ರಾಷ್ಟ್ರೀಯ ನ್ಯೂಸ್

ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ವಿವಾದಿತ ಬಿಜೆಪಿ ಸಂಸದೆ, ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿಯು ಅಧಿಕೃತ ಮಾಹಿತಿ ಹೊರಡಿಸಿದೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಗೆ ಡಿಸೆಂಬರ್ ನಲ್ಲಿ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಫೆಬ್ರವರಿ 18ರಂದು ನಡೆದ ಐಪಿಎಲ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿ ಹರಾಜು ಪ್ರಕ್ರಿಯೆಯಲ್ಲಿ ಪ್ರಮುಖ ಆಟಗಾರರನ್ನು ಖರೀದಿಸಿರುವ ಆರ್‌ಸಿಬಿ ತಂಡವು ಬಲಿಷ್ಠವೆನಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿವೆ:- ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ಯಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಕೇನ್ ರಿಚರ್ಡ್ಸನ್, ಆ್ಯಡಂ ಜಾಂಪಾ, ಜೋಶ್ ಪಿಲಿಪ್, ಶಹಬಾಜ್ ಅಹ್ಮದ್,

? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆ. 26 ರಂದು ಅಖಿಲ ಭಾರತ ವರ್ತಕರ ಸಂಘಟನೆಯ ವತಿಯಿಂದ ಭಾರತ್ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 19. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಿಬಂಧನೆಗಳನ್ನು ಪರಿಶೀಲಿಸಲು ಆಗ್ರಹಿಸಿ ಫೆ.26ರಂದು ಅಖಿಲ ಭಾರತ ವರ್ತಕರ ಸಂಘಟನೆಯು ಭಾರತ ಬಂದ್ ಗೆ ಕರೆ ನೀಡಿದೆ. ಜಿಎಸ್.ಟಿ ಕಠಿಣ ನಿಬಂಧನೆಗಳನ್ನು ಪರಿಶೀಲಿಸಬೇಕೆಂದು ರಾಜ್ಯ ಸರಕಾರ, ಕೇಂದ್ರ ಸರಕಾರ ಮತ್ತು ಜಿಎಸ್ಟಿ ಕೌನ್ಸಿಗಳಿಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ತಿಳಿಸಿದೆ.

ಫೆ. 26 ರಂದು ಅಖಿಲ ಭಾರತ ವರ್ತಕರ ಸಂಘಟನೆಯ ವತಿಯಿಂದ ಭಾರತ್ ಬಂದ್ ಗೆ ಕರೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಕೇಂದ್ರ ಸಚಿವ ಸತೀಶ್ ಶರ್ಮಾ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 18. ಕಾಂಗ್ರೆಸ್‌ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್‌ ಸತೀಶ್‌ ಶರ್ಮಾ(73) ಅವರು ಬುಧವಾರದಂದು ರಾತ್ರಿ ಗೋವಾದಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ ಪೀಡಿತರಾಗಿದ್ದ ಇವರು ಕೆಲವು ಕಾಲದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಇವರ ಅಂತ್ಯ ಕ್ರಿಯೆಯು ಶುಕ್ರವಾರದಂದು ದೆಹಲಿಯಲ್ಲಿ ನಡೆಯಲಿದೆ ಎಂದು ಸತೀಶ್‌ ಅವರ ಮಗ ಸಮೀರ್‌ ತಿಳಿಸಿದ್ದಾರೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಸತೀಶ್‌ ಶರ್ಮಾ, 1993ರಿಂದ 1996ರವರೆಗೂ ಪಿ.ವಿ.ನರಸಿಂಹ ರಾವ್‌ ಆಡಳಿತದ ಸರ್ಕಾರದಲ್ಲಿ

ಮಾಜಿ ಕೇಂದ್ರ ಸಚಿವ ಸತೀಶ್ ಶರ್ಮಾ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಶಾಲಾ ಪ್ರಾಂಶುಪಾಲನಿಗೆ ಮರಣದಂಡನೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಫೆ. 16.‌ ಐದನೇ ತರಗತಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯವು ಪಾಟ್ನಾದ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣದಂಡನೆ ವಿಧಿಸಿದೆ. ಅಲ್ಲದೇ ಸಹ ಆರೋಪಿ ಶಾಲಾ ಶಿಕ್ಷಕನಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 1 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ಆರೋಪಿಯನ್ನು ಫುಲ್ಪರಿ ಷರೀಷ್ ಪ್ರದೇಶದ ಶಾಲೆಯ ಶಿಕ್ಷಕ ಸಹ ಆರೋಪಿ ಅಭಿಷೇಕ್ ಕುಮಾರ್ ಗೆ ಜೀವಾವಧಿ ಶಿಕ್ಷೆ ಹಾಗೂ 50, 000ರೂ. ದಂಡ ವಿಧಿಸಲಾಗಿದೆ.

? ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ➤ ಶಾಲಾ ಪ್ರಾಂಶುಪಾಲನಿಗೆ ಮರಣದಂಡನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?? ಉಪ್ಪಳ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಳ, ಫೆ. 16. ಗುಂಪೊಂದು ತಲವಾರು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದವನ್ನು ಉಪ್ಪಳ ಮಣಿಮುಂಡ ನಿವಾಸಿ ಮುಹಮ್ಮದ್ ಹರ್ಶಿದ್(33) ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಮಕ್ಕಳ ಜೊತೆ ಉಪ್ಪಳ ಪೇಟೆಗೆಂದು ಬಂದಿದ್ದು, ಹರ್ಶಿದ್ ಅವರು ಅಂಗಡಿಯಿಂದ ಸಾಮಗ್ರಿಗಳನ್ನು ಖರೀದಿಸುತ್ತಿದ್ದ ಸಂದರ್ಭ ಮೂರು ಮಂದಿಯ ಗುಂಪೊಂದು ದಾಳಿ ನಡೆಸಿ, ತಲವಾರಿನಿಂದ ಕಡಿದು ಪರಾರಿಯಾಗಿದೆ. ಗಾಯಾಳವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯಕ್ಕೆ ನಿಖರ

?? ಉಪ್ಪಳ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.15. ದೇಶದಲ್ಲಿ ಪೆಟ್ರೋಲ್ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ಇದೇ ಮೊದಲ‌ ಬಾರಿ ಎಂಬಂತೆ ಪೆಟ್ರೋಲ್ ಬೆಲೆ 100 ರೂ. ದಾಟಿ ದಾಖಲೆ ಬರೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಪೈಸೆ ಏರಿಕೆಯಾಗುತ್ತಿದ್ದು, ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪ್ರತೀ ಲೀಟರ್‌ ಪೆಟ್ರೋಲ್‌ಗ ಬೆಲೆ 99.29 ರೂ. ಹಾಗೂ, ಡೀಸೆಲ್‌ ಬೆಲೆ 91.17 ರೂ. ಗೆ ಏರಿದೆ. ಪ್ರೀಮಿಯಮ್‌ ಪೆಟ್ರೋಲ್‌ ದರ ಪ್ರತೀ ಲೀಟರ್‌ಗೆ 102.07 ರೂ.ಗೆ ಏರಿದ್ದು, ಇತಿಹಾಸದಲ್ಲಿಯೇ ಮೊದಲ ಬಾರಿಗೆ ದಾಖಲೆಯ ಬೆಲೆ

ದೇಶದಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ನೀರಿನಲ್ಲಿ ಮುಳುಗಿ ಮೂವರು ಪುಟ್ಟ ಸಹೋದರರ ದುರ್ಮರಣ ➤ ಮನಕಲುಕುವ ಘಟನೆಗೆ ಸಾಕ್ಷಿಯಾಯಿತು ದೇವರನಾಡು..!

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್, ಫೆ. 14. ಮಾವಿನ ಹಣ್ಣು ತೊಳೆಯಲೆಂದು ಕೆರೆಗೆ ಇಳಿದಿದ್ದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದ ಪಾಲಕ್ಕಾಡ್ ಸಮೀಪದ ಆಲತ್ತೂರು ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತಪಟ್ಟವರನ್ನು ಪಾಲಕ್ಕಾಡ್ ಆಲತ್ತೂರು ನಿವಾಸಿ ಜಸೀರ್ ಎಂಬವರ ಪುತ್ರರಾದ ಜಿನ್’ಷಾದ್ (12), ರಿನ್’ಷಾದ್ (7) ಹಾಗೂ ರಿಫಾಸ್ (3) ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ಮನೆ ಸಮೀಪದ ಸಾರ್ವಜನಿಕ ಕೆರೆಯ ಬಳಿ ಮಾವಿನಕಾಯಿ ತೊಳೆಯಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ

? ನೀರಿನಲ್ಲಿ ಮುಳುಗಿ ಮೂವರು ಪುಟ್ಟ ಸಹೋದರರ ದುರ್ಮರಣ ➤ ಮನಕಲುಕುವ ಘಟನೆಗೆ ಸಾಕ್ಷಿಯಾಯಿತು ದೇವರನಾಡು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನ ಹತ್ಯೆ ➤ ಆರೋಪಿಗಳಿಗಾಗಿ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ‌. 13. ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನೋರ್ವನನ್ನು ಹತ್ಯೆ ಮಾಡಿದ ಘಟನೆ ನಗರದ ವಿಶ್ವೇಶ್ವರ ಕಾಲನಿಯ ಸಿಟಿಬಸ್ ನಿಲ್ದಾಣದಲ್ಲಿ ನಡೆದಿದೆ.   ಬಸ್ ನಿಲ್ದಾಣದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಭಿಕ್ಷುಕನ ಮೃತದೇಹ ಪತ್ತೆಯಾಗಿದ್ದು, ಇವರು ಕಳೆದ ಕೆಲದಿನಗಳಿಂದ ಇಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಪಿಎಸ್.ಐ ಶರಣಬಸಪ್ಪ ಅವರು ತನಿಖೆ ಮುಂದುವರಿಸಿದ್ದು, ಭಿಕ್ಷುಕನ ಮುಖದ ಗುರುತು ಕೂಡ ಪತ್ತೆಹಚ್ಚಲು ಕಷ್ಟಸಾಧ್ಯವಾದುದರಿಂದ ಪೊಲೀಸರು ಇನ್ನಷ್ಟು ಕೋನಗಳಿಂದ

? ಬಸ್ ನಿಲ್ದಾಣದಲ್ಲಿ ವಾಸಿಸುತ್ತಿದ್ದ ಭಿಕ್ಷುಕನ ಹತ್ಯೆ ➤ ಆರೋಪಿಗಳಿಗಾಗಿ ಶೋಧಕಾರ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ➤ ಮೃತರ ಸಂಖ್ಯೆ 19ಕ್ಕೇರಿಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 13. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮಡಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, 30ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ತಮಿಳುನಾಡಿನ ವಿರುಧ್ ನಗರದಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 19 ಮಂದಿ ಮೃತಪಟ್ಟಿದ್ದು, ಸ್ಫೋಟದಲ್ಲಿ 10 ಕೊಠಡಿಗಳು ನಾಶವಾಗಿದೆ. ಘಟನೆ ನಡೆದಾಗ ಕನಿಷ್ಠ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೀಶನ್ ಹೇಳಿದ್ದಾರೆ. ಶುಕ್ರವಾರದಂದು ಮಧ್ಯಾಹ್ನ ವಿರುಧ್ ನಗರ ಜಿಲ್ಲೆಯ ಅಚಕುಲಂ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ➤ ಮೃತರ ಸಂಖ್ಯೆ 19ಕ್ಕೇರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top