ರಾಷ್ಟ್ರೀಯ ನ್ಯೂಸ್

ಟ್ರಕ್ ಮತ್ತು ಜೀಪ್ ನಡುವೆ ರಸ್ತೆ ಅಪಘಾತ ➤ಏಳು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಪಟಾನ್, ಫೆ.16. ಗುಜರಾತ್‌ನ ಪಟಾನ್ ಜಿಲ್ಲೆಯ ವರಾಹಿ ಬಳಿ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಅಪಘಾತ ಸಂಭವಿಸಿದೆ, ರಾತ್ರಿಯಿಡಿ ತನಿಖೆ ನಡೆಸಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೀಪ್ ಸುಮಾರು 18 ಜನರನ್ನು ಹೊತ್ತೊಯ್ದಿತ್ತು, ಅದರಲ್ಲಿ 11 ಮಂದಿ ಗಾಯಗೊಂಡಿದ್ದರು, ಐವರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇಬ್ಬರು ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ ಎಂದು ಎಫ್ ಐ […]

ಟ್ರಕ್ ಮತ್ತು ಜೀಪ್ ನಡುವೆ ರಸ್ತೆ ಅಪಘಾತ ➤ಏಳು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ರೈಲಿನ ಚಕ್ರಕ್ಕೆ ಹೊತ್ತಿಕೊಂಡ ಬೆಂಕಿ   ➤ಅದೃಷ್ಟವಶಾತ್ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಥಾಣೆ, ಫೆ.16. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಸಂಗಾವ್ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಚಾಲನೆಯಲ್ಲಿರುವ ಲೋಕಲ್ ರೈಲಿನ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ. ಮುಂಬೈನಿಂದ ಸುಮಾರು 70 ಕಿಮೀ ದೂರದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಪ್ರಯಾಣಿಕನೊಬ್ಬ ನಿಂತಿದ್ದ ರೈಲಿನಿಂದ ಜಿಗಿದಿರುವುದು ಕಂಡುಬಂದಿದೆ. “ಬ್ರೇಕ್ ಬೈಂಡಿಂಗ್” ನಿಂದಾಗಿ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ರೈಲಿನ ಚಕ್ರಕ್ಕೆ ಹೊತ್ತಿಕೊಂಡ ಬೆಂಕಿ   ➤ಅದೃಷ್ಟವಶಾತ್ ಪ್ರಯಾಣಿಕರು ಪಾರು Read More »

ರಾಷ್ಟ್ರೀಯ ನ್ಯೂಸ್

ಭಾರತ-ಪಾಕ್‌ ಗಡಿಯಲ್ಲಿ ನಿರ್ಮಾಣವಾಗಲಿದೆ ಛತ್ರಪತಿ ಶಿವಾಜಿ ಪ್ರತಿಮೆ !

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.16. ಭಾರತ ಹಾಗೂ ಪಾಕಿಸ್ತಾನದ ನಡುವಿನ ಎಲ್‌ಓಸಿಯಲ್ಲಿ ಛತ್ರಪತಿ ಶಿವಾಜಿಯ ಭವ್ಯ ಪ್ರತಿಮೆಯನ್ನು ಸ್ಥಾಪನೆ ಮಾಡುವುದಾಗಿ ‘ಅಮೀ ಪುಣೇಕರ್‌’ ಎನ್‌ಜಿಓ ಘೋಷಣೆ ಮಾಡಿದೆ. 2023ರ ಫೆಬ್ರವರಿ 14 ರಂದು ಎನ್‌ಜಿಓ ಈ ಪ್ರಕಟಣೆಯನ್ನು ನೀಡಿದ್ದು ಎಲ್‌ಓಸಿಯ ಎರಡು ಕಡೆ ಶಿವಾಜಿಯ ಪ್ರತಿಮೆಯನ್ನು ನಿರ್ಮಾಣ ಮಾಡುವುದಾಗಿ ಹೇಳಿದೆ. ಶತ್ರುಗಳ ವಿರುದ್ಧ ಹೋರಾಡುವ ಸೈನಿಕರು ಪ್ರತಿನಿತ್ಯ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ನೋಡುವ ಮೂಲಕ ಅವರ ಆದರ್ಶ ಮತ್ತು ನೈತಿಕ ಮೌಲ್ಯಗಳಿಂದ ಪ್ರೇರಣೆ ಪಡೆಯುತ್ತಾರೆ ಮತ್ತು

ಭಾರತ-ಪಾಕ್‌ ಗಡಿಯಲ್ಲಿ ನಿರ್ಮಾಣವಾಗಲಿದೆ ಛತ್ರಪತಿ ಶಿವಾಜಿ ಪ್ರತಿಮೆ ! Read More »

ರಾಷ್ಟ್ರೀಯ ನ್ಯೂಸ್

ಚಿರತೆಯೊಂದಿಗೆ ಸೆಣಸಾಡಿ ಮಗುವನ್ನು ರಕ್ಷಿಸಿದ ತಾಯಿ!

(ನ್ಯೂಸ್ ಕಡಬ) newskadaba.com ಬಿಜನೋರ್, ಫೆ.16. ಬಿಜನೋರ್ ಜಿಲ್ಲೆಯ ಓಂಪ್ರಕಾಶ್ ಎಂಬವರ ಪತ್ನಿ ತನ್ನ 10 ವರ್ಷದ ಮಗ ತಿಕೇಂದ್ರನೊಂದಿಗೆ ಮನೆಯ ಸಮೀಪದ ಕಬ್ಬಿನ ಗದ್ದೆಗೆ ತೆರಳಿದ್ದಳು. ಆಕೆ ಗದ್ದೆಯಲ್ಲಿ ಕೆಲಸ ಮಾಡುತ್ತಿರಬೇಕಾದರೆ, ಮಗ ಅಷ್ಟು ದೂರ ಆಟವಾಡುತ್ತಿದ್ದ. ಈ ಸಂದರ್ಭದಲ್ಲಿ ಚಿರತೆ ಮಗನನ್ನು ಕಚ್ಚಿ ಹೊತ್ತೊಯ್ದಿದೆ. ತಾಯಿ ಕೈಯಲ್ಲಿದ್ದ ಕಬ್ಬನ್ನು ಎಳೆಯುವ ಮೆಷಿನ್ ತೆಗೆದುಕೊಂಡು ಚಿರತೆಯತ್ತ ಓಡಿದ್ದಾಳೆ. ಮಗುವನ್ನು ಕಚ್ಚಲು ಯತ್ನಿಸಿದ್ದ ಚಿರತೆಯ ಮುಖಕ್ಕೆ, ಹೊಟ್ಟೆಗೆ ತನ್ನ ಕೈಯಲ್ಲಿದ್ದ ಮೆಷಿನ್‌ನಿಂದ ತಿವಿದಿದ್ದಾಳೆ. ಈ ಸಂದರ್ಭದಲ್ಲಿ ಚಿರತೆ

ಚಿರತೆಯೊಂದಿಗೆ ಸೆಣಸಾಡಿ ಮಗುವನ್ನು ರಕ್ಷಿಸಿದ ತಾಯಿ! Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.16. ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್​ನೊಂದಿಗೆ ಮತ್ತೆ  ಮರುಕಟ್ಟೆಗೆ ಬಂದಿದೆ. ಕಳೆದ ವರ್ಷ ಐಕ್ಯೂ ನಿಯೋ 6 (iQOO Neo 6) ಎಂಬ ಫೋನನ್ನು ಬಿಡುಗಡೆ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಿದೆ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಫೋನ್​ನಲ್ಲಿ ಬಲಿಷ್ಠವಾದ ಪ್ರೊಸೆಸರ್,

ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಪಂಜಾಬ್, ಫೆ.16. ಪಂಜಾಬ್‌ನ ಚಿಚಾವಟ್ನಿಯಲ್ಲಿ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ರೈಲು ಪೇಶಾವರದಿಂದ ಬರುತ್ತಿತ್ತು ಎನ್ನಲಾಗಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ನಾಲ್ಕನೇ ಬೋಗಿಯಲ್ಲಿ ಸಿಲಿಂಡರ್

ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೇಘಾಲಯದಲ್ಲಿ ಲಘು ಭೂ ಕಂಪನ!

(ನ್ಯೂಸ್ ಕಡಬ) newskadaba.com ಮೇಘಾಲಯ, ಫೆ.16. ಮೇಘಾಲಯದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ ಫೆಬ್ರವರಿ 16 ರಂದು ಬೆಳಿಗ್ಗೆ 9.26 ಕ್ಕೆ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಮೇಘಾಲಯದ ಪೂರ್ವ ಖಾಸಿ ಬೆಟ್ಟಗಳಲ್ಲಿ ಭೂಕಂಪದ ಕೇಂದ್ರಬಿಂದುವು 46 ಕಿಮೀ ಆಳದಲ್ಲಿದೆ. ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟವಾಗಿಲ್ಲ ಎಂದು ವರದಿಯಾಗಿದೆ.  

ಮೇಘಾಲಯದಲ್ಲಿ ಲಘು ಭೂ ಕಂಪನ! Read More »

ರಾಷ್ಟ್ರೀಯ ನ್ಯೂಸ್

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಮುಂಬೈ, ಫೆ.16. ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಆರೋಪಿ ರಾಜ್‌ಕುಮಾರ್ ಬಾಬುರಾಮ್ ಪಾಲ್ ಅವರನ್ನು ಬಂಧಿಸಲಾಗಿದೆ, ಸೆಕ್ಯುರಿಟಿ ಗಾರ್ಡ್​ ವಿವಾಹೇತರ ಸಂಬಂಧ ಹೊಂದಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಡ ಹೇರುತ್ತಿದ್ದಳು, ಹಾಗಾಗಿ ಹತ್ಯೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದ ಕೋಪರ್ಖೈರ್ನೆ ಪ್ರದೇಶದ ಹೌಸಿಂಗ್ ಸೊಸೈಟಿ ಬಳಿಯ ಪೊದೆಯಲ್ಲಿ 35 ರಿಂದ 40 ವರ್ಷ

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

(ನ್ಯೂಸ್ ಕಡಬ) newskadaba.com ಗುವಾಹತಿ, ಫೆ.16. ಬಾಲ್ಯವಿವಾಹ ವಿರುದ್ಧದ ಕಾರ್ಯಾಚರಣೆ ನೆಪದಲ್ಲಿ ಸಾವಿರಾರು ಮಂದಿಯನ್ನು ಬಂಧಿಸಿರುವ ಅಸ್ಸಾಂ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗುವಾಹತಿ ಹೈಕೋರ್ಟ್, “ಈ ಬಂಧನ ಕಾರ್ಯಾಚರಣೆ ಜನರ ಖಾಸಗಿ ಬದುಕಿನ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ” ಎಂದು ಹೇಳಿದೆ. ಈ ಕುರಿತು ಒಂಬತ್ತು ಮಂದಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್, “ಇವು ಕಸ್ಟಡಿಯಲ್ಲಿ ವಿಚಾರಣೆ ನಡೆಸುವ ಪ್ರಕರಣಗಳಲ್ಲ” ಎಂದು ಸ್ಪಷ್ಟಪಡಿಸಿದೆ. ಬಾಲ್ಯವಿವಾಹ ಸಂಬಂಧ ಪೋಕ್ಸೋ ಕಾಯ್ದೆಯಡಿ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸುವುದು

 ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ Read More »

ರಾಷ್ಟ್ರೀಯ ನ್ಯೂಸ್

ಕಲುಷಿತ ನೀರು ಸೇವನೆ  ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ. 16. ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತರು ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿ ನೀರು ಕಲುಷಿತವಾಗಿದ್ದು, ಇದನ್ನು ಸೇವಿಸಿದ 30 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು.ಇವರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ

ಕಲುಷಿತ ನೀರು ಸೇವನೆ  ➤ ಮಹಿಳೆ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top