ರಾಷ್ಟ್ರೀಯ ನ್ಯೂಸ್

ಇಂದಿನಿಂದ ಜೂ.19ರ ವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರೀಯ NCC ಶಿಬಿರ ➤ ಮರ್ಕಂಜದ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.06. ಎನ್ಎಂಸಿ ಸುಳ್ಯದ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ.ಪಿ.ಯವರು ಉತ್ತರಕಾಶಿ, ಉತ್ತರಾಖಂಡದಲ್ಲಿ ಎನ್.ಸಿ.ಸಿ. ವತಿಯಿಂದ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ 19 ಕೆಎಆರ್ ಬೆಟಾಲಿಯನ್ , ಎನ್.ಸಿ.ಸಿ. ಮಡಿಕೇರಿಯಿಂದ ಆಯ್ಕೆ ಯಾದ ಏಕೈಕ ವಿದ್ಯಾರ್ಥಿನಿ ಯಾಗಿದ್ದಾರೆ. 2021 ಜೂನ್ 6 ರಿಂದ ಜೂನ್ 19 ರವರೆಗೆ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಅಡ್ವೆಂಚರ್ಸ್ ಕೋರ್ಸ್ ಕ್ಯಾಂಪ್ ಇದಾಗಿದೆ. ಇವರಿಗೆ ಎನ್ಎಂಸಿ ಕಾಲೇಜಿನ ಎನ್.ಸಿ.ಸಿ ಘಟಕದ ಎಎನ್ಒ ಲೆಫ್ಟಿನೆಂಟ್ ಸೀತರಾಮ ಎಂ.ಡಿ. […]

ಇಂದಿನಿಂದ ಜೂ.19ರ ವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರೀಯ NCC ಶಿಬಿರ ➤ ಮರ್ಕಂಜದ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.05: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.   ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಕರೆ ➤ ಆರೋಪಿ ಬಾಯ್ಬಿಟ್ಟ ಸತ್ಯ ಕೇಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.04. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ 22 ವರ್ಷದ ಯುವಕನನ್ನು ಬಂಧಿಸಿರುವ ಪೊಲೀಸರು ವಿಚಾರಣೆಯ ವೇಳೆ ಆತನ ಉತ್ತರ ಕೇಳಿ ಬೆಚ್ಚಿ ಬಿದ್ದಿದ್ದಾರೆ. ದೆಹಲಿಯ ಸಲ್ಮಾನ್ ಎಂಬಾತ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ‌ ಮಾಡುವುದಾಗಿ ಗುರುವಾರದಂದು ಬೆದರಿಕೆ ಕರೆ ಮಾಡಿದ್ದಾನೆ. ತನಿಖೆ ಕೈಗೆತ್ತಿಕೊಂಡ ಈಶಾನ್ಯ ದೆಹಲಿಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ವಿಭಿನ್ನ ಬೇಡಿಕೆಯೊಂದು ಹೊರಬಿದ್ದಿದೆ. ಆರೋಪಿ ಸಲ್ಮಾನ್​ ವಿರುದ್ಧ ಈಗಾಗಲೇ

ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಕರೆ ➤ ಆರೋಪಿ ಬಾಯ್ಬಿಟ್ಟ ಸತ್ಯ ಕೇಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರಂಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ನೀವು ಮನೆಯಲ್ಲೇ ಕುಳಿತು ಕೊರೋನಾ ಟೆಸ್ಟ್ ಮಾಡಿ ➤ ಹೊಸದಾಗಿ ಬಂದ ‘ಕೋವಿಸೆಲ್ಫ್’ ಕಿಟ್ ನ ಬೆಲೆ ಎಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.04. ಇನ್ಮುಂದೆ ಕೊರೋನಾ ಟೆಸ್ಟ್ ಮಾಡಿಸಲು ಆಸ್ಪತ್ರೆಗೆ ತೆರಳಿಯೇ ಆಗಬೇಕೆಂದಿಲ್ಲ. ಯಾಕೆಂದರೆ ನಮ್ಮ ಮನೆಯಲ್ಲೇ ಕೊರೋನಾ ಪರೀಕ್ಷೆ ನಡೆಸಿ ಕೇವಲ 15 ನಿಮಿಷಗಳಲ್ಲಿ ರಿಪೋರ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕೇವಲ 15 ನಿಮಿಷಗಳಲ್ಲಿ ಕೊರೋನಾ ಸೋಂಕನ್ನು ಪತ್ತೆ ಹಚ್ಚುವ, ಭಾರತದಲ್ಲಿ ಪ್ರಥಮ ಬಾರಿಗೆ ತಯಾರಾಗಿರುವ ಟೆಸ್ಟಿಂಗ್​ ಕಿಟ್​ ಗುರುವಾರದಂದು ಮಾರುಕಟ್ಟೆಗೆ ಬಂದಿದ್ದು, ದೇಶದಾದ್ಯಂತ ಮೆಡಿಕಲ್​ ಸ್ಟೋರ್​ಗಳಲ್ಲಿ ಇದು ಎರಡರಿಂದ ಮೂರು ದಿನಗಳಲ್ಲಿ ಲಭ್ಯವಾಗಲಿದೆ. ಪುಣೆಯ ಮೈಲ್ಯಾಬ್ ಡಿಸ್ಕವರಿ ಸೊಲ್ಯೂಶನ್ಸ್ ಲಿಮಿಟೆಡ್ ಸಂಸ್ಥೆಯು

ಇನ್ಮುಂದೆ ನೀವು ಮನೆಯಲ್ಲೇ ಕುಳಿತು ಕೊರೋನಾ ಟೆಸ್ಟ್ ಮಾಡಿ ➤ ಹೊಸದಾಗಿ ಬಂದ ‘ಕೋವಿಸೆಲ್ಫ್’ ಕಿಟ್ ನ ಬೆಲೆ ಎಷ್ಟು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ➤ ಸಹಾಯಧನ ಘೋಷಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಗೋವಾ, ಜೂ.03. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಗೋವಾ ಸರಕಾರವು 2 ಲಕ್ಷ ರೂ. ಸಹಾಯಧನ ನೀಡಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ. ಗುರುವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಸಹಾಯಧನ ನೀಡಲಾಗುವುದು. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಪರಿಹಾರ ಕೂಡಾ ಲಭಿಸಲಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದವರು

ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ➤ ಸಹಾಯಧನ ಘೋಷಿಸಿದ ಸರಕಾರ Read More »

ರಾಷ್ಟ್ರೀಯ ನ್ಯೂಸ್

ಮಲಯಾಳಂ ಖ್ಯಾತ ನಟಿಯ ನಕಲಿ ಸೆಕ್ಸ್ ವೀಡಿಯೋ ವೈರಲ್ ➤ ವೀಡಿಯೋ ಬಗ್ಗೆ ಠಾಣೆಯ ಮೆಟ್ಟಿಲೇರಿದ ನಟಿ ರಮ್ಯಾ ಸುರೇಶ್

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜೂ.03. ಮಲಯಾಳಂನ ಖ್ಯಾತ ನಟಿ ರಮ್ಯಾ ಸುರೇಶ್ ಅವರ ನಕಲಿ ಸೆಕ್ಸ್ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಅವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಶ್ಲೀಲ ವೀಡಿಯೋವೊಂದಕ್ಕೆ ರಮ್ಯಾ ಸುರೇಶ್ ಮುಖವನ್ನು ಎಡಿಟ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದ್ದು, ವಿಡಿಯೋ ವೈರಲ್​ ಆಗಿರುವುದು ಗಮನಕ್ಕೆ ಬರುತ್ತಿದ್ದಂತೆ ಸಂತ್ರಸ್ತ ನಟಿಯು ಆಲಪ್ಪುಝ ಪೊಲೀಸ್​ ವರಿಷ್ಠಾಧಿಕಾರಿಗೆ ಹಾಗೂ ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ

ಮಲಯಾಳಂ ಖ್ಯಾತ ನಟಿಯ ನಕಲಿ ಸೆಕ್ಸ್ ವೀಡಿಯೋ ವೈರಲ್ ➤ ವೀಡಿಯೋ ಬಗ್ಗೆ ಠಾಣೆಯ ಮೆಟ್ಟಿಲೇರಿದ ನಟಿ ರಮ್ಯಾ ಸುರೇಶ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ಯೂಷನ್ ಜೊತೆಗೆ ಪ್ರೇಮಪಾಠ ಹೇಳಿಕೊಟ್ಟ ಟೀಚರ್..! ➤ ಬಳಿಕ ಮಾಡಿದ್ದೇನು ಗೊತ್ತೇ..?

(ನ್ಯೂಸ್ ಕಡಬ) newskadaba.com ಹರಿಯಾಣ, ಜೂ.03. ಕೊರೋನಾ ಸೋಂಕಿನಿಂದಾಗಿ ಎಲ್ಲೆಡೆ ಲಾಕ್‍ಡೌನ್ ಜಾರಿಯಲ್ಲಿದ್ದರೆ ಇಲ್ಲೊಬ್ಬಾಕೆ ಶಿಕ್ಷಕಿ ಟ್ಯೂಷನ್ ಕೊಡುತ್ತಾ ಕೊಡುತ್ತಾ ಪಿಯುಸಿ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದಾಳೆ. ಈ ಘಟನೆಯು ಹರಿಯಾಣದ ಪಾಣಿಪತ್​ನಲ್ಲಿ ನಡೆದಿದ್ದು, ಕೊರೊನಾದಿಂದಾಗಿ ಶಾಲೆ ಕಾಲೇಜುಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಶಿಕ್ಷಕಿಯು ವಿದ್ಯಾರ್ಥಿಗೆ ಟ್ಯೂಷನ್ ನೀಡುತ್ತಿದ್ದರು ಎನ್ನಲಾಗಿದೆ. ಟ್ಯೂಷನ್ ಗೆಂದು ವಿದ್ಯಾರ್ಥಿಯು ಶಿಕ್ಷಕಿಯ ಮನೆಗೆ ಪ್ರತೀದಿನವೂ ತೆರಳುತ್ತಿದ್ದು ನಾಲ್ಕು ಗಂಟೆಗಳ ಕಾಲ ಇವರಿಬ್ಬರೂ ಒಟ್ಟಿಗೆ ಇರುತ್ತಿದ್ದರು ಎನ್ನಲಾಗಿದೆ. ಟ್ಯೂಷನ್​ ಹೇಳಿಕೊಡುವುದರ ಮಧ್ಯೆ ಇವರಿಬ್ಬರ​ ನಡುವೆ ಪ್ರೀತಿ ಹುಟ್ಟಿದ್ದು ಇಬ್ಬರೂ

ಟ್ಯೂಷನ್ ಜೊತೆಗೆ ಪ್ರೇಮಪಾಠ ಹೇಳಿಕೊಟ್ಟ ಟೀಚರ್..! ➤ ಬಳಿಕ ಮಾಡಿದ್ದೇನು ಗೊತ್ತೇ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರ್ಧದಲ್ಲಿ ನಿಂತ ಐಪಿಎಲ್ ಪುನರಾರಂಭ ➤ ಬಿಸಿಸಿಐ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) Newskadaba.com ದೆಹಲಿ, ಮೇ. 26. ಕೊರೊನಾ ಎರಡನೇ ಅಲೆಯಿಂದಾಗಿ ಅರ್ಧದಲ್ಲಿ ಸ್ಥಗಿತಗೊಂಡಿರುವ 2021ನೇ ಐಪಿಎಲ್ ಆವೃತ್ತಿಯನ್ನು ಯುಎಇಯಲ್ಲಿ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14ನೇ‌‌ ಆವೃತ್ತಿ ಪುನಾರಂಭಗೊಳ್ಳಲಿದ್ದು, ಮೂರು ವಾರಗಳ ಕಾಲ ನಡೆಯಲಿರುವ ಈ ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅರ್ಧದಲ್ಲೇ ನಿಂತು ಕ್ರಿಕೆಟ್ ಪ್ರೇಮಿಗಳಿಗೆ ಉಂಟಾಗಿದ್ದ ನಿರಾಶೆಯನ್ನು ನೀಗಿಸಲು ಬಿಸಿಸಿಐ ಚಿಂತಿಸುತ್ತಿರುವುದು

ಅರ್ಧದಲ್ಲಿ ನಿಂತ ಐಪಿಎಲ್ ಪುನರಾರಂಭ ➤ ಬಿಸಿಸಿಐ ಮಹತ್ವದ ನಿರ್ಧಾರ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಯುದ್ಧ ವಿಮಾನ ಪತನ ➤ ಪೈಲಟ್ ಗಾಗಿ ಮುಂದುವರಿದ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.21. ದಿನನಿತ್ಯದ ತರಬೇತಿ ಹಂತದಲ್ಲಿದ್ದ ಭಾರತೀಯ ವಾಯುಪಡೆಯ ಯುದ್ದ ವಿಮಾನವು ಪಂಜಾಬ್ ನ ಮೋಗ ಎಂಬಲ್ಲಿ ಗುರುವಾರ ತಡರಾತ್ರಿ ಪತನವಾಗಿದೆ. ಮಿಗ್ 21 ಯುದ್ಧ ವಿಮಾನವು ಪಂಜಾಬ್ ನ ಮೋಗಾ ಬಳಿಯ ಬಾಘಪುರಾನ ಸಮೀಪದ ಖರ್ದ್ ಗ್ರಾಮದಲ್ಲಿ ಪತನವಾಗಿದ್ದು, ವಿಮಾನದಲ್ಲಿದ್ದ ಪೈಲಟ್ ಬಗ್ಗೆ ಶೋಧ ಕಾರ್ಯ ಆರಂಭಿಸಲಾಗಿದೆ. ಪೈಲಟ್ ವಿಮಾನ ಪತನಕ್ಕೂ ಮೊದಲೇ ವಿಮಾನದಿಂದ ಹೊರಕ್ಕೆ ಹಾರಲ್ಪಟ್ಟ ಬಗ್ಗೆ ಶಂಕೆ ವ್ಯಕ್ತವಾಗಿದೆ.      

ಭಾರತೀಯ ಯುದ್ಧ ವಿಮಾನ ಪತನ ➤ ಪೈಲಟ್ ಗಾಗಿ ಮುಂದುವರಿದ ಶೋಧ ಕಾರ್ಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.07. ಕೇಂದ್ರ ಸರಕಾರವು ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಅಕ್ಸಿಜನ್ ನೀಡುವಂತೆ ಹೈಕೋರ್ಟ್ ಹೊರಡಿಸಿದ್ದ ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಅಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರಕಾರವು 1,200 ಟನ್‌ ಆಕ್ಸಿಜನ್ನನ್ನು ಕರ್ನಾಟಕಕ್ಕೆ ಪೂರೈಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಅದೇಶ ನೀಡಿತ್ತು. ಈ ಆದೇಶಕ್ಕೆ ತಡೆ‌ ನೀಡಬೇಕೆಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್

ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top