ರಾಷ್ಟ್ರೀಯ ನ್ಯೂಸ್

ಟ್ರಕ್‌ನಲ್ಲಿ 18 ಮೃತದೇಹಗಳು ಪತ್ತೆ

(ನ್ಯೂಸ್ ಕಡಬ)newskadaba.com  ಬಲ್ಗೇರಿಯಾ, ಫೆ.18. ರಾಜಧಾನಿ ಸೋಫಿಯಾದ ಹೊರವಲಯದಲ್ಲಿ ಶವಗಳಿದ್ದ ಟ್ರಕ್ ಅನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಟ್ರಕ್‌ನಲ್ಲಿ ಸುಮಾರು 40 ವಲಸಿಗರು ಪ್ರಯಾಣಿಸುತ್ತಿದ್ದರು. ಟ್ರಕ್ ನಲ್ಲಿದ್ದ 40 ಜನರಲ್ಲಿ 18 ಜನರು ಆಹಾರ/ ಆಮ್ಲಜನಕವಿಲ್ಲದೆ ಪ್ರಾಣ ಕಳೆದುಕೊಂಡಿದ್ದಾರೆ. ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಬದುಕುಳಿದವರ ಸ್ಥಿತಿಯೂ ಗಂಭೀರವಾಗಿದ್ದು, ತುರ್ತು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ಟ್ರಕ್‌ನಲ್ಲಿ 18 ಮೃತದೇಹಗಳು ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಕಾರು-ಲಾರಿ ಮುಖಾಮುಖಿ ಢಿಕ್ಕಿ ➤ಸ್ಥಳದಲ್ಲೇ ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com ಸೈದಾಪುರ, ಫೆ.18 :ಪಟ್ಟಣದ ಹೊರವಲಯದ ಕರಿಬೆಟ್ಟ ಕ್ರಾಸ್ ಹತ್ತಿರದ ಬೀದರ-ಗುತ್ತಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಲಾರಿ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ನೆರೆಯ ಆಂಧ್ರಪ್ರದೇಶದ ಆಧೋನಿಯಿಂದ ಕಲಬುರಗಿ ಕಡೆ ಬರುತ್ತಿದ್ದ ಕಾರು, ಯಾದಗಿರಿ ಕಡೆಯಿಂದ ರಾಯಚುರು ಮಾರ್ಗವಾಗಿ ಹೊಗುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಇದರಲ್ಲಿ ಆಧೋನಿ ಮೂಲದ ಜ್ಞಾನೇಶ್ವರ ಸಿಂಗಾಡೆ(36) ಕಾರು ಚಾಲಕ ಸೈಫುಲ್ಲಾ ಲಾಲಮಟ್ಟಿ(27)ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾರಿ

ಕಾರು-ಲಾರಿ ಮುಖಾಮುಖಿ ಢಿಕ್ಕಿ ➤ಸ್ಥಳದಲ್ಲೇ ಇಬ್ಬರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಭಾರತಕ್ಕೆ ಬಂದ 12 ಚೀತಾಗಳು       ➤ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಅತಿಥಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.18. ಭಾರತಕ್ಕೆ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಆಗಮಿಸಿವೆ. ನಮೀಬಿಯಾದಿಂದ 8 ಚೀತಾಗಳನ್ನು ಸಾಗಿಸಿದ 5 ತಿಂಗಳುಗಳ ನಂತರ  ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಮಧ್ಯ ಪ್ರದೇಶಕ್ಕೆ ಅಗಮಿಸಿವೆ. ಚೀತಾಳನ್ನು ಹೊತ್ತಿದ್ದ ವಾಯುಪಡೆಯ ವಿಮಾನವೊಂದು ಗ್ವಾಲಿಯರ್ ವಾಯುನೆಲೆಗೆ ಬೆಳಗ್ಗೆ 10 ಗಂಟೆಗೆ ಬಂದಿಳಿಯಿತು. ಬಳಿಕ ಆ ಚೀತಾಗಳನ್ನು ಹೆಲಿಕಾಪ್ಟರ್‌ಗಳ ಮೂಲಕ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದೆ.  

ಮತ್ತೆ ಭಾರತಕ್ಕೆ ಬಂದ 12 ಚೀತಾಗಳು       ➤ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಅತಿಥಿಗಳು Read More »

ರಾಷ್ಟ್ರೀಯ ನ್ಯೂಸ್

ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್..!  

(ನ್ಯೂಸ್ ಕಡಬ)newskadaba.com ದೆಹಲಿ, ಫೆ.18. ಡಾಬಾದ ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಪೋಟಕ ಸಂಗತಿ ಬಯಲಾಗಿದೆ. ನಿಕ್ಕಿ ಯಾದವ್ ಜೊತೆ ಸಾಹಿಲ್ ಗೆಹ್ಲೋಟ್ 2020ರಲ್ಲಿ ನೋಯ್ಡಾದ ಆರ್ಯ ಸಮಾಜದಲ್ಲಿ ವಿವಾಹವಾಗಿರುವುದು ಈಗ ಬಹಿರಂಗವಾಗಿದ್ದು, ಪೊಲೀಸರು ಇವರಿಬ್ಬರ ಮದುವೆ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ. ನಿಕ್ಕಿ ಯಾದವ್ ಗಳನ್ನು ಪ್ರೀತಿಸುತ್ತಿದ್ದ ಸಾಹಿಲ್ ಗೆಹ್ಲೋಟ್ ಆಕೆಯ ಜೊತೆ ಲಿವ್ ಇನ್ ಸಂಬಂಧದಲ್ಲಿ ಇದ್ದಾನೆಂದೇ ಈವರೆಗೆ ಭಾವಿಸಲಾಗಿತ್ತು. ಆದರೆ ಇವರಿಬ್ಬರೂ 2020 ರಲ್ಲಿಯೇ ಮದುವೆಯಾಗಿದ್ದು, ಈ

ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್..!   Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಪರ್ವತಾರೋಹಿ ಮೃತದೇಹ ಬರೋಬ್ಬರಿ 50 ವರ್ಷಗಳ ಬಳಿಕ ಪತ್ತೆ..!       

(ನ್ಯೂಸ್ ಕಡಬ)newskadaba.com ಸ್ವಿಜರ್ಲ್ಯಾಂಡ್, ಫೆ.18. ಪರ್ವತ ಏರಲು ತೆರಳಿ ನಾಪತ್ತೆಯಾಗಿದ್ದ ಬ್ರಿಟಿಷ್ ಪರ್ವತಾರೋಹಿ ಒಬ್ಬರ ಮೃತದೇಹ ಬರೋಬ್ಬರಿ ಐವತ್ತು ವರ್ಷಗಳ ಬಳಿಕ ಪತ್ತೆಯಾಗಿದೆ. ಈತ 1974ರ ಡಿಸೆಂಬರ್ 31 ರಂದು ನಾಪತ್ತೆಯಾಗಿದ್ದ ಎಂದು ಮೂಲಗಳು ಹೇಳಿವೆ. ಪರ್ವತಾರೋಹಣ ವೇಳೆ 32 ವರ್ಷ ವಯಸ್ಸಿನವರಾಗಿದ್ದ ಈ ವ್ಯಕ್ತಿ ಬಳಿಕ ನಾಪತ್ತೆಯಾಗಿದ್ದರು. ಈತನ ಮೃತ ದೇಹ 2022ರ ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ ಎನ್ನಲಾಗಿದೆ. ಪರ್ವತಾರೋಹಿಯ ವಯಸ್ಸು (ಆಗಿನ ಸಂದರ್ಭದಲ್ಲಿ) ಹಾಗೂ ರಾಷ್ಟ್ರೀಯತೆಯನ್ನು ಮಾತ್ರ ಪೊಲೀಸರು ಬಹಿರಂಗಪಡಿಸಿದ್ದಾರೆ. 1925 ರಿಂದ

ನಾಪತ್ತೆಯಾಗಿದ್ದ ಪರ್ವತಾರೋಹಿ ಮೃತದೇಹ ಬರೋಬ್ಬರಿ 50 ವರ್ಷಗಳ ಬಳಿಕ ಪತ್ತೆ..!        Read More »

ರಾಷ್ಟ್ರೀಯ ನ್ಯೂಸ್

ಬಿಬಿಸಿ ಆದಾಯಕ್ಕೆ ತಕ್ಕ ತೆರಿಗೆ ಪಾವತಿಸಿಲ್ಲ ➤ ಆದಾಯ ತೆರಿಗೆ ಇಲಾಖೆ ಆರೋಪ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.18. ಪ್ರಮುಖ ಅಂತರರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ದಾಖಲೆಗಳ ‘ಪರಿಶೀಲನೆ’ ಸಂದರ್ಭದಲ್ಲಿ, ಸಂಸ್ಥೆಯು ತೆರಿಗೆ ಪಾವತಿಸದಿರುವುದು ಹಾಗೂ ಬಹಿರಂಗಪಡಿಸದ ಆದಾಯ ಹೊಂದಿರುವ ಕುರಿತು ಸಾಕ್ಷ್ಯಗಳು ಲಭ್ಯವಾಗಿವೆ’ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಹೇಳಿದೆ. ದೆಹಲಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಸತತ 60 ಗಂಟೆಗಳಷ್ಟು ‘ಪರಿಶೀಲನೆ’ ನಡೆಸಿದ್ದರು. ಈ ‘ಪರಿಶೀಲನೆ’ ಬಳಿಕ ಮಂಡಳಿಯು ಮೊದಲ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಆದರೆ, ಈ ಹೇಳಿಕೆಯಲ್ಲಿ ಬಿಬಿಸಿ ಹೆಸರನ್ನು

ಬಿಬಿಸಿ ಆದಾಯಕ್ಕೆ ತಕ್ಕ ತೆರಿಗೆ ಪಾವತಿಸಿಲ್ಲ ➤ ಆದಾಯ ತೆರಿಗೆ ಇಲಾಖೆ ಆರೋಪ Read More »

ರಾಷ್ಟ್ರೀಯ ನ್ಯೂಸ್

ಚೀನ ಉದ್ಯಮಿ ಬಾವೋ ಫಾನ್‌ ನಾಪತ್ತೆ

(ನ್ಯೂಸ್ ಕಡಬ)newskadaba.com ಬೀಜಿಂಗ್‌, ಫೆ. 18.  ಚೀನದ ಪ್ರಮುಖ ಉದ್ಯಮಿ ಮತ್ತು ಚೀನ ರೆನೇಸಾನ್ಸ್‌ ಹೋಲ್ಡಿಂಗ್ಸ್‌ ನ ಸಿಇಒ ಬಾವೋ ಫಾನ್‌ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಅವರು ಎಷ್ಟು ದಿನಗಳಿಂದ ಸಂಪರ್ಕಕ್ಕೆ ಲಭ್ಯರಾಗಿಲ್ಲ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಅವರ ಕಚೇರಿಯ ಅಧಿಕಾರಿಗಳ ಪ್ರಕಾರ 2 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದರಿಂದಾಗಿ ಅವರ ಕಂಪನಿಯ ಷೇರುಗಳು ಕುಸಿದಿವೆ. ದೊಡ್ಡ ಉದ್ದಿಮೆಗಳು, ಟೆಕ್‌ ಕಂಪನಿಗಳ ವಿರುದ್ಧ ಚೀನಾ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದ ಬಳಿಕ

ಚೀನ ಉದ್ಯಮಿ ಬಾವೋ ಫಾನ್‌ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ ➤4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಫೆ.18. ಶಾಲೆಯೊಂದರಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ತುಂಡುಗಳನ್ನು ವಿದ್ಯಾರ್ಥಿಗಳಿಗೆ ಹಾಕಿಲ್ಲ. ಕೋಳಿಯ ಎಲ್ಲಾ ಉತ್ತಮ ಭಾಗಗಳನ್ನು ತಮಗಾಗಿ ಶಿಕ್ಷಕರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಾಲ್ಡಾ ಜಿಲ್ಲೆಯ ಇಂಗ್ಲಿಷ್‌ ಬಜಾರ್ ಪ್ರದೇಶದ ಅಮೃತಿ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ. ಶಿಕ್ಷಕರ ವಿರುದ್ಧ ಕೋಪಗೊಂಡ ಪೋಷಕರು ಅವರನ್ನು ಕೊಠಡಿಯಲ್ಲಿ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪೋಷಕರ ಆರೋಪದ ಮೇರೆಗೆ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಶಿಕ್ಷಕರು ಕೋಳಿ ಮಾಂಸದಿಂದ ಎಲ್ಲಾ ಕಾಲಿನ ತುಂಡುಗಳು ಮತ್ತು

ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ ➤4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು Read More »

ರಾಷ್ಟ್ರೀಯ ನ್ಯೂಸ್

ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು     ➤ ಓರ್ವ ಮಹಿಳೆ ಮತ್ತು ಕಂದಮ್ಮ ಮೃತ್ಯು…!!!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಫೆ.18. ಮಧ್ಯಪ್ರದೇಶದಲ್ಲಿ ಶಿವರಾತ್ರಿ ಅಂಗವಾಗಿ ರುದ್ರಾಕ್ಷಿ ವಿತರಿಸಲು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾದ ಪರಿಣಾಮ ಅಸ್ವಸ್ಥಗೊಂಡು ಓರ್ವ ಮಹಿಳೆ ಹಾಗೂ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಶೆಹೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕುಬರೇಶ್ವರ್ ಧಾಮ್ ನಲ್ಲಿ ಪಂಡಿತ್ ಪ್ರದೀಪ್ ಮಿಶ್ರಾ ರುದ್ರಾಕ್ಷಿ ವಿತರಣೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಎರಡು ಲಕ್ಷ ಜನರು ಆಗಮಿಸಬಹುದೆಂಬ ನಿರೀಕ್ಷೆಯಿದ್ದು ಆದರೆ ಇದನ್ನು ಮೀರಿ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು.

ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು     ➤ ಓರ್ವ ಮಹಿಳೆ ಮತ್ತು ಕಂದಮ್ಮ ಮೃತ್ಯು…!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ.17. ಪಾರ್ಟಿಯಲ್ಲಿ ನೃತ್ಯ ಮಾಡಲು ಬಂದಿದ್ದ ಯುವತಿಯನ್ನು ಆರು ಮಂದಿಯಿದ್ದ ಗುಂಪು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಂಭವಿಸಿದೆ. ಉನ್ನಾವೋ ಪ್ರಾಂತ್ಯದ ಪ್ರಾಪರ್ಟಿ ಡೀಲರ್ ಒಬ್ಬರ ಹುಟ್ಟುಹಬ್ಬವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ನೃತ್ಯ ಮಾಡಲು ಮೂವರು ಯುವತಿಯರನ್ನು ಕರೆಯಿಸಲಾಗಿತ್ತು ಎಂದು ವರದಿಯಾಗಿದೆ.

ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top