್ ನಿಯಂತ್ರಣ ತಪ್ಪಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸಿದ್ದು, ಈ ವೇಳೆ, ಮೂರು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಮಧ್ಯದ ತಡೆಗೋಡೆಗೆ ಢಿಕ್ಕಿಯಾಗಿ ಲಾರಿ ನಿಂತಿದ್ದು, ಸ್ವಲ್ಪ ಸಮಯದವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತದ ಬಗ್ಗೆ ಮಾಹಿತಿ […]

ನಿಯಂತ್ರಣ ತಪ್ಪಿ ಮೂರು ಬೈಕ್ ಗಳಿಗೆ ಗುದ್ದಿದ ಲಾರಿ – ಸ್ಥಳದಲ್ಲೇ ನಾಲ್ವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

Twitter ಲೋಗೊ; ನೇಮ್ ಬೋರ್ಡ್ ಹರಾಜಿಗಿಟ್ಟ ಮಸ್ಕ್

(ನ್ಯೂಸ್ ಕಡಬ)newskadaba.com ಸ್ಯಾನ್ ಫ್ರಾನ್ಸಿಸ್ಕೋ, ಆ.11. ಟ್ವಿಟರ್ ಕಂಪನಿಯ ಹೆಸರನ್ನು ಎಕ್ಸ್ ಎಂದು ಬದಲಾಯಿಸಿದ ನಂತರ ಎಲೋನ್ ಮಸ್ಕ್ ಟ್ವಿಟರ್ ಕಚೇರಿಯಲ್ಲಿನ ಹಳೆಯ ಲೋಗೊಗಳು ಮತ್ತು ವಸ್ತುಗಳನ್ನು ಹರಾಜಿಗಿಟ್ಟಿದ್ದು, ತಂತ್ರಜ್ಞಾನ ಉದ್ಯಮದ ಬಿಲಿಯನೇರ್ ಎಲೋನ್ ಮಸ್ಕ್ ಟ್ವಿಟರ್ ಕಟ್ಟಡದಲ್ಲಿನ ಲೋಗೊಗಳು ಮತ್ತು ವಸ್ತುಗಳನ್ನು ಹರಾಜಿಗೆ ಇಟ್ಟಿದ್ದಾರೆ ಎನ್ನಲಾಗಿದೆ. ಟ್ವಿಟರ್ಗೆ ಎಕ್ಸ್ ಎಂದು ಮರುನಾಮಕರಣ ಮಾಡಿದ ಕೆಲವೇ ವಾರಗಳ ನಂತರ ಮಸ್ಕ್ ಟ್ವಿಟರ್ ಹೆಸರು ಲೋಗೊ ಇರುವ ಎಲ್ಲ ವಸ್ತುಗಳನ್ನು ಕಚೇರಿಯಿಂದ ಆಚೆ ದಬ್ಬುತ್ತಿದ್ದಾರೆ. ಸ್ಮರಣಿಕೆಗಳು, ಕಲಾತ್ಮಕ ವಸ್ತುಗಳು,

Twitter ಲೋಗೊ; ನೇಮ್ ಬೋರ್ಡ್ ಹರಾಜಿಗಿಟ್ಟ ಮಸ್ಕ್ Read More »

ರಾಷ್ಟ್ರೀಯ ನ್ಯೂಸ್

Google, ಫೋನ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಗುಡ್ ನ್ಯೂಸ್ – ವಹಿವಾಟಿನ ಮಿತಿ ಹೆಚ್ಚಿಸಿದ RBI

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಆಫ್ಲೈನ್ ಪಾವತಿ ವಿಧಾನವನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳಲು ಮತ್ತು ಹೆಚ್ಚಿನ ಬಳಕೆಯ ಪ್ರಕರಣಗಳನ್ನು ತರಲು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈಗ ಯುಪಿಐ ಲೈಟ್ ನಲ್ಲಿ ಪ್ರತಿ ವಹಿವಾಟಿನ ಮಿತಿಯನ್ನು ಪ್ರಸ್ತುತ 200 ರೂ.ಗಳಿಂದ 500 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಯುಪಿಐ ಲೈಟ್ ಬಳಕೆದಾರರಿಗೆ ಬ್ಯಾಂಕುಗಳ ಸಾಂದರ್ಭಿಕ ಸಂಸ್ಕರಣಾ ವೈಫಲ್ಯಗಳನ್ನು ಎದುರಿಸದೆ ಸಣ್ಣ ಮೌಲ್ಯದ ವಹಿವಾಟುಗಳನ್ನು ತಡೆರಹಿತವಾಗಿ ನಡೆಸಲು ಅನುವು ಮಾಡಿಕೊಡುತ್ತದೆ. ಇದನ್ನು ಸೆಪ್ಟೆಂಬರ್ 2022 ರಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್

Google, ಫೋನ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಗುಡ್ ನ್ಯೂಸ್ – ವಹಿವಾಟಿನ ಮಿತಿ ಹೆಚ್ಚಿಸಿದ RBI Read More »

ರಾಷ್ಟ್ರೀಯ ನ್ಯೂಸ್

IPS ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ..! – ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಗೋವಾ, ಆ.11. ಪಬ್‌ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಹುದ್ದೆಯಿಂದ ವಜಾಗೊಳಿಸಲಾಗಿದೆ. ಐಪಿಎಸ್ ಅಧಿಕಾರಿ ಕೋನ್ ಗೋವಾದ ಬಾರ್‌ ನಲ್ಲಿ ಮಹಿಳೆಯೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಡಿಐಜಿ ಮಹಿಳೆಯೊಂದಿಗೆ ಜಗಳವಾಡುತ್ತಿರುವುದು ಸೆರೆಯಾಗಿದೆ.

IPS ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ..! – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.11. ಬೋರ್ ವೆಲ್ ಯಂತ್ರ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿದೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ಅವಘಡ ನಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಿದರು.

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ – ಪೊಲೀಸರಿಂದ ಕಟ್ಟೆಚ್ಚರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಆಗಸ್ಟ್ 15 ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಕೆಂಪು ಕೋಟೆ, ರಾಜ್‍ಘಾಟ್ ಹಾಗೂ ಐಟಿಒನಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ ಎನ್ನಲಾಗಿದೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ. ಇನ್ನು ಕೆಂಪು ಕೋಟೆ ಹಾಗೂ ರಾಜ್‍ಘಾಟ್ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭಗಳನ್ನು ಮಾಡಲು ಅನುಮತಿ ನೀಡಲ್ಲ ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.  

ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ – ಪೊಲೀಸರಿಂದ ಕಟ್ಟೆಚ್ಚರ Read More »

ರಾಷ್ಟ್ರೀಯ ನ್ಯೂಸ್

ಲಷ್ಕರ್-ಎ-ತೊಯ್ಬಾ ಉಗ್ರರ ಆರು ಮಂದಿ ಸಹಚರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಆ.11. ಆರು ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲಾಗಿದ್ದು ,ಎಲ್ಇಟಿ ಉಗ್ರರ ಮೂವರು ಸಹಚರರನ್ನು ಬಂಧಿಸಲಾಗಿದೆ. ಇನ್ನು ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಜಂಟಿ ಗಸ್ತು ತಿರುಗುತ್ತಿದ್ದ ವೇಳೆ ಓರ್ವ ಶಂಕಿತ ನನ್ನು ಬಂಧಿಸಿದರು. ಬಳಿಕ ಎರಡು ಗ್ರೆನೇಡ್‌ಗಳು, ಒಂದು ಚೈನೀಸ್ ಪಿಸ್ತೂಲ್, ಒಂದು ಪಿಸ್ತೂಲ್

ಲಷ್ಕರ್-ಎ-ತೊಯ್ಬಾ ಉಗ್ರರ ಆರು ಮಂದಿ ಸಹಚರರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಟಾಟಾ ಗ್ರೂಪ್ ಮಾಲೀಕತ್ವದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೋ ವನ್ನು ಅನಾವರಣ ಮಾಡಿದ್ದು, ಏರ್ ಇಂಡಿಯಾ ಹೊಸ ಲೋಗೋಗೆ ‘ದಿ ವಿಸ್ತಾ’ ಎಂದು ನಾಮಕರಣ ಮಾಡಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಸ್ವಾಧೀನಪಡಿಸಿಕೊಂಡ ಒಂದೂವರೆ ವರ್ಷ ಆದ ಬಳಿಕ ಸಂಸ್ಥೆಗೆ ಹೊಸ ಬ್ರ್ಯಾಂಡ್ ಅನ್ನು ಪರಿಚಯಿಸಿದ್ದು, ಇನ್ನು ವಿಮಾನಯಾನ ಸಂಸ್ಥೆಯು ತನ್ನ ಹೊಸ ಬಾಲ ವಿನ್ಯಾಸ ಮತ್ತು ಥೀಮ್

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಆ.11. ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಉತ್ತರ ಪ್ರದೇಶದ ಸಂಭಾಲ್‌ನ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಚೌಧರಿ ಅವರು ತಮ್ಮ ಅಪಾರ್ಟ್‌ ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..!

(ನ್ಯೂಸ್ ಕಡಬ)newskadaba.com ಕೇರಳ, ಆ.10. ಕೇರಳದಲ್ಲಿನ ಆಡಳಿತಾರೂಢ ಎಡರಂಗ ಸರ್ಕಾರವು ಕೇರಳವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ ಎಂದು ಪಿಟಿಐ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನ ಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲು ಮುಂದಾಗಿದ್ದು, ಈ ನಿರ್ಣಯವು ಆ. 09ರ ಸದನ ಕಲಾಪಗಳ ವೇಳಾಪಟ್ಟಿಯಲ್ಲಿ ನಮೂದಾಗಿದೆ. ಈ ಮಾಹಿತಿಯು ಕೇರಳ ರಾಜ್ಯ ವಿಧಾನಸಭೆಯ ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಆಗಿದೆ. ಕೇರಳ ರಾಜ್ಯದ ಹೆಸರು ‘ಕೇರಳಂ’ ಎಂದು ಸಂವಿಧಾನ ಮತ್ತು ಎಲ್ಲ ಅಧಿಕೃತ

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top