ರಾಷ್ಟ್ರೀಯ ನ್ಯೂಸ್

ಬಿಹಾರ ಅತ್ಯಾಚಾರ ಯತ್ನ ➤ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ ಸ್ಥಿತಿ ಗಂಭೀರ!

(ನ್ಯೂಸ್ ಕಡಬ) newskadaba.com, ಪಾಟ್ನಾ, ಜ. 26. ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಐವರು ಅತ್ಯಾಚಾರಕ್ಕೆ ಯತ್ನಿಸಿದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ನಂತರ ಸಿಲ್ಲಿಗುರಿಯ 35 ವರ್ಷದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಬಯಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ದಾಲ್ಕೊಳ ಚೆಕ್‌ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಪುರ್ನಿಯಾದಲ್ಲಿ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ವೈಶಾಲಿಯಿಂದ ಸಿಲಿಗುರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹತ್ತಿದ್ದಾರೆ. ವೈಶಾಲಿಯಿಂದ ಬಸ್ಸು […]

ಬಿಹಾರ ಅತ್ಯಾಚಾರ ಯತ್ನ ➤ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ ಸ್ಥಿತಿ ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ..!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.26. 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು. ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿತ್ತು ಎನ್ನಲಾಗಿದೆ.  

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ..! Read More »

ರಾಷ್ಟ್ರೀಯ ನ್ಯೂಸ್

ಗೂಗಲ್, ಅಮೇಜಾನ್ ಬಳಿಕ ಈಗ IBM ಸರದಿ ➤ 3,900 ಸಿಬ್ಬಂದಿಗಳ ವಜಾಗೊಳಿಸಲು ನಿರ್ಧಾರ !

(ನ್ಯೂಸ್ ಕಡಬ)newskadaba.com  ವಾಷಿಂಗ್ಟನ್, ಜ.26. ಆರ್ಥಿಕ ಹಿಂಜರಿತದ ಭೀತಿ ನಡುವೆಯೇ ಗೂಗಲ್, ಅಮೆಜಾನ್ ಬಳಿಕ ಇದೀಗ ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಕೂಡ ಸಿಬ್ಬಂದಿಗಳ ವಜಾ ಕ್ರಮಕ್ಕೆ ಮುಂದಾಗಿದೆ. ಮೂಲಗಳ ಪ್ರಕಾರ ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಆಸ್ತಿ ವಿನಿಯೋಗದ ಭಾಗವಾಗಿ 3,900 ನೌಕರರನ್ನು ಕೆಲಸದಿಂದ ವಜಾಗೊಳಿಸುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಐಬಿಎಂ ಸಂಸ್ಥೆ ಆರ್ಥಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿರುವ ಕಾರಣ, ಕಂಪನಿಗೆ ಹೊಸ ರೂಪ ಕೊಡುವ

ಗೂಗಲ್, ಅಮೇಜಾನ್ ಬಳಿಕ ಈಗ IBM ಸರದಿ ➤ 3,900 ಸಿಬ್ಬಂದಿಗಳ ವಜಾಗೊಳಿಸಲು ನಿರ್ಧಾರ ! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.26. 74ನೇ ಗಣರಾಜ್ಯೋತ್ಸವದ ಮುನ್ನ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಪ್ಪ, ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳಲ್ಲಿ ಒಟ್ಟಾರೆ 19 ಪ್ರಶಸ್ತಿ ಪುರಸ್ಕೃತರು ಮಹಿಳೆಯರಾಗಿದ್ದಾರೆ. ಈ ಪಟ್ಟಿಯಲ್ಲಿ ವಿದೇಶಿಯರು / ಎನ್‌ಆರ್‌ಐ / ಪಿಐಒ

ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ 10 ವಿಜ್ಞಾನಿಗಳಿಗೆ ಯಂಗ್‌ ಸೈಂಟಿಸ್ಟ್‌ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ,ಜ.25. ವಿಜ್ಞಾನ ಕ್ಷೇತ್ರದಲ್ಲಿನ ವಿವಿಧ ಸಂಶೋಧನೆ ಹಾಗೂ ಸಾಧನೆಗಳನ್ನು ಪರಿಗಣಿಸಿ, ನವದೆಹಲಿಯ ಇಂಡಿಯನ್‌ ನ್ಯಾಷನಲ್‌ ಸೈನ್ಸ್‌ ಅಕಾಡೆಮಿ ಕೊಡಮಾಡುವ ಯಂಗ್‌ ಸೈಂಟಿಸ್ಟ್‌ ವಾರ್ಷಿಕ ಪ್ರಶಸ್ತಿ ಪುರಸ್ಕಾರಕ್ಕೆ ಕರ್ನಾಟಕದ 10 ಯುವ ವಿಜ್ಞಾನಿಗಳು ಭಾಜನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಅಕಾಡೆಮಿ ನೀಡುವ ಅತ್ಯಂತ ಉತ್ಕೃಷ್ಟ ಪ್ರಶಸ್ತಿ ಇದಾಗಿದ್ದು, ಪ್ರತಿ ವರ್ಷ 40 ಯುವ ವಿಜ್ಞಾನಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಈ ವರ್ಷ 42 ಯುವ ವಿಜ್ಞಾನಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕದ ಬೆಂಗಳೂರಿನಲ್ಲಿ ವ್ಯಾಸಂಗ

ರಾಜ್ಯದ 10 ವಿಜ್ಞಾನಿಗಳಿಗೆ ಯಂಗ್‌ ಸೈಂಟಿಸ್ಟ್‌ ಪ್ರಶಸ್ತಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನವದೆಹಲಿಗೆ ಬಂದಿಳಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.25. 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ನವದೆಹಲಿಗೆ ಆಗಮಿಸಿದ್ದು, ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಅವರ ಅಧಿಕೃತ ಭೇಟಿಗಾಗಿ ಐವರು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಅವರ ಜೊತೆಗೆ ಬಂದಿದೆ ಎನ್ನಲಾಗಿದೆ. ಅಬ್ದೆಲ್ ಫತ್ತಾಹ್ ಎಲ್ ಸಿಸಿ ಅವರು ನವದೆಹಲಿಗೆ ಆಗಮಿಸುತ್ತಿದ್ದಂತೆ ಅವರನ್ನು ಸ್ವಾಗತಿಸಲು ಸಾಂಪ್ರದಾಯಿಕ ಜಾನಪದ ನೃತ್ಯವನ್ನು ಪ್ರದರ್ಶಿಸಿಲಾಯಿತು ಎಂದು ತಿಳಿದುಬಂದಿದೆ.

ನವದೆಹಲಿಗೆ ಬಂದಿಳಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ ! Read More »

ರಾಷ್ಟ್ರೀಯ ನ್ಯೂಸ್

ಬೀಚ್‌ನಲ್ಲಿ ಮುಳುಗಿ ಇಬ್ಬರು ಭಾರತೀಯರ ಮೃತ್ಯು

(ನ್ಯೂಸ್ ಕಡಬ)newskadaba.com ನ್ಯೂಜಿಲಾಂಡ್, ಜ.25. ನ್ಯೂಜಿಲೆಂಡ್‌ನ ಪಿಹಾ ಬೀಚ್‌ನಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ಮುಳುಗಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ‘ಮೃತರನ್ನು ಸೌರಿನ್‌ ನಯನ್‌ಕುಮಾರ್‌ ಪಟೇಲ್ (28) ಮತ್ತು ಅನ್ಶೌಲ್‌ ಶಾ (31) ಎಂದು ಗುರುತಿಸಲಾಗಿದೆ. ಇವರು ಗುಜರಾತ್‌ನ ಅಹಮದಾಬಾದ್‌ ಮೂಲದವರಾಗಿದ್ದು, ಆಕ್ಲೆಂಡ್‌ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು’ ಎಂದು ವರದಿ ಮಾಡಿದೆ. ಎಲೆಕ್ಟ್ರಾನಿಕ್‌ ಎಂಜಿನಿಯರ್‌ ಆಗಿದ್ದ ಪಟೇಲ್ ಕಳೆದ ವರ್ಷ ಆಗಸ್ಟ್‌ನಲ್ಲಿ ನ್ಯೂಜಿಲೆಂಡ್‌ಗೆ ತೆರಳಿದ್ದರು. ಶಾ, ಅನಿಲ ಕೇಂದ್ರದಲ್ಲಿ ಕ್ಯಾಷಿಯರ್‌ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೀಚ್‌ನಲ್ಲಿ ಮುಳುಗಿ ಇಬ್ಬರು ಭಾರತೀಯರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ

(ನ್ಯೂಸ್ ಕಡಬ)newskadaba.com ತಾಲಿಬಾನ್, ಜ.25. ಒಂದಲ್ಲ ಒಂದು ರೀತಿಯಲ್ಲಿ ಕಿತಾಪತಿ ಮಾಡುತ್ತಿರುವ ಚೀನಾಗ ಅಫ್ಘಾನಿಸ್ತಾನ ಬಿಸಿ ಮುಟ್ಟಿಸಿದ್ದು, ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಇಬ್ಬರು ಚೀನಿ ಪ್ರಜೆಗಳನ್ನು ಬಂಧಿಸಿದೆ. 1,000 ಮೆಟ್ರಿಕ್ ಟನ್‌ ಲಿಥಿಯಂ-ಒಳಗೊಂಡಿರುವ ಬಂಡೆಗಳನ್ನು ಕಳ್ಳ ಸಾಗಾಣೆ ಮಾಡಿದ ಆರೋಪದಲ್ಲಿ ಇಬ್ಬರು ಚೀನಿ ಪ್ರಜೆಗಳು ಸೇರಿದಂತೆ ಐವರನ್ನು ಪೂರ್ವ ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪಟ್ಟಣದಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಗಳು ಅಫ್ಘಾನ್‌ ವ್ಯಕ್ತಿಗಳ ಜೊತೆ ಸೇರಿ ಪಾಕಿಸ್ತಾನದ ಮೂಲಕ ಬೆಲೆಬಾಳುವ ಕಲ್ಲುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು. ಪಾಕಿಸ್ತಾನ ಮತ್ತು

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಕೆಲಸ ಕಳೆದುಕೊಂಡ 80 ಸಾವಿರಕ್ಕೂ ಹೆಚ್ಚು ಭಾರತೀಯರು ಈಗ ಅತಂತ್ರ !

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್​, ಜ.25. ಭಾರತದ 80 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಅಮೆರಿಕದ ಟೆಕ್ ಕಂಪನಿಗಳಲ್ಲಿ ಕೆಲಸ ಕಳೆದುಕೊಂಡು ಪರದಾಡುತ್ತಿದ್ದಾರೆ. ಬರೋಬ್ಬರಿ 3 ಲಕ್ಷ ಜನ ಉದ್ಯೋಗಿಗಳನ್ನ ಕಳೆದುಕೊಂಡು ಅತಂತ್ರರಾಗಿದ್ದಾರೆ. ಇದರಲ್ಲಿ 80 ಸಾವಿರ ಮಂದಿ ಭಾರತೀಯರೆಂದು ತಿಳಿದುಬಂದಿದೆ. ಅಮೆರಿಕವು ಕೌಶಲ್ಯಯುತ ಉದ್ಯೋಗಿಗಳಿಗಾಗಿ H-1B, L1 ಎನ್ನುವ ಕಠಿಣ ನಿಯಮದ ವೀಸಾ ನೀಡುತ್ತದೆ. ಸದ್ಯ ಈಗ ಜಾಬ್​ ಕಳೆದುಕೊಂಡವರೆಲ್ಲ ಬಹುತೇಕ ಈ ವೀಸಾ ಹೊಂದಿದವರೇ ಆಗಿದ್ದಾರೆ. ಅಮೆರಿಕದಲ್ಲಿ ಈ ವೀಸಾ ಹೊಂದಿದವರು ಯಾರೇ ಆಗಿರಲಿ ಜಾಬ್​ ಕಳೆದುಕೊಂಡ

ಅಮೆರಿಕದಲ್ಲಿ ಕೆಲಸ ಕಳೆದುಕೊಂಡ 80 ಸಾವಿರಕ್ಕೂ ಹೆಚ್ಚು ಭಾರತೀಯರು ಈಗ ಅತಂತ್ರ ! Read More »

ರಾಷ್ಟ್ರೀಯ ನ್ಯೂಸ್

ಅರಣ್ಯದಲ್ಲಿ ನಿಗೂಢವಾಗಿ ಸಿಕ್ಕ ಸೂಟ್​ಕೇಸ್​ ತೆರೆದ ಪೊಲೀಸರಿಗೆ ಕಾದಿತ್ತು ಶಾಕ್​..!

(ನ್ಯೂಸ್ ಕಡಬ)newskadaba.com ಭುವನೇಶ್ವರ, ಜ.25. ಒಡಿಶಾದ ಗ್ರಾಮವೊಂದರ ಸಮೀಪದ ಅರಣ್ಯದಲ್ಲಿ ಅನಾಥವಾಗಿ ಬಿದ್ದಿದ್ದ ಸೂಟ್​ಕೇಸ್ ತೆರೆದ ಪೊಲೀಸರು ಅದರಲ್ಲಿದ್ದ ವ್ಯಕ್ತಿಯೊಬ್ಬನ ಶವವನ್ನು ಕಂಡು ಶಾಕ್​ ಆಗಿದ್ದಾರೆ. ಈ ಘಟನೆ ಖೋರ್ಧಾ ಜಿಲ್ಲೆಯ ನಚುನಿ ಪೊಲೀಸ್​ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದ ಸಮೀಪ ಇರುವ ಅರಣ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋರಂಜನ್​ ಮೋಹಪಾತ್ರ (32) ಎಂದು ಗುರುತಿಸಲಾಗಿದೆ. ಆತ ರಣಪುರ್ ಬ್ಲಾಕ್ ಅಡಿಯಲ್ಲಿ ಬರುವ ಬಲಭದ್ರಪುರ ಪಂಚಾಯತ್‌ನ ಲಖಪದ ಗ್ರಾಮದ ಗಂಗಾಧರ್ ಅವರ ಪುತ್ರ. ಉರುವಲು ಸಂಗ್ರಹಿಸಲು ಕಾಡಿಗೆ

ಅರಣ್ಯದಲ್ಲಿ ನಿಗೂಢವಾಗಿ ಸಿಕ್ಕ ಸೂಟ್​ಕೇಸ್​ ತೆರೆದ ಪೊಲೀಸರಿಗೆ ಕಾದಿತ್ತು ಶಾಕ್​..! Read More »

ರಾಷ್ಟ್ರೀಯ ನ್ಯೂಸ್
Scroll to Top