ರಾಷ್ಟ್ರೀಯ ನ್ಯೂಸ್

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್   ➤’ ಉಳಿತಾಯ ಯೋಜನೆ’ಯಲ್ಲಿ ಮಿತಿ ಹೆಚ್ಚಳ,ತಿಂಗಳಿಗೆ 20 ಸಾವಿರ ಲಭ್ಯ! 

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.01 ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ ನೀಡಿದ್ದು, ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮೊತ್ತವನ್ನ ದ್ವಿಗುಣಗೊಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2023ರ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದರು. ಪ್ರಸ್ತುತ ಹಿರಿಯ ನಾಗರಿಕರು ಉಳಿತಾಯ ಯೋಜನೆಯಲ್ಲಿ ಕೇವಲ 15 ಲಕ್ಷ ರೂಪಾಯಿಗಳನ್ನ ಹೂಡಿಕೆ ಮಾಡುವ ಸಾಧ್ಯತೆಯಿದೆ. ಈ ಮಿತಿಯನ್ನ ದ್ವಿಗುಣಗೊಳಿಸುವ ಮೂಲಕ 30 ಲಕ್ಷದವರೆಗೆ ಹೂಡಿಕೆ ಮಾಡಬಹುದು.          

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್   ➤’ ಉಳಿತಾಯ ಯೋಜನೆ’ಯಲ್ಲಿ ಮಿತಿ ಹೆಚ್ಚಳ,ತಿಂಗಳಿಗೆ 20 ಸಾವಿರ ಲಭ್ಯ!  Read More »

ರಾಷ್ಟ್ರೀಯ ನ್ಯೂಸ್

`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 91.50 ರೂ.ಇಳಿಕೆ     

(ನ್ಯೂಸ್ ಕಡಬ)newskadaba.com ನವದೆಹಲಿ, ಏ.01. ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ ಎನ್ನಲಾಗಿದೆ. ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ ಎಂದು ತಿಳಿದುಬಂದಿದೆ. ದೇಶೀಯ LPG ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ ಎನ್ನಲಾಗಿದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ ಗಳ ದರಗಳು ಕಳೆದ

`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 91.50 ರೂ.ಇಳಿಕೆ      Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ  

(ನ್ಯೂಸ್ ಕಡಬ)newskadaba.com ತೆಲಂಗಾಣ​, ಮಾ.31. ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ನೊಂದು ಸಾವಿನ ಹಾದಿ ಹಿಡಿದಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ವರದಿಯಾಗಿದೆ. ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ವಾರಂಗಲ್​ನ ಗುನ್ನೆಪಲ್ಲಿ ಗ್ರಾಮದವಳಾಗಿದ್ದು,  ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ರೆ 5 ವರ್ಷ ಜೈಲು ಶಿಕ್ಷೆ’ ➤ ರೈಲ್ವೇ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ.  

‘ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ರೆ 5 ವರ್ಷ ಜೈಲು ಶಿಕ್ಷೆ’ ➤ ರೈಲ್ವೇ ಇಲಾಖೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಡಚ್ ಪ್ರವಾಸಿಗರಿಗೆ ಚೂರಿ ಇರಿತ..!!   ➤ ಓರ್ವ ಸಿಬ್ಬಂದಿಯನ್ನು ಬಂಧಿಸಿದ ಪೋಲೀಸರು  

(ನ್ಯೂಸ್ ಕಡಬ)Newskadaba.com ಗೋವಾ,ಮಾ.31 ಡಚ್ ಪ್ರವಾಸಿಯೊಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಲ್ಲದೆ, ಪ್ರವಾಸಿಗರಿಗೆ ಸಹಾಯ ಮಾಡಲು ಹೋದ ಇನ್ನೊಬ್ಬ ವ್ಯಕ್ತಿಗೆ ಚೂರಿಯಿಂದ ಇರಿದಿರುವ ಉತ್ತರ ಗೋವಾದ ಪೆರ್ನೆಮ್‌ನಲ್ಲಿರುವ ರೆಸಾರ್ಟ್‌ನ ಸಿಬ್ಬಂದಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಆರೋಪಿಯನ್ನು ಅಭಿಷೇಕ್ ವರ್ಮಾ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಯುರಿಕೋ ಎಂದು ಗುರುತಿಸಲಾಗಿದೆ. “ದೂರುದಾರರ ಬಾಡಿಗೆ ಟೆಂಟ್‌ಗೆ ರೆಸಾರ್ಟ್ ಸಿಬ್ಬಂದಿಯೊಬ್ಬ ಅತಿಕ್ರಮಣ ಮಾಡಿದ್ದಾನೆ, ಡಚ್ ಮಹಿಳೆ ಸಹಾಯಕ್ಕಾಗಿ ಬೊಬ್ಬಿಟ್ಟಾಗ, ಸ್ಥಳೀಯ ವ್ಯಕ್ತಿಯೊಬ್ಬರು ಮಹಿಳೆಯ ರಕ್ಷಣೆಗೆ ಬಂದರು . ಆಗ

ಡಚ್ ಪ್ರವಾಸಿಗರಿಗೆ ಚೂರಿ ಇರಿತ..!!   ➤ ಓರ್ವ ಸಿಬ್ಬಂದಿಯನ್ನು ಬಂಧಿಸಿದ ಪೋಲೀಸರು   Read More »

ರಾಷ್ಟ್ರೀಯ ನ್ಯೂಸ್

ಏರ್ಟ್ಯಾಗ್ ಬಳಸಿ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರ್ಯಾಕ್ ಮಾಡಿದ ವ್ಯಕ್ತಿ ➤ಕಳ್ಳ ಸಿಕ್ಕಿ ಬಿದ್ದದ್ದು ರೋಚಕ ಸ್ಟೋರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.31. ವಿಮಾನ ನಿಲ್ದಾಣದಲ್ಲಿ ತನ್ನ ಸಾಮಾನುಗಳನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಆಪಲ್‌ನ ಏರ್‌ಟ್ಯಾಗ್ ಬಳಸಿ ಸೂಟ್‌ಕೇಸ್ ಅನ್ನು ಟ್ರ್ಯಾಕ್ ಮಾಡಿದಾಗ ವ್ಯಕ್ತಿಯೊಬ್ಬ ಆತನ ಬಟ್ಟೆಗಳನ್ನು ಧರಿಸಿರುವುದನ್ನು ಕಂಡು ಶಾಕ್ ಆಗಿದ್ದಾರೆ. ಜಮೀಲ್ ರೀಡ್  ಎಂಬ ವ್ಯಕ್ತಿ ಲಾಸ್ ಏಂಜಲೀಸ್‌ನಿಂದ ಜಾರ್ಜಿಯಾದ ಅಟ್ಲಾಂಟಾಗೆ ಪ್ರಯಾಣಿಸುತ್ತಿದ್ದಾಗ, ಬ್ಯಾಗೇಜ್ ಕಾರೂಹ್ಸೆಲ್ ನಲ್ಲಿ ತನ್ನ ಬ್ಯಾಗ್‌ ಇಲ್ಲ ಎಂಬುದನ್ನು ಗಮನಿಸಿದರು. ಯಾರೋ ಅದನ್ನು ತೆಗೆದುಕೊಂಡು ಹೋಗಿರಬೇಕು ಎಂದು ಅಂದುಕೊಂಡರು. ಅರ್ಧ ಗಂಟೆ ಕಾದರೂ ಅವರ ಲಗೇಜ್ ಬರಲಿಲ್ಲ. ಅವರ ಪ್ರಕಾರ,

ಏರ್ಟ್ಯಾಗ್ ಬಳಸಿ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರ್ಯಾಕ್ ಮಾಡಿದ ವ್ಯಕ್ತಿ ➤ಕಳ್ಳ ಸಿಕ್ಕಿ ಬಿದ್ದದ್ದು ರೋಚಕ ಸ್ಟೋರಿ Read More »

ರಾಷ್ಟ್ರೀಯ ನ್ಯೂಸ್

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಮಾ.31. ಇಂದೋರ್‌ನ ದೇವಾಲಯವೊಂದರಲ್ಲಿ ಕಡಿದಾದ ಬಾವಿಗೆ ಬಿದ್ದು ಕನಿಷ್ಠ 13 ಜನರು ಮೃತಪಟ್ಟು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಅಲ್ಲದೆ ಓರ್ವ ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. 13 ಮಂದಿಯಲ್ಲಿ 10 ಮಂದಿ ಮಹಿಳೆಯರು, ಇನ್ನೂ ಕೆಲವರು ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಎನ್‌ಡಿಆರ್‌ಎಫ್ ತಂಡ 13 ಮೃತ ದೇಹಗಳನ್ನು ಬಾವಿಯಿಂದ ಹೊರತೆಗೆದಿದೆ.  

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

7.30 ಕೋಟಿ ರೂ ಮೌಲ್ಯದ ಗಾಂಜಾ ವಶ  

(ನ್ಯೂಸ್ ಕಡಬ)newskadaba.com ತ್ರಿಪುರಾ, ಮಾ.31. ತ್ರಿಪುರಾ ಪೊಲೀಸರು ಗುರುವಾರ 7.3 ಕೋಟಿ ಮೌಲ್ಯದ 3,660 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಪವಿಭಾಗೀಯ ಪೊಲೀಸ್ ಅಧಿಕಾರಿ ಕಮಲ್ ದೆಬ್ಬರ್ಮಾ ನೇತೃತ್ವದ ಪೊಲೀಸ್ ತಂಡವು ಉನಕೋಟಿ ಜಿಲ್ಲೆಯ ಪೆಚಾರ್ತಲ್‌ನಲ್ಲಿ ಚೆಕ್ ಗೇಟ್‌ನಲ್ಲಿ ಅಸ್ಸಾಂನಿಂದ ಬಂದ ಹತ್ತು ಚಕ್ರಗಳ ತೈಲ ಟ್ಯಾಂಕರ್ ಅನ್ನು ತಡೆದು 3,660 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.  

7.30 ಕೋಟಿ ರೂ ಮೌಲ್ಯದ ಗಾಂಜಾ ವಶ   Read More »

ರಾಷ್ಟ್ರೀಯ ನ್ಯೂಸ್

ಮುಂಬೈ ಮಹಾನಗರಕ್ಕೆ ಮತ್ತೊಮ್ಮೆ ವರ್ಲ್ಡ್ ಟ್ರೀ ಸಿಟಿ ಪಟ್ಟ

(ನ್ಯೂಸ್ ಕಡಬ)newskadaba.com ಮುಂಬೈ, ಮಾ.31. ಕಾಂಕ್ರೀಟ್ ಕಾಡು ಎಂದೇ ಗುರುತಿಸಿಕೊಂಡಿರುವ ಭಾರತದ ವಾಣಿಜ್ಯ ರಾಜಧಾನಿ ಮುಂಬೈ ಸತತ ಎರಡನೇ ವರ್ಷವೂ ವರ್ಲ್ಡ್ ಟ್ರೀ ಸಿಟಿ 2022 ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ ಎಂದು ಬಿಎಂಸಿ ಅಧಿಕಾರಿ ತಿಳಿಸಿದ್ದಾರೆ. ಆರ್ಬರ್ ಡೇ ಫೌಂಡೇಶನ್ ಮುಖ್ಯ ಕಾರ್ಯನಿರ್ವಾಹಕ ಡಾನ್ ಲ್ಯಾಂಬೆ ಪ್ರಮಾಣಪತ್ರವನ್ನು ಬಿಎಂಸಿ ಅಧಿಕಾರಿಗಳಿಗೆ ನೀಡಿದ್ದಾರೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಪರಿಸರ ವಿಭಾಗ ವಿಶ್ವಾದ್ಯಂತ 35 ಕೋಟಿಗೂ ಅಧಿಕ ಮರಗಳನ್ನು ನೆಟ್ಟಿದ್ದು, 2027ರವೇಳೆಗೆ 50 ಕೋಟಿ ಮರಗಳನ್ನು ಬೆಳೆಸುವ ಗುರಿ

ಮುಂಬೈ ಮಹಾನಗರಕ್ಕೆ ಮತ್ತೊಮ್ಮೆ ವರ್ಲ್ಡ್ ಟ್ರೀ ಸಿಟಿ ಪಟ್ಟ Read More »

ರಾಷ್ಟ್ರೀಯ ನ್ಯೂಸ್

ಮೋದಿ ವಿರುದ್ದ ಪೋಸ್ಟರ್ !!! ➤ 8 ಮಂದಿ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ಮೋದಿ ಹಟಾವೋ, ದೇಶ್ ಬಚಾವೋ ಎಂಬುದಾಗಿ ಅಹ್ಮದಾಬಾದ್‌ನ ವಿವಿಧೆಡೆ ಪೋಸ್ಟರ್ ಹಾಕಿದ ವಿಚಾರವಾಗಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ದ ಆಮ್ ಆದ್ಮಿ ಪಕ್ಷವು ರಾಷ್ಟ್ರ ವ್ಯಾಪಿ ಅಭಿಯಾನ ಆರಂಭಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಸದ್ಯ ಎಂಟು ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಹ್ಮದಾಬಾದ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಮೋದಿ ವಿರುದ್ದ ಪೋಸ್ಟರ್ !!! ➤ 8 ಮಂದಿ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top