ರಾಷ್ಟ್ರೀಯ ನ್ಯೂಸ್

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!  

(ನ್ಯೂಸ್ ಕಡಬ) newskadaba.com  ಆಂಧ್ರ ಪ್ರದೇಶ, ಜ.12.   ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲೇಟು ಬಿದ್ದಿದ್ದು, ಬೋಗಿಗಳಿಗೆ ಹಾನಿಯಾಗಿದೆ. ಪ್ರಧಾನಿ ಮೋದಿ ಈ ರೈಲನ್ನು ಜನವರಿ 19 ರಂದು ಗ್ರೀನ್‌ ಸಿಗ್ನಲ್‌ ನೀಡಬೇಕಿತ್ತು. ಆದರೆ, ಉದ್ಘಾಟನೆಗೂ ಮುನ್ನವೇ ಈ ರೀತಿ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ನಡೆದಿದೆ. ಟ್ರಯಲ್‌ ರನ್‌ ಮುಗಿಸಿ ಮರ್ರಿಪೇಲಂನಿಂದ ವಿಶಾಖಪಟ್ಟಣ ರೈಲ್ವೆ ಸ್ಟೇಷನ್‌ಗೆ ವಂದೇ ಭಾರತ್‌ ಟ್ರೈನ್‌ ಹೋಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ […]

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಏಲಕ್ಕಿಯಲ್ಲಿ ಕೀಟನಾಶಕ..! ➤  ಶಬರಿಮಲೆ ಅರವಣ ಪ್ರಸಾದಕ್ಕೆ ಹೈಕೋರ್ಟ್ ತಡೆ 

(ನ್ಯೂಸ್ ಕಡಬ) newskadaba.com  ಕೊಚ್ಚಿ, ಜ.12.  ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ‘ಅರವಣ ಪ್ರಸಾದ’ ಮಾರಾಟಕ್ಕೆ ಹಾಗೂ ತಯಾರಿಕೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೀಟನಾಶಕ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಸಾದವನ್ನು ಮಾರಾಟ ಮಾಡದಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ. ಇದರಿಂದ ಆರೂವರೆ ಕೋಟಿ ರೂ. ಮೌಲ್ಯದ ಅರವಣ ಪ್ರಸಾದ ವ್ಯರ್ಥ ಆಗಲಿದೆ. ಪ್ರಸಾದ ತಯಾರಿಸಲು ಖರೀದಿಸುವ ಏಲಕ್ಕಿಯನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ ಅದರಲ್ಲಿ 14

 ಏಲಕ್ಕಿಯಲ್ಲಿ ಕೀಟನಾಶಕ..! ➤  ಶಬರಿಮಲೆ ಅರವಣ ಪ್ರಸಾದಕ್ಕೆ ಹೈಕೋರ್ಟ್ ತಡೆ  Read More »

ರಾಷ್ಟ್ರೀಯ ನ್ಯೂಸ್

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 12. ಅಡುಗೆ ಸಿಲಿಂಡರ್ ಸೋರಿಕೆಯಾದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟ ಭೀಕರ ಘಟನೆ ಚಂಡೀಗಢದ ಪಾಣಿಪತ್‌ನಲ್ಲಿ ವರದಿಯಾಗಿದೆ. ಮೃತರನ್ನು ಅಬ್ದುಲ್ (45), ಅವರ ಪತ್ನಿ(40) ಮತ್ತು 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಹಾಗೂ 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ. ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ದುರ್ಘಟನೆ  ಸಂಭವಿಸಿದೆ ಎನ್ನಲಾಗಿದೆ.

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರಂತರ ಜೀವಬೆದರಿಕೆ ಹಿನ್ನೆಲೆ ➤ ಗನ್ ಲೈಸೆನ್ಸ್ ಪಡೆದುಕೊಂಡ ನೂಪುರ್ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.   ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮ, ಖಾಸಗಿ ಟಿವಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಪ್ರವಾದಿ ಪೈಗಂಬರ್‌ ಕುರಿತಾಗಿ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು. ಬಳಿಕ ದೇಶಾದ್ಯಂತ ಭಾರೀ ಪ್ರತಿಭಟನೆಯೂ ನಡೆದಿತ್ತು ಅಲ್ಲದೇ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಬೆನ್ನಲ್ಲೇ ಬಿಜೆಪಿ ಕೂಡಾ ಇವರನ್ನು ಪಕ್ಷದಿಂದ ಹೊರಹಾಕುವ ನಿರ್ಧಾರ ಮಾಡಿತ್ತು.

ನಿರಂತರ ಜೀವಬೆದರಿಕೆ ಹಿನ್ನೆಲೆ ➤ ಗನ್ ಲೈಸೆನ್ಸ್ ಪಡೆದುಕೊಂಡ ನೂಪುರ್ ಶರ್ಮಾ..! Read More »

ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಸ್ಕತ್, ಜ.12. ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಮಸ್ಕತ್ ನಲ್ಲಿ ವರದಿಯಾಗಿದೆ. ಕೇರಳ ಮೂಲದ ಯುವಕ ಮೃತಪಟ್ಟವರು ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತಗೊಂಡು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಬ್ಯಾಡ್ಮಿಂಟನ್ ಆಟದ ವೇಳೆ‌ ನಡೆದ ಹೃದಯಾಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.  

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ  

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.12. ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇದರ ಬೆನ್ನಲ್ಲೇ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿದುಬಂದಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲು ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ,

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ   Read More »

ರಾಷ್ಟ್ರೀಯ ನ್ಯೂಸ್

ವಿಐಪಿ ಹಜ್ ಕೋಟಾ ರದ್ದುಗೊಳಿಸಲು ನಿರ್ಧರಿಸಿದ ಸರಕಾರ..! ➤ ಎಲ್ಲಾ ಸೀಟ್ ಗಳು ಕೂಡ ರದ್ದು        

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.12. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಲ್ಲಿ ಜನರಿಗೆ ಲಭ್ಯವಿದ್ದ ವಿಐಪಿ ಹಜ್ ಕೋಟಾವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮೂಲಗಳ ಪ್ರಕಾರ ಶೀಘ್ರದಲ್ಲೇ ಹೊಸ ಪರಿಷ್ಕೃತ ಹಜ್ ನೀತಿಯನ್ನು ಸರಕಾರ ಪ್ರಕಟಿಸಲಿದೆ. ವಿಐಪಿ ಹಜ್ ಕೋಟಾದ ಅಡಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಮತ್ತು ಹಜ್ ಸಮಿತಿಗೆ ನಿಗದಿಪಡಿಸಿದ ಆಸನಗಳ ಮೂಲಕ ಜನರು ಹಜ್‌ಗೆ ಹೋಗಬಹುದು. ಈಗ ಕೋಟಾವನ್ನು ರದ್ದುಗೊಳಿಸಲಾಗಿದೆ. ವಿಐಪಿ ಯಾತ್ರಿಕರು ಇನ್ಮುಂದೆ ಸಾಮಾನ್ಯ ಹಜ್ ಯಾತ್ರಿಕರಂತೆ

ವಿಐಪಿ ಹಜ್ ಕೋಟಾ ರದ್ದುಗೊಳಿಸಲು ನಿರ್ಧರಿಸಿದ ಸರಕಾರ..! ➤ ಎಲ್ಲಾ ಸೀಟ್ ಗಳು ಕೂಡ ರದ್ದು         Read More »

ರಾಷ್ಟ್ರೀಯ ನ್ಯೂಸ್

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.11. ಉತ್ತರಾಖಂಡ್ ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತಹದ್ದೇ ಬೆಳವಣಿಗೆ ಕಂಡು ಬಂದಿದೆ. ಅಲಿಘಡ್ ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಹಲವು ದಿನಗಳಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ. ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..! Read More »

ರಾಷ್ಟ್ರೀಯ ನ್ಯೂಸ್

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.11.  ಎಂಟು ವರ್ಷಗಳ ನಂತರ ಅಜಿತ್ ಮತ್ತು ಥಳಪತಿ ವಿಜಯ್ ನಟನೆಯ ಚಿತ್ರಗಳು ಮುಖಾಮುಖಿ ಆಗುತ್ತಿವೆ. ಹಾಗಾಗಿ ಸಹಜವಾಗಿಯೇ ಸ್ಟಾರ್ ವಾರ್ ಕ್ರಿಯೇಟ್ ಆಗಿದೆ ಎಂದು ತಿಳಿದುಬಂದಿದೆ. ಇಬ್ಬರೂ ಕಲಾವಿದರ ಅಭಿಮಾನಿಗಳು ಕೂಡ ಕಳೆದ ಹದಿನೈದು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುವ ಮೂಲಕ ಜಗಳಕ್ಕೆ ನಾಂದಿ ಹಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿದ್ದ ಗಲಾಟೆ, ಇದೀಗ ನಿಜ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಅಜಿತ್ ಕುಮಾರ್‌ ನಟನೆಯ ‘ತುನಿವು’ ಸಿನಿಮಾದ ಮೇಲೆ ಸಾಕಷ್ಟು

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಸಾದ ಮುಖ್ಯ ತಂತ್ರಜ್ಞರಾಗಿ ಭಾರತ ಮೂಲದ ‘ಎಸಿ ಚರಾನಿಯಾ’ ಆಯ್ಕೆ..!  

(ನ್ಯೂಸ್ ಕಡಬ)newskadaba.com  ಅಮೇರಿಕಾ, ಜ.11. ನಾಸಾದ ಮುಖ್ಯ ತಂತ್ರಜ್ಞರಾಗಿ ಭಾರತೀಯ-ಅಮೆರಿಕನ್ ಏರೋಸ್ಪೇಸ್ ತಜ್ಞ ಎಸಿ ಚರಾನಿಯಾ ಅವರನ್ನ ನೇಮಿಸಲಾಗಿದೆ ಎಂದು ವರದಿಯಾಗಿದೆ. ಎಸಿ ಚರಾನಿಯಾ ಅವರು ತಂತ್ರಜ್ಞಾನ ನೀತಿ ಮತ್ತು ಬಾಹ್ಯಾಕಾಶ ಕಾರ್ಯಕ್ರಮಗಳ ಬಗ್ಗೆ ನಾಸಾ ಮುಖ್ಯಸ್ಥ ಬಿಲ್ ನೆಲ್ಸನ್ ಅವರ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ನಾಸಾದ ಆರು ಮಿಷನ್ಗಳ ಅಗತ್ಯತೆಗಳೊಂದಿಗೆ ಎಸಿ ಚರಾನಿಯಾ ಏಜೆನ್ಸಿಯ ತಂತ್ರಜ್ಞಾನ ಹೂಡಿಕೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ನಾಸಾ ಹೇಳಿಕೆಯಲ್ಲಿ ತಿಳಿಸಿದೆ ಎನ್ನಲಾಗಿದೆ.      

ನಾಸಾದ ಮುಖ್ಯ ತಂತ್ರಜ್ಞರಾಗಿ ಭಾರತ ಮೂಲದ ‘ಎಸಿ ಚರಾನಿಯಾ’ ಆಯ್ಕೆ..!   Read More »

ರಾಷ್ಟ್ರೀಯ ನ್ಯೂಸ್
Scroll to Top