ರಾಷ್ಟ್ರೀಯ ನ್ಯೂಸ್

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ ➤  ಫೋರ್ಡ್ ನಿಂದ 3,800 ಮಂದಿ ವಜಾ.!

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.15. ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿಯನ್ನು ಮನೆಗೆ ಕಳುಹಿಸಿವೆ. ಉದ್ಯೋಗ ಕಡಿತ ಪ್ರಕ್ರಿಯೆ ಈಗಲೂ ಮುಂದುವರೆದಿದ್ದು, ಇದೀಗ ಅಮೆರಿಕದ ಪ್ರಮುಖ ಕಾರು ತಯಾರಿಕಾ ಕಂಪನಿ ಫೋರ್ಡ್ 3,800 ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ನಿರ್ಧರಿಸಿದೆ. ಬ್ರಿಟನ್ ಮತ್ತು ಜರ್ಮನಿಯಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಜರ್ಮನಿಯಲ್ಲಿ ಉತ್ಪಾದನೆ ಹಾಗೂ ಅಭಿವೃದ್ಧಿ […]

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ ➤  ಫೋರ್ಡ್ ನಿಂದ 3,800 ಮಂದಿ ವಜಾ.! Read More »

ರಾಷ್ಟ್ರೀಯ ನ್ಯೂಸ್

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್!

(ನ್ಯೂಸ್ ಕಡಬ) newskadaba.com ರಾಂಚಿ,ಫೆ.15.  ರಾಷ್ಟ್ರೀಯ ಓಪನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ 20 ಕಿಮೀ ಓಟದ ನಡಿಗೆಯಲ್ಲಿ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ಮತ್ತು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023ಗೆ ಅರ್ಹತೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮೊರಾಬಾಡಿ ವಾಕ್ ಸ್ಪರ್ಧೆಯಲ್ಲಿ ಮಹಿಳೆಯರ 20 ಕಿಮೀ ಸ್ಪರ್ಧೆಯಲ್ಲಿ, ಪ್ರಿಯಾಂಕಾ ಬುಡಾಪೆಸ್ಟ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ವರ್ಲ್ಡ್‌ಗಾಗಿ ನಿಗದಿಪಡಿಸಿದ 1:29.20

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್‌ ಮತ್ತು ಟ್ರಕ್‌ ನಡುವೆ ಅಪಘಾತ ➤  20 ಮಂದಿ ಮೃತ್ಯು.!

(ನ್ಯೂಸ್ ಕಡಬ)newskadaba.com  ದಕ್ಷಿಣ ಆಫ್ರೀಕಾ, ಫೆ.15. ಜಿಂಬಾಬ್ವೆಯ ಗಡಿಯಲ್ಲಿರುವ ಲಿಂಪೊಪೋದಲ್ಲಿನ ರಾಷ್ಟ್ರೀಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಶಸ್ತ್ರಸಜ್ಜಿತ ಟ್ರಕ್‌ ಪರಸ್ಪರ ಡಿಕ್ಕಿಯಾಗಿ 20 ಜನರು ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಸರ್ಕಾರ ತಿಳಿಸಿದೆ. ಅಪಘಾತವಾದ ರಸ್ತೆ ಕೆಳಗಿರುವ ನದಿಯಲ್ಲಿ ಕೊಚ್ಚಿ ಹೋದವರ ರಕ್ಷಣೆಗಾಗಿ ಹುಡುಕಾಟ ನಡೆಸುತ್ತಿದೆ. ಈ ಪ್ರದೇಶ ಭಾರೀ ಮಳೆಗೆ ತತ್ತರಿಸಿದೆ ಎನ್ನಲಾಗಿದೆ.

ಬಸ್‌ ಮತ್ತು ಟ್ರಕ್‌ ನಡುವೆ ಅಪಘಾತ ➤  20 ಮಂದಿ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ!

(ನ್ಯೂಸ್ ಕಡಬ) newskadaba.com ಭುವನೇಶ್ವರ್,ಫೆ.15. ಮದುವೆಯಾಗಿ ಮೂರೇ ದಿನದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಮೃತಪಟ್ಟ ಘಟನೆ ಒಡಿಶಾ ಬೆರ್ಹಾಂಪುರ್ನಲ್ಲಿ ನಡೆದಿದೆ.   ಮೃತರನ್ನು ಬೆರ್ಹಾಂಪುರ್  ಮೂಲದ ಸಿ.ಎಚ್.ಪ್ರನೇತಾ ಮತ್ತು ಆಂಧ್ರ ಪ್ರದೇಶದ ಇಚ್ಚಫುರ್ ಮೂಲದ ಜಿ ಬೆನು ಎಂದು ಗುರುತಿಸಲಾಗಿದೆ. ಪ್ರನೇತಾ ಮತ್ತು ಬೆನು ಮದುವೆಯಾಗಿ ಮೂರು ದಿನಗಳ ಬಳಿಕ ಬೈಕ್ ನಲ್ಲಿ ಬೆರ್ಹಾಂಪುರ್ ಗೆ  ಬರುತ್ತಿದ್ದರು .ಎದುರಿಂದ ಬರುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್  ಢಿಕ್ಕಿ ಹೊಡೆದ ಪರಿಣಾಮವಾಗಿ  ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ! Read More »

ರಾಷ್ಟ್ರೀಯ ನ್ಯೂಸ್

➤ಆರ್ ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..!

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.16. ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ. 6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ

➤ಆರ್ ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಾಬಾ ಫ್ರಿಡ್ಜ್‌ನೊಳಗೆ ಬಾಲಕಿ ಮೃತದೇಹ ಪತ್ತೆ      ➤  ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.15. ಸಂಬಂಧ ಮುರಿದುಕೊಂಡು ಬೇರೆ ಮದುವೆಯಾಗಲೆತ್ನಿಸಿದನ್ನು ಪ್ರಶ್ನಿಸಿದ ಬಾಲಕಿಯನ್ನು ಪ್ರೇಮಿಯೊಬ್ಬ ಕತ್ತು ಹಿಸುಕಿ ಕೊಲೆಗೈದು ಡಾಬಾದ ರೆಫ್ರಿಜರೇಟರ್‌ನಲ್ಲಿಟ್ಟ ಘಟನೆ ದೆಹಲಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದೆಹಲಿಯ ಉತ್ತಮ್‌ನಗರದ ಡಾಬಾದಲ್ಲಿರಿಸಲಾಗಿದ್ದ ರೆಫ್ರಿಜರೇಟರ್‌ನಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದ್ದು, ಆರೋಪಿ ಸಾಹಿಲ್ ಗೆಹ್ಲೋಟ್ (26)ನನ್ನು ಬಂಧಿಸಲಾಗಿದೆ. ಸಾಹಿಲ್ ಮತ್ತು ಬಾಲಕಿ ಕಳೆದೈದು ವರ್ಷಗಳಿಂದ ಪ್ರೀತಿಯಲ್ಲಿದ್ದರು.

ಡಾಬಾ ಫ್ರಿಡ್ಜ್‌ನೊಳಗೆ ಬಾಲಕಿ ಮೃತದೇಹ ಪತ್ತೆ      ➤  ಆರೋಪಿ ಅರೆಸ್ಟ್.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ಧ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಯ ಸಾವಿಗೆ ಇಲಿ ವಿಷ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿ ಯಿಂದ ತಿಳಿದು ಬಂದಿದೆ. ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದ್ರಡಿ ಕರಿಸಿತ್ತು. ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು ಎನ್ನಲಾಗಿದೆ.  

ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.14. ಯುವಕನೊಬ್ಬ ಬೈಕ್​ನಲ್ಲಿ ವ್ಹೀಲಿಂಗ್​ ಮಾಡುತ್ತಾ ಶಾಲಾ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿರುವ ಘಟನೆ ತಿರುವನಂತಪುರಂನ ಕಲ್ಲಂಬಲಮ್​ನಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆರೋಪಿ ಯುವಕನನ್ನು 18 ವರ್ಷದ ನೌಫಲ್​ ಎಂದು ಗುರುತಿಸಲಾಗಿದೆ. ಅಪಾಯಕಾರಿ ಡ್ರೈವಿಂಗ್​ ಸಂಬಂಧಿಸಿದಂತೆ ಯುವಕನ ವಿರುದ್ಧ 6 ಪ್ರಕರಣಗಳು ಈ ಹಿಂದೆಯೇ ದಾಖಲಾಗಿವೆ.

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.14. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ದರ ಹೆಚ್ಚಳದ ಒತ್ತಡದಲ್ಲಿ ಮುಂದುವರಿಯಬೇಕಾದ ಅಗತ್ಯ ಬಂದಿದ್ದು,  ಜನವರಿಯಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 6.52ಕ್ಕೆ ಏರಿಕೆಯಾಗಿದೆ. ಎರಡು ತಿಂಗಳ ವಿರಾಮದ ನಂತರ RBI ಯ ಮೇಲಿನ ಸಹಿಷ್ಣುತೆಯ ಮಿತಿ ಶೇಕಡಾ 6ನ್ನು ಮೀರಿದೆ. ಗ್ರಾಹಕರ ಬೆಲೆ ಸೂಚ್ಯಂಕವನ್ನು ಆಧರಿಸಿದ ಚಿಲ್ಲರೆ ಹಣದುಬ್ಬರವು ಡಿಸೆಂಬರ್‌ನಲ್ಲಿ 5.72% ಮತ್ತು ಜನವರಿ 2022 ರಲ್ಲಿ 6.01% ಆಗಿತ್ತು. ಹಿಂದಿನ ಗರಿಷ್ಠವು ಅಕ್ಟೋಬರ್ 2022 ರಲ್ಲಿ 6.77% ಆಗಿತ್ತು. ಇತ್ತೀಚಿನ

➤ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.14. ಉತ್ತರ ದಿಲ್ಲಿ ಜಿಲ್ಲೆಯ ಹೊರ ವಲಯದ ಬವಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೂಲರ್ ಫ್ಯಾಕ್ಟರಿಯೊಂದರ ಲಿಫ್ಟ್‌ ಅಡಿ ಸಿಲುಕಿ 15 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನ ತಾಯಿಯು ಆ ಫ್ಯಾಕ್ಟರಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇನ್ನು ಬಾಲಕ ಆಟವಾಡುತ್ತಾ, ಲಿಫ್ಟ್ ಅಡಿಗೆ ಹೋಗಿದ್ದು, ಯಾರೋ ಲಿಫ್ಟ್ ಗಾಗಿ ಗುಂಡಿ ಒತ್ತಿದಾಗ ಕೆಳಗೆ ಬಂದಿರುವ ಎಲಿವೇಟರ್ ಅಡಿಗೆ ಸಿಕ್ಕಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top