ರಾಷ್ಟ್ರೀಯ ನ್ಯೂಸ್

ಮುಂಬೈನ ಮಹಿಳಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ನಿಗೂಢವಾಗಿ ಮೃತ್ಯು

(ನ್ಯೂಸ್ ಕಡಬ)newskadaba.com  ಮುಂಬೈ, ಏ.27. ಮುಂಬೈನ ಕುರ್ಲಾ ಉಪನಗರದಲ್ಲಿ ಮಹಿಳಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಒಬ್ಬರು ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೀತಲ್ ಯೆಡ್ಕೆ (30) ಎಂದು ಗುರುತಿಸಲಾಗಿದೆ. ಶೀತಲ್ ಯೆಡ್ಕೆ ಅವರು ಕುರ್ಲಾ (ಪೂರ್ವ)ದ ನೆಹರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಹಲವು ತಿಂಗಳಿನಿಂದ ಕೆಲಸಕ್ಕೆ ಗೈರು ಹಾಜರಾಗಿದ್ದಕ್ಕಾಗಿ ಇತ್ತೀಚೆಗೆ ಶಿಸ್ತು ಕ್ರಮದ ನೋಟಿಸ್ ನೀಡಲಾಗಿತ್ತು . ಇನ್ನು ಕಳೆದೆರಡು ದಿನಗಳಿಂದ ಆಕೆಯ ಫ್ಲಾಟ್ ನಿಂದ ದುರ್ವಾಸನೆ ಬರುತ್ತಿರುವ […]

ಮುಂಬೈನ ಮಹಿಳಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ನಿಗೂಢವಾಗಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಯುವತಿಯೊಬ್ಬಳು ಪ್ರಿಯಕರನ ತಂದೆಯೊಂದಿಗೆ ಎಸ್ಕೇಪ್‌..!

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.27 ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಲಕ್ಷಣ ಪ್ರೇಮ ಪ್ರಕರಣವೊಂದು ನಡೆದಿದೆ. 20 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನ ತಂದೆಯೊಂದಿಗೆ ಓಡಿಹೋಗಿದ್ದಾಳೆ.ಒಂದು ವರ್ಷದ ಹಿಂದೆ ಯುವತಿ ತನ್ನ ಪ್ರಿಯಕರನ ಮನೆಗೆ ಭೇಟಿ ನೀಡಿದ್ದಳು.ಆಗ ಯುವತಿಗೆ ಗೆಳೆಯನ ತಂದೆ ಕಮಲೇಶ್ ಅವರ ಪರಿಚಯವಾಗಿತ್ತು. ಅಂದಿನಿಂದ ಅವರು ಪರಸ್ಪರ ಮಾತನಾಡುವುದನ್ನು ಮುಂದುವರೆಸಿದ್ದರು. ಕಮಲೇಶ್ ಮತ್ತು ಯುವತಿ ಮಾರ್ಚ್ 2022 ರಲ್ಲಿ ಕಮಲೇಶ್ ಅವರ 20 ವರ್ಷದ ಮಗ ಅಮಿತ್ ನನ್ನು ಬಿಟ್ಟು ಕಾನ್ಪುರದಿಂದ ಓಡಿಹೋದರು. ಈ ಬಗ್ಗೆ ಯುವತಿಯ ಮನೆಯವರು

ಯುವತಿಯೊಬ್ಬಳು ಪ್ರಿಯಕರನ ತಂದೆಯೊಂದಿಗೆ ಎಸ್ಕೇಪ್‌..! Read More »

ರಾಷ್ಟ್ರೀಯ ನ್ಯೂಸ್

ಕಾರು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ➤ ಕತ್ತೆಯ ಮೂಲಕ ಕಾರನ್ನು ಶೋರೂಂಗೆ ಎಳೆದು ತಂದ ಮಾಲೀಕ.!

(ನ್ಯೂಸ್ ಕಡಬ)Newskadaba.com ರಾಜಸ್ಥಾನ,ಏ.27 ಕಾರು ಮಾಲೀಕ ರಾಜ್‌ಕುಮಾರ್‌ ಉದಯಪುರದ ಮದ್ರು ಕೈಗಾರಿಕಾ ಪ್ರದೇಶದ ಶೋರೂಂ ಒಂದರಲ್ಲಿ ಸುಮಾರು ₹18 ಲಕ್ಷ ಕೊಟ್ಟು ಹೊಸ ಕಾರು ಖರೀದಿಸಿದ್ದರು. ದುಬಾರಿ ಹಣಕೊಟ್ಟು ಖರೀದಿಸಿದ ಕಾರು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಆಕ್ರೋಶಗೊಂಡ ಮಾಲೀಕ ಕತ್ತೆ ಮೂಲಕ ಕಾರನ್ನು ಶೋ ರೂಂಗೆ ಎಳೆದು ತಂದು ಪ್ರತಿಭಟನೆ ಮಾಡಿದ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.  ಕಾರನ್ನು ಹಗ್ಗದ ಸಹಾಯದಿಂದ ಎರಡು ಕತ್ತೆಗಳ ಕೊರಳಿಗೆ ಕಟ್ಟಿ, ಡೋಲು ಬಾರಿಸುತ್ತಾ ಶೋಂ ರೂಮ್‌ ಕಡೆ ಬರುತ್ತಿರುವ ದೃಶ್ಯದ ತುಣುಕು

ಕಾರು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ➤ ಕತ್ತೆಯ ಮೂಲಕ ಕಾರನ್ನು ಶೋರೂಂಗೆ ಎಳೆದು ತಂದ ಮಾಲೀಕ.! Read More »

ರಾಷ್ಟ್ರೀಯ ನ್ಯೂಸ್

ನಿಷೇಧಿತ PFI ಮರು ಸ್ಥಾಪನೆಗೆ ಯತ್ನ ➤ 4 ರಾಜ್ಯಗಳಲ್ಲಿ ಮತ್ತೆ NIA ದಾಳಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ. 27. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದ 16 ಸ್ಥಳಗಳಲ್ಲಿ ಶೋಧ ನಡೆಸಿದೆ‌. ಉತ್ತರ ಪ್ರದೇಶ, ಬಿಹಾರ, ಪಂಜಾಬ್ ಮತ್ತು ಗೋವಾದಲ್ಲಿ ಪಿಎಫ್‌ಐ ಜೊತೆಗಿನ‌ ನಂಟು ಹೊಂದಿರುವವರು ಮತ್ತು ಶಂಕಿತ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ. ಎನ್‌ಐಎ ಶೋಧಿಸಿದ ಸ್ಥಳಗಳಲ್ಲಿ ಬಿಹಾರದಲ್ಲಿ 12, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಪಂಜಾಬ್‌ನ ಲೂಧಿಯಾನ

ನಿಷೇಧಿತ PFI ಮರು ಸ್ಥಾಪನೆಗೆ ಯತ್ನ ➤ 4 ರಾಜ್ಯಗಳಲ್ಲಿ ಮತ್ತೆ NIA ದಾಳಿ Read More »

ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ..!   ➤ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.27 ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ. ಆದ್ದರಿಂದ ಸಮಾನ ವೇತನಕ್ಕೆ ಅರ್ಹರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ಮೂಲಕ ಎರಡೂ ವರ್ಗಗಳಿಗೆ ವೇತನ ಮತ್ತು ಪ್ರಯೋಜನಗಳನ್ನು ಸಮೀಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದೆ. ವಿ.ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅಲೋಪತಿ ವೈದ್ಯರು ತುರ್ತು ಕರ್ತವ್ಯಗಳನ್ನು ನಿರ್ವಹಿಸಬೇಕು. ಟ್ರಾಮಾ ಕೇರ್ ಅನ್ನು ಒದಗಿಸಬೇಕು. ಇದು ಆಯುರ್ವೇದ ವೈದ್ಯರ ವಿಷಯದಲ್ಲಿ ಅಲ್ಲ

ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ..!   ➤ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು   Read More »

ರಾಷ್ಟ್ರೀಯ ನ್ಯೂಸ್

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ..! ➤ ನವಜೋಡಿ  ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com,ಏ.26 ನಿಶ್ಚಿತಾರ್ಥ ನೆರವೇರಿ ಮದುವೆಗೆ ಇನ್ನು 15 ದಿನ ಬಾಕಿ ಇರುವಾಗಲೇ ಅಪಘಾತದಲ್ಲಿ ನವಜೋಡಿಯೊಂದು ದುರಂತ ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆದಿದೆ.ಮೃತರನ್ನು ಮನೆಪಲ್ಲಿ ರಾಜ್​ಕುಮಾರ್​ (25) ಮತ್ತು ಮಲಿರೆಡ್ಡಿ ದುರ್ಗಾಭವಾನಿ (18) ಎಂದು ಗುರುತಿಸಲಾಗಿದೆ. ರಾಜಮಂಡ್ರಿಯ ಕೊವ್ವೂರು ಬಳಿ ಹಿಂದಿನಿಂದ ಬಂದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನವಜೋಡಿ ದುರಂತ ಸಾವಿಗೀಡಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ..! ➤ ನವಜೋಡಿ  ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳ ಮಾರಾಟ ನಿಷೇಧ   ➤ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.26 ತಮಿಳುನಾಡಿನಲ್ಲಿ ಗುಟ್ಕಾ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ 2018 ರ ಅಧಿಸೂಚನೆಯನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ತಯಾರಕರು ತಮ್ಮ ಚಟುವಟಿಕೆಗಳು ರಾಜ್ಯ ಹೊರಡಿಸಿದ ಅಧಿಸೂಚನೆಯ ವ್ಯಾಪ್ತಿಗೆ ಒಳಪಡದಿದ್ದರೆ ಅವರು ಪರಿಹಾರ ಪಡೆಯಲು ಸೂಕ್ತ ವೇದಿಕೆಯನ್ನು ಸಂಪರ್ಕಿಸಬಹುದು ಎಂದು ಸ್ಪಷ್ಟಪಡಿಸಿದೆ.    

ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳ ಮಾರಾಟ ನಿಷೇಧ   ➤ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ..! Read More »

ರಾಷ್ಟ್ರೀಯ ನ್ಯೂಸ್

ಲಕ್ಷ್ಮಣ ಸವದಿಗೆ ಸವಾಲು ಹಾಕಿದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ.!

(ನ್ಯೂಸ್ ಕಡಬ)Newskadaba.com ಅಥಣಿ,ಏ.26 ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಮಾಜಿ ಡಿಸಿಎಂ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿಗೆ ಸವಾಲು ಹಾಕಿದ್ದಾರೆ.ಅಥಣಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಹೇಶ್ ಕುಮಟಳ್ಳಿ, ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದರು.ನಿಮ್ಮ ಉಪಕಾರ ನಮ್ಮ ಮೇಲಿಲ್ಲ, ನಾವು ಘಂಟಾಘೋಷವಾಗಿ ಹೇಳಬೇಕಾಗುತ್ತದೆ. ನಮ್ಮಿಂದ ನೀವು ಇಂದು ಎಂಎಲ್ ಸಿ ಆದ್ರಿ. ರಾಜ್ಯದ ಡಿಸಿಎಂ ಆದ್ರಿ. ಆದರೆ ನನ್ನ ವಿರುದ್ಧ 50 ಕೋಟಿ ಆರೋಪ ಮಾಡಿದ್ದಿರಿ. ಇದಕ್ಕೆ ಜನರು ತಕ್ಕ

ಲಕ್ಷ್ಮಣ ಸವದಿಗೆ ಸವಾಲು ಹಾಕಿದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ.! Read More »

ರಾಷ್ಟ್ರೀಯ ನ್ಯೂಸ್

ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..!

(ನ್ಯೂಸ್ ಕಡಬ)Newskadaba.com ಪುಣೆ,ಏ.26 ಆಧುನಿಕತೆ ಬೆಳೆದಂತೆ ನಾವೆಲ್ಲರೂ ಪಾಶ್ಚಾತ್ಯ ಸಂಸ್ಕೃತಿಗೆ ಒಗ್ಗಿಕೊಳ್ಳತ್ತಿದ್ದೇವೆ. ಲಿವ್ ಇನ್ ರಿಲೇಷನ್ ಇರುವ ಜೋಡಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ಜೋಡಿಯೊಂದು ಗೃಹ ಸಾಲವನ್ನು ಪಾವತಿಸಲು ಬೈಕ್‌ ಕದ್ದು ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳನ್ನು ವಿಕ್ರಮ್ ಮತ್ತು ಅನುರಾಧ ಎಂದು ಗುರುತಿಸಲಾಗಿದೆ. ವಿಕ್ರಮ್ ಹಾಗೂ ಅನುರಾಧ ತಮ್ಮ ಆರ್ಥಿಕ ನಿರ್ವಹಣೆಗೆ ಸಾಧ್ಯವಾಗದೇ ಮೋಟಾರ್ ಬೈಕ್ ಗಳನ್ನು ಕದಿಯಲು ನಿರ್ಧರಿಸಿದ್ದರು. ಮನೆಗೆ ಮಾಡಿರುವ ಸಾಲವನ್ನು ಪಾವತಿಸಲು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪದ ಮೇಲೆ ಪುಣೆಯ ಲಿವ್ ಇನ್

ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..! Read More »

ರಾಷ್ಟ್ರೀಯ ನ್ಯೂಸ್

ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com.ಕೇರಳ, ಏ.26. ಮಲಯಾಳಂ ಚಲನಚಿತ್ರ ನಟ ಮಾಮುಕೋಯ ಅವರು ಕಾಳಿಕಾವುನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದುಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.  ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿದ್ದ ಮಾಮುಕೋಯ ಅವರು ಕಾರ್ಯಕ್ರಮದ ಉದ್ಘಾಟನೆಗೆ ಕೆಲವೇ ನಿಮಿಷಗಳ ಮೊದಲು ಅನಾರೋಗ್ಯದಿಂದ ಹೊರಬಂದಿದ್ದಾರೆ. ಸ್ವಯಂಸೇವಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ವಂಡೂರಿನ ಆಸ್ಪತ್ರೆಗೆ ಸಾಗಿಸಿದರು. ಮಾಮುಕೋಯ ಅವರಿಗೆ ಹೃದಯಾಘಾತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಮುಂಜಾನೆ ಅವರನ್ನು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ‌‌.ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್
Scroll to Top