ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 39 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನದ ಪ್ರದೇಶದಲ್ಲಿ ನಡೆದಿದೆ. ಬಸ್ 48 ಮಂದಿ ಪ್ರಯಾಣಿಕರನ್ನು ಹೊತ್ತು ಕ್ವೆಟ್ಟಾದಿಂದ ಕರಾಚಿಗೆ ಸಾಗುತ್ತಿತ್ತು. ಲಾಸ್ಬೆಲಾ ಜಿಲ್ಲೆಯ ಬೇಲಾ ಬಳಿ ಬಸ್ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಸೇತುವೆಯ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿದ್ದ 39 ಮಂದಿ ಘಟನೆಯಲ್ಲಿ […]

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಮುಂಬೈ, ಜ.31. ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ 5.56 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿವೆ. ಅದಾನಿ ಸಮೂಹ ಸಂಸ್ಥೆಗಳ ಮಾರುಕಟ್ಟೆ ಮೌಲ್ಯ ಒಟ್ಟು 5.56 ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ Read More »

ರಾಷ್ಟ್ರೀಯ ನ್ಯೂಸ್

ಅರವಿಂದ ಕ್ರೇಜಿವಾಲ್‌ಗೆ ಜೀವ ಬೆದರಿಕೆ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿದ್ದು, ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಸಿಆರ್ ಕರೆ ಮಾಡುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಇನ್ನು ಕರೆ ಬಂದ ನಂತರ ದೆಹಲಿ ಪೊಲೀಸರು ಆತನನ್ನು ಗುರುತಿಸಿ ತಕ್ಷಣ ಬಂಧಿಸಿರುವುದಾಗಿ ವರದಿಯಾಗಿದೆ. ಕರೆ ಮಾಡಿದ ವ್ಯಕ್ತಿ 38 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿ ತಿಳಿಯಲಾಗಿದ್ದು, ಇದೀಗ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಯಲಾಗಿದೆ.

ಅರವಿಂದ ಕ್ರೇಜಿವಾಲ್‌ಗೆ ಜೀವ ಬೆದರಿಕೆ ➤ ಆರೋಪಿ ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಆಂಧ್ರ ಪ್ರದೇಶದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಷಾಹಾರ ತಿಂದು ಅಸ್ವಸ್ಥ

(ನ್ಯೂಸ್ ಕಡಬ) newskadaba.com, ಗುಂಟೂರು.ಜ.31: ಪಲ್ನಾಡು ಜಿಲ್ಲೆಯ ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ಸೋಮವಾರ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಈ ಪೈಕಿ 60 ವಿದ್ಯಾರ್ಥಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದು, ವಿಷಾಹಾರ ಸೇವನೆ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಕುಲದಲ್ಲಿ 650 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ, ಸೋಮವಾರ ಬೆಳಿಗ್ಗೆ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಮತ್ತು ವಾಕರಿಕೆ ಬಗ್ಗೆ ದೂರು ನೀಡಿದ್ದಾರೆ. ಶಾಲೆಯ ಆರೋಗ್ಯಾಧಿಕಾರಿಗಳು ಅಗತ್ಯ ಔಷಧಗಳನ್ನು ನೀಡಿದ್ದಾರೆ. ಆದಾಗ್ಯೂ,

➤ಆಂಧ್ರ ಪ್ರದೇಶದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಷಾಹಾರ ತಿಂದು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ. ನಾಳೆ ಬಹುನಿರೀಕ್ಷಿತ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿದೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯಾ, ಜ.30. 60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಅವರ ಪತ್ನಿಯ ಕಣ್ಣೆದುರಲ್ಲೇ ಹಾವು ಕಚ್ಚಿದ್ದು, ವೈದ್ಯಕೀಯ ಸಿಬ್ಬಂದಿ ಆಗಮಿಸುವ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ನ್ಯೂ ಝೀಲ್ಯಾಂಡ್ ಹೆರಾಲ್ಡ್‌ನಲ್ಲಿ ಕುರಿತು ವರದಿ ಪ್ರಕಟವಾಗಿದೆ. ಇಲ್ಲಿನ ಕ್ವೀನ್ಸ್‌ಲ್ಯಾಂಡ್‌ನ ತಮ್ಮ ಖಾಸಗಿ ನಿವೇಶನದಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯ ಕೈಗೆ ಹಾವು ಕಚ್ಚಿತು. ಕೂಡಲೇ ಇವರ ಪತ್ನಿ ಆರೋಗ್ಯ ನೆರವಿಗಾಗಿ ತುರ್ತು ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ ಹೊತ್ತಿಗೆ ವೃದ್ಧ ವ್ಯಕ್ತಿ ಸಾವನ್ನಪ್ಪಿದ್ದರು.

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಕುಂಬಳೆ ಬಂಬ್ರಾಣದ ಅಬ್ದುಲ್ ರುಮೈಸ್ (27) ಮತ್ತು ಉಪ್ಪಳ ಪೆರಿಂಗಡಿಯ ಎಂ.ಕೆ ಮುಸ್ತಾಫಾ (39) ಬಂಧಿತರು ಎಂದು ತಿಳಿದುಬಂದಿದೆ. ಇವರಿಂದ 69 ಗ್ರಾಂ. ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಉಪ್ಪಳ ಪೇಟೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿದೆ. ಇನ್ನು ಬಂಧಿತ ರುಮೈಸ್ ಐದು ವರ್ಷಗಳ ಹಿಂದೆ ನಡೆದ ಕೊಲೆ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಬಸ್ಸು ಮತ್ತು ಪಿಕಪ್ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಂಬಲಪಾಡಿಯ ಪನತ್ತಡಿಯ ಯೂಸಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ಸು ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ.

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba.com,ಒಡಿಶಾ , ಜ.30. ಭುವನೇಶ್ವರ ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ನಬಾ ಕಿಶೋರ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವರ ಮೇಲೆ ಗುಂಡು

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಬಾಲಕಿ ಮೃತ್ಯು !

(ನ್ಯೂಸ್ ಕಡಬ)newskadaba.com ಚೆನ್ನೈ, ಜ.30. ಕಬ್ಬಿಣದ ಗೇಟ್‌ ಬಿದ್ದು, 5 ವರ್ಷದ ಬಾಲಕಿ ಮೃತಪಟ್ಟ ಘಟನೆ ಚೆನ್ನೈನಲ್ಲಿ ವದರಿಯಾಗಿದೆ. ಶಂಕರ್ ಮತ್ತು ವಾಣಿ ದಂಪತಿಯ ಪುತ್ರಿ ಹರಿಣಿ (5) ಮೃತ ಬಾಲಕಿ. ಚೆನ್ನೈನ ಕಿಲ್ಲಿಪಾಕ್ಕಂನ ಹರ್ಲಿಕ್ಸ್ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಶಂಕರ್ ಕೆಲಸ ಮಾಡುತ್ತಿದ್ದು, ಶಂಕರನ ಹೆಂಡತಿ ವಾಣಿ ಮತ್ತು ಅವನ ಮಗಳು ಹರಿಣಿ ಅವನನ್ನು ನೋಡಲು ಬಟ್ಟೆ ಅಂಗಡಿಗೆ ಬಂದಿದ್ದಾರೆ‌. ಆವರಣದಲ್ಲಿದ್ದ 20 ಅಡಿ ಅಗಲದ ಸ್ಲೈಡಿಂಗ್ ಕಬ್ಬಿಣದ ಗೇಟ್ ತೆರೆಯಲು ಯತ್ನಿಸುತ್ತಿದ್ದಾಗ ಗೇಟ್ ಬಾಲಕಿ

ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಬಾಲಕಿ ಮೃತ್ಯು ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top