ರಾಷ್ಟ್ರೀಯ ನ್ಯೂಸ್

2026ರ ಏ.1ರಿಂದ ಹೊಸ ನೀತಿ ಜಾರಿ; ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ

(ನ್ಯೂಸ್‌ ಕಡಬ) newskadaba.com,  ನ.11  ನವದೆಹಲಿ: ಬ್ಯಾಂಕ್‌ಗಳಲ್ಲಿ ಚಿನ್ನ ಅಡ ಇಟ್ಟುಕೊಂಡು ಸಾಲ ನೀಡುವ ವ್ಯವಸ್ಥೆಯನ್ನು ಇದೀಗ ಬೆಳ್ಳಿಗೂ ಆರ್‌ಬಿಐ ವಿಸ್ತರಿಸಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿಯ ಸಾಲ ಮತ್ತು ಮರುಪಾವತಿಗೆ ಗಡುವು ವಿಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 2026ರ ಏ.1ರಿಂದ ಈ ಹೊಸ ನೀತಿ ಜಾರಿಗೆ ಬರಲಿದೆ. ಆರ್‌ಬಿಐ ಸುತ್ತೋಲೆಯ ಪ್ರಕಾರ ಅಡವಿಡುವ ಚಿನ್ನದ ಪ್ರಮಾಣ1 ಕೇಜಿ ಮೀರಬಾರದು. ಬೆಳ್ಳಿ 10 ಕೇಜಿ ಮೀರುವಂತಿಲ್ಲ. ಒಂದು ವೇಳೆ ನಾಣ್ಯ ಅಡವಿಡುವುದಾದರೆ ಚಿನ್ನದ ನಾಣ್ಯದ ತೂಕ 50 ಗ್ರಾಂ, […]

2026ರ ಏ.1ರಿಂದ ಹೊಸ ನೀತಿ ಜಾರಿ; ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.11 : ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಸಿಗ್ನಲ್‌ನಲ್ಲಿ ಸೋಮವಾರ ಸಂಜೆ 6:50 ರ ಸುಮಾರಿಗೆ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ಕಾರಿನಲ್ಲಿ ಮೂವರು ಇದ್ದರು ಎಂದು ತಿಳಿದುಬಂದಿದೆ. ಸ್ಫೋಟದ ನಂತರ, ಸುಮಾರು ಹತ್ತು ಇತರ ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯರು ತಕ್ಷಣ

ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ನ.10 : ಅಮೆರಿಕಾದ ಉನ್ನತ ವ್ಯಾಸಂಗಕ್ಕೆಂದು ತೆರಳಿದ ಭಾರತದ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಆಂಧ್ರಪ್ರದೇಶ ಮೂಲದ ರಾಜ್ಯಲಕ್ಷ್ಮಿ ಯರ್ಲಗಡ್ಡ ಸಾವನ್ನಪ್ಪಿದ ವಿದ್ಯಾರ್ಥಿನಿ. ನವೆಂಬರ್ 7 ರಂದು ಈಕೆ ಸಾವನ್ನಪ್ಪಿದ್ದು ಈಕೆಯ ಶವವನ್ನು ಈಗ ಭಾರತಕ್ಕೆ ತರುವುದಕ್ಕೆ ಕುಟುಂಬದವರು ಕೇಂದ್ರ ವಿದೇಶಾಂಗ ಇಲಾಖೆಯ ನೆರವು ಕೋರಿದ್ದಾರೆ. ಕೃಷಿ ಕುಟುಂಬದಿಂದ ಬಂದ ರಾಜ್ಯಲಕ್ಷ್ಮಿ ಯರ್ಲಗುಡ್ಡ ಅಮೆರಿಕಾದಲ್ಲಿ ನಿದ್ರೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಅಮೆರಿಕಾದಲ್ಲೇ ಪದವಿ ಪಡೆದು ಕೆಲಸ ಹುಡುಕುತ್ತಿದ್ದ ವಿದ್ಯಾರ್ಥಿನಿ ರಾಜ್ಯಲಕ್ಷ್ಮಿ ಟೆಕ್ಸಾಸ್‌ ಎ & ಎಂ ವಿಶ್ವವಿದ್ಯಾಲಯ

ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಡುಗಡೆಗೆ ಮೊದಲೇ ‘ಜನ ನಾಯಗನ್’ ಸಿನಿಮಾ ಹೊಸ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.10 : ದಳಪತಿ ಎಂದು ಪ್ರೀತಿಯಿಂದ ಕರೆಯಲ್ಪಡುವ ವಿಜಯ್ ಸ್ಟಾರ್ ನಿರ್ದೇಶಕರಿಲ್ಲದೆಯೂ ಬಾಕ್ಸ್ ಆಫೀಸ್‌ನಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಚಿತ್ರದ ಉತ್ತಮ ಯಶಸ್ಸಿನ ನಂತರ, ಅವರ ಮುಂಬರುವ ಆಕ್ಷನ್ ಥ್ರಿಲ್ಲರ್ ಸಿನಿಮಾ ಜನ ನಾಯಗನ್ ಬಿಡುಗಡೆ ಪೂರ್ವವೇ ಎಲ್ಲಾ ದಾಖಲೆಗಳನ್ನು ಮುರಿಯುತ್ತಿದೆ . ಹೆಚ್. ವಿನೋದ್ ನಿರ್ದೇಶಿಸಿದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ ಈ ಚಿತ್ರವು 2026 ರ ಪೊಂಗಲ್‌ಗೆ ಜನವರಿ 9, 2026 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾ

ಬಿಡುಗಡೆಗೆ ಮೊದಲೇ ‘ಜನ ನಾಯಗನ್’ ಸಿನಿಮಾ ಹೊಸ ದಾಖಲೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.10 ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ವಿಧಿವಶರಾಗಿದ್ದಾರೆ…..1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್ ರಚನೆಯನ್ನು ಇವರು ಗುರುತಿಸಿದ್ದರು. ಇದರಿಂದ ಆಣ್ವಿಕ ಜೀವಶಾಸ್ತ್ರದ ಸಂಶೋಧನೆಗೆ ಹೊಸ ಮೈಲಿಗಲ್ಲು ಸಿಕ್ಕಿತ್ತು. ಜೇಮ್ಸ್ ವಾಟ್ಸನ್ ಅವರ ನಿಧನವಾಗಿರುವ ಬಗ್ಗೆ ಕೋಲ್ಡ್ ಸ್ಪ್ರಿಂಗ್ ಹಾರ್ಬರ್ ಲ್ಯಾಬೊರೇಟರಿ ಮಾಹಿತಿ ನೀಡಿದೆ.ತಮ್ಮ ವೈಜ್ಞಾನಿಕ ಸಾಧನೆಯ ನಂತರ, ವಾಟ್ಸನ್ ಮತ್ತು ಅವರ ಪತ್ನಿ

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ

(ನ್ಯೂಸ್‌ ಕಡಬ) newskadaba.com,  ನ.08 ಪಿಸ್ತೂಲ್:.ಹೀಗೊಂದು ಹೆಸರಿನಲ್ಲಿ ಕನ್ನಡದ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರಬೀಕ್ ಮೊಗವೀರ್, ಈ ಬಾರಿ ‘ಪಿಸ್ತೂಲ್’ ಎಂಬ ಈ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ತಯಾರಿ ಮಾಡಿಕೊಂಡಿದ್ದಾರೆ. ಆತ್ಮ ಸಿನಿಮಾಸ್ ಬ್ಯಾನರಿನಲ್ಲಿ ಪ್ರಬೀಕ್ ಮೊಗವೀರ್ ಕಥೆ, ಚಿತ್ರಕಥೆ ಬರೆದು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಪಿಸ್ತೂಲ್ ಸಿನಿಮಾದ ಸ್ಕ್ರಿಪ್ಟ್ ಮತ್ತು ಪ್ರೀ-ಪ್ರೊಡಕ್ಷನ್

ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದ್ರೋಗ, ಕ್ಯಾನ್ಸರ್‌ನಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರಿಗೆ ಇನ್ನು ಅಮೆರಿಕ ವೀಸಾ ಕಷ್ಟ!

(ನ್ಯೂಸ್‌ ಕಡಬ) newskadaba.com,  ನ.08 ವಾಷಿಂಗ್ಟನ್‌: ವಿದೇಶಿಗರು ಅಮೆರಿಕಕ್ಕೆ ಬರುವುದನ್ನು ತಡೆಯಲು ಹಲವು ನೆಪಗಳನ್ನು ನೀಡಿ ನಿರ್ಬಂಧಗಳನ್ನು ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರ್ಕಾರ, ಇದೀಗ ಬೊಜ್ಜು, ಹೃದ್ರೋಗ, ಕ್ಯಾನ್ಸರ್‌ನಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರಿಗೆ ವೀಸಾ ನೀಡದಂತೆ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಅಮೆರಿಕದಲ್ಲಿ ಗ್ರೀನ್‌ಕಾರ್ಡ್‌ ಹೊಂದಿರುವವರಿಗೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆಯಿದೆ. ವಲಸಿಗರ ಮೇಲೆ ಇಂತಹ ಖರ್ಚು ಮಾಡುವುದನ್ನು ತಪ್ಪಿಸಲು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವೀಸಾ ಕೊಡದೇ ಇರಲು ಅಧಿಕಾರಿಗಳಿಗೆ

ಹೃದ್ರೋಗ, ಕ್ಯಾನ್ಸರ್‌ನಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರಿಗೆ ಇನ್ನು ಅಮೆರಿಕ ವೀಸಾ ಕಷ್ಟ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂದೇ ಮಾತರಂ ಗೇತೆಗೆ 150 ವರ್ಷಗಳ ಸಂಭ್ರಮ

(ನ್ಯೂಸ್‌ ಕಡಬ) newskadaba.com,  ನ.06:   ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವರ್ಷಪೂರ್ತಿ ನಡೆಯುವ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಗೀತೆಯ 150 ವರ್ಷಗಳ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ಮೋದಿ ಅವರು ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಕ್ರೀಡಾಂಗಣದಲ್ಲಿ ನಡೆದ ‘ವಂದೇ ಮಾತರಂ’ ಗೀತೆಯ ಪೂರ್ಣ ಆವೃತ್ತಿಯ ಸಾಮೂಹಿಕ ಗಾಯನದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮವು ನವೆಂಬರ್ 7, 2025 ರಿಂದ ನವೆಂಬರ್ 26,

ವಂದೇ ಮಾತರಂ ಗೇತೆಗೆ 150 ವರ್ಷಗಳ ಸಂಭ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರವೀಂದ್ರನಾಥ ಟ್ಯಾಗೋರ್ ಮೊದಲು ಹಾಡಿದ ರಾಷ್ಟ್ರೀಯ ಗೀತೆಯ 150 ವರ್ಷಾಚರಣೆ

(ನ್ಯೂಸ್‌ ಕಡಬ) newskadaba.com,  ನ.07 ನವದೆಹಲಿ: ‘ವಂದೇ ಮಾತರಂ ಈ ಹಾಡನ್ನು ಕೇಳಿದಾಗ ಭಾರತೀಯರಾದ ನಮ್ಮ ಮೈ ರೋಮಾಚಂನಗೊಳ್ಳುತ್ತದೆ, ಮನ ಪುಳಕಿತಗೊಳ್ಳುತ್ತದೆ. ಸಂತ ಬಂಕಿಮಚಂದ್ರ ಚಟರ್ಜಿ ಅವರ ಕೃತು ಶಕ್ತಿಯಿಂದ ಮೂಡಿಬಂದಿರುವ ಗೀತೆ ಶತಮಾನಗಳಿಂದ ಇಂದಿನವರೆಗೂ ನಮ್ಮಲ್ಲಿ ನವ ಚೈತನ್ಯವನ್ನು ಮತ್ತು ದೇಶ ಪ್ರೇಮದ ಭಾವವನ್ನು ಉದ್ದೀಪನಗೊಳಿಸುತ್ತಿದೆಯೆಂದರೆ ಈ ಹಾಡಿಗಿರುವ ಶಕ್ತಿಗೆ ಸಾಕ್ಷಿಯಾಗಿದೆ. ಈ ದೇಶ ಪ್ರೇಮವನ್ನು ಉದ್ದೀಪನಗೊಳಿಸುವ ಈ ಗೀತೆಗೆ ಇದೇ ನ.07ಕ್ಕೆ 150 ವರ್ಷ ತುಂಬುತ್ತಿದೆ. ಚಟರ್ಜಿ ಅವರು ಈ ಹಾಡನ್ನು ಬರೆದಿರುವ ದಿನಾಂಕದ ಕುರಿತಾಗಿ

ರವೀಂದ್ರನಾಥ ಟ್ಯಾಗೋರ್ ಮೊದಲು ಹಾಡಿದ ರಾಷ್ಟ್ರೀಯ ಗೀತೆಯ 150 ವರ್ಷಾಚರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು

(ನ್ಯೂಸ್‌ ಕಡಬ) newskadaba.com,  ನ.04 ಕೊಯಮತ್ತೂರು: ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್‌ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಹೊತ್ತ ಮೂವರು ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದಲ್ಲದೆ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ನಗರದ ವಿಮಾನ ನಿಲ್ದಾಣದ ಹತ್ತಿರ ಈ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ,

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top