ರಾಷ್ಟ್ರೀಯ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ – ಇಂಧನ ಸಚಿವರ ಸಮರ್ಥನೆ..!

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಆ.05. ಕಳೆದ ಕೆಲವು ತಿಂಗಳುಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿದ್ದು, ದೇಶದ ತೈಲ ಕಂಪನಿಗಳು ದೊಡ್ಡ ಲಾಭದಲ್ಲಿವೆ ಎಂದು ವರದಿಯಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಸರಕಾರ ಕಡಿಮೆ ಮಾಡಿಲ್ಲ. ದೇಶದಲ್ಲಿನ ತೈಲ ದರವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಪುರಿ ಸಮರ್ಥಿಸಿಕೊಂಡಿದ್ದಾರೆ. ”ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ದರ ಏರುಪೇರಾದರೂ ಭಾರತವು ಪೆಟ್ರೋಲ್‌ ಡೀಸೆಲ್‌ನಂತಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಕೈಗೆಟಕುವಂತೆ ಮಾಡಿದೆ,” ಎಂದು ಅವರು ಹೇಳಿದ್ದಾರೆ. “ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಪೆಟ್ರೋಲ್‌ […]

ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ – ಇಂಧನ ಸಚಿವರ ಸಮರ್ಥನೆ..! Read More »

ರಾಷ್ಟ್ರೀಯ ನ್ಯೂಸ್

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.05. ಮಹಾರಾಷ್ಟ್ರದ ಥಾಣೆಯಲ್ಲಿರುವ ವಿದ್ಯಾ ಪ್ರಸಾರಕ್ ಮಂಡಲ್ ಕಾಲೇಜಿನಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಯೊರ್ವ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಎನ್‌ಸಿಸಿ ವಿದ್ಯಾರ್ಥಿ ವಿರುದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಎನ್‌ಸಿಸಿ ತರಭೇತಿ ವೇಳೆ 8 ಮಂದಿ NCC ಕಿರಿಯ ವಿದ್ಯಾರ್ಥಿಗಳು ಶಿಕ್ಷೆಯ ಭಾಗವಾಗಿ ಮಳೆಯಲ್ಲಿ ಕೆಸರಿನಲ್ಲಿ ತಲೆ ಬಾಗಿಸ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿದ್ದು ಹಿರಿಯ ಎನ್‌ಸಿಸಿ ತರಬೇತುದಾರನು ಈ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ರಭಸವಾಗಿ ಥಳಿಸಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ Read More »

ರಾಷ್ಟ್ರೀಯ ನ್ಯೂಸ್

ಚುನಾವಣೆಯಲ್ಲಿ ತೊಡಗಿಸಿಕೊಳ್ಳುವ ಯುವಕರಿಗೆ ಸಿಹಿ ಸುದ್ದಿ – ಸ್ಪರ್ಧಾ ವಯೋಮಿತಿ 25 ರಿಂದ 18ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಆ. 05. ಇನ್ನುಮುಂದೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ವಿಧಿಸಲಾಗಿರುವ ಕನಿಷ್ಠ ವಯಸ್ಸಿನ ಮಿತಿಯನ್ನು ಕಡಿಮೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದ್ದು, ಇದರಿಂದ ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.   ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿಯನ್ನು 25 ರಿಂದ 18ಕ್ಕೆ ಇಳಿಸಲು ಶುಕ್ರವಾರದಂದು ಸಂಸದೀಯ ಸಮಿತಿ ಸಲಹೆ ನೀಡಿದೆ. ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ ಮೊದಲಾದ ದೇಶಗಳಲ್ಲಿ ಪರಿಶೀಲನೆ ನಡೆಸಿದ

ಚುನಾವಣೆಯಲ್ಲಿ ತೊಡಗಿಸಿಕೊಳ್ಳುವ ಯುವಕರಿಗೆ ಸಿಹಿ ಸುದ್ದಿ – ಸ್ಪರ್ಧಾ ವಯೋಮಿತಿ 25 ರಿಂದ 18ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ 7 ತಿಂಗಳ ಗರ್ಭಿಣಿಯ ಕೊಂದ ಪಾಪಿಗಳು..!

(ನ್ಯೂಸ್ ಕಡಬ)newskadaba.com ಬಿಹಾರ, ಆ.05. ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು ಎನ್ನಲಾಗಿದೆ. ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು ಬಾಮೈದರೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಬೆನ್ನಲ್ಲೇ ಅಂಗೂರಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಂಗೂರಿ ಮೃತದೇಹವನ್ನು

ಕ್ಷುಲ್ಲಕ ಕಾರಣಕ್ಕೆ 7 ತಿಂಗಳ ಗರ್ಭಿಣಿಯ ಕೊಂದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡಿನ ಕಾಳಗ- ಮೂವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಕುಲ್ಗಾಮ್‌, ಆ. 05. ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್‌ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ ಕೌಂಟರ್‌ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿರುವ ಕುರಿತು ವರದಿಯಾಗಿದೆ. ಭಯೋತ್ಪಾದಕರು ಕುಲ್ಗಾಮ್‌ ನ ಹಾಲನ್ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಗುಂಡಿನ ಕಾಳಗದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ನಂತರ ಮೃತಪಟ್ಟಿರುವುದಾಗಿ ಸೇನೆ ಹೇಳಿದೆ. ಈ ನಡುವೆ ಉಗ್ರರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಶ್ರೀನಗರ ಮೂಲದ

ಗುಂಡಿನ ಕಾಳಗ- ಮೂವರು ಯೋಧರು ಹುತಾತ್ಮ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಪಿವಿ ಸಿಂಧು ಹೊರಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 05. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಪಿ ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಬಿಡಬ್ಲ್ಯೂಎಫ್ 500 ಟೂರ್ನಿ ಯಿಂದ ಹೊರ ಬಿದ್ದಿದ್ದಾರೆ. ಸಿಂಧು ಅವರು ಅಮೆರಿಕದ ಆಟಗಾರ ಬೆಯಿವೆನ್ ಜಾಂಗ್ ವಿರುದ್ಧ 21 -12 ಮತ್ತು21-17 ಅಂತರದಿಂದ ಸೋಲು ಕಂಡಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ 12ನೇ ಸ್ಥಾನದಿಂದ 17ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಪಿವಿ ಸಿಂಧು ಹೊರಕ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ

(ನ್ಯೂಸ್ ಕಡಬ) newskadaba.com ಮಣಿಪುರ, ಆ. 04. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಲೇ ಇದ್ದು, ಇಂಫಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ವರದಿಯಾಗಿದೆ. ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪೊಂದು ಪೊಲೀಸ್ ಔಟ್‌ ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿರುವುದಾಗಿಯೂ ವರದಿಯಾಗಿದೆ.

ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿಗೆ ಬಿಗ್ ರಿಲೀಪ್ ನೀಡಿದ ಸುಪ್ರೀಂ ಕೋರ್ಟ್ – ಶಿಕ್ಷೆ ಆದೇಶಕ್ಕೆ ಮಧ್ಯಂತರ ತಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 04. ಮೋದಿ ಉಪನಾಮ ವಿಚಾರದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿಯ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು. ರಾಹುಲ್ ಅರ್ಜಿ ವಿಚಾರಣೆ ನಡೆಸಿದ ಬಿಆರ್ ಘರ್ವಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರಿದ್ದ ಪೀಠ, ಉಚ್ಛಾರಣೆಗಳು ಉತ್ತಮ ಅಭಿರುಚಿಯಿಲ್ಲ ಎಂಬುವುದರಲ್ಲಿ

ರಾಹುಲ್ ಗಾಂಧಿಗೆ ಬಿಗ್ ರಿಲೀಪ್ ನೀಡಿದ ಸುಪ್ರೀಂ ಕೋರ್ಟ್ – ಶಿಕ್ಷೆ ಆದೇಶಕ್ಕೆ ಮಧ್ಯಂತರ ತಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಗ್ಲೀಷ್ ಮಾತನಾಡಲು ಬರಲಿಲ್ಲವೆಂದು ವಿದ್ಯಾರ್ಥಿಗೆ ಕೊಳಕು ಚಪ್ಪಲಿ ಹಾರ ಹಾಕಿ ಮೆರವಣಿಗೆ

(ನ್ಯೂಸ್ ಕಡಬ)newskadaba.com ಮೇಘಾಲಯ, ಆ.04. ವಿದ್ಯಾರ್ಥಿಗೆ ಇಂಗ್ಲೀಷ್ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಕೊಳಕು ಚಪ್ಪಲಿಗಳ ಹಾರ ಹಾಕಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಮೇಘಾಲಯದಿಂದ ವರದಿಯಾಗಿದೆ. ಈ ಕುರಿತು ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಶಿಕ್ಷಕರ ವರ್ತನಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮಕ್ಕಳು ತಪ್ಪು ಮಾಡಿದರೆ ತಿದ್ದಿ ಹೇಳಬೇಕು ಆದರೆ, ಅದರ ಬದಲು ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ್ದು ತಪ್ಪು ಎಂದು ದೂರಿನಲ್ಲಿ ಹೇಳಲಾಗಿದೆ. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ

ಇಂಗ್ಲೀಷ್ ಮಾತನಾಡಲು ಬರಲಿಲ್ಲವೆಂದು ವಿದ್ಯಾರ್ಥಿಗೆ ಕೊಳಕು ಚಪ್ಪಲಿ ಹಾರ ಹಾಕಿ ಮೆರವಣಿಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ

(ನ್ಯೂಸ್ ಕಡಬ)newskadaba.com ಶ್ರೀನಗರ, ಆ.04. ಜಮ್ಮು ಮತ್ತು ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪೊಲೀಸರು ಇದೀಗ ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ನಾಪತ್ತೆಯಾಗಿದ್ದ ಜಾವೆದ್ ಅಹ್ಮದ್ ವಾನಿ (25) ಎಂಬ ಸೇನಾ ಯೋಧನನ್ನು ಕುಲ್ಗಾಮ್ ವಶಪಡಿಸಿಕೊಳ್ಳಲಾಗಿದ್ದು, ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ

ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ Read More »

ರಾಷ್ಟ್ರೀಯ ನ್ಯೂಸ್
Scroll to Top