ರಾಷ್ಟ್ರೀಯ ನ್ಯೂಸ್

‘2023ರಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ’ ➤ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ 2023 ರಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವ್ಯವಸ್ಥಾಪಕ ನಿರ್ದೇಶಕರ ಜಾಗತಿಕ ನೀತಿ ಕಾರ್ಯಸೂಚಿಯಲ್ಲಿ ಗುರುತಿಸಲಾದ ಆದ್ಯತೆಗಳ ಕುರಿತು ಚರ್ಚಿಸಲು ಐಎಂಎಫ್ ಪ್ರಧಾನ ಕಚೇರಿಯಲ್ಲಿ ನಡೆದ ಅಂತರರಾಷ್ಟ್ರೀಯ ಹಣಕಾಸು ಮತ್ತು ಹಣಕಾಸು ಸಮಿತಿಯ ಸಮಗ್ರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತೀಯ ಆರ್ಥಿಕತೆಯು ಇದೇ ಹಾದಿಯಲ್ಲಿಯೇ ಇರುತ್ತದೆ ಮತ್ತು 2022-23 ರಲ್ಲಿ ಶೇಕಡಾ […]

‘2023ರಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ’ ➤ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ

(ನ್ಯೂಸ್ ಕಡಬ)newskadaba.com  ನೈರೋಬಿ, ಏ.15. ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ. ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾನೆ.

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ Read More »

ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಮುಂಬಯಿ, ಏ.15. ಮಹಾರಾಷ್ಟ್ರದಲ್ಲಿ ನಸುಕಿನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ. ಇನ್ನೂ 27 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಯಗಡ ಜಿಲ್ಲೆಯಲ್ಲಿ ಹಳೆ ಮುಂಬಯಿ- ಪುಣೆ ಹೆದ್ದಾರಿಯಲ್ಲಿನ ಕಂದಕಕ್ಕೆ ಬಸ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಮುಖಂಡನ ಗುಂಡಿಕ್ಕಿ ಕೊಂದ ಅಪರಿಚಿತ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಟಿಯಾಲ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದರು ಎಂದು ಮೃತ ರಾಮ್ ಸಿಂಗ್ ಅವರ ಸೋದರ ಸಂಬಂಧಿ ತಿಳಿಸಿದ್ದಾರೆ.

ಬಿಜೆಪಿ ಮುಖಂಡನ ಗುಂಡಿಕ್ಕಿ ಕೊಂದ ಅಪರಿಚಿತ ದುಷ್ಕರ್ಮಿಗಳು Read More »

ರಾಷ್ಟ್ರೀಯ ನ್ಯೂಸ್

ಪತ್ನಿಯ ಕೊಲೆಗೆ ಯತ್ನಿಸಿ ಪತಿ ಆತ್ಮಹತ್ಯೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.15. ಪತ್ನಿಯ ಕೊಲೆಗೆತ್ನಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಠಾಣಾ ವ್ಯಾಪ್ತಿಯ ಬೋವಿಕ್ಕಾನದಲ್ಲಿ ನಡೆದಿದೆ. ಮುದಲಪ್ಪಾರೆಯ ಮಣಿ (40) ಆತ್ಮಹತ್ಯೆಗೈದವರು ಎಂದು ಗುರುತಿಸಲಾಗಿದೆ. ಪತ್ನಿ ಸುಗಂಧಿ(35)ಯನ್ನು ಇರಿತದ ಗಾಯಗಳೊಂದಿಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷುಲ್ಲಕ್ಕ ಕಾರಣಕ್ಕಾಗಿ ಮಧ್ಯಾಹ್ನ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಣಿ ಪತ್ನಿ ಸುಗಂಧಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಬಳಿಕ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಪತ್ನಿಯ ಕೊಲೆಗೆ ಯತ್ನಿಸಿ ಪತಿ ಆತ್ಮಹತ್ಯೆ ➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.15. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್. 16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಇನ್ನು ಎಎಪಿ ನಾಯಕ

ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌ Read More »

ರಾಷ್ಟ್ರೀಯ ನ್ಯೂಸ್

ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು

(ನ್ಯೂಸ್ ಕಡಬ) newskadaba.com, ಹೈದರಾಬಾದ್,  ಏ.15. ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗೇಂದ್ರ ಬಾಬು ಮಗಳು ನಿಹಾರಿಕಾ ಡಿವೋರ್ಸ್ ಸುದ್ದಿಗೆ ಇದೀಗ ಸಾಕ್ಷಿ ಸಿಕ್ಕಿದ್ದು, ಈಗ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸದ್ದು ಮಾಡುತ್ತಿದೆ. ನಿಹಾರಿಕಾ ಅವರು ಚೈತನ್ಯ ಅವರನ್ನ 2020ರಲ್ಲಿ ಪ್ರೀತಿಸಿ, ಅದ್ದೂರಿಯಾಗಿ ಮದುವೆಯಾಗಿದ್ದರು. ಈಗ ಮದುವೆಯಾಗಿ ಎರಡೇ ವರ್ಷಕ್ಕೆ ದಾಂಪತ್ಯ ಬದುಕಿಗೆ ಅಂತ್ಯ ಹಾಡಲಿದ್ದಾರೆ. ಇನ್ನು ಡಿವೋರ್ಸ್ ಬಗ್ಗೆ ಮೌನವಾಗಿರುವ ಈ ಜೋಡಿ, ದಾಂಪತ್ಯದಲ್ಲಿ ಬಿರುಕಾಗಿರುವ ಬಗ್ಗೆ ಸುಳಿವು ಸಿಕ್ಕಿದೆ.  ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು

ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು Read More »

ರಾಷ್ಟ್ರೀಯ ನ್ಯೂಸ್

ದೆಹಲಿ ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್. 16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಇನ್ನು ಎಎಪಿ ನಾಯಕ

ದೆಹಲಿ ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌ Read More »

ರಾಷ್ಟ್ರೀಯ ನ್ಯೂಸ್

ಭಾರತದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ

(ನ್ಯೂಸ್ ಕಡಬ)newskadaba.com ಹೈದರಾಬಾದ್, ಏ.14. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇಂದು ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಸಂಬಂಧ ಕೆಸಿಆರ್ ಇತ್ತೀಚೆಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಇಂದು ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾರ್ಯಕ್ರಮಕ್ಕೆ ಏಕೈಕ ಮುಖ್ಯ

ಭಾರತದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ Read More »

ರಾಷ್ಟ್ರೀಯ ನ್ಯೂಸ್

ಏಕಾಏಕಿ ಏರಿಕೆಯತ್ತ ಸಾಗುತ್ತಿದೆ ಕೋವಿಡ್ ➤ ಮುನ್ನೆಚ್ಚರಿಕೆ ಅಗತ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.14. ದೇಶದಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯತ್ತ ಸಾಗುತ್ತಿದೆ. ಭಾರತ ಮಾತ್ರವಲ್ಲ ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಹಲವು ದೇಶಗಳಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳ ಕಾಣುತ್ತಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಮುಂದಿನ 10-12 ದಿನಗಳಲ್ಲಿ ಕೊರೊನಾ ಸೋಂಕು ಮತ್ತಷ್ಟು ತೀವ್ರವಾಗಿ ಹರಡಲಿದೆ. ಹೆಚ್ಚುತ್ತಿರುವ ಪ್ರಕರಣಗಳನ್ನು ನಿಭಾಯಿಸುವುದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ. ಇನ್ನು ನನಗೆ ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟಿದ್ದೇನೆಯೇ ಹೊರತು, ಮಗನಿಗೆ ಅಥವಾ ಇನ್ನಾರಿಗೋ

ಏಕಾಏಕಿ ಏರಿಕೆಯತ್ತ ಸಾಗುತ್ತಿದೆ ಕೋವಿಡ್ ➤ ಮುನ್ನೆಚ್ಚರಿಕೆ ಅಗತ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top