ರಾಷ್ಟ್ರೀಯ ನ್ಯೂಸ್

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಜ. 02. ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ನಾಗರಿಕರು ಮೃತಪಟ್ಟ ಹಲವರು ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ವರದಿಯಾಗಿದೆ. ಮೃತಪಟ್ಟಿರುವವರನ್ನು ಸತೀಶ್ ಕುಮಾರ್ (45), ದೀಪಕ್ ಕುಮಾರ್ (23), ಪ್ರೀತಮ್ ಲಾಲ್ (57) ಮತ್ತು ಶಿಶುಪಾಲ್ (32) ಹಾಗೂ ಗಾಯಗೊಂಡವರನ್ನು ಪವನ್ ಕುಮಾರ್ (38), ರೋಹಿತ್ ಪಂಡಿತ್ (27), ಸರೋಜ್ ಬಾಲಾ (35), ರಿದಮ್ ಶರ್ಮಾ (17) ಮತ್ತು ಪವನ್ ಕುಮಾರ್ (32) ಎಂದು […]

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ 

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯ, ಜ. 02. ಎರಡು ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ನ ದಕ್ಷಿಣದಲ್ಲಿರುವ ಗೋಲ್ಡ್ ಕೋಸ್ಟ್ ಮೇನ್ ಬೀಚ್‌ ನ ಪ್ರವಾಸೋದ್ಯಮ ತಾಣದಲ್ಲಿ ವರದಿಯಾಗಿದೆ. ಎರಡು ಹೆಲಿಕಾಪ್ಟರ್‌ ಗಳು, ಡಿಕ್ಕಿಯಾಗಿ ಸೀ ವರ್ಲ್ಡ್ ರೆಸಾರ್ಟ್‌ನಿಂದ ಹೊರಗಿರುವ ಮರಳಿನ ದಂಡೆಯ ಮೇಲೆ ಬಿದ್ದವು. ತುರ್ತು ಸೇವೆಗಳು ಕರಾವಳಿಯಿಂದ ದೂರದಲ್ಲಿರುವ ಮರಳು ದಂಡೆಗೆ ಪ್ರವೇಶಿಸಲು ಕಷ್ಟಕರವಾಗಿದೆ. ಆದರೂ ಕಾರ್ಯಾಚರಣೆ ಆರಂಭವಾಗಿದೆ ಎಂದು ಆಗ್ನೇಯ ಪ್ರದೇಶದ

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬಯಿ, ಜ. 02. ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಕೇರಳ ಮೂಲದ ಆರ್. ಕೃಷ್ಣಕುಮಾರ್(84) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರು ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದು, ನನ್ನ ಸ್ನೇಹಿತ, ಸಹೋದ್ಯೋಗಿಯ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ.

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                    

(ನ್ಯೂಸ್ ಕಡಬ) newskadaba.com ಕೇರಳ, ಜ. 02. ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಅಸ್ವಸ್ಥರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದ ಆರೋಗ್ಯ ಸಚಿವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸಲು ಆಹಾರ ಸುರಕ್ಷತಾ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಶುದ್ಧೀಕರಣ / ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನರು ಅಸ್ವಸ್ಥ..!!                     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅಹಮದಾಬಾದ್‌, ಜ. 02. ಮನೆಯೊಂದರ ಮೊದಲ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಅಹಮದಾಬಾದ್‌ನಲ್ಲಿ ವರದಿಯಾಗಿದೆ. ಮೃತರನ್ನು ಜಯೇಶ್ ವಘೇಲಾ (40), ಮತ್ತು ಅವರ ಪತ್ನಿ ಹಂಸಾ (35) ಹಾಗೂ ಅವರು ಮಗ ರೆಹಾನ್ (8) ಎಂದು ಗುರುತಿಸಲಾಗಿದೆ.

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!! 

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 02. ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ವರದಿಯಾಗಿದೆ. ಮೃತ ಮಹಿಳೆಯನ್ನು ಮಮತಾ ಕುಶ್ವಾಹಾ ಎಂದು ಗುರುತಿಸಲಾಗಿದೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಈ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆ ಈ ಕೃತ್ಯವನ್ನು ಎಸಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02.  ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು ಕಾನೂನುಬಾಹಿರ ಎಂದು ಕರೆದಿರುವ ಅವರು, “ನನ್ನ ಪ್ರಕಾರ ನ. 08 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ

ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ Read More »

ರಾಷ್ಟ್ರೀಯ ನ್ಯೂಸ್

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ವರದಿಯಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಕೈದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ಭರದಲ್ಲಿ 10 ಮಂದಿ ಸಿಬ್ಬಂದಿಗಳು ಹಾಗೂ ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಾಲ್ವರನ್ನು

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…!

(ನ್ಯೂಸ್ ಕಡಬ) newskadaba.com ಮುಂಬೈ, ಜ.02.  ಹಿಂದಿ ಧಾರವಾಹಿಗಳಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡಿರುವ ಬಾಲಕಿಯೋರ್ವಳು ತನ್ನ 15ನೇ ವಯಸ್ಸಿಗೆ ಸ್ವತಃ ಮನೆಯೊಂದನ್ನು ಖರೀದಿ ಮಾಡಿ ಎಲ್ಲರನ್ನು ಹುಬ್ಬೇರುವಂತೆ ಮಾಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಬಾಲನಟಿಯಾಗಿ ಸ್ಟಾರ್ ಪ್ಲಸ್ ನ ಶೋ ‘ಯೇ ಹೈ ಮೊಹಬ್ಬತೇನ್’ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ರುಹಾನಿಕಾ ಧಮನ್, ತಮ್ಮ ಇನ್ ಸ್ಟಾ ಪೋಸ್ಟ್ ನಲ್ಲಿ ಸದಾ ಪ್ರೋತ್ಸಾಹ ನೀಡಿದ ತನ್ನ ಪೋಷಕರಿಗೆ ಧನ್ಯವಾದ ಹೇಳಿದ್ದಾರೆ. ‘ಇದು ಆರಂಭವಷ್ಟೇ, ನಾನು ಇನ್ನೂ ದೊಡ್ಡ ಕನಸು ಕಾಣುತ್ತಿದ್ದೇನೆ.

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…! Read More »

ರಾಷ್ಟ್ರೀಯ ನ್ಯೂಸ್

ಹೊಸ ವರ್ಷಕ್ಕೆ ಬಿಗ್ ಶಾಕ್ ➤ ವಾಣಿಜ್ಯ ಸಿಲಿಂಡರ್ ದರ 25 ರೂ. ಹೆಚ್ಚಳ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್‌ ಗಳ ಬೆಲೆ ಪ್ರತಿ ಸಿಲಿಂಡರ್ ಮೇಲೆ 25 ರೂಪಾಯಿ ಏರಿಕೆಯಾಗಿದೆ. ಇದು ಜನವರಿ 1ರಿಂದಲೇ ಅನ್ವಯವಾಗಿದೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ದರ ರಾಜಧಾನಿ ದಿಲ್ಲಿಯಲ್ಲಿ 1,769ಕ್ಕೆ ಏರಿಕೆಯಾಗಿದೆ. 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬಯಿಯಲ್ಲಿ 1,721 ರೂ ಇದ್ದರೆ, ಕೋಲ್ಕತಾದಲ್ಲಿ 1,870 ಮತ್ತು ಚೆನ್ನೈ

ಹೊಸ ವರ್ಷಕ್ಕೆ ಬಿಗ್ ಶಾಕ್ ➤ ವಾಣಿಜ್ಯ ಸಿಲಿಂಡರ್ ದರ 25 ರೂ. ಹೆಚ್ಚಳ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top