ರಾಷ್ಟ್ರೀಯ ನ್ಯೂಸ್

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!

(ನ್ಯೂಸ್ ಕಡಬ)newskadaba.com ಘಾಜಿಯಾಬಾದ್‌, ಫೆ.06. ಹೆಂಡತಿ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ತರಕಾರಿ ವ್ಯಾಪಾರಿ, ಶವವು ಕೊಳೆತ ವಾಸನೆ ಬಾರದಂತೆ 30 ಕೆ.ಜಿ ಉಪ್ಪು ಹಾಕಿ ಶವವನ್ನು ಹೂತಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ಫಾಜಲ್ಫಾರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಂದ ನಂತರ, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತರಕಾರಿ ತೋಟದಲ್ಲಿ ಗುಂಡಿಯೊಂದನ್ನು ತೋಡಿ ಹೆಣವನ್ನು ಹೂಳಿದ್ದಾನೆ. ಶವದ ಮೇಲೆ […]

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

3ನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರಿನ ರಿಕಿ ಕೇಜ್ ➤ ಈ ಸಾಧನೆ ಮಾಡಿದ ಏಕೈಕ ಭಾರತೀಯ..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ. 06. ಖ್ಯಾತ ಸಂಗೀತ ಸಂಯೋಜಕ ಬೆಂಗಳೂರಿನ ರಿಕಿ ಕೇಜ್ ಮೂರನೇ ಬಾರಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಡಿವೈನ್ ಟೈಡ್ಸ್ ಎಂಬ ಆಲ್ಬಂ ಬೆಸ್ಟ್‌ ಇಮ್ಮರ್ಸೀವ್‌ ಆಡಿಯೋ ಆಲ್ಬಂ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದ್ದು, ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.  ಅವರು ಈ ಪ್ರಶಸ್ತಿಯನ್ನು ಸಾಂಪ್ರದಾಯಿಕ ಬ್ರಿಟಿಷ್ ರಾಕ್ ಬ್ಯಾಂಡ್ ದಿ ಪೊಲೀಸ್‌ನ ಡ್ರಮ್ಮರ್‌ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರೊಂದಿಗೆ ಪ್ರಶಸ್ತಿ ಹಂಚಿಕೊಂಡಿದ್ದಾರೆ. ಇನ್ನು, ಈ ಸಾಧನೆಯೊಂದಿಗೆ, ರಿಕಿ

3ನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರಿನ ರಿಕಿ ಕೇಜ್ ➤ ಈ ಸಾಧನೆ ಮಾಡಿದ ಏಕೈಕ ಭಾರತೀಯ..! Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಮಲಯಾಳಂ ನಟ ಬಾಬುರಾಜ್ ಅರೆಸ್ಟ್

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.06. ಭೂ ವಂಚನೆ ಪ್ರಕರಣದಲ್ಲಿ ಮಲಯಾಳಂ ನಟ ಬಾಬುರಾಜ್ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.  ಕೇರಳ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಆದಿಮಾಲಿ ಪೊಲೀಸ್ ಠಾಣೆಯಲ್ಲಿ ಬಾಬುರಾಜ್ ಶರಣಾಗಿದ್ದಾರೆ. ಕಂದಾಯ ಇಲಾಖೆಯ ಕ್ರಮ ಎದುರಿಸುತ್ತಿದ್ದ ಇಡುಕ್ಕಿಯ ಕಲ್ಲಾರ್‌ನಲ್ಲಿರುವ ತಮ್ಮ ರೆಸಾರ್ಟ್ ನ್ನು ಬಾಬುರಾಜ್ ಗುತ್ತಿಗೆಗೆ ನೀಡಿದ್ದರು. ಹೈಕೋರ್ಟ್ ನಿರ್ದೇಶನದನ್ವಯ ಅವರನ್ನು ಬಂಧಿಸಲಾಗಿತ್ತು. ಇಡುಕ್ಕಿಯ ಸ್ಥಳೀಯ ನ್ಯಾಯಾಲಯದಲ್ಲಿ ಅವರನ್ನು ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಅವರು ಬಿಡುಗಡೆಯಾದರು ಎನ್ನಲಾಗಿದೆ.  

ಖ್ಯಾತ ಮಲಯಾಳಂ ನಟ ಬಾಬುರಾಜ್ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ರಿಯಾದ್ ನಲ್ಲಿ ಮೃತಪಟ್ಟಿದ್ದಾರೆ. ಕೇರಳದ ತ್ರಿಶೂರ್ ಮೂಲದ ಅನಸ್ ಮತ್ತು ಶೈನಿ ಅವರ ಮಗಳು ಆಮೀನಾ ಮೃತರು ಎಂದು ತಿಳಿದುಬಂದಿದೆ. ಇವರು ರಿಯಾದ್ ನ ನೂರ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಆಮೀನಾ ಮೃತದೇಹವನ್ನು ರಿಯಾದ್ ನಲ್ಲೇ ದಹನ ಕಾರ್ಯ ನಡೆದಿದೆ ಎಂದು ವರದಿ ತಿಳಿಸಿದೆ.

ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಮಾದಕ ವಸ್ತು ಸಾಗಾಟ ಪ್ರಕರಣ ➤ ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.05. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕೂಳೂರಿ ನ ಮುಹಮ್ಮದ್ ನೌಫಾಲ್ (33) ಮತ್ತು ತಲಪಾಡಿ ನೇರ್ಲಪ್ಪಾಡಿ ಯ ಕೆ. ಬಿ ಫೈಝಲ್ (26) ಬಂಧಿತರು. ಇವರು ಎಂಡಿಎಂಎ ಮಾದಕ ವಸ್ತು ಸಾಗಾಟದ ಏಜೆಂಟ್ ಗಳೆಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಪೊಲೀಸರು ಮೂವರನ್ನು ಎಂ ಡಿ ಎಂ ಎ ಮಾದಕ ವಸ್ತು ಸಹಿತ ಪೊಲೀಸರು ಬಂಧಿಸಿದ್ದರು. ಇವರಿಗೆ ಈ

ಕಾಸರಗೋಡು: ಮಾದಕ ವಸ್ತು ಸಾಗಾಟ ಪ್ರಕರಣ ➤ ಇಬ್ಬರು ಪೊಲೀಸರ ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ ➤ ಮಾಜಿ ಕ್ರಿಕೆಟಿಗನ ವಿರುದ್ಧ FIR

(ನ್ಯೂಸ್ ಕಡಬ)newskadaba.com ಮುಂಬಯಿ, ಫೆ.05. ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಎಫ್‌.ಐ.ಆರ್‌ ದಾಖಲಾಗಿದೆ. ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ. ಇದರಿಂದ ಪತ್ನಿ ಆಂಡ್ರಿಯಾ ತಲೆಗೆ ಗಾಯವಾಗಿದೆ.

ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ ➤ ಮಾಜಿ ಕ್ರಿಕೆಟಿಗನ ವಿರುದ್ಧ FIR Read More »

ರಾಷ್ಟ್ರೀಯ ನ್ಯೂಸ್

ನ್ಯುಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ಕಾದ ಕಬ್ಬಿಣದಿಂದ ಬರೆ ➤ ಕಂದಮ್ಮ ಬಲಿ..!

(ನ್ಯೂಸ್ ಕಡಬ)newskadaba.com ಭೋಪಾಲ್, ಫೆ.05. ನ್ಯುಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹೆಣ್ಣು ಮಗುವಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಕಾದ ಕಬ್ಬಿಣದಿಂದ ಹೊಟ್ಟೆಯ ಮೇಲೆ ಬರೆ ಎಳೆದು ಗಾಯಗೊಳಿಸಿದ ಆಘಾತಕಾರಿ ಘಟನೆ ಭೋಪಲ್ ನಿಂದ ವರದಿಯಾಗಿದೆ. ಶಹದೋಲ್ ಜಿಲ್ಲೆಯ ಆದಿವಾಸಿ ಪ್ರದೇಶದಲ್ಲಿ ಜ್ವರದಿಂದ ಬಳಲುತ್ತಿದ್ದ ಮಗುವಿಗೆ 51 ಬಾರಿ ಕಬ್ಬಿಣದಿಂದ ಬರೆ ಹಾಕಲಾಗಿದೆ. ಕಾದ ಕಬ್ಬಿಣದ ಬರೆ ಹಾಕಿದರೆ ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆ ಈ ಭಾಗದ ಜನರಿಗಿದೆ. ಮಗುವಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿದೆ.ಇದೀಗ

ನ್ಯುಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ಕಾದ ಕಬ್ಬಿಣದಿಂದ ಬರೆ ➤ ಕಂದಮ್ಮ ಬಲಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಯುವಕ

(ನ್ಯೂಸ್ ಕಡಬ)newskadaba.com ಸಿಂಗಪುರ, ಫೆ.05. ಪ್ರೀತಿಸುತ್ತಿದ್ದ ಯುವತಿ ಮದುವೆಯನ್ನು ನಿರಾಕರಿಸಿದ್ದಕ್ಕೆ ಆಕೆ‌‌ ಮೇಲೆ ಬರೊಬ್ಬರಿ 24 ಕೋಟಿ ಪರಿಹಾರ ಕೊಡುವಂತೆ ಕೇಸ್ ಹಾಕಿರುವ ವಿಚಿತ್ರ ಘಟನೆ ಸಿಂಗಪುರದಿಂದ ವರದಿಯಾಗಿದೆ. ಕೌಶಿಗನ್ ಎಂಬ ವ್ಯಕ್ತಿ ನೋರಾ ತಾನ್ ಎಂಬ ಯುವತಿಯನ್ನು 2016 ರಲ್ಲಿ ಭೇಟಿಯಾಗಿದ್ದರು. ಬಳಿಕ ಇಬ್ಬರ ನಡುವೆ ಗೆಳೆತನವಾಗಿದೆ. ಗೆಳೆತನ ಪ್ರೀತಿಯಾಗಿ ಬದಲಾಗಿತ್ತು. ಕೌಶಿಗನ್ ಆಕೆಗೆ ಪ್ರೇಮ ನಿವೇದನೆ ಮಾಡಿಕೊಂಡಾಗ ಅದನ್ನು ನೋರಾ ನಿರಾಕರಿಸಿದ್ದಾಳೆ. ಇದರಿಂದ ಕೊಪಗೊಂಡ ಕೌಶಿಗನ್​ ಆಕೆ ನನ್ನ ಪ್ರೇಮವನ್ನು ನಿರಾಕರಿಸಿದ್ದರಿಂದ ನಾನು ಮಾನಸಿಕ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಯುವಕ Read More »

ರಾಷ್ಟ್ರೀಯ ನ್ಯೂಸ್

➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ

(ನ್ಯೂಸ್ ಕಡಬ) newskadaba.com, ಚೆನ್ನೈ ಫೆ.4. ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿ ನೆಲೆಸಿದ್ದ 78 ವರ್ಷ ವಾಣಿ ಜೈರಾಮ್ ಅವರು ವಿವಿಧ ಭಾರತೀಯ ಭಾಷೆಗಳಲ್ಲಿ ಸುಮಾರು 10,000 ಹಾಡುಗಳನ್ನು ಹಾಡಿದ್ದಾರೆ. ವೆಲ್ಲೂರಿನವರಾದ ಅವರು ತಮಿಳು, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಗುಜರಾತಿ, ಹರ್ಯಾನ್ವಿ, ಅಸ್ಸಾಮಿ, ತುಳು ಮತ್ತು ಬಂಗಾಳಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡಿದ್ದಾರೆ. ಸಾವಿರಾರು ಭಕ್ತಿಗೀತೆಗಳನ್ನು

➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು ➤ ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು

(ನ್ಯೂಸ್ ಕಡಬ)newskadaba.com ಸಕಲೇಶಪುರ, ಫೆ.04. ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಡುವ ಸಿಬಂದಿಯನ್ನು ಕಿರೇಹಳ್ಳಿ ಸಮೀಪ ಓಡಿಸಿಕೊಂಡು ಹೋದ ಘಟನೆ ನಡೆದಿದೆ. ತಾಲೂಕಿನ ಹಲಸುಲಿಗೆ ಹಾಗೂ ಉದೇವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಅರಣ್ಯ ಇಲಾಖೆಯ ಆರ್.ಆರ್.ಟಿ ಸಿಬಂದಿ ಕಾಡಾನೆಗಳ ಚಲನವಲನದ ಮೇಲೆ ತೀವ್ರ ನಿಗಾವಹಿಸಿದ್ದಾರೆ. ಈ ನಡುವೆ ಒಂದು ಬದಿಯಿಂದ ಮತ್ತೊಂದು ಬದಿಗೆ ಕಾಡಾನೆಗಳು ದಾಟುತ್ತಿದ್ದ ವೇಳೆ ಇಟಿಎಫ್ ಸಿಬಂದಿ ಒಬ್ಬರನ್ನು ಕಾಡಾನೆಗಳು ಅಟ್ಟಿಸಿಕೊಂಡು ಘೀಳಿಡುತ್ತಾ

ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು ➤ ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top