ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ!

(ನ್ಯೂಸ್‌ ಕಡಬ) newskadaba.com,ಜ.21 ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್‌ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ […]

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ!

(ನ್ಯೂಸ್‌ ಕಡಬ) newskadaba.com,ಜ.19 : ಭಾರತ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿಯ ಕೈಟ್ವಾಲಿಯಾ ಗ್ರಾಮದಲ್ಲಿ ವಿಶ್ವದ ಅತಿದೊಡ್ಡ ಏಕ ಶಿವಲಿಂಗವನ್ನು ಅಧಿಕೃತವಾಗಿ ಪ್ರತಿಷ್ಠಾಪಿಸುವ ಮೂಲಕ ದೇಶವು ಐತಿಹಾಸಿಕ ದಾಖಲೆಗೆ ನಾಂದಿ ಹಾಡಿದೆ. ​ ವಿರಾಟ್ ರಾಮಾಯಣ ದೇವಾಲಯ ಆವರಣದಲ್ಲಿ ನಡೆದ ಈ ಭವ್ಯ ಶಿವಲಿಂಗ ಪ್ರತಿಷ್ಠಾಪನಾ ಸಮಾರಂಭವು ಅಪಾರ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾಯಿತು. ವಾರಣಾಸಿ ಹಾಗೂ ಅಯೋಧ್ಯೆಯಿಂದ ಆಗಮಿಸಿದ ಪಂಡಿತರು ವೇದಮಂತ್ರಗಳ ಪಠಣದೊಂದಿಗೆ ಶಿವಲಿಂಗದ ಪ್ರಾಣ ಪ್ರತಿಷ್ಠೆ ನೆರವೇರಿಸಿದರು. ವಿಶೇಷ

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು

(ನ್ಯೂಸ್‌ ಕಡಬ) newskadaba.com,ಜ.19 ಸ್ಪೇನ್:  ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ ರೈಲು ಕೂಡ ಹಳಿತಪ್ಪಿತು ಎಂದು ಸ್ಪೇನ್‌ನಅಡಿಫ್ ರೈಲು ಜಾಲ ನಿರ್ವಾಹಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದುರಂತದಲ್ಲಿ 21 ಜನರು

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com,ಜ.17 ಪಶ್ಚಿಮ ಬಂಗಾಲ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಲಾದ ನೊಟೀಸ್ ಗೆ ಉತ್ತರ ಸಿಗದ ಕಾರಣ ಅಲಿಪೋರ್ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿರುವುದಾಗಿ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿರೋಧ ಪಕ್ಷದ

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲು ಸಜ್ಜಾಗಿದೆ. ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್‌ಗಳನ್ನು ಪಾವತಿಸಲು FASTag ಅಥವಾ UPI ಅನ್ನು ಬಳಸಬೇಕಾಗುತ್ತದೆ. ಇನ್ನೂ ಯಾವುದೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿಲ್ಲವಾದರೂ, ಸಚಿವಾಲಯವು ಸುಗಮ ಪರಿವರ್ತನೆಗೆ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ!

(ನ್ಯೂಸ್‌ ಕಡಬ) newskadaba.com,  ಜ.16 : ಹೊಸದಿಲ್ಲಿ: ಈ ಬಾರಿಯ ಭಾರತದ ಗಣರಾಜ್ಯೋತ್ಸವ ಸಮಾರಂಭವು ಜಾಗತಿಕ ರಾಜತಾಂತ್ರಿಕ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಯುರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಈ ಪ್ರತಿಷ್ಠಿತ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಈ ಇಬ್ಬರೂ ಗಣ್ಯರು ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ನಡೆಯಲಿರುವ 16ನೇ ಶೃಂಗಸಭೆಯಲ್ಲಿಯೂ

ಭಾರತದ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಒಕ್ಕೂಟದ ನಾಯಕರ ಆಗಮನ: ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ಆಯಾಮ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ

(ನ್ಯೂಸ್‌ ಕಡಬ) newskadaba.com, ಶ್ರೀನಗರ, ಜ. 12 : ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ ಭಾನುವಾರ ರಾತ್ರಿ ಗುಂಡು ಹಾರಿಸಿ ಉರುಳಿಸಿದೆ. ಆಪರೇಷನ್ ಸಿಂಧೂರದ ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು. ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್ ಒಂದು

ಶ್ರೀನಗರ: ಗಡಿಯಲ್ಲಿ ಮತ್ತೆ ಡ್ರೋನ್ ಹಾರಿಸಿದ ಪಾಕ್- ಗುಂಡು ಹಾರಿಸಿ ಉರುಳಿಸಿದ ಭಾರತೀಯ ಸೇನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ

(ನ್ಯೂಸ್‌ ಕಡಬ) newskadaba.com, ಪುಣೆ, ಜ.6-ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೇಸ್‌‍ ಹಿರಿಯ ಮುಖಂಡ ಸುರೇಶ್‌ ಕಲಾಡಿ (81)ಮುಂಜಾನೆ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮಾಡಿ ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಎರಡು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಕ್ರೀಡಾ ಆಡಳಿತದಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದ ಕಲ್ಮಾಡಿ 1996 ರಿಂದ 2011 ರವರೆಗೆ ಐಒಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು, ಇದು ದೇಶದ ಅತ್ಯುನ್ನತ ಒಲಿಂಪಿಕ್‌

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದೀನಾ ಸಮೀಪ ಭೀಕರ ರಸ್ತೆ ಅಪಘಾತ – ಕೇರಳದ ಒಂದೇ ಕುಟುಂಬದ ನಾಲ್ವರು ಸಾವು

(ನ್ಯೂಸ್‌ ಕಡಬ) newskadaba.com, ಜ.05 ಸೌದಿ ಅರೇಬಿಯಾ: ಮದೀನಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಮೂಲದ ಮಲಯಾಳಿ ಕುಟುಂಬದ 4 ಜನ ಸದಸ್ಯರು ಮೃತಪಟ್ಟಿದ್ದಾರೆ. ಜೆಡ್ಡಾದಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ಜಲೀಲ್ ಹಾಗೂ ಅವರ ಕುಟುಂಬ ಮದೀನಾಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತರನ್ನು ಮಂಜೇರಿ ವೆಲ್ಲಿಲ ನಿವಾಸಿ ಅಬ್ದುಲ್ ಜಲೀಲ್ (52), ಅವರ ಪತ್ನಿ ತಸ್ನಾ ತೋಡೆಂಗಲ್ (40), ಪುತ್ರ ಆದಿಲ್ (14) ಮತ್ತು ಜಲೀಲ್ ಅವರ ತಾಯಿ ಮೈಮುನಾಥ್ ಕಕ್ಕೆಂಗಲ್

ಮದೀನಾ ಸಮೀಪ ಭೀಕರ ರಸ್ತೆ ಅಪಘಾತ – ಕೇರಳದ ಒಂದೇ ಕುಟುಂಬದ ನಾಲ್ವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top