ರಾಷ್ಟ್ರೀಯ ನ್ಯೂಸ್

ಐಪಿಎಲ್‌ ನಲ್ಲಿ ಹೊಸ ನಿಯಮ: ➤ ಟಾಸ್‌ ಬಳಿಕ ಅಂತಿಮ ಇಲೆವೆನ್‌ ಆಯ್ಕೆ

(ನ್ಯೂಸ್ ಕಡಬ) News kadaba.com ನವದೆಹಲಿ,ಮಾ.24 ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟಿ20 ಟೂರ್ನಿಯಲ್ಲಿ ಈ ಬಾರಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪಂದ್ಯದ ಟಾಸ್‌ ಆದ ಬಳಿಕ ಅಂತಿಮ ಇಲೆವೆನ್‌ ಆಯ್ಕೆ ಮಾಡುವ ಅವಕಾಶವನ್ನು ತಂಡಗಳಿಗೆ ನೀಡಲಾಗಿದೆ. ‘ಪ್ರತಿ ತಂಡದ ನಾಯಕರು ಆಡುವ 11 ಮಂದಿ ಆಟಗಾರರು ಮತ್ತು ಐವರು ಸಬ್‌ಸ್ಟಿಟ್ಯೂಟ್‌ ಫೀಲ್ಡರ್‌ಗಳ ಹೆಸರನ್ನು ಟಾಸ್‌ ಬಳಿಕ ಮ್ಯಾಚ್‌ ರೆಫರಿಗೆ ನೀಡಬಹುದು’ ಎಂದು ಹೊಸ ನಿಯಮ ಹೇಳಿದೆ. ಟಾಸ್‌ ಬಳಿಕ ಅಂತಿಮ ಹನ್ನೊಂದರ ಬಳಗದಲ್ಲಿ ಏನಾದರೂ ಬದಲಾವಣೆ […]

ಐಪಿಎಲ್‌ ನಲ್ಲಿ ಹೊಸ ನಿಯಮ: ➤ ಟಾಸ್‌ ಬಳಿಕ ಅಂತಿಮ ಇಲೆವೆನ್‌ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ದೃಢ ರಾಜಕೀಯ ಭಾಷಣ ಪ್ರಜಾಪ್ರಭುತ್ವದ ಮೂಲ ತತ್ವ’     ➤ ಪಿ. ಚಿದಂಬರಂ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.24. ಪ್ರತಿಪಕ್ಷಗಳ ಧ್ವನಿ ಅಡಗಿಸಲು ಕಾನೂನನ್ನು ತರುವುದು ಸರಿಯಲ್ಲ. ದೃಢ ರಾಜಕೀಯ ಭಾಷಣ ಪ್ರಜಾಪ್ರಭುತ್ವದ ಮೂಲ ತತ್ವ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಹೇಳಿದ್ದಾರೆ. ‘ಮೋದಿ ಉಪನಾಮ’ ಕುರಿತ ಟೀಕೆ ವಿಚಾರವಾಗಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ತೀರ್ಪು ಪ್ರಕಟವಾದ ಬಳಿಕ ಶುಕ್ರವಾರ ಟ್ವೀಟ್ ಮಾಡಿರುವ ಅವರು, ಪ್ರಜಾಸತ್ತಾತ್ಮಕ ವಿರೋಧದ ಧ್ವನಿ ಸಾಮಾನ್ಯ. ಅದನ್ನು ಅಡಗಿಸಲು ಕಾನೂನನ್ನು ಬಳಸಿಕೊಳ್ಳುವ ಬೆಳವಣಿಗೆ ಸರಿಯಲ್ಲ ಎಂದರು.

‘ದೃಢ ರಾಜಕೀಯ ಭಾಷಣ ಪ್ರಜಾಪ್ರಭುತ್ವದ ಮೂಲ ತತ್ವ’     ➤ ಪಿ. ಚಿದಂಬರಂ Read More »

ರಾಷ್ಟ್ರೀಯ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಮಾ.24.ಲೇಡಿಸ್‌ ಹಾಸ್ಟೆಲ್‌ ಬಳಿ ಆಟೋದಲ್ಲಿ ಬಂದು ಖಾಸಗಿ ಅಂಗ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಮೂನ್ನ ಮೂಡು ವಟಿಯೂರ್ಕಾವಿನ ವಯಲಿಕಾಡದ ಚಂದ್ರಿಕಾ ಭವನದ ನಿವಾಸಿ ರಾತ್ರಿ 11ರ ಸುಮಾರಿಗೆ ಕಾಟನ್‌ ಹಿಲ್‌ ಸ್ಕೂಲ್‌ ಬಳಿಯಿರುವ ಲೇಡಿಸ್‌ ಹಾಸ್ಟೆಲ್‌ ಮುಂದೆ ಆಟೋ ನಿಲ್ಲಿಸಿ ಚಾಲಕ ಖಾಸಗಿ ಅಂಗ ಪ್ರದರ್ಶನ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಮಹಡಿಯಲ್ಲಿ ಓದುತ್ತಿದ್ದ ಮಕ್ಕಳು ಗಮನಿಸಿದ್ದು ಕೂಡಲೇ ಮಕ್ಕಳು ಆಟೋ ರಿಕ್ಷಾದ ನಂಬರ್‌

ಲೇಡಿಸ್ ಹಾಸ್ಟೆಲ್ ಬಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ ➤ ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 24. ದುಬೈ-ಮುಂಬೈ ಇಂಡಿಗೋ ಏರ್‌ಲೈನ್ಸ್’ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಈ ಇಬ್ಬರು ಪ್ರಯಾಣಿಕರು ವಿಮಾನ ಹಾರಾಟದಲ್ಲಿದ್ದ ವೇಳೆ ಗಲಾಟೆ ಸೃಷ್ಟಿಸಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರಿಗೂ ಕಿರಿಕಿರಿಯುಂಟು ಮಾಡಿದ್ದರು. ಏರ್ ಲೈನ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್’ಐಆರ್ ದಾಖಲಿಸಿ ಪಾಲ್ಘರ್ ಜಿಲ್ಲೆಯ ಜಾನ್ ಜಿ ಡಿಸೋಜಾ (49) ಮತ್ತು ಕೊಲ್ಲಾಪುರದ ಮಾನ್ಬೆಟ್ನ ದತ್ತಾತ್ರೇಯ ಬಾಪರ್ಡೇಕರ್ (47) ಎಂಬವರನ್ನು

ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಭೂಪ

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 24. ಕೋರ್ಟ್ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ. ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  

ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಭೂಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2ಗಂಟೆ ತಡವಾಗಿ ಬಂದು 12 ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ ➤ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 23. ಬಹರೇನ್​ನಿಂದ ಮುಂಬೈಗೆ 2 ಗಂಟೆ ತಡವಾಗಿ ಆಗಮಿಸಿದ್ದ ವಿಮಾನವು ಮಂಗಳೂರಿನ ಪ್ರಯಾಣಿಕರನ್ನು ಮುಂಬೈನಲ್ಲಿ ಬಿಟ್ಟು ಹೋದ ಘಟನೆ ವರದಿಯಾಗಿದೆ. ಬಹರೇನ್​ನಿಂದ ಮಂಗಳೂರಿಗೆ ಟಿಕೆಟ್ ಮಾಡಿದ್ದ ಪ್ರಯಾಣಿಕರು, ಮುಂಬೈ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾಗಿದೆ. ಬಹರೇನ್​ನಿಂದ ಮುಂಬೈಗೆ ಮುಂಜಾನೆ 5.30 ಕ್ಕೆ ಲ್ಯಾಂಡ್ ಆಗಬೇಕಿದ್ದ ಇಂಡಿಗೋ ವಿಮಾನವು 7.30 ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದೆ. ಆದರೂ ಮುಂಬೈನಲ್ಲಿ ಕಾಯುತ್ತಿದ್ದ ಮಂಗಳೂರಿನ ಪ್ರಯಾಣಿಕರನ್ನು ಬಿಟ್ಟು ಹೋಗಿದೆ. ಇದರಿಂದ ಮಂಗಳೂರಿಗೆ ಬರಬೇಕಿದ್ದ

2ಗಂಟೆ ತಡವಾಗಿ ಬಂದು 12 ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ ➤ ತೀವ್ರ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ➤ 30 ದಿನಗಳ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 23. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ಸೂರತ್‌ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 2019ರ ಲೋಕಸಭಾ ಚುನಾವಣೆಯ ಸಂದರ್ಭ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಸೂರತ್‌ ಕೋರ್ಟ್‌ ಗುರುವಾರದಂದು ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ರಾಹುಲ್‌ ಪರ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ➤ 30 ದಿನಗಳ ಜಾಮೀನು ಮಂಜೂರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ➤ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 23. ಪ್ರಧಾನಿ ನರೇಂದ್ರ ಮೋದಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ಹೊರಡಿಸಿದೆ. 2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಗುಜರಾತ್ ನ ಸೂರತ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್,

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ➤ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

78,800 ಕೋಟಿ ರೂ.ಗಳ ಬಜೆಟ್‌ ಮಂಡಿಸಿದ ದೆಹಲಿ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.23. ದೆಹಲಿ ಸರ್ಕಾರವು ದೆಹಲಿ ವಿಧಾನಸಭೆಯಲ್ಲಿಂದು 78,800 ಕೋಟಿ ರೂ.ಗಳ ಬಜೆಟ್‌ ಮಂಡಿಸಿದೆ ಎಂದು ತಿಳಿದುಬಂದಿದೆ. ಹಣಕಾಸು ಸಚಿವ ಕೈಲಾಶ್ ಗೆಹ್ಲೋತ್‌ ಅವರು 2023-24ನೇ ಸಾಲಿನ ಬಜೆಟ್ ಮಂಡಿಸಿದರು. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಮೂಲಸೌಕರ್ಯಕ್ಕೆ 22,000, ಶಿಕ್ಷಣಕ್ಕೆ 16 ಸಾವಿರ ಕೋಟಿ, ಆರೋಗ್ಯಕ್ಕೆ 9 ಸಾವಿರ ಕೋಟಿ, ಜಾಹೀರಾತುಗಳಿಗೆ 550 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಂದು ಗೆಹ್ಲೋತ್ ಅವರು ತಿಳಿಸಿದ್ದಾರೆ.

78,800 ಕೋಟಿ ರೂ.ಗಳ ಬಜೆಟ್‌ ಮಂಡಿಸಿದ ದೆಹಲಿ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ, ಇನ್ಫ್ಲುಯೆನ್ಸ್ ಪ್ರಕರಣ ಉಲ್ಬಣ    ➤ ಮಾಸ್ಕ್ ಧರಿಸುವ ಅಗತ್ಯವನ್ನು ಒತ್ತಿ ತಿಳಿಸಿದ ಪ್ರಧಾನಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.23. ದೇಶಾದ್ಯಂತ ಕೊರೊನಾ ಸೋಂಕಿನ ಸ್ಥಿತಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುವ ಅವಶ್ಯಕತೆಯಿದ್ದು, ನೈರ್ಮಲ್ಯ ಮತ್ತು ಜನನಿಬಿಡ ಸ್ಥಳಗಳಲ್ಲಿ ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು, ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಗಳ ಆವರಣದಲ್ಲಿ ಮಾಸ್ಕ್ ಧರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ಭಾರತದಲ್ಲಿ ಕೊರೊನಾ ಮತ್ತು ಇನ್ಫ್ಲುಯೆನ್ಸ ಪ್ರಕರಣಗಳ ಉಲ್ಬಣದ ಬಗ್ಗೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ

ಕೊರೊನಾ, ಇನ್ಫ್ಲುಯೆನ್ಸ್ ಪ್ರಕರಣ ಉಲ್ಬಣ    ➤ ಮಾಸ್ಕ್ ಧರಿಸುವ ಅಗತ್ಯವನ್ನು ಒತ್ತಿ ತಿಳಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್
Scroll to Top