ರಾಷ್ಟ್ರೀಯ ನ್ಯೂಸ್

ಮುಂಬೈ, ಪುಣೆ, ನಗರಗಳಲ್ಲಿ ಗುಡುಗು ಸಹಿತ ಮಳೆ       ➤  ರಾಜ್ಯಕ್ಕೂ ತಟ್ಟುತ್ತ ಎಫೆಕ್ಟ್‌; ಹವಾಮಾನ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.07. ಮುಂಬೈ, ಪುಣೆ ಮತ್ತು ಅಹ್ಮದ್‌ನಗರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆಯ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಹಗುರವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ. ಮಾರ್ಚ್ 7 ರಂದು ಬೆಳಿಗ್ಗೆ 9 ಗಂಟೆಗೆ, IMD ಮುಂಬೈ ಎಚ್ಚರಿಕೆಯನ್ನು ನೀಡಿದ್ದು, ‘ಗುಡುಗು ಸಹಿತ ಮಿಂಚು ಮತ್ತು […]

ಮುಂಬೈ, ಪುಣೆ, ನಗರಗಳಲ್ಲಿ ಗುಡುಗು ಸಹಿತ ಮಳೆ       ➤  ರಾಜ್ಯಕ್ಕೂ ತಟ್ಟುತ್ತ ಎಫೆಕ್ಟ್‌; ಹವಾಮಾನ ಮುನ್ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಕೀಟ ಕಚ್ಚಿ 8ನೇ ತರಗತಿ ವಿದ್ಯಾರ್ಥಿನಿ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಪತ್ತನಂತಿಟ್ಟ, ಮಾ.07. ವಿಷಪೂರಿತ ಕೀಟ ಕಚ್ಚಿ ಪುಟ್ಟ ಬಾಲಕಿ ಮೃತ ಪಟ್ಟಿರುವ ದಾರುಣ ಘಟನೆ ಕೇರಳದ ಪತ್ತನಂತಿಟ್ಟದ ತಿರುವಲ್ಲಾದಲ್ಲಿ ನಡೆದಿದೆ. ಪೆರಿಂಗಾರ ಕೊಚಾರಿಮುಕ್ಕಂನ ಪನಾರ ಮನೆ ನಿವಾಸಿ ಅನೀಶ್ ಮತ್ತು ಶಾಂತಿ ಕೃಷ್ಣನ್ ದಂಪತಿಯ ಪುತ್ರಿ ಅಂಜಿತಾ ಅನೀಶ್ ಮೃತಪಟ್ಟ ಬಾಲಕಿ. ಮಾ.5ರಂದು ಸಂಜೆ ಮನೆಯ ಸಮೀಪದ ಹೊಲದಲ್ಲಿ ಸ್ನೇಹಿತೆಯರೊಂದಿಗೆ ಆಟವಾಡುತ್ತಿದ್ದಾಗ ಕಿವಿಯ ಕೆಳಗೆ ಕೀಟವೊಂದು ಕಚ್ಚಿದೆ. ನೊಣದಂತಹ ಜೀವಿ ಕಚ್ಚಿರುವುದಾಗಿ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಕೀಟ ಕಚ್ಚಿದ 30 ನಿಮಿಷದಲ್ಲಿ ಬಾಲಕಿಯ ಇಡೀ

ಕೀಟ ಕಚ್ಚಿ 8ನೇ ತರಗತಿ ವಿದ್ಯಾರ್ಥಿನಿ ದಾರುಣ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಬಂಟ್ವಾಳ 81ರ ವೃದ್ಧನನ್ನು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್

ನ್ಯೂಸ್ ಕಡಬ) newskadaba.com. ಬಂಟ್ವಾಳ ಮಾ 7.   ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಈ 81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ಕೋರ್ಟ್ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆಯೊಂದು ವರದಿಯಾಗಿದೆ. ಇನ್ನು ಐತಪ್ಪ ನಾಯ್ಕ ಅವರದ್ದು ಕಡು ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದ ಹಿನ್ನೆಲೆಯಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಂಟ್ವಾಳದ ಕೋರ್ಟ್ ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು

➤ ಬಂಟ್ವಾಳ 81ರ ವೃದ್ಧನನ್ನು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

➤ ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com. ದೆಹಲಿ, ಮಾ 7.   ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್  ಅವರನ್ನು ಪ್ರಶ್ನಿಸಲು ಅವರ ಪುತ್ರಿ ಮಿಸಾ ಭಾರತಿ ಅವರ ಮನೆಗೆ ಇಂದು ಸಿಬಿಐ ದಾಳಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಅವರ ಪತ್ನಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮನೆಯ ಮೇಲೆ  ದಾಳಿ ನಡೆಸಿತ್ತು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿತ್ತು.

➤ ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸತತ 2ನೇ ಬಾರಿಗೆ ಮೇಘಾಲಯದ ಸಿಎಂ ಆಗಿ ಸಂಗ್ಮಾ ಕಾನ್ರಾಡ್ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಶಿಲ್ಲಾಂಗ್, ಮಾ. 07. ಸತತ ಎರಡನೇ ಬಾರಿಗೆ ಮೇಘಾಲಯದ ಮುಖ್ಯಮಂತ್ರಿಯಾಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್ ಶಿಲ್ಲಾಂಗ್‌ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು. ಎನ್‌ಸಿಪಿಯ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಬಿಜೆಪಿಯ ಅಲೆಕ್ಸಾಂಡರ್ ಲಾಲೂ ಹೆಕ್ ಸೇರಿದಂತೆ 12 ಮಂದಿಯನ್ನೊಳಗೊಂಡ ಸಚಿವ ಸಂಪುಟದ ಸದಸ್ಯರಿಗೆ ಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್

ಸತತ 2ನೇ ಬಾರಿಗೆ ಮೇಘಾಲಯದ ಸಿಎಂ ಆಗಿ ಸಂಗ್ಮಾ ಕಾನ್ರಾಡ್ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ತಂತಿ ತುಳಿದು 3 ಕಾಡಾನೆಗಳು ಮೃತ್ಯು

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 07.  ವಿದ್ಯುತ್ ಬೇಲಿ ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೂರು ಆನೆಗಳು ಮೃತಪಟ್ಟ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮಾರಂಡಹಳ್ಳಿ ಎಂಬಲ್ಲಿ ನಡೆದಿದೆ. ಘಟನೆಯ ಬಳಿಕ ಕಾನೂನುಬಾಹಿರ ಬೇಲಿ ಬಳಸಿದಕ್ಕಾಗಿ ಮುರುಗೇಶನ್ ಎಂಬಾತನನ್ನು ಬಂಧಿಸಲಾಗಿದ್ದು, ಕಾಡುಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ಬೇಲಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ವಿದ್ಯುತ್ ತಂತಿ ತುಳಿದು 3 ಕಾಡಾನೆಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಕಲಿ ಎನ್‌ ಕೌಂಟರ್‌…!      ➤  ಒಂಬತ್ತು ಪೊಲೀಸರಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com ಗಾಜಿಯಾಬಾದ್‌, ಮಾ.07. 16 ವರ್ಷಗಳ ಹಿಂದೆ ಉತ್ತರ ಪ್ರದೇಶದ ಇಟಾಹ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್‌ ವಿಶೇಷ ಸಿಬಿಐ ಕೋರ್ಟ್ ಅಂದಿನ ಪೊಲೀಸ್ ಠಾಣಾಧಿಕಾರಿ ಸೇರಿದಂತೆ ಒಂಬತ್ತು ಪೊಲೀಸರು ತಪ್ಪಿತಸ್ಥರು ಎಂದು ಮಂಗಳವಾರ ತೀರ್ಪು ನೀಡಿದೆ. ಮಾಜಿ ಠಾಣಾಧಿಕಾರಿ ಪವನ್ ಸಿಂಗ್, ಪಾಲ್ ಸಿಂಗ್ ತೇನ್ವಾ, ರಾಜೇಂದ್ರ ಪ್ರಸಾದ್, ಸರ್ನಾಮ್ ಸಿಂಗ್ ಮತ್ತು ಮೊಹ್ಕಮ್ ಸಿಂಗ್ ಸೇರಿದಂತೆ ಎಲ್ಲಾ ಒಂಬತ್ತು ಅಪರಾಧಿಗಳಿಗೆ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಲ್ಲದೆ

ನಕಲಿ ಎನ್‌ ಕೌಂಟರ್‌…!      ➤  ಒಂಬತ್ತು ಪೊಲೀಸರಿಗೆ ಜೀವಾವಧಿ ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

10ನೇ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಪರಾರಿ      ➤  ಪ್ರಕರಣ ದಾಖಲು.!

(ನ್ಯೂಸ್ ಕಡಬ)newskadaba.com ಹೈದರಾಬಾದ್, ಮಾ.07. ಶಾಲಾ ಬಾಲಕನೊಂದಿಗೆ ಶಿಕ್ಷಕಿ ಪರಾರಿಯಾದ ಘಟ‌ನೆ ಚಂದಾನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಫೆ.16 ರಂದು 26 ವರ್ಷದ ಶಿಕ್ಷಕಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಇಬ್ಬರೂ ನಾಪತ್ತೆಯಾಗಿದ್ದರು. ತನಿಖೆ ವೇಳೆ ವಿದ್ಯಾರ್ಥಿ ಜೊತೆಗಿನ ಶಿಕ್ಷಕಿಯ ಪ್ರೇಮ ಪ್ರಕರಣ ಬಯಲಾಗಿದೆ. ಈ ಬಗ್ಗೆ ಬಾಲಕನ ಪೋಷಕರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ. ಶಿಕ್ಷಕಿಯ ಅಜ್ಜಿ ಚಂದಾನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ‌.    

10ನೇ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಪರಾರಿ      ➤  ಪ್ರಕರಣ ದಾಖಲು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com. ಭುವನೇಶ್ವರ ಮಾ 06.  ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಖುರ್ದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಕಟಾರಿಯಾ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುರ್ದಾ ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಆರೋಗ್ಯ

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಲೆ ಕುಸಿತ ➤ಈರುಳ್ಳಿಗೆ ಬೆಂಕಿ ಹಚ್ಚಿದ ರೈತ

(ನ್ಯೂಸ್ ಕಡಬ) newskadaba.com. ನಾಸಿಕ್, ಮಾ 06.  ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ಸರ್ಕಾರದ ನೀತಿಗಳನ್ನು ವಿರೋಧಿಸಿ ಈರುಳ್ಳಿ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಸಿಕ್‌ನ ಏಷ್ಯಾದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಾಸಲ್‌ಗಾಂವ್‌ನಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಕುಸಿದಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಲೆ ಕುಸಿತ ➤ಈರುಳ್ಳಿಗೆ ಬೆಂಕಿ ಹಚ್ಚಿದ ರೈತ Read More »

ರಾಷ್ಟ್ರೀಯ ನ್ಯೂಸ್
Scroll to Top