ರಾಷ್ಟ್ರೀಯ ನ್ಯೂಸ್

ಅಮೇರಿಕಾದ ಟೆಕ್ಸಾಸ್‌ನಲ್ಲಿ ಶೂಟೌಟ್‌ ➤ ತೆಲಂಗಾಣದ ಜಡ್ಜ್ ಪುತ್ರಿ ಮೃತ್ಯು

(ನ್ಯೂಸ್ ಕಡಬ)newskadaba.com ಅಮೇರಿಕಾ, ಮೇ.11. ಟೆಕ್ಸಾಸ್ ನಗರದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ತೆಲಂಗಾಣ ಮೂಲದ ಯುವತಿ ಐಶ್ವರ್ಯಾ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನರಸಿರೆಡ್ಡಿ ಪುತ್ರಿ ಐಶ್ವರ್ಯಾ(27) ಶೂಟೌಟ್‌‌ನಲ್ಲಿ ಮೃತಪಟ್ಟಿದ್ದು, ಹೈದರಾಬಾದ್ ನ ಸರೂರು ನಗರದ ದಾಟಿಕೊಂಡ ನಿವಾಸಿಯಾಗಿರುವ ಮೃತ ಐಶ್ವರ್ಯಾ ಟೆಕ್ಸಾಸ್ ನಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು ಎಂದು ವರದಿ ತಿಳಿಸಿದೆ.  

ಅಮೇರಿಕಾದ ಟೆಕ್ಸಾಸ್‌ನಲ್ಲಿ ಶೂಟೌಟ್‌ ➤ ತೆಲಂಗಾಣದ ಜಡ್ಜ್ ಪುತ್ರಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಗೋಲ್ಡನ್ ಟೆಂಪಲ್ ಬಳಿ ಮತ್ತೆ ಸ್ಫೋಟ ➤ ಐವರ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.11. ಅಮೃತಸರದ ಪಂಜಾಬ್‌ ನ ಹೆರಿಟೇಜ್ ಸ್ಟ್ರೀಟ್ ಬಳಿ  ಮತ್ತೊಮ್ಮೆ ಸ್ಫೋಟ ಸಂಭವಿಸಿದ್ದು, ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ. ಮುಂಜಾನೆ 1 ಗಂಟೆ ಸುಮಾರಿಗೆ ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು  ಸ್ಫೋಟ ಸಂಭವಿಸಿದ್ದು, ಇದು ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ  ಇದಾಗಿದೆ.  

ಗೋಲ್ಡನ್ ಟೆಂಪಲ್ ಬಳಿ ಮತ್ತೆ ಸ್ಫೋಟ ➤ ಐವರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!➤ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಸಾಗರ,ಮೇ.11 ಚುನಾವಣೆಯಲ್ಲಿ ಮತ ಹಾಕಲು ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಟೊಯೋಟ ಫಾರ್ಚೂನರ್ ಕಾರು ಚನ್ನಗಿರಿ ಹೆಬ್ಬಲಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚೆನ್ನಗಿರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಗೊಂಡವರನ್ನು ಸಾಗರದ ಖ್ಯಾತ ಉದ್ಯಮಿ ಇಕ್ಬಾಲ್ ಸಾಹೇಬರ ಮಕ್ಕಳಾದ ಝಹೂರ್ , ನಯಾಝ್ ಮತ್ತು ನಯಾಝ್‌ರ ಪತ್ನಿ ಸುನೈನಾ ಎಂದು ಗುರುತಿಸಲಾಗಿದೆ.ಚೆನ್ನಗಿರಿ ತಾಲೂಕಿನ ಹೆಬ್ಬಲಗೆರೆಯ ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!➤ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.11. ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆ ವೇದಿಕೆಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)Newskadaba.com ಛತ್ತೀಸ್‌ಗಢ,ಮೇ.11 ಮದುವೆ ಸಂಭ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ವೇದಿಕೆಯಲ್ಲಿ ಕುಸಿದು ಬಿದ್ದು  ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದಲ್ಲಿ ನಡೆದಿದೆ. ಮೃತರನ್ನು ದಿಲೀಪ್ ರೌಜ್ಕರ್ ಎಂದು ಗುರುತಿಸಲಾಗಿದೆ.ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿ. ಅವರು ಇತ್ತೀಚೆಗೆ ತಮ್ಮ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದು, ಅಲ್ಲಿ ತನ್ನ ಆತ್ಮೀಯರೊಂದಿಗೆ ಮದುವೆ ವೇದಿಕೆಯಲ್ಲಿ ಡ್ಯಾನ್ಸ್‌ ಮಾಡಿದ್ದಾರೆ. ಬಹಳ ಸಂತಸದಿಂದ ಭಿನ್ನ – ವಿಭಿನ್ನವಾಗಿ ಹಾಡಿಗೆ ಹೆಜ್ಜೆ

ಮದುವೆ ವೇದಿಕೆಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಯಿಂದ ಇಬ್ಬರು ಉಗ್ರರು ಅರೆಸ್ಟ್

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.10. ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಇಬ್ಬರು ಸಹಚರರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದೆ. ಬಂಧಿತರನ್ನು ಶಾಹಿದ್ ಅಹ್ಮದ್ ಲೋನ್ ಹಾಗೂ ವಸೀಮ್ ಅಹ್ಮದ್ ಗನಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಸ್ಥಳಿಯ ನಿವಾಸಿಗಳಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಓರ್ವ ಉಗ್ರನಿಂದ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಪಿಸ್ತೂಲ್ ರೌಂಡ್ಸ್, 1 ರಿವಾಲ್ವಾರ್ ಸೈಲೆನ್ಸರ್, 1 ಐಇಡಿ,

ಭಾರತೀಯ ಸೇನೆಯಿಂದ ಇಬ್ಬರು ಉಗ್ರರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

7 ವರ್ಷಗಳಲ್ಲಿ 30 ಮಕ್ಕಳ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.10. ದೆಹಲಿಯ ರೋಹಿಣಿ ಕೋರ್ಟ್ ಮೇ 6 ರಂದು 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ದೋಷಿ ಎಂದು ತೀರ್ಪು ನೀಡಿದೆ. ಆರೋಪಿಯ ಹೆಸರು ರವೀಂದರ್ ಎಂದು ಗುರುತಿಸಲಾಗಿದೆ. ಈತ ಸರಣಿ ಅತ್ಯಾಚಾರಿ ಮತ್ತು ಕೊಲೆಗಾರ ಎಂದು ವರದಿ ತಿಳಿಸಿದೆ. ದೆಹಲಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಈತ ಮಾದಕ ವ್ಯಸನಿಯಾಗಿದ್ದ. ರವೀಂದರ್ 7 ವರ್ಷಗಳಲ್ಲಿ 30 ಮಕ್ಕಳನ್ನು ಅತ್ಯಾಚಾರ ಮಾಡಿ ಕೊಂದಿದ್ದ. ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಯುಪಿ

7 ವರ್ಷಗಳಲ್ಲಿ 30 ಮಕ್ಕಳ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕ Read More »

ರಾಷ್ಟ್ರೀಯ ನ್ಯೂಸ್

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com. ಕೇರಳ,ಮೇ. 10. ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಮೇಲೆ ಪ್ರಕರಣದ ಆರೋಪಿಯೊಬ್ಬ ಚಿಕಿತ್ಸೆಗೆ ಬಳಸುವ ಸರ್ಜಿಕಲ್​ ಬ್ಲೇಡ್​ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ದಲ್ಲಿ ಇಂದು ನಡೆದಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದ ವೇಳೆ ದಾಳಿ ನಡೆಸಿದ ಆತ ಯುವ ವೈದ್ಯೆಯನ್ನು ಸರ್ಜಿಕಲ್​ ಬ್ಲೇಡ್​ನಿಂದ ಹತ್ಯೆ ಮಾಡಿದ ಆಘಾತಕಾರಿ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೊಟ್ಟಾಯಂ ಮೂಲದ ಡಾ.ವಂದನಾ ದಾಸ್ ಮೃತರು. ಸಂದೀಪ್ ಕೊಲೆಗೈದ ಆರೋಪಿ.

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

22 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪ್ರಾಪ್ತ ವಯಸಿನ ಹುಡುಗರು.!

(ನ್ಯೂಸ್ ಕಡಬ)Newskadaba.com ಮುಂಬೈ,ಮೇ.10 ಸಿಗರೇಟ್​ ಹಚ್ಚಿಕೊಳ್ಳಲು ಬೆಂಕಿ ಕಡ್ಡಿ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಅಪ್ರಾಪ್ತ ವಯಸಿನ ಹುಡುಗರು 22 ವರ್ಷದ ಯುವಕನನ್ನು ಇರಿದು ಕೊಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಮುಂಬೈನ ಮಂಖುರ್ದ್​ ಪ್ರದೇಶದಲ್ಲಿ ಘಟನೆ ನಡೆದಿದ್ದು ರಂಜಾನ್ ಅಬ್ದುಲ್​​ ಹಮೀದ್ ಶೇಖ್​(22) ಎಂದು ಗುರುತಿಸಲಾಗಿದೆ. ಬೆಂಕಿ ಕಡ್ಡಿ ನೀಡದ್ದಕ್ಕೆ ಕೊಲೆ ಘಟನೆ  ಸಂಜೆ ಮಂಖುರ್ದ್​ ಪ್ರದೇಶದಲ್ಲಿ ನಡೆದಿದ್ದು ಹಮೀದ್​ ಬಳಿ ಇಬ್ಬರು ಅಪ್ರಾಪ್ತ ವಯಸಿನ ಹುಡುಗರು ಬಂದು ಸಿಗರೇಟ್​ ಹಚ್ಚಿಕೊಳ್ಳಲು ಮ್ಯಾಚ್​ ಬಾಕ್ಸ್​ ಕೇಳಿದ್ದಾರೆ.ಈ ವೇಳೆ ಬಾಲಕರಿಬ್ಬರಿಗೆ ಹಮೀದ್​

22 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪ್ರಾಪ್ತ ವಯಸಿನ ಹುಡುಗರು.! Read More »

ರಾಷ್ಟ್ರೀಯ ನ್ಯೂಸ್

ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.10. ಉಯ್ಯಾಲೆ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಚಿಟ್ಟಾರಿಕ್ಕಲ್‌ನಲ್ಲಿ ನಡೆದಿದೆ. ಚಿಟ್ಟಾರಿಕ್ಕಲ್‌ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್‌ ಅವರ ಪುತ್ರ ಸೌರಂಗ್‌ (9) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ಮನೆಯ ಸಮೀಪದ ರಬ್ಬರ್‌ ತೋಟದಲ್ಲಿ ಸೀರೆ ಬಳಸಿ ಉಯ್ಯಾಲೆ ಕಟ್ಟಲಾಗಿತ್ತು. ಉಯ್ಯಾಲೆಯಲ್ಲಿ ಆಟ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದು ಗಂಭೀರ ಸ್ಥಿತಿಗೆ ತಲುಪಿದ ಸೌರಂಗ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಚಿಟ್ಟಾರಿಕ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು. ಮೃತ ದೇಹವನ್ನು

ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top