ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.28. ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ನಡೆದಿದೆ. ಮಂಗಳೂರು ಕೊಟ್ಟಾರ ಚೌಕಿಯ ನಳಿನಾಕ್ಷಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರ ಪತಿ ಪ್ರಭಾಕರ ಘಟನೆಯಲ್ಲಿ ಗಾಯಗೊಂಡಿದ್ದಾರೆ‌.  

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪಿಯುಸಿಯಲ್ಲಿ ಅನುತ್ತೀರ್ಣವಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಏ.28. ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ ಇಬ್ಬರು ವಿದ್ಯಾರ್ಥಿನಿಯರು ವಿಷ ಸೇವಿಸಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು ಮತ್ತೊಬ್ಬಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳಸ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚಂದ್ರರಾಜಯ್ಯ ಅವರ ಪುತ್ರಿ ಸ್ಪರ್ಶ ಮೃತಳು. ಜೀವಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣಳಾಗಿದ್ದ ಸ್ಪರ್ಶ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ಪಿಯುಸಿಯಲ್ಲಿ ಅನುತ್ತೀರ್ಣವಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕದ್ದ ಪೊಲೀಸ್​ ಅಧಿಕಾರಿ.! ➤ಅಧಿಕಾರಿ ಶಾಶ್ವತವಾಗಿ ಕೆಲಸದಿಂದ ವಜಾ..!

(ನ್ಯೂಸ್ ಕಡಬ)Newskadaba.com ಕೊಟ್ಟಾಯಂ,ಏ.28 ಕೇರಳದ ಕಂಜಿರಪಲ್ಲಿಯ ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕಳ್ಳತನ ಮಾಡಿದ್ದ ಪೊಲೀಸ್​ ಅಧಿಕಾರಿಯನ್ನು ಶಾಶ್ವತವಾಗಿ ಕೆಲಸದಿಂದ ವಜಾಗೊಳಸಲಾಗಿದೆ. ಇಡುಕ್ಕಿ ಜಿಲ್ಲೆಯ ಪೊಲೀಸ್​ ಮುಖ್ಯಸ್ಥರು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ. ಶಿಹಾಬ್ ವಜಾಗೊಂಡ ಅಧಿಕಾರಿ. ಶಿಹಾಬ್​ ಇಡುಕ್ಕಿಯಲ್ಲಿರುವ ಎಆರ್​ ಕ್ಯಾಂಪ್​ನಲ್ಲಿ ಸಿವಿಲ್​ ಪೊಲೀಸ್​ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಡುಕ್ಕಿಯ ಪೊಲೀಸ್​ ವರಿಷ್ಠಾಧಿಕಾರಿ ವಿ.ಯು. ಕುರೈಕೂಸ್​ ಅವರು ಸೇವೆಯಿಂದ ಯಾಕೆ ವಜಾ ಮಾಡಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಈ ಹಿಂದೆ ನೋಟಿಸ್​ನಲ್ಲಿ ತಿಳಿಸಿದ್ದರು.       

ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕದ್ದ ಪೊಲೀಸ್​ ಅಧಿಕಾರಿ.! ➤ಅಧಿಕಾರಿ ಶಾಶ್ವತವಾಗಿ ಕೆಲಸದಿಂದ ವಜಾ..! Read More »

ರಾಷ್ಟ್ರೀಯ ನ್ಯೂಸ್

ಮಣಿಪುರದ ಸಿಎಂ ಬಿರೇನ್‌ ಸಿಂಗ್‌ ಕಾರ್ಯಕ್ರಮದ ಸ್ಥಳಕ್ಕೆ ಗುಂಪು ದಾಳಿ      ➤ ಬೆಂಕಿ ಹಚ್ಚಿ ಧ್ವಂಸ

(ನ್ಯೂಸ್ ಕಡಬ)newskadaba.com ಮಣಿಪುರ, ಏ.28. ಮಣಿಪುರದ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಅವರು ಚುರಾಚಂದ್‌ಪುರ ಜಿಲ್ಲೆಯ ನ್ಯೂ ಲಮ್ಕಾದಲ್ಲಿ ಭಾಗವಹಿಸಲಿದ್ದ ಕಾರ್ಯಕ್ರಮವೊಂದರ ಸ್ಥಳವನ್ನು ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಿರೇನ್ ಸಿಂಗ್ ಉದ್ಘಾಟಿಸಲಿರುವ ನ್ಯೂ ಲಮ್ಕಾದಲ್ಲಿರುವ ಪಿಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಹೊಸದಾಗಿ ಸ್ಥಾಪಿಸಲಾದ ತೆರೆದ ಜಿಮ್ ಅನ್ನು ಗುಂಪು ಭಾಗಶಃ ಸುಟ್ಟು ಹಾಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಮಣಿಪುರದ ಸಿಎಂ ಬಿರೇನ್‌ ಸಿಂಗ್‌ ಕಾರ್ಯಕ್ರಮದ ಸ್ಥಳಕ್ಕೆ ಗುಂಪು ದಾಳಿ      ➤ ಬೆಂಕಿ ಹಚ್ಚಿ ಧ್ವಂಸ Read More »

ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ   

(ನ್ಯೂಸ್ ಕಡಬ)newskadaba.com ನವದೆಹಲಿ, ಏ.27. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ. ಮೋದಿ ಉಪನಾಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ದೋಷಿ ಎಂದು ಪರಿಗಣಿತರಾಗಿ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್ ನ್ಯಾಯಾಲಯ ವಿಧಿಸಿತ್ತು.

ರಾಹುಲ್ ಗಾಂಧಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ    Read More »

ರಾಷ್ಟ್ರೀಯ ನ್ಯೂಸ್

ಮೇ.12ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.27. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ವಿಸ್ತರಿಸಿದೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಸಿಬಿ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಡಿಸಿತ್ತು. ಈ ವೇಳೆ ನ್ಯಾಯಾಲಯ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿದೆ. 2021-22ರ ದೆಹಲಿ ಅಬಕಾರಿ ನೀತಿಯ ರಚನೆ

ಮೇ.12ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

ಶಾರ್ಜಾ ಜೈಲಿನಿಂದ ಬಾಲಿವುಡ್‌ ನಟಿ ಕ್ರಿಸನ್ ಪಿರೇರಾ ಬಿಡುಗಡೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.27. ಮಾದಕ ದ್ರವ್ಯ ಪ್ರಕರಣದಲ್ಲಿ ಯುಎಇಯಲ್ಲಿ ಬಂಧನಕ್ಕೊಳಗಾಗಿ ಶಾರ್ಜಾ ಜೈಲಿನಲ್ಲಿದ್ದ ನಟಿ ಕ್ರಿಸನ್ ಪಿರೇರಾ ಬಿಡುಗಡೆಯಾಗಿದ್ದಾರೆ. ಪಿರೇರಾ 48 ಗಂಟೆಗಳ ಒಳಗೆ ಭಾರತಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಲಕ್ಷ್ಮಿ ಗೌತಮ್ ಹೇಳಿದ್ದಾರೆ. ಶಾರ್ಜಾ ಜೈಲಿನಿಂದ ಬಿಡುಗಡೆಯಾದ ನಂತರ ವೀಡಿಯೊ ಕರೆಯಲ್ಲಿ ತನ್ನ ತಾಯಿ-ಸಹೋದರನೊಂದಿಗೆ ಮಾತನಾಡಿದ್ದನ್ನು ಆಕೆಯ ಸಹೋದರ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಶಾರ್ಜಾ ಜೈಲಿನಿಂದ ಬಾಲಿವುಡ್‌ ನಟಿ ಕ್ರಿಸನ್ ಪಿರೇರಾ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಹಿಜಾಬ್ ಧರಿಸಿದ ಮಹಿಳೆಗೆ ಬೆನ್ನಟ್ಟಿ ಕಿರುಕುಳ ನೀಡಿದ ಯುವಕರು     ➤ ದೂರು ದಾಖಲು

(ನ್ಯೂಸ್ ಕಡಬ)newskadaba.com   ಔರಂಗಾಬಾದ್‌, ಏ.27. ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಕೈ ಗೇಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೊ ವೈರಲ್ ಆಗಿದೆ. ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ. ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು. ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ

ಹಿಜಾಬ್ ಧರಿಸಿದ ಮಹಿಳೆಗೆ ಬೆನ್ನಟ್ಟಿ ಕಿರುಕುಳ ನೀಡಿದ ಯುವಕರು     ➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com  ಆಂಧ್ರಪ್ರದೇಶ,  ಏ.27. ತನ್ನ ಮಗಳ ವಯಸ್ಸಿನ ಹುಡುಗಿಯ ಮೇಲೆ ಪ್ರತಿದಿನ ಲೈಂಗಿಕ ದೌರ್ಜನ್ಯ ನಡೆಸಿ ಆತ್ಮಹತ್ಯೆಗೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ತಿಂಗಳಿಂದ ಪ್ರತಿದಿನ ಅವಾಚ್ಯ ಶಬ್ಧಗಳಿಂದ ಕಿರುಕುಳ ನೀಡುತ್ತಿದ್ದುದನ್ನು ತಾಳಲಾರದೇ ಅಪಾರ್ಟ್​ಮೆಂಟ್ ಮೇಲಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿ ವಿನೋದ್ ಕುಮಾರ್ ಜೈನ್ (49)ಗೆ ಜೀವಾವಧಿ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ವಿಜಯವಾಡ ಪೋಕ್ಸೊ ನ್ಯಾಯಾಲಯದ

ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ರೋಡ್ ಶೋ..!    ➤ ದೂರು ನೀಡಿದ ವ್ಯಕ್ತಿ

(ನ್ಯೂಸ್ ಕಡಬ)newskadaba.com  ಕೇರಳ, ಏ.27. ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಸಂಬಂಧಿಸಿದಂತೆ ಕೇರಳ ಡಿಜಿಪಿ ಹಾಗೂ ಕೇರಳ ಮೋಟಾರು ವಾಹನ ಇಲಾಖೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಸಂಚಾರ ನಿಯಮಗಳ ಉಲ್ಲಂಘನೆ ಆರೋಪದಡಿ ಪ್ರಧಾನಿ ವಿರುದ್ಧ ದೂರು ಕೊಡಲಾಗಿದೆ. ಏಪ್ರಿಲ್​ 24 ಮತ್ತು 25ರಂದು ಎರಡು ದಿನಗಳ ಕೇರಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ರೋಡ್​ ಶೋ ನಡೆಸಿದ್ದರು. ಈ ಬಗ್ಗೆ ಏಪ್ರಿಲ್​ 26ರಂದು ತ್ರಿಶೂರ್‌ ಮೂಲದ ಜಯಕೃಷ್ಣನ್‌ ಎಂಬುವರು ರಾಜ್ಯ ಪೊಲೀಸ್‌ ಮುಖ್ಯಸ್ಥ ಅನಿಲ್‌ಕಾಂತ್‌ ಹಾಗೂ

ಪ್ರಧಾನಿ ಮೋದಿ ರೋಡ್ ಶೋ..!    ➤ ದೂರು ನೀಡಿದ ವ್ಯಕ್ತಿ Read More »

ರಾಷ್ಟ್ರೀಯ ನ್ಯೂಸ್
Scroll to Top