ರಾಷ್ಟ್ರೀಯ ನ್ಯೂಸ್

800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.21. ವಿಪ್ರೋ ಇದೀಗ ಸುಮಾರು 800 ಮಂದಿ ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ವರದಿಯಾಗಿದೆ. ಆಂತರಿಕ ಪರೀಕ್ಷೆ ನಡೆಸಿ ಕಳಪೆ ಕಾರ್ಯಕ್ಷಮತೆಯ ಕಾರಣ ನೀಡಿ ಉದ್ಯೋಗಿಗಳನ್ನು ವಜಾಗೊಳಿಸಿರುವುದು ತಿಳಿದುಬಂದಿದೆ. ಈ ಕುರಿತು ವಿಪ್ರೋ ಪ್ರತಿಕ್ರಿಯೆ ನೀಡಿದ್ದು, ನಾವು ಅತ್ಯುನ್ನತ ಗುಣಮಟ್ಟವನ್ನು ಬಯಸುತ್ತೇವೆ. ನಾವು ನಿಗದಿಪಡಿಸಿರುವ ಗುರಿಯ ಮಾನದಂಡಗಳಿಗೆ ಅನುಗುಣವಾಗಿ, ಪ್ರತಿಯೊಬ್ಬ ಹೊಸ ಉದ್ಯೋಗಿ ಕೂಡ ಅವರಿಗೆ ನೀಡಲಾದ ಕೆಲಸದ ಕ್ಷೇತ್ರದಲ್ಲಿ ನಿರ್ದಿಷ್ಟ ಮಟ್ಟದ ಪ್ರಾವೀಣ್ಯತೆಯನ್ನು ಹೊಂದಿರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಸಂಸ್ಥೆಯ ವ್ಯವಹಾರ […]

800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ ! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಕೇಂದ್ರ ಸರಕಾರದಿಂದ ಭಾರೀ ಉಡುಗೊರೆಯ ನಿರೀಕ್ಷೆಯಲ್ಲಿರುವ ರೈತರಿಗಾಗಿ ಬಜೆಟ್‌ಗೂ ಮೊದಲೇ ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಸರಕಾರ ಸೂಚನೆ ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿಗೆ ಸಂಬಂಧಪಟ್ಟಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ರೈತಾಪಿ ಮಿತ್ರರು ಪಡೆದುಕೊಳ್ಳಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ.  

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !! Read More »

ರಾಷ್ಟ್ರೀಯ ನ್ಯೂಸ್

ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು !!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.20. ಮೊರದಾಬಾದ್‌ ನ ಕಾಲೇಜೊಂದರಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಬುರ್ಖಾ ಹಾಕಿಕೊಂಡು‌ ಬಂದರೆ ಕಾಲೇಜ್‌ ಕ್ಯಾಂಪಸ್‌ಗೆ ಹೋಗಲು ಬಿಡುವುದಿಲ್ಲ, ಗೇಟ್‌ನಲ್ಲಿ ಬುರ್ಖಾವನ್ನು ತೆಗೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇನ್ನು ಕಾಲೇಜಿನಲ್ಲಿ ಡ್ರೆಸ್‌ಕೋಡ್‌ ಇದೆ. ಕಾಲೇಜಿನ ಯೂನಿಫಾರ್ಮ್‌ ಹಾಕೊಂಡು ಬಂದರೆ ಮಾತ್ರ ಒಳಗೆ ಪ್ರವೇಶ ನೀಡಲಾಗುವುದು. ಈ ನಿಯಮವನ್ನು ಮೀರಿದರೆ ಒಳಗೆ ಪ್ರವೇಶವಿಲ್ಲ ಎಂದು ಕಾಲೇಜು ಪ್ರಾಧ್ಯಾಪಕ ಎಪಿ ಸಿಂಗ್ ಹೇಳಿದ್ದಾರೆ. ಕಾಲೇಜಿನ ನಿರ್ಧಾರದ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟಿಸಿ

ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು !! Read More »

ರಾಷ್ಟ್ರೀಯ ನ್ಯೂಸ್

ಮೊದಲ ಬಾರಿಗೆ ಕರ್ನಲ್ ಹುದ್ದೆಗೇರಲಿದ್ದಾರೆ 108 ಮಹಿಳಾ ಯೋಧರು !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಲೆಫ್ಟಿನೆಂಟ್ ಕರ್ನಲ್‌ಗಳಾಗಿದ್ದ ಭಾರತೀಯ ಸೇನೆಯ 108 ಮಂದಿ ಮಹಿಳಾ ಯೋಧರು ಕರ್ನಲ್ ಆಗಿ ಬಡ್ತಿ ಪಡೆದುಕೊಳ್ಳಲಿದ್ದಾರೆ. ಆ ಮೂಲಕ ಅವರೆಲ್ಲರೂ ತಂಡ ಮುನ್ನಡೆಸುವ ಜವಾಬ್ದಾರಿ ಪಡೆದುಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಸೇವೆಯಲ್ಲಿರುವ ಮಹಿಳೆಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, 1992ರಿಂದ 2006ನೇ ಬ್ಯಾಚ್‌ನ ಒಟ್ಟು 108 ಮಂದಿ ಮಹಿಳೆಯರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ. ಆ ಮೂಲಕ ತಮ್ಮ ತಂಡಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅವರು ಪಡೆದುಕೊಳ್ಳಲಿದ್ದಾರೆ. ಎಂಜಿನಿಯರ್‍ಸ್, ಸಿಗ್ನಲ್‌ಗಳು,

ಮೊದಲ ಬಾರಿಗೆ ಕರ್ನಲ್ ಹುದ್ದೆಗೇರಲಿದ್ದಾರೆ 108 ಮಹಿಳಾ ಯೋಧರು !! Read More »

ರಾಷ್ಟ್ರೀಯ ನ್ಯೂಸ್

ಏರುತ್ತಲೇ ಇರುವ ಗೋಧಿ ಹಿಟ್ಟಿನ ದರ ನಿಯಂತ್ರಣಕ್ಕೆ ಕ್ರಮ ​! ➤  ಕೇಂದ್ರ ಸರ್ಕಾರ ಭರವಸೆ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.20. ದೇಶದಲ್ಲಿ ಗೋಧಿ ಹಾಗೂ ಗೋಧಿಹಿಟ್ಟಿನ ಚಿಲ್ಲರೆ ಮಾರಾಟ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಕೇಂದ್ರ ಸರಕಾರ ಬೆಲೆ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದೆ. ಸದ್ಯದ ಮಾರುಕಟ್ಟೆಯಲ್ಲಿ ಗೋಧಿ ಹಿಟ್ಟಿನ ದರ ಪ್ರತಿ ಕೆ.ಜಿಗೆ 38 ರೂ. ಮೀರಿರುವ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಸರಬರಾಜು ಇಲಾಖೆ ಕಾರ್ಯದರ್ಶಿ ಸಂಜೀವ್‌ ಚೋಪ್ರಾ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರ ಕೇಂದ್ರ ಸರಕಾರದ ಗಮನದಲ್ಲಿದೆ. ಕೇಂದ್ರ ಆಹಾರ ನಿಗಮದ ಗೋದಾಮುಗಳಲ್ಲಿ ಗೋಧಿಸಂಗ್ರಹ ಸಾಕಷ್ಟಿದೆ. ಆದರೂ ಬೆಲೆ

ಏರುತ್ತಲೇ ಇರುವ ಗೋಧಿ ಹಿಟ್ಟಿನ ದರ ನಿಯಂತ್ರಣಕ್ಕೆ ಕ್ರಮ ​! ➤  ಕೇಂದ್ರ ಸರ್ಕಾರ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜ.20. ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭಕ್ತರು ನೀಡಿರುವ ಕಾಣಿಕೆ ಮತ್ತು ಇತರೆ ದೇಣಿಗೆ ಪೊಟ್ಟಣ ಎಣಿಕೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬುದನ್ನು ತನಿಖೆ ನಡೆಸಿ ವರದಿ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಗುಪ್ತಚರ ವಿಭಾಗಕ್ಕೆ ಹೈಕೋರ್ಟ್‌ ಸೂಚಿಸಿದೆ. ಕಾಣಿಕೆಯನ್ನು ಎಣಿಸುವಲ್ಲಿ ಆದ ಲೋಪದ ಕಾರಣ, ಕಾಣಿಕೆ ಹಾಕಿದ ನೋಟುಗಳು ಬಳಸಲಾಗದ ಸ್ಥಿತಿ ತಲುಪಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಸೂಚನೆ ನೀಡಿದೆ. 2 ತಿಂಗಳ ಯಾತ್ರೆಯ ಅವಧಿಯಲ್ಲಿ ದೇಗುಲಕ್ಕೆ 310 ಕೋಟಿ ರು.

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ. ರೈಲ್ವೆ ನಿಲ್ದಾಣ ತಲುಪುವ

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಗಜಯಾಬಾದ್, ಜ.20. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ !

(ನ್ಯೂಸ್ ಕಡಬ)newskadaba.com ಮುಂಬೈ, ಜ.20. ಬಾಲಿವುಡ್ ನಟಿ ರಾಖಿ ಸಾವಂತ್ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ರಾಖಿ ಸಾವಂತ್ ಬಂಧನದ ಬಗ್ಗೆ ಶೆರ್ಲಿನ್ ಚೋಪ್ರಾ ಟ್ವಿಟ್ಟರ್’ ನಲ್ಲಿ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ‘ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ‌. ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ರಾಖಿ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಮಾನಹಾನಿ ಮಾಡಿದ್ದಾರೆಂದು ಶೆರ್ಲಿನ್ ದೂರು

ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ ! Read More »

ರಾಷ್ಟ್ರೀಯ ನ್ಯೂಸ್

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.20. ಭಾರತ ಸರ್ಕಾರವು ಪರಿಚಯಿಸಿದ ವಾಹನ ಸ್ಕ್ರ್ಯಾಪ್ ನೀತಿಯಡಿ ದೇಶದಲ್ಲಿ 15 ವರ್ಷ ಹಳೆಯ ನೋಂದಣಿ ವಾಹನನ್ನು ಕಡ್ಡಾಯವಾಗಿ ರದ್ದುಗೊಳಿಸಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು Read More »

ರಾಷ್ಟ್ರೀಯ ನ್ಯೂಸ್
Scroll to Top