ರಾಷ್ಟ್ರೀಯ ನ್ಯೂಸ್

ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಅಣ್ಣಾ ಹಜಾರೆ ನಾಳೆಯಿಂದ ಉಪವಾಸ ಸತ್ಯಾಗ್ರಹ..!

(ನ್ಯೂಸ್ ಕಡಬ) newskadaba.com ಅಹಮದ್ ನಗರ, ಜ. 29. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾಹಝಾರೆ ಅವರು ನಾಳೆಯಿಂದ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೇ ತಾವಿರುವ ಪ್ರದೇಶಗಳಿಂದಲೇ ರೈತರ ಪರವಾಗಿ ಪ್ರತಿಭಟನೆ ನಡೆಸುವಂತೆ ಅವರು ತಮ್ಮ ಬೆಂಬಲಿಗರಲ್ಲಿ ವಿನಂತಿಸಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಅಣ್ಣಾ ಹಜಾರೆ ನಾಳೆಯಿಂದ ಉಪವಾಸ ಸತ್ಯಾಗ್ರಹ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

40 ಕಡೆ ಗೋಡಾನ್ ಗಳ ಮೇಲೆ ಸಿಬಿಐ ರೈಡ್..! ➤ ಅಕ್ಕಿ ಮತ್ತು ಗೋಧಿ ಮಾದರಿ ಸಂಗ್ರಹ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 29. ನೂತನ ಕೃಷಿ ನೀತಿಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದೆರಡು ತಿಂಗಳುಗಳಿಂದ ರೈತರು ದೆಹಲಿಯ ಗಡಿ ಭಾಗಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮುಂದುವರಿಸಿದ್ದು, ಈ ನಡುವೆಯೇ, ಕಳೆದ ರಾತ್ರಿ ಸಿಬಿಐ ಅಧಿಕಾರಿಗಳು ಪಂಜಾಬ್ ನಲ್ಲಿ ಸುಮಾರು 40 ದಾಸ್ತಾನು ಕೇಂದ್ರಗಳಿಗೆ ದಾಳಿ ನಡೆಸಿದ್ದಾರೆ. ಈ ದಾಸ್ತಾನು ಕೇಂದ್ರಗಳಲ್ಲಿ ದಾಸ್ತಾನಿರಿಸಲಾಗಿದ್ದ ಅಕ್ಕಿ ಮತ್ತು ಗೋಧಿ ಮಾದರಿಗಳನ್ನು ಸಿಬಿಐ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಪಂಜಾಬ್ ಗ್ರೇನ್ಸ್ ಪ್ರೊಕ್ಯುರ್ ಮೆಂಟ್ ಕಾರ್ಪೊರೇಶನ್, ಪಂಜಾಬ್ ವೇರ್ ಹೌಸಿಂಗ್

40 ಕಡೆ ಗೋಡಾನ್ ಗಳ ಮೇಲೆ ಸಿಬಿಐ ರೈಡ್..! ➤ ಅಕ್ಕಿ ಮತ್ತು ಗೋಧಿ ಮಾದರಿ ಸಂಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷಪೂರಿತ ಮದ್ಯ ಸೇವನೆ- ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಜ. 29. ವಿಷಪೂರಿತ ಮದ್ಯ ಸೇವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ಐವರ ಸ್ಥಿತಿ ಗಂಭೀರವಾದ ಘಟನೆ ಭಿಲ್ವಾರ ಎಂಬಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಷಪೂರಿತ ಮದ್ಯ ಸೇವನೆ- ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾರ್ವಜನಿಕ ಶೌಚಾಲಯದಲ್ಲಿ ಅಕ್ರಮ ಮಾಂಸ ಮಾರಾಟ..!

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 28. ಇತ್ತೀಚಿನ ದಿನಗಳಲ್ಲಿ ಹಕ್ಕಿಜ್ವರ ಬಂದ ಕಾರಣ ಮಧ್ಯಪ್ರದೇಶ ಸರಕಾರವು ನೀಮುಚ್ ಹಾಗೂ ಇಂದೋರ್ ಜಿಲ್ಲೆಗಳಲ್ಲಿ ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಇದರ ಬಳಿಕ ಕೆಲವೇ ದಿನಗಳಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಮೊಟ್ಟೆ ಮತ್ತು ಮಟನ್ ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇಂದೋರ್ ನ ಸಾರ್ವಜನಿಕ ಶೌಚಾಲಯವೊಂದರಲ್ಲಿ ಈ ಕೃತ್ಯ ನಡೆಯುತ್ತಿದೆ. ಇಂದೋರ್ ಮುನ್ಸಿಪಲ್ ಕಾರ್ಪೊರೇಶನ್ ಸಾರದವಜನಿಕ ಶೌಚಾಲಯವನ್ನು ಪರಿಶೀಲನೆ ಮಾಡುತ್ತಿದ್ದ ವೇಳೆ ಈ ದೃಶ್ಯ ಕಂಡುಬಂದಿದ್ದು, ನಾಗರಿಕ ಸಂಸ್ಥೆಯ

ಸಾರ್ವಜನಿಕ ಶೌಚಾಲಯದಲ್ಲಿ ಅಕ್ರಮ ಮಾಂಸ ಮಾರಾಟ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಜ್ಯುಕೇಶನ್ ಲೋನ್ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಇಂದೋರ್, ಜ. 27. ಎಜ್ಯುಕೇಶನ್ ಲೋನ್ ಕೊಡಿಸುವುದಾಗಿ ನಂಬಿಸಿ ಹದಿನಾರು ವರ್ಷದ ಅಪ್ರಾಪ್ತ ಬಾಲಕಿಯನ್ನು ಬ್ಯಾಂಕ್ ಮ್ಯಾನೇಜರ್ ಓರ್ವ ನಿರಂತರ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪರಿವೀಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್ ಆಗಿದ್ದು, ಸಂತ್ರಸ್ಥೆಯ ಗೆಳತಿಯ ತಾಯಿಯು ಈತನ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಲೋನ್ ಕೊಡಿಸುವ ಹಿನ್ನೆಲೆ ಈಕೆಯ ಗೆಳತಿ ಮ್ಯಾನೇಜರ್ ನ ಪರಿಚಯ ಮಾಡಿಸಿದ್ದಳು. ನಂತರದ ದಿನಗಳಲ್ಲಿ

ಎಜ್ಯುಕೇಶನ್ ಲೋನ್ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌರವ್ ಗಂಗೂಲಿಗೆ ಮತ್ತೆ ಕಾಣಿಸಿಕೊಂಡ ಎದೆನೋವು- ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜ. 27. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಎದೆನೋವಿಗೆ ಚಿಕಿತ್ಸೆ ಪಡೆದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ನೋವು ಕಾಣಿಸಿದ್ದು, ಅಭಿಮಾನಿಗಳನ್ನು ಆತಂಕಕ್ಕೀಡು ಮಾಡಿದೆ.

ಸೌರವ್ ಗಂಗೂಲಿಗೆ ಮತ್ತೆ ಕಾಣಿಸಿಕೊಂಡ ಎದೆನೋವು- ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುನ್ನೀ ಸೆಂಟ್ರಲ್ ವಕ್ಫ್ ಮುಖ್ಯಸ್ಥರಿಂದ ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ, ಜ. 27. ಧನ್ನೀಪುರ್ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಮಸೀದಿಗೆ ಗಣರಾಜ್ಯೋತ್ಸವದಂದು ಶಂಕುಸ್ಥಾಪನೆ ಮಾಡಲಾಯಿತು. ಸುನ್ನೀ ಸೆಂಟ್ರಲ್ ವಕ್ಫ್ ಬೋರ್ಡ್ ಮಂಡಳಿಯ ಮುಖ್ಯಸ್ಥ ಜುಫರ್ ಅಹಮದ್ ಫಾರೂಕು ಅವರು ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ್ದಾರೆ.

ಸುನ್ನೀ ಸೆಂಟ್ರಲ್ ವಕ್ಫ್ ಮುಖ್ಯಸ್ಥರಿಂದ ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆ Read More »

ರಾಷ್ಟ್ರೀಯ ನ್ಯೂಸ್

ಪತ್ನಿಯ ಮೇಲಿನ ದ್ವೇಷಕ್ಕೆ 18 ಮಂದಿ ಮಹಿಳೆಯರನ್ನು ಹತ್ಯೆಗೈದ ನರಹಂತಕ..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 27. 18 ಮಹಿಳೆಯರ ಸರಣಿ ಹತ್ಯೆಗೈದ ಆರೋಪದಡಿಯಲ್ಲಿ 45 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮೈನಾ ರಾಮುಲು ಎಂದು ಗುರುತಿಸಲಾಗಿದೆ. ಈತ ವಿವಾಹವಾದ ಕೆಲವೇ ದಿನಗಳಲ್ಲಿ ಈತನ ಪತ್ನಿ ದೂರವಾಗಿ, ಬೇರೊಬ್ಬನನ್ನು ಮದುವೆಯಾಗಿರುವ ಹಿನ್ನೆಲೆಯಲ್ಲಿ ಆತ ಈ ಕೃತ್ಯ ಎಸಗುತ್ತಿದ್ದನು ಎನ್ನಲಾಗಿದೆ. ಮಹಿಳೆಯರ ಸರಣಿ ಕೊಲೆ ಮಾತ್ರವಲ್ಲದೆ, ಇತರ ಅಪರಾಧ ಚಟುವಟಿಕೆಗಳಲ್ಲೂ ಈತ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಪತ್ನಿ ಬಿಟ್ಟು ಹೋಗಿದ್ದರಿಂದ

ಪತ್ನಿಯ ಮೇಲಿನ ದ್ವೇಷಕ್ಕೆ 18 ಮಂದಿ ಮಹಿಳೆಯರನ್ನು ಹತ್ಯೆಗೈದ ನರಹಂತಕ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಲ್ಕು ವರ್ಷಗಳ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 27. ಕಳೆದ 4 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ದಿ.ಜಯಲಲಿತಾ ಆಪ್ತೆ ಶಶಿಕಲಾ ಅವರು ಇಂದು ಬಿಡುಗಡೆಯಾಗಲಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.

ನಾಲ್ಕು ವರ್ಷಗಳ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೀಪು ಹಾಗೂ ಟ್ರೇಲರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ 8 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಜ. 27. ಜೀಪು ಹಾಗೂ ಟ್ರೇಲರ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಮೃತಪಟ್ಟ ಘಟನೆ ಶೇಖಾವತಿಯ ಸಿಕಾರ್ ಜಿಲ್ಲೆಯ ಖತುಷ್ಯಂ ಎಂಬಲ್ಲಿ ನಡೆದಿದೆ.ಅಪಘತಕ್ಕೊಳಗಾದವರು ಮಧ್ಯಪ್ರದೇಶ ಮೂಲದವರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ನಡೆಸಿದ್ದಾರೆ.

ಜೀಪು ಹಾಗೂ ಟ್ರೇಲರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ 8 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top