ರಾಷ್ಟ್ರೀಯ ನ್ಯೂಸ್

ಮೋಚಾ ಚಂಡಮಾರುತ ಹಿನ್ನೆಲೆ   ➤ ಸಮುದ್ರ ಕಡೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.08 ಚಂಡಮಾರುತದ ಚಲನೆಯಿಂದಾಗಿ ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಸಮುದ್ರದಲ್ಲಿ ಚಂಡಮಾರುತ ಚಲನೆಯಿಂದಾಗಿ, ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದೆ.ಪಶ್ಚಿಮ ಬಂಗಾಳದಲ್ಲಿ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ […]

ಮೋಚಾ ಚಂಡಮಾರುತ ಹಿನ್ನೆಲೆ   ➤ ಸಮುದ್ರ ಕಡೆ ತೆರಳದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ..! Read More »

ರಾಷ್ಟ್ರೀಯ ನ್ಯೂಸ್

ಐದು ಕೆಜಿ ಐಇಡಿ ಹೊಂದಿದ್ದ ಉಗ್ರನ ಬಂಧನ ➤ ತಪ್ಪಿದ ದೊಡ್ಡ ದುರಂತ

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.08. ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 5 ಕೆಜಿ ಸುಧಾರಿತ ಸ್ಫೋಟಕ ಸಾಧನದೊಂದಿಗೆ (ಐಇಡಿ) ಉಗ್ರನೊಬ್ಬನನ್ನು ಬಂಧಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಪುಲ್ವಾಮಾ ಪೊಲೀಸರು ಭಯೋತ್ಪಾದಕ ಸಹಚರ ಇಶ್ಫಾಕ್ ಅಹ್ಮದ್ ವಾನಿ ಅನ್ನು ಬಂಧಿಸುವ ಮತ್ತು ಐಇಡಿ (ಸುಮಾರು 5-6 ಕೆಜಿ) ವಶಪಡಿಸಿಕೊಳ್ಳುವ ಮೂಲಕ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.  

ಐದು ಕೆಜಿ ಐಇಡಿ ಹೊಂದಿದ್ದ ಉಗ್ರನ ಬಂಧನ ➤ ತಪ್ಪಿದ ದೊಡ್ಡ ದುರಂತ Read More »

ರಾಷ್ಟ್ರೀಯ ನ್ಯೂಸ್

ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಮುಂಬೈ, ಮೇ.08. ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ 12 ರವರೆಗೆ ನಿಗದಿಯಾಗಿದ್ದ ಎಲ್ಲಾ ಗೋ ಫಸ್ಟ್ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ.

ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಲೇಡಿ ಕಾನ್ಸ್​ಟೆಬಲ್..!

(ನ್ಯೂಸ್ ಕಡಬ)Newskadaba.com ಹೈದರಾಬಾದ್,ಮೇ.08 ವಯಸ್ಸಾದರೂ ಮದುವೆ ಆಗಲು ಸಾಧ್ಯವಾಗುತ್ತಿಲ್ಲ ಎಂಬ ಚಿಂತೆಯಲ್ಲೇ ಮನನೊಂದು ಮಹಿಳಾ ಕಾನ್ಸ್​ಟೆಬಲ್ ನೇಣಿಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.ಸುರೇಖಾ (28) ಮೃತ ಲೇಡಿ ಕಾನ್ಸ್​ಟೆಬಲ್. ಈಕೆ ತೆಲಂಗಾಣದ ಕಂದಕುರ ಮಂಡಲದ ಜೈತವರಮ್​ ಗ್ರಾಮದ ನಿವಾಸಿ. ಹೈದರಾಬಾದ್​ನ ಛತ್ರಿನಕ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಳು. ಸಾಲಿಬಂದ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಬರುವ ಶಮ್ಶಿರಾಗಂಜ್​ ಕಾಲ್ವಗಡ್ಡದಲ್ಲಿ ತನ್ನ ಅಕ್ಕನ ಮನೆಯಲ್ಲಿ ಸುರೇಖಾ ವಾಸವಿದ್ದಳು. ಸುರೇಖಾ  ಒಂದು ವರ್ಷದ ಹಿಂದಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಆದರೆ, ಕಾರಣಾಂತರಗಳಿಂದ ನಿಶ್ಚಿತಾರ್ಥ

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಲೇಡಿ ಕಾನ್ಸ್​ಟೆಬಲ್..! Read More »

ರಾಷ್ಟ್ರೀಯ ನ್ಯೂಸ್

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com  ತ್ರಿಶೂರು, ಏ. 08. ಯುವತಿಯನ್ನು ಬರ್ಬರವಾಗಿ ಕೊಲೆ‌ ಮಾಡಿ ಮೃತದೇಹವನ್ನು ಕಾಡಿನಲ್ಲಿ ಎಸೆದಿರುವ ಘಟನೆ ಕೇರಳದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಅಥಿರಾಗೆ ಕೊಲೆ‌ ಮಾಡಿ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ಎಸೆಯಲಾಗಿದೆ ಎಂದು ವರದಿ ತಿಳಿಸಿದೆ.  

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು

(ನ್ಯೂಸ್ ಕಡಬ)Newskadaba.com ಕೇರಳ,ಮೇ.08  ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 20 ಮಂದಿ ಮೃತ ಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ.ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ.ಇದುವರೆಗೆ 21 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಕಡಿದ ಚೇಳು

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ, ಮೇ.6. ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಚೇಳು ಕಡಿದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಗಪುರದಿಂದ ಮುಂಬಯಿಗೆ ಕಳೆದ ತಿಂಗಳು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆಯೇ ಮಹಿಳೆಗೆ ವೈದ್ಯರೊಬ್ಬರಿಂದ ಚಿಕಿತ್ಸೆ ಕೊಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರು ಚೇತರಿಸಿಕೊಂಡಿದ್ದು ಬಿಡುಗಡೆ ಮಾಡಲಾಗಿದೆ ಎಂದು ಏರ್ ಇಂಡಿಯಾ ಸಂಸ್ಥೆ  ಹೇಳಿಕೆ ನೀಡಿದೆ.

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಕಡಿದ ಚೇಳು Read More »

ರಾಷ್ಟ್ರೀಯ ನ್ಯೂಸ್

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ

(ನ್ಯೂಸ್ ಕಡಬ) newskadaba.com. ಜಮ್ಮುಕಾಶ್ಮೀರ,ಮೇ.6.  ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಾಳಿ ನಡೆಯುತ್ತಿದೆ. ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಶನಿವಾರ ಮುಂಜಾನೆ ಆರಂಭವಾದ ಬಾರಾಮುಲ್ಲಾ ದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ದಾಳಿ ಮುಂದುವರಿದಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಮತ್ತು ಭದ್ರತಾ ಪಡೆಗಳು ಒಟ್ಟಾಗಿ ಕಾರ್ಯಾಚರಣೆ ನಡೆಸುತ್ತಿವೆ. ಕಾಶ್ಮೀರ ವಲಯ ಪೊಲೀಸರು ನೀಡಿದ ಮಾಹಿತಿಯಂತೆ ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೆಳತಿಯನ್ನೇ ಹತ್ಯಗೈದ ಪಾಪಿ ಸ್ನೇಹಿತ..!

(ನ್ಯೂಸ್ ಕಡಬ)Newskadaba.comಕೇರಳ,ಮೇ.05 26 ವರ್ಷದ ಮಹಿಳೆಯನ್ನು ಸ್ನೇಹಿತನೇ ಕೊಲೆ ಮಾಡಿ, ಶವವನ್ನು ಕಾಡಿನಲ್ಲಿ ಬಿಸಾಕಿರುವ ಘಟನೆ ಕೇರಳದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಮಹಿಳೆಯ ಶವ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ದೊರೆತಿದೆ. ಮಹಿಳೆಯನ್ನು ಅಥಿರಾ ಎಂದು ಗುರುತಿಸಲಾಗಿದ್ದು, ತನ್ನ ಸ್ನೇಹಿತನಾದ ಅಖಿಲ್ ಗೆ ಸಾಲವನ್ನು ನೀಡಿದ್ದಳು. ಅಲ್ಲದೆ, ಅಖಿಲ್ ಈ ಹಣವನ್ನು ಕಂತಿನ ರೂಪದಲ್ಲಿ ಮರುಳಿಸುತ್ತಿದ್ದ ಎನ್ನಲಾಗಿದೆ. ಈ ನಡುವೆ ಅಥಿರಾ ಯಾವಾಗ ಹಣವನ್ನು ಒಮ್ಮೆಲೇ ನೀಡುವಂತೆ

ಗೆಳತಿಯನ್ನೇ ಹತ್ಯಗೈದ ಪಾಪಿ ಸ್ನೇಹಿತ..! Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸಚಿವ ಸಿ.ಎಸ್.ನಾಡಗೌಡ ಪ್ರಚಾರದ ವೇಳೆ ಕಲ್ಲೆಸೆತ..! ➤ಮಹಿಳೆಗೆ ಗಂಭೀರ ಗಾಯ

(ನ್ಯೂಸ್ ಕಡಬ)Newskadaba.com ಕೇರಳ,ಮೇ.05 ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಎಸ್.ನಾಡಗೌಡ ಪ್ರಚಾರದ ವೇಳೆ ಕಲ್ಲೆಸೆತ ನಡೆದಿದ್ದು, ಮಹಿಳಾ ಕಾರ್ಯಕರ್ತೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಮುದ್ದೇಬಿಹಾಳ ಕ್ಷೇತ್ರದ ಗೋನಾಳ ಗ್ರಾಮದಲ್ಲಿ ಸಿ.ಎಸ್.ನಾಡಗೌಡ ಅವರು ಮತ ಯಾಚನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ.ಈ ವೇಳೆ ಶಾಂತಾ ಎಂಬ ಮಹಿಳೆ ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಮಾಜಿ ಸಚಿವ ಸಿ.ಎಸ್.ನಾಡಗೌಡ ಪ್ರಚಾರದ ವೇಳೆ ಕಲ್ಲೆಸೆತ..! ➤ಮಹಿಳೆಗೆ ಗಂಭೀರ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top