ರಾಷ್ಟ್ರೀಯ ನ್ಯೂಸ್

ಉಡುಪಿ: ’ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ’ ➤ ಡಿಸಿ ಕೂರ್ಮಾರಾವ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಏ.24. ಖ್ಯಾತ ಚಿತ್ರನಟ ಶರತ್ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್‌’ನಲ್ಲಿರುವ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಗೆ ಶರತ್ ಬಾಬು ದಾಖಲಾಗಿದ್ದು, ನಟನ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಇನ್ನು ನಟನ ಇಡೀ ದೇಹಕ್ಕೆ ಸೋಂಕು ತಗುಲಿದ್ದರಿಂದ ಕಿಡ್ನಿ, ಶ್ವಾಸಕೋಶ, ಯಕೃತ್ ಮತ್ತಿತರ ಅಂಗಾಂಗಗಳ ಮೇಲೆ ಪರಿಣಾಮ ಬೀರಿದೆ ಎಂದು ಆಸ್ಪತ್ರೆ ಮೂಲಗಳು ಬಹಿರಂಗಪಡಿಸಿವೆ.

ಉಡುಪಿ: ’ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ’ ➤ ಡಿಸಿ ಕೂರ್ಮಾರಾವ್ Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ..!  

(ನ್ಯೂಸ್ ಕಡಬ)Newskadaba.com ನ್ಯೂಯಾರ್ಕ್,ಏ.24 ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಗಳ ಮೃತದೇಹಗಳು ಅಮೆರಿಕಾದ ಇಂಡಿಯಾನಾದಲ್ಲಿನ ಸರೋವರದಲ್ಲಿ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಎಪ್ರಿಲ್ 15ರಂದು ತಮ್ಮ ಗೆಳೆಯರ ಗುಂಪಿನೊಂದಿಗೆ ನೈಋತ್ಯ ಇಂಡಿಯಾನಾಪೊಲೀಸ್ ಡೌನ್‌ಟೌನ್‌ನಿಂದ ಸುಮಾರು 64 ಮೈಲಿ ದೂರವಿರುವ ಮಾನ್ರೊ ಸರೋವರದಲ್ಲಿ ಈಜುತ್ತಿದ್ದಾಗ ಸಿದ್ಧಾಂತ್ ಶಾ (19) ಹಾಗೂ ಆರ್ಯನ್ ವೈದ್ಯ (20) ನಾಪತ್ತೆಯಾಗಿದ್ದರು. ಎಪ್ರಿಲ್ 18ರಂದು ಶೋಧನಾ ತಂಡವು ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.  

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ..!   Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ)newskadaba.com ಹೈದರಾಬಾದ್, ಏ.24. ಖ್ಯಾತ ಚಿತ್ರನಟ ಶರತ್ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್‌’ನಲ್ಲಿರುವ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಗೆ ಶರತ್ ಬಾಬು ದಾಖಲಾಗಿದ್ದು, ನಟನ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಇನ್ನು ನಟನ ಇಡೀ ದೇಹಕ್ಕೆ ಸೋಂಕು ತಗುಲಿದ್ದರಿಂದ ಕಿಡ್ನಿ, ಶ್ವಾಸಕೋಶ, ಯಕೃತ್ ಮತ್ತಿತರ ಅಂಗಾಂಗಗಳ ಮೇಲೆ ಪರಿಣಾಮ ಬೀರಿದೆ ಎಂದು ಆಸ್ಪತ್ರೆ ಮೂಲಗಳು ಬಹಿರಂಗಪಡಿಸಿವೆ.

ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಚಿಂತಾಜನಕ Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು    ➤ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.24. ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾಸರಗೋಡಿನ ವಿದ್ಯಾರ್ಥಿನಿ ಸೇರಿದಂತೆ ಮೂವರು ಮೃತ ಪಟ್ಟ ಘಟನೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾಸರಗೋಡು ವೆಳ್ಳರಿಕಂಡು ವಿನ ಸ್ನೇಹಾ ಜೋಸ್ (20), ಜಿಸ್ನಾ ಮೇರಿ ಜೋಸೆಫ್(20) ಮತ್ತು ಅಡೋನ್ ಬೆಸ್ಟಿ (20) ಮೃತ ಪಟ್ಟವರು ಎಂದು ತಿಳಿದುಬಂದಿದೆ. ಡಿಯೋನಾ ಬೆಸ್ಟಿ, ಸ್ನೇಹಾಲ ಸಹೋದರಿ ಸೋನಾ ಜೋಸೆಫ್ ಮತ್ತು ಸಾಂಜೋ ಜೋಸ್ ಗಾಯಗೊಂಡಿದ್ದು,

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು    ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ವ್ಯಾಪಾರಿಗಳಿಗೆ ಸಿಹಿ ಸುದ್ದಿ! ➤ ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.24 ಚಿಲ್ಲರೆ ವ್ಯಾಪಾರದಲ್ಲಿ ಸುಧಾರಣೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ ಕೈಗೊಂಡಿದೆ.ಇದೇ ಮೊದಲ ಬಾರಿಗೆ ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ರಾಷ್ಟ್ರೀಯ ನೀತಿ ಘೋಷಣೆ ಮಾಡುವ ಸಾಧ್ಯತೆ ಇದೆ. ಜಿ.ಎಸ್‌.ಟಿ. ಅಡಿ ನೋಂದಾಯಿತ ವ್ಯಾಪಾರಿಗಳಿಗೆ ಅಪಘಾತ ವಿಮೆ ಜಾರಿಗೊಳಿಸಲಾಗುವುದು ಎಂದು ಕೇಂದ್ರದ ಅಧಿಕಾರಿಯೊಬ್ಬರು ಹೇಳಿದ್ದಾರೆ.ಚಿಲ್ಲರೆ ವ್ಯಾಪಾರ ನೀತಿ ಅಡಿ ವ್ಯಾಪಾರಿಗೆ ಸುಧಾರಿತ ಮೂಲ ಸೌಕರ್ಯ ಹಾಗೂ ಹೆಚ್ಚು ಸಾಲ ಸೌಲಭ್ಯ ಕಲ್ಪಿಸಲಾಗುವುದು.    

ವ್ಯಾಪಾರಿಗಳಿಗೆ ಸಿಹಿ ಸುದ್ದಿ! ➤ ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ..! Read More »

ರಾಷ್ಟ್ರೀಯ ನ್ಯೂಸ್

ಅಮೇರಿಕಾದ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಏ.23. ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ನೇಮಕಗೊಂಡಿದ್ದಾರೆ. ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ. ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.  

ಅಮೇರಿಕಾದ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಏ.25ಕ್ಕೆ ಪ್ರಧಾನಿ ಮೋದಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.23  ಪ್ರಧಾನಮಂತ್ರಿ ನರೇಂದ್ರ ಮೋದಿ ಏ.25 ರಂದು ಕೇರಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ದೇಶದ ಮೊದಲ ವಾಟರ್ ಮೆಟ್ರೋವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಟರ್ ಮೆಟ್ರೋ ಒಂದು ವಿಶಿಷ್ಟವಾದ ನಗರ ಸಮೂಹ ಸಾರಿಗೆ ವ್ಯವಸ್ಥೆಯಾಗಿದ್ದು, ಸಾಂಪ್ರದಾಯಿಕ ಮೆಟ್ರೋ ವ್ಯವಸ್ಥೆಯಂತಹ ಅನುಭವ ಮತ್ತು ಸುಲಭವಾಗಿ ಪ್ರಯಾಣಿಸಬಹುದಾಗಿದೆ. ಕೊಚ್ಚಿಯಂತಹ ನಗರಗಳಲ್ಲಿ ಇದು ತುಂಬಾ ಉಪಯುಕ್ತವಾಗಿದೆ.    

ಏ.25ಕ್ಕೆ ಪ್ರಧಾನಿ ಮೋದಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ..! Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರಧ್ವಜ ಬಳಸಿ ಚಿಕನ್ ಕ್ಲೀನ್ ಮಾಡಿದ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ)newskadaba.com ಸಿಲ್ವಾಸ್ಸಾ, ಏ.23. ಕೇಂದ್ರಾಡಳಿತ ಪ್ರದೇಶವಾದ ದಾದರ್ ಮತ್ತು ನಗರ್ ಹವೇಲಿಯ ಸಿಲ್ವಾಸ್ಸಾದ ವ್ಯಕ್ತಿಯೊಬ್ಬರು ತ್ರಿವರ್ಣ ಧ್ವಜದಿಂದ ಕೋಳಿಯನ್ನು ಶುಚಿಗೊಳಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರಧ್ವಜ ಬಳಸಿ ಚಿಕನ್ ಸ್ವಚ್ಛಗೊಳಿಸುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸಿಲ್ವಾಸ್ಸಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರಧ್ವಜ ಬಳಸಿ ಚಿಕನ್ ಕ್ಲೀನ್ ಮಾಡಿದ ವ್ಯಕ್ತಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ನಾಯಕ ಸುರೇಂದ್ರ ಮಟಿಯಾಲಾ ಹತ್ಯೆಗೈದ 6 ಮಂದಿ ಆರೋಪಿಗಳ ಬಂಧನ..!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಏ.23 ದಿಲ್ಲಿ ಬಿಜೆಪಿ ಕಿಸಾನ್‌ ಮೋರ್ಚಾ ನಾಯಕ ಸುರೇಂದ್ರ ಮಟಿಯಾಲಾ ಅವರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಬಾಲ ಆರೋಪಿಗಳ ಸಹಿತ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಹರಿಯಾಣದ ಬಹದ್ದೂರ್‌ಗಢ ನಿವಾಸಿಗಳಾದ ಸಚಿನ್‌ ಹಾಗೂ ದಿಲ್ಲಿಯ ಪಾಲಮ್‌ ಕಾಲನಿಯ ಅರುಣ್‌ ಛಂದ್‌, ದೀಪಕ್‌ ಬರ್ವಾ, ಹರಿಯಾಣದ ಯೋಗೇಶ್‌ ಕುಮಾರ್‌ ಎಂದು ಗುರುತಿಸಲಾಗಿದೆ.ಇವರ ಜತೆಗೆ 16 ಮತ್ತು 17 ವರ್ಷದ ಇಬ್ಬರು ಬಾಲಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.    

ಬಿಜೆಪಿ ನಾಯಕ ಸುರೇಂದ್ರ ಮಟಿಯಾಲಾ ಹತ್ಯೆಗೈದ 6 ಮಂದಿ ಆರೋಪಿಗಳ ಬಂಧನ..! Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ ➤ ಬಸ್ ನಿರ್ವಾಹಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಬಸ್ ನಿರ್ವಾಹಕನೋರ್ವನನ್ನು ಬೇಡಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುತ್ತಿಕೋಲ್ ಉಮೇಶ್ ಕುಮಾರ್ (30) ಬಂಧಿತ ಎಂದು ತಿಳಿದುಬಂದಿದೆ. ಬಂದಡ್ಕ ಸರಕಾರಿ ಶಾಲೆಯ ಪ್ಲಸ್ 2 ವಿದ್ಯಾರ್ಥಿನಿ ಮಾಲಕುಂಡುವಿನ ಶರಣ್ಯ(17)ಆತ್ಮಹತ್ಯೆಗೆ ಸಂಬಂಧ ಪಟ್ಟಂತೆ ಈತನನ್ನು ಬಂಧಿಸಲಾಗಿದೆ.  

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ ➤ ಬಸ್ ನಿರ್ವಾಹಕ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top