ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್‌ ಮಂಡನೆ ➤ ಗೃಹ ಸಚಿವಾಲಯದಿಂದ ಇಂದು ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ದೆಹಲಿ ಸರ್ಕಾರದ ಬಜೆಟ್ ಮಂಡನೆಗೆ ಕೇಂದ್ರ ಗೃಹ ಸಚಿವಾಲಯವು ಇಂದು ಅನುಮೋದನೆ ನೀಡಿದೆ. ಈ ಕುರಿತು ಲೆಫ್ಟಿನೆಂಟ್ ಗವರ್ನರ್‍ ವಿ.ಕೆ. ಸಕ್ಸೇನಾ ಅವರ ಕಚೇರಿ ಮೂಲಗಳು ಮಾಹಿತಿ ನೀಡಿರುವ ಬಗ್ಗೆ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಸರ್ಕಾರದ ವೈಫಲ್ಯ ಮುಚ್ಚಿಡುವುದಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ವೃಥಾ ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ದೆಹಲಿ ರಾಜ್ಯವಲ್ಲ, ಅದು ಕೇಂದ್ರಾಡಳಿತ ಪ್ರದೇಶ. ಹೀಗಾಗಿ ಭಾರತ ಸರ್ಕಾರದ ಅಂಗವಾಗಿದ್ದು, ಬಜೆಟ್‌ನ್ನು […]

ಕೇಂದ್ರ ಬಜೆಟ್‌ ಮಂಡನೆ ➤ ಗೃಹ ಸಚಿವಾಲಯದಿಂದ ಇಂದು ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಸಂಸತ್ತಿನಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ➤ ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಸಂಸತ್ತಿನಲ್ಲಿ ಮಾತನಾಡುವುದನ್ನು ತಡೆಯುವುದು ಅಸಾಧ್ಯ. ವಾಕ್ ಸ್ವಾತಂತ್ರ್ಯ ಎಂಬುವುದು ಎಲ್ಲರಿಗೂ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಸುದ್ದಿಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಸರ್ಕಾರ ಮಾತುಕತೆಗೆ ಸಿದ್ದವಿದ್ದರೂ, ಪ್ರತಿಪಕ್ಷಗಳು ಬರುತ್ತಿಲ್ಲ. ಸರ್ಕಾರ ಯಾರೊಂದಿಗೆ ಮಾತನಾಡಬೇಕೆಂದಿದೆಯೋ ಅವರು ಮಾಧ್ಯಮಗಳ ಮುಂದೆ ಕುಳಿತು ಮಾತನಾಡುತ್ತಿದ್ದಾರೆ. ಬಳಿಕ ವಾಕ್ ಸ್ವಾತಂತ್ರ್ಯ ಬೇಕೆಂದು ಸಂಸತ್ತಿನಲ್ಲಿ ಘೋಷಣೆ ಕೂಗುತ್ತಾರೆ. ಆದರೆ ಸಂಸತ್ತಿನಲ್ಲಿ ಮಾತನಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ ಎಂದರು.

ಸಂಸತ್ತಿನಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ ➤ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ನಿತಿನ್ ಗಡ್ಕರಿಗೆ ಮತ್ತೆ ಬೆದರಿಕೆ ಕರೆ ➤10 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟ ಅನಾಮಿಕ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 21. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಅನಾಮಿಕ ವ್ಯಕ್ತಿಯಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದಾಗಿ ಮೂಲಗಳು ತಿಳಿಸಿವೆ. ಅವರು ಮಹಾರಾಷ್ಟ್ರದ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ನಾಗ್ಪುರದ ಖಾಮ್ಲಾ ಪ್ರಾಂತ್ಯದಲ್ಲಿ ಅವರು ಸಾರ್ವಜನಿಕ ಸಂಪರ್ಕ ಕಚೇರಿಯನ್ನು ಹೊಂದಿದ್ದಾರೆ. ಕಚೇರಿಗೆ ಕರೆ ಮಾಡಿದ ವ್ಯಕ್ತಿಯೋರ್ವ 10 ಕೋಟಿ ರೂ.ಗಳ ಬೇಡಿಕೆಯಿಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಾಗ್ಪುರ ಪೊಲೀಸರು ಅನಾಮಧೇಯ ವ್ಯಕ್ತಿಯ ಕರೆಯನ್ನು ಟ್ರೇಸ್ ಮಾಡಲು ಮುಂದಾಗಿದ್ದಾರೆ.

ನಿತಿನ್ ಗಡ್ಕರಿಗೆ ಮತ್ತೆ ಬೆದರಿಕೆ ಕರೆ ➤10 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟ ಅನಾಮಿಕ Read More »

ರಾಷ್ಟ್ರೀಯ ನ್ಯೂಸ್
Crime

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಕೆನಡಾ, ಮಾ. 21. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಗಗನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈತನ ಪೇಟವನ್ನು ಕಿತ್ತು  ಕೂದಲು ಹಿಡಿದು ಕಾಲುದಾರಿಯ ಉದ್ದಕ್ಕೂ ದುಷ್ಕರ್ಮಿಗಳ ಗುಂಪು ಎಳೆದಾಡಿ, ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಸರ್ಕಾರಿ ನೌಕರ

(ನ್ಯೂಸ್ ಕಡಬ) newskadaba.com ಭೋಪಾಲ್, ಮಾ. 21. ನೃತ್ಯ ಮಾಡುತ್ತಾ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಮೃತರನ್ನು ಮಧ್ಯಪ್ರದೇಶ ಅಂಚೆ ವೃತ್ತದ ಸಹಾಯಕ ನಿರ್ದೇಶಕ ಟೆಕ್ನಿಕಲ್ ಸುರೇಂದ್ರ ಕುಮಾರ್ ದೀಕ್ಷಿತ್ (55) ಎಂದು ಗುರುತಿಸಲಾಗಿದೆ. ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿಯನ್ನು ಅಂಚೆ ಇಲಾಖೆಯು ಮಾರ್ಚ್ 20 ರಂದು ಮಧ್ಯಪ್ರದೇಶದ ರಾಜದಾನಿ ಭೋಪಾಲ್ ನಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುರೇಂದ್ರ ಕುಮಾರ್ ದೀಕ್ಷಿತ್ ಅವರು ತಮ್ಮ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ವೇಳೆ

ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಸರ್ಕಾರಿ ನೌಕರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ 

(ನ್ಯೂಸ್ ಕಡಬ) newskadaba.com ಬಾಂಗ್ಲದೇಶ, ಮಾ. 21. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ. ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಪರಿಣಾಮ 17 ಜನರು ಮೃತಪಟ್ಟಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಬ್ಯುಲೆನ್ಸ್‌ ನಲ್ಲೇ 10 ನೇ ತರಗತಿ ಬೋರ್ಡ್ ಪರೀಕ್ಷೆ ಬರೆದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 21. ಅಪಘಾತದಿಂದಾಗಿ ಬಾಂದ್ರಾದ 10ನೇ ತರಗತಿ ವಿದ್ಯಾರ್ಥಿನಿ ಆಂಬ್ಯುಲೆನ್ಸ್‌ನಲ್ಲಿ ಬೋರ್ಡ್ ಪರೀಕ್ಷೆ ಬರೆದಿರುವ ಘಟನೆ ನಡೆದಿದೆ. ವಿಜ್ಞಾನ 1 ಪರೀಕ್ಷೆಯನ್ನು ಮುಗಿಸಿ ಅಂಜುಮನ್-ಐ-ಇಸ್ಲಾಂ ಶಾಲೆಯ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ ರಸ್ತೆ ದಾಟುತ್ತಿದ್ದಾಗ ಹಿಲ್ ರೋಡ್‌ನ ಸೇಂಟ್ ಜೋಸೆಫ್ ಕಾನ್ವೆಂಟ್ ಬಳಿ ಕಾರು ಢಿಕ್ಕಿ ಹೊಡೆದು ಆಕೆಯ ಎಡ ಪಾದಕ್ಕೆ ಗಂಭೀರವಾದ ಗಾಯಗಳಾಗಿದ್ದು, ಅದೇ ದಿನ ಆಕೆಗೆ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು.

ಆಂಬ್ಯುಲೆನ್ಸ್‌ ನಲ್ಲೇ 10 ನೇ ತರಗತಿ ಬೋರ್ಡ್ ಪರೀಕ್ಷೆ ಬರೆದ ವಿದ್ಯಾರ್ಥಿನಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಭೇಟಿ ವೇಳೆ ಭದ್ರತಾ ವೈಫಲ್ಯ➤ ಪೊಲೀಸರ ವಿರುದ್ದ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಪಂಜಾಬ್, ಮಾ. 21.  ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ಸಂದರ್ಭದಲ್ಲಿ ಏರ್ಪಟ್ಟ ಅತಿದೊಡ್ಡ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಂಜಾಬ್‌ನ ಮಾಜಿ ಡಿಜಿಪಿ ಸಹಿತ ಹಲವು ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಸೂಚನೆ ನೀಡಿದ್ದಾರೆ.   2022ರ ಜನವರಿಯಲ್ಲಿ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದ ವೇಳೆ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಡಿಜಿಪಿ ಸಿದ್ದಾರ್ಥ್

ಪ್ರಧಾನಿ ಭೇಟಿ ವೇಳೆ ಭದ್ರತಾ ವೈಫಲ್ಯ➤ ಪೊಲೀಸರ ವಿರುದ್ದ ಶಿಸ್ತುಕ್ರಮ Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಬಂಧಿಸಿದ NIA ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಕಾಶ್ಮೀರ ಮೂಲದ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ಎನ್ಐಎಯಲ್ಲಿ ದಾಖಲಾದ ಎಫ್ಐಆರ್ ಸಂಖ್ಯೆ ಆರ್ಸಿ -37/2020 ಗೆ ಸಂಬಂಧಿಸಿದಂತೆ ಮೆಹ್ರಾಜ್ ಅವರನ್ನು ಎನ್ಐಎ ವಿಚಾರಣೆಗಾಗಿ ಬಂಧಿಸಿದೆ.

ಖ್ಯಾತ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಬಂಧಿಸಿದ NIA ಅಧಿಕಾರಿಗಳು Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರದ ಸಾಲ 155 ಲಕ್ಷ ಕೋಟಿ ➤ ನಿರ್ಮಲಾ ಸೀತಾರಾಮನ್‌

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೆ (2023ರ ಮಾರ್ಚ್‌ 31) ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತವು ₹ 155.8 ಲಕ್ಷ ಕೋಟಿ (ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇಕಡ 57.3ರಷ್ಟು ) ಅಂದಾಜು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಗೆ ತಿಳಿಸಿದ್ದಾರೆ. ಒಟ್ಟು ಸಾಲದ ಮೊತ್ತದಲ್ಲಿ ವಿದೇಶಿ ಸಾಲದ ಮೊತ್ತವು ಸದ್ಯ ಇರುವ ವಿನಿಮಯ ದರದ ಆಧಾರದಲ್ಲಿ ₹ 7.03 ಲಕ್ಷ ಕೋಟಿ

ಕೇಂದ್ರ ಸರ್ಕಾರದ ಸಾಲ 155 ಲಕ್ಷ ಕೋಟಿ ➤ ನಿರ್ಮಲಾ ಸೀತಾರಾಮನ್‌ Read More »

ರಾಷ್ಟ್ರೀಯ ನ್ಯೂಸ್
Scroll to Top