ರಾಷ್ಟ್ರೀಯ ನ್ಯೂಸ್

ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಖಂಡ್, ಡಿ. 13. ತನ್ನ ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಧುವಿನ ತಂದೆ ಮೃತಪಟ್ಟ ಘಟನೆ ಉತ್ತರಖಂಡ್ ನಲ್ಲಿ ನಡೆದಿದೆ.   ಮಗಳ ಮದುವೆಯ ಸಂತಸದಲ್ಲಿದ್ದ ತಂದೆ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೈದರಾಬಾದ್? ರಾಸಾಯನಿಕ ಪೆಟ್ಟಿಗೆ ಸ್ಫೋಟ ವ್ಯಕ್ತಿ ಗಂಭೀರ!

(ನ್ಯೂಸ್‌ ಕಡಬ) newskadaba.com ,ಹೈದರಬಾದ್ ಡಿ. 12 ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ರಾಸಾಯನಿಕಗಳ ಪೆಟ್ಟಿಗೆಯೊಂದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹೈದರಾಬಾದ್‌ನ ಬಡಾ ಬಜಾರ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಭಾರಿ ಸ್ಪೋಟದಿಂದ ಆ ಪ್ರದೇಶದ ಮೂರು ಅಂಗಡಿಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಜಿಲ್ಲಾ ಸರ್ಕಾರಿ ಜನರಲ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳದಿಂದ ಮಾದರಿಯನ್ನು ಸಂಗ್ರಹಿಸಿ ವಿಚಾರಣೆ ನಡೆಸಿದರು.

ಹೈದರಾಬಾದ್? ರಾಸಾಯನಿಕ ಪೆಟ್ಟಿಗೆ ಸ್ಫೋಟ ವ್ಯಕ್ತಿ ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಡಿ.12 ಆಸ್ತಿ ವಿವಾದಕ್ಕೆ ಹಿರಿಯ ನಟಿ ವೀಣಾ ಕಪೂರ್ ಅವರ ಮಗ ಸಚಿನ್ ಕಪೂರ್ ತನ್ನ ಅಮ್ಮನನ್ನೇ ಬೇಸ್ಬಾಲ್ ಬ್ಯಾಟ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಡಿ.೧೦ ರಂದು ನಡೆದಿದೆ. ಸದ್ಯ ಮಗನನ್ನು ಪೋಲಿಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com ಗುವಾಹಟಿ, ಡಿ. 10. ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ನೂರಾರು ಮನೆಗಳು  ಹೊತ್ತಿ ಉರಿದ ಘಟನೆ ಅಸ್ಸಾಂನ ಗುವಾಹಟಿಯ ಸ್ಲಂ ಕಾಲೋನಿಯಲ್ಲಿ ನಡೆದಿದೆ.   ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ Read More »

ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 10.  ಕೊಳವೆಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರದಂದು ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದೆ.     ಮೃತ ಬಾಲಕನನ್ನು ತನ್ಮಯ್ ಎಂದು ಗುರುತಿಸಲಾಗಿದೆ. ಈತ ಡಿ. 06ರಂದು ಸಂಜೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿಟ್ಟಿದ್ದ ಕೊಳವೆಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2022-23 ಸಾಲಿನ ಬ್ಯಾಂಕ್ ಗಳ ಗೃಹ ಸಾಲದ ಬಡ್ಡಿ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 10. ಆರ್ ಬಿಐ ರೆಪೋ ದರ 35 ಮೂಲಾಂಶದಷ್ಟು ಏರಿಸಿದ ಹಿನ್ನೆಲೆ ಹಲವು ಬ್ಯಾಂಕ್ ಗಳು ಗೃಹ ಸಾಲಗಳ ಬಡ್ಡಿದರಗಳನ್ನು ಏರಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಬಡ್ಡಿ ದರ ಏರಿಸಿದ್ದು, ಪಿಎನ್ ಬಿ ಗೃಹ ಸಾಲ ಬಡ್ಡಿ ದರಗಳನ್ನು 35 ಬಿಪಿ ಎಸ್ ನಷ್ಟು ಹೆಚ್ಚು ಮಾಡಿವೆ.  ಆರ್ ಎಲ್ ಎಲ್ ಆರ್ ಅನ್ನು ಹಾಲಿ ಶೇ. 8.40 ರಿಂದ ಶೇ. 8.75ಕ್ಕೆ ಬದಲಾಯಿಸಲಾಗಿದೆ ಎಂದು

2022-23 ಸಾಲಿನ ಬ್ಯಾಂಕ್ ಗಳ ಗೃಹ ಸಾಲದ ಬಡ್ಡಿ ದರದಲ್ಲಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ.10. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ವರನು ಮದುವೆ ಮಂಟಪದಿಂದ ಓಡಿ ಹೋದ ಆತಂಕಕಾರಿ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಸಂಭವಿಸಿದೆ.     ವರನು ವಧುವಿನ ಮನೆಯವರಲ್ಲಿ ವರದಕ್ಷಿಣೆಯಾಗಿ ಬೈಕ್ ನ್ನು ಬೇಡಿಕೆಯಿಟ್ಟಿದ್ದು, ಅವರು ಕೊಡಿಸದೇ ಇದ್ದ ಹಿನ್ನೆಲೆ ವರನು ಮಂಟಪದಿಂದಲೇ ಓಡಿ ಹೋಗಿದ್ದಾನೆ ಎನ್ನಲಾಗಿದೆ. ನಂತರ ಎರಡು ದಿನಗಳ ಬಳಿಕ ಮದುವೆ ಬೇಡ ಎಂದು ಹೋದ ವರನು ಬಂದು ಅದೇ ಮದುವೆ ಮಂಟಪದಲ್ಲಿ ಮದುವೆಯಾದ ಘಟನೆ ವರದಿಯಾಗಿದ್ದು, ಈ

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!! Read More »

ರಾಷ್ಟ್ರೀಯ ನ್ಯೂಸ್

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ ಡಿ.09. ವಿಶಾಖಪಟ್ಟಣಂ ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಎಂ.ಶಶಿಕಲಾ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಎಂಸಿಎ ಓದುತ್ತಿದ್ದ ಆಕೆ ಬುಧವಾರ ಬೆಳಗ್ಗೆ ಅಣ್ಣಾವರಂನಿಂದ ಗುಂಟೂರು – ರಾಯಗಡ ರೈಲಿನಲ್ಲಿ ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ಅಪಘಾತಕ್ಕೆ ಗುರಿಯಾಗಿದ್ದು, ರೈಲ್ವೆ ರಕ್ಷಣಾ ತಂಡವು ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಾಹಿತಿ ಪಡೆದ ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದು,

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top