ರಾಷ್ಟ್ರೀಯ ನ್ಯೂಸ್

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 07. ಇಂದು ಮದ್ರಾಸ್ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆ ನಡೆಯುತ್ತಿದೆ.  

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಯಂಬತ್ತೂರು, ಫೆ. 07. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂದು ಗುರುತಿಸಲಾಗಿದೆ. ಈತ ಕೊಯಂಬತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಗೆ ಹತ್ತಿದ್ದು, ಈ ವೇಳೆ ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದು, ಆಗ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.07. ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು ನಗದು ಮತ್ತು 11 ಸಾವಿರ ರೂ. ಮೌಲ್ಯದ ಬೆಲೆ ಬಾಳುವ ವಾಚ್ ಕಳವುಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ. ಹಮೀದ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ನಾಲ್ಕು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಈ ನಡುವೆ ಕಳವು ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ

(ನ್ಯೂಸ್ ಕಡಬ)newskadaba.com ಚೆನ್ನೈ, ಫೆ.07. ಖ್ಯಾತ ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಉಂಟಾಗಿತ್ತು. ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ಸಂಶಯಕ್ಕೆ ತೆರೆಬಿದ್ದಿದೆ. ಅವರ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿದ್ದು, ಪೊಲೀಸರು ಆಕೆಯ ಮನೆ ಬಳಿಯಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಹೇಳಿದರು.    

ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್

 ಸೀರೆಗಾಗಿ ಪ್ರಾಣ ಕಳೆದುಕೊಂಡ ನಾಲ್ವರು ಮಹಿಳೆಯರು!

(ನ್ಯೂಸ್ ಕಡಬ)newskadaba.com ತಮಿಳುನಾಡು, ಫೆ.06. ಖಾಸಗಿ ಸಂಸ್ಥೆಯೊಂದು ಹಬ್ಬದ ಆಚರಣೆಯ ಅಂಗವಾಗಿ ಉಚಿತ ಸೀರೆಗಳನ್ನು ವಿತರಿಸುತ್ತಿದ್ದ ವೇಳೆ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 1,000 ಮಹಿಳೆಯರು ಸೀರೆಗಳನ್ನು ವಿತರಿಸುವ ಸ್ಥಳಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತ ಸಂಭವಿಸಿ ಅನೇಕ ಮಹಿಳೆಯರು ಗಾಯಗೊಂಡಿದ್ದಾರೆ. ವಾಣಿಯಂಬಾಡಿ ತಾಲೂಕಿನ ಆಸ್ಪತ್ರೆಗೆ ಹಲವು ಮಹಿಳೆಯರನ್ನು ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

 ಸೀರೆಗಾಗಿ ಪ್ರಾಣ ಕಳೆದುಕೊಂಡ ನಾಲ್ವರು ಮಹಿಳೆಯರು! Read More »

ರಾಷ್ಟ್ರೀಯ ನ್ಯೂಸ್

6,650 ಉದ್ಯೋಗಿಗಳ ವಜಾಗೊಳಿಸಲಿದೆ ಡೆಲ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.06. ಕಂಪ್ಯೂಟರ್​ಗಳ ಬೇಡಿಕೆ ಕುಸಿತದ ಕಾರಣ 6,650 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಡೆಲ್ ತಿಳಿಸಿದೆ. ಕಂಪನಿಯ ಒಟ್ಟು ಉದ್ಯೋಗಿಗಳ ಶೇ 5ರಷ್ಟು ಮಂದಿ ಮೇಲೆ ಉದ್ಯೋಗ ಕಡಿತ ಪರಿಣಾಮ ಬೀರಲಿದೆ ಎನ್ನಲಾಗಿದೆ. ಕಂಪನಿಯು ಕಠಿಣ ಮಾರುಕಟ್ಟೆ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಭವಿಷ್ಯವೂ ಅನಿಶ್ಚಿತವಾಗಿದೆ. ಪರ್ಸನಲ್ ಕಂಪ್ಯೂಟರ್ ಉದ್ಯಮವು ಪ್ರಸ್ತುತ ಜಾಗತಿಕವಾಗಿ ಎದುರಿಸುತ್ತಿರುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಲುವಾಗಿ ಉದ್ಯೋಗ ಕಡಿತ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.  

6,650 ಉದ್ಯೋಗಿಗಳ ವಜಾಗೊಳಿಸಲಿದೆ ಡೆಲ್..! Read More »

ರಾಷ್ಟ್ರೀಯ ನ್ಯೂಸ್

23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ 6 ಮಕ್ಕಳ ತಂದೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.06. 6 ಮಕ್ಕಳ ತಂದೆಯೊಬ್ಬ 23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ ಘಟನೆ ನಡೆದಿದ್ದು, ಕಳೆದ ಕೆಲ ವರ್ಷಗಳಿಂದ, ಪತ್ನಿ ನಿಧನದ ಬಳಿಕ ಒಂಟಿ ಜೀವನವನ್ನು ನಡೆಸುತ್ತಿದ್ದು, ತನ್ನ 6 ಹೆಣ್ಣು ಮಕ್ಕಳೊಂದಿಗೆ ವಾಸಿಸುತ್ತಿರುವ 65 ವರ್ಷದ ನಖೇಶ್‌ ಯಾದವ್‌ ಈಗ ಎಲ್ಲರ ಸಮ್ಮುಖದಲ್ಲಿ 23 ವರ್ಷದ ನಂದಿನಿ ಯಾದವ್‌ ಎಂಬ ಯುವತಿಯನ್ನು ಮದುವೆಯಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ವೈಯಕ್ತಿಕ ಕೆಲಸದ ನಿಮಿತ್ತ ರಾಂಚಿಗೆ ಹೋಗಿದ್ದ ವೇಳೆ ಅಲ್ಲಿ ಯುವತಿಯ ಪರಿಚಯವಾಗಿ ದಿನ

23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ 6 ಮಕ್ಕಳ ತಂದೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ !

(ನ್ಯೂಸ್ ಕಡಬ)newskadaba.com ಮುಂಬೈ,ಫೆ.06.ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇಲೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್‌ ಕಾಂಬ್ಳಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇಬ್ಬರು ಪೊಲೀಸ್‌ ಸಿಬ್ಬಂದಿ ಕ್ರಿಕೆಟಿಗನ ಫ್ಲ್ಯಾಟ್‌ಗೆ ತೆರಳಿ ನೋಟೀಸ್‌ ನೀಡಿದ್ದಾರೆ. ಆ ಮೂಲಕ ಈ ಪ್ರಕರಣ ಸಂಬಂಧ ಬಾಂದ್ರಾ ಪೊಲೀಸ್‌ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ. ಆದರೆ, ಈ ಪ್ರಕರಣ ಸಂಬಂಧ ವಿನೋದ್ ಕಾಂಬ್ಳಿ ಅವರನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.  

ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ ! Read More »

ರಾಷ್ಟ್ರೀಯ ನ್ಯೂಸ್

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.06. 7.8 ತೀವ್ರತೆಯ ಭೂಕಂಪವು ಟರ್ಕಿಯನ್ನು ಬೆಚ್ಚಿಬೀಳಿಸಿದ್ದು, ಇದರ ಬೆನ್ನಲ್ಲೇ ಮತ್ತೊಂದು ಪ್ರಬಲ ಭೂಕಂಪವು ಪ್ರದೇಶದ ಹಲವಾರು ಪ್ರಾಂತ್ಯಗಳಲ್ಲಿ ಸಂಭವಿಸಿದೆ. ಹಲವಾರು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಗಳು ತಿಳಿಸಿದೆ. ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಎರಡು ದೇಶಗಳ ನಡುವಿನ ಗಡಿಯ ಸಮೀಪ ಆಗ್ನೇಯ ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶ

(ನ್ಯೂಸ್ ಕಡಬ)newskadaba.com ದುಬೈ, ಫೆ.06. ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ. ಇತ್ತೀಚಿಗೆ ಮುಷರಫ್ ತೀವ್ರ ಅನಾರೋಗ್ಯದಿಂದ ಬಳಲಿತ್ತಿದ್ದರು ಎನ್ನಲಾಗಿದೆ. ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಷರಫ್ ಮೃತಪಟ್ಟಿದ್ದಾರೆ. ಪರ್ವೇಜ್ ಮುಷರಫ್ ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ದುಬೈನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  79ವರ್ಷದ ಮುಷರಫ್  ಮೃತಪಟ್ಟಿರುವ ಸುದ್ದಿಯನ್ನು ಕೂಡ ಸ್ಪಷ್ಟಪಡಿಸಿದೆ.

ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್
Scroll to Top